Homeಮುಖಪುಟಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

ಫೇಸ್‌ಬುಕ್‌, ಇನ್‌ಸ್ಟಾ, ವಾಟ್ಸ್‌ಆಪ್‌ ಸೇವೆ ಪುನಾರಂಭ; ಬಳಕೆದಾರರ ಕ್ಷಮೆ ಕೇಳಿದ ಎಫ್‌ಬಿ

- Advertisement -
- Advertisement -

ಫೇಸ್‌ಬುಕ್‌, ವಾಟ್ಸ್‌ಆಪ್‌‌, ಇನ್‌ಸ್ಟಾ ಗ್ರಾಮ್‌ ಸೇವೆ ಸುಮಾರು ಆರು ಗಂಟೆಗಳ ಕಾಲ ಸ್ಥಗಿತವಾಗಿ ಬಳಕೆದಾರರ ಚಡಪಡಿಕೆಗೆ ಕಾರಣವಾಗಿದ್ದ ಈ ಮೂರು ಅಪ್ಲಿಕೇಷನ್‌‌ಗಳ ಒಡೆಯನಾದ ಫೇಸ್‌ಬುಕ್‌‌ ಸಂಸ್ಥೆಯು, ಸೇವೆಯನ್ನು ಪುನಾರಂಭ ಮಾಡಿದೆ. ಬಳಕೆದಾರರಿಗೆ ಅಡಚಣೆ ಉಂಟು ಮಾಡಿದ್ದಕ್ಕೆ ಫೇಸ್‌ಬುಕ್‌ ಕ್ಷಮೆಯಾಚಿಸಿದೆ.

“ನಮ್ಮನ್ನು ಅವಲಂಭಿಸಿ ವ್ಯವಹರಿಸುವ ದೊಡ್ಡ ಮಟ್ಟದ ಸಮುದಾಯ ಪ್ರಪಂಚದಾದ್ಯಂತ ಇದ್ದು, ಇವರೆನ್ನೆಲ್ಲ ಕ್ಷಮೆಯಾಚಿಸುತ್ತೇವೆ” ಎಂದು ಫೇಸ್‌‌ಬುಕ್‌‌ ಸಂಸ್ಥೆ ಟ್ವೀಟ್‌ ಮಾಡಿದೆ.

“ನಮ್ಮ ಅಪ್ಲಿಕೇಷನ್‌ಗಳು ಸೇವೆಗಳಿಗೆ ಪ್ರವೇಶಿಸುವಂತೆ ಮರುಸ್ಥಾಪಿಸಲು ನಾವು ಶ್ರಮಿಸುತ್ತಿದ್ದೇವೆ. ಈಗ ಅವು ಬಳಕೆಗೆ ಲಭ್ಯವಿವೆ ಎಂದು ವರದಿ ಮಾಡಲು ಸಂತೋಷವಾಗಿದೆ. ನಮ್ಮೊಂದಿಗೆ ಸಹಕರಿಸಿದಕ್ಕಾಗಿ ಧನ್ಯವಾದಗಳು” ಎಂದು ಫೇಸ್‌ಬುಕ್‌ ಹೇಳಿದೆ.

ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ ಈ ಅಪ್ಲಿಕೇಷನ್‌ಗಳು ಸ್ವಸ್ಥಿತಿಗೆ ಮರಳಿವೆ ಎಂದು ರಾಯಿಟರ್ಸ್‌ ವರದಿ ಮಾಡಿದೆ.

ವೆಬ್‌ಸೈಟ್‌ ಸ್ಥಗಿತದ ವರದಿ ಮಾಡುವ ಡೌನ್‌ಡಿಟೆಕ್ಟರ್‌ ಪ್ರಕಾರ ಸೋಮವಾರ ರಾತ್ರಿ 9.30ರ ವೇಳೆಗೆ ಸುಮಾರು 6,900 ವರದಿಗಳು ಫೇಸ್‌ಬುಕ್‌ ಸ್ಥಗಿತದ ಕುರಿತು ಆಗಿವೆ. ಅದೇ ಸಮಯದಲ್ಲಿ ಸುಮಾರು 30,000 ವರದಿಗಳು ವಾಟ್ಸ್‌ಆಪ್‌ ಸಂಬಂಧಿಸಿದಂತೆ ಆಗಿವೆ. ರಾತ್ರಿ 9.27ರ ವೇಳೆಗೆ 18,739 ವರದಿಗಳು ಇನ್‌ಸ್ಟಾಗ್ರಾಮ್‌ ಸ್ಥಗಿತದ ಕುರಿತಾಗಿವೆ ಎನ್ನಲಾಗಿದೆ.

ಸ್ಥಗಿತ ಆರಂಭವಾದ ಸ್ವಲ್ಪ ಸಮಯದ ನಂತರ ಫೇಸ್‌ಬುಕ್, ತನ್ನ ಅಪ್ಲಿಕೇಶನ್‌ಗಳನ್ನು ಪ್ರವೇಶಿಸಲು ಬಳಕೆದಾರರಿಗೆ ತೊಂದರೆ ಆಗುತ್ತಿದೆ ಎಂದು ಒಪ್ಪಿಕೊಂಡಿದೆ. ಆದರೆ ಸಮಸ್ಯೆಯ ಸ್ವರೂಪದ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ನೀಡಲಿಲ್ಲ. ಬಳಕೆದಾರರು ತಮಗೆ ಬೇಕಾದದ್ದನ್ನು ಪಡೆಯಲು ಅಗತ್ಯವಿರುವ ಡೊಮೈನ್‌ ನೇಮ್‌ ಸಿಸ್ಟಮ್‌ನಲ್ಲಿ ಉಂಟಾದ ಅಡಚಣೆಯೇ ಈ ಸ್ಥಗಿತಕ್ಕೆ ಕಾರಣವಾಗಿತ್ತು ಎನ್ನಲಾಗಿದೆ.

ಹೆಸರು ಹೇಳಲಿಚ್ಛಿಸದ ಫೇಸ್‌ಬುಕ್ ಉದ್ಯೋಗಿಗಳು ರಾಯಿಟರ್ಸ್‌ ಸುದ್ದಿಸಂಸ್ಥೆಗೆ ಪ್ರತಿಕ್ರಿಯಿಸಿದ್ದು, ಇಂಟರ್‌ನೆಟ್ ಡೊಮೇನ್‌ಗೆ ಆಂತರಿಕ ಮಾರ್ಗಗಳ (ಇಂಟರ್‌ನೆಟ್ ನೆಟ್‌ವರ್ಕ್‌ನಲ್ಲಿ ಬಳಕೆದಾರರ ಸಂಚಾರಕ್ಕಾಗಿ ಮಾರ್ಗವನ್ನು ಆಯ್ಕೆ ಮಾಡುವ ಪ್ರಕ್ರಿಯೆ) ಸಮಸ್ಯೆ ಉಂಟಾಗಿದೆ ಎಂದು ನಾವು ನಂಬಿದ್ದೇವೆ. ಅದೇ ಡೊಮೇನ್ ಮೇಲೆ ಅವಲಂಬಿತವಾಗಿರುವ ಆಂತರಿಕ ಪರಿಕರಗಳು ಮತ್ತು ಇತರ ಸಂಪನ್ಮೂಲಗಳೂ ಕಾರ್ಯನಿರ್ವಹಿಸದ ಕಾರಣ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು ಎಂದು ಅವರು ತಿಳಿಸಿದ್ದಾರೆ.

ಡೌನ್‌ಡಿಟೆಕ್ಟರ್‌ ಪ್ರಕಾರ ಹೇಳುವುದಾದರೆ ಫೇಸ್‌ಬುಕ್‌ ಸ್ಥಗಿತದ ಕುರಿತು ಆದ ವರದಿಗಳು ಸ್ಥಗಿತಕ್ಕೆ ಸಂಬಂಧಿಸಿದಂತೆ ಜಾಗತಿಕವಾಗಿ ಆಗಿರುವ ಅತಿದೊಡ್ಡ ವರದಿಯಾಗಿದೆ. ಭಾರತೀಯ ಕಾಲಮಾನ ಮುಂಜಾನೆ 3.30ರ ವೇಳೆಗೆ 1.4 ಕೋಟಿ ವರದಿಗಳಾಗಿವೆ ಎನ್ನಲಾಗಿದೆ.

ಇದನ್ನೂ ಓದಿರಿ: ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...