Homeಮುಖಪುಟಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

- Advertisement -
- Advertisement -

ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ವಾಯ್ಸ್‌ ಮತ್ತು ವೀಡಿಯೊ ಕರೆಗಳನ್ನು ‘ಎಂಡ್-ಟು-ಎಂಡ್ ಎನ್‌ಕ್ರಿಪ್ಟ್’ ಮಾಡುವ ಹೊಸ ಆಯ್ಕೆಯನ್ನು ನೀಡಲು ಕಂಪೆನಿ ನಿರ್ಧರಿಸಿದೆ. ಇದರ ಜೊತೆಗೆ ‘ಡಿಸ್‌ಅಪಿಯರಿಂಗ್‌‌ ಮೇಸೇಜ್‌’ ಅನ್ನು ನಿಯಂತ್ರಣ ಮಾಡುವ ಆಯ್ಕೆಯನ್ನೂ ಫೇಸ್‌ಬುಕ್‌ ನೀಡಲಿದೆ.

ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ಎಂದರೆ, ಒಂದು ವೇಳೆ ನೀವು ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ಯಾರಿಗಾದರೂ ಸಂದೇಶ ಕಳುಹಿಸಿದರೆ, ಅದನ್ನು ಯಾರಿಗೆ ಕಳುಹಿಸಿದ್ದೀರೋ ಅವರನ್ನು ಮತ್ತು ಕಳುಹಿಸಿರುವ ನಿಮ್ಮನ್ನು ಬಿಟ್ಟರೆ ಬೇರೆ ಯಾರಿಗೂ ನೋಡಲು ಸಾಧ್ಯವಿಲ್ಲ, ಸ್ವತಃ ಫೇಸ್‌ಬುಕ್‌ ಕೂಡಾ ಇದನ್ನು ನೋಡುವುದಿಲ್ಲ ಎಂದರ್ಥ. ಈ ರೀತಿಯಾದ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಈಗಾಗಲೇ ವಾಟ್ಸ್‌ಆ್ಯಪ್‌ನಂತಹ ಆಪ್‌ಗಳು ಬಳಸುತ್ತಿದೆ.

ಟೆಕ್ಸ್ಟ್‌‌ ಚಾಟ್‌ಗಳ ಸುರಕ್ಷತೆಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್‌ ಅನ್ನು ಕಂಪೆನಿಯು 2016 ರಿಂದ ನೀಡಿತ್ತು ಎಂದು ಫೇಸ್‌ಬುಕ್‌ ಹೇಳಿದೆ.

ಇದನ್ನೂ ಓದಿ: ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ಮೆಸೆಂಜರ್‌ನ ಪ್ರಾಡಕ್ಟ್ ಮ್ಯಾನೇಜ್‌ಮೆಂಟ್ ನಿರ್ದೇಶಕಿ ರುತ್ ಕ್ರಿಚೆಲಿ ಬ್ಲಾಗ್ ಅವರು ಇದನ್ನು ಘೋಷಿಸಿದ್ದಾರೆ. ಅವರು ತನ್ನ ಬ್ಲಾಗ್‌ನಲ್ಲಿ ಬರೆದಂತೆ, “ಜನರು ತಮ್ಮ ಮೆಸೇಜಿಂಗ್ ಆಪ್‌ಗಳು ಸುರಕ್ಷಿತ ಮತ್ತು ಖಾಸಗಿಯಾಗಿರಬೇಕು ಎಂದು ನಿರೀಕ್ಷಿಸುತ್ತಾರೆ. ಈಗ ನೀಡುತ್ತಿರುವ ಹೊಸ ವೈಶಿಷ್ಟ್ಯಗಳೊಂದಿಗೆ ಅವರ ಕರೆಗಳು ಮತ್ತು ಚಾಟ್‌ಗಳು ತಮಗೆ ಎಷ್ಟು ಖಾಸಗಿಯಾಗಿ ಬೇಕು ಎಂಬುದರ ಮೇಲೆ ನಾವು ಅವರಿಗೆ ಹೆಚ್ಚಿನ ನಿಯಂತ್ರಣವನ್ನು ನೀಡುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂಭಾಷಣೆಯಲ್ಲಿ ನಿಮ್ಮ ಸಂದೇಶಗಳು ಮತ್ತು ಕರೆಗಳು ನಿಮ್ಮ ಸಾಧನವನ್ನು ಬಿಟ್ಟ ಕ್ಷಣದಿಂದ ರಿಸೀವರ್‌ನ ಸಾಧನವನ್ನು ತಲುಪುವವರೆಗೂ ರಕ್ಷಿಸುತ್ತದೆ” ಎಂದು ಕಂಪನಿ ಹೇಳಿದೆ.

“ಇದರರ್ಥ, ಫೇಸ್‌ಬುಕ್ ಸೇರಿದಂತೆ ಬೇರೆ ಯಾರಿಗೂ ನೀವು ಕಳುಹಿಸಿದ ಅಥವಾ ಹೇಳಿದ್ದನ್ನು ನೋಡಲು ಅಥವಾ ಕೇಳಲು ಸಾಧ್ಯವಿಲ್ಲ. ಇವುಗಳಲ್ಲಿ ಏನಾದರೂ ತಪ್ಪಾಗಿದ್ದರೆ ನೀವು ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶವನ್ನು ನಮಗೆ ದೂರು ನೀಡಬಹುದು” ಎಂದು ಫೇಸ್‌ಬುಕ್‌ ಹೇಳಿದೆ.

ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಚಾಟ್‌ಗಳ ಜೊತೆಗೆ ಕಂಪೆನಿಯು ‘ಡಿಸಪಿಯರಿಂಗ್‌ ಮೆಸೇಜ್‌’ ಎನ್ನುವ ಅಪ್‌ಡೇಟ್‌ಗಳನ್ನೂ ನೀಡುತ್ತಿದೆ. ಡಿಸಪಿಯರಿಂಗ್ ಮೆಸೇಜ್‌‌ ಎಂದರೆ, ನಿರ್ದಿಷ್ಟ ಸಮಯದ ನಂತರ ನಮಗೆ ಬಂದಂತಹ ಮತ್ತು ನಾವು ಕಳುಹಿಸಿದ ಮೇಸೇಜ್‌ಗಳು ಅದಾಗಿಯೆ ಡಿಲೀಟ್‌ ಆಗುವುದಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...