Homeಮುಖಪುಟಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

- Advertisement -
- Advertisement -

ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ವಾಯ್ಸ್‌ ಮತ್ತು ವೀಡಿಯೊ ಕರೆಗಳನ್ನು ‘ಎಂಡ್-ಟು-ಎಂಡ್ ಎನ್‌ಕ್ರಿಪ್ಟ್’ ಮಾಡುವ ಹೊಸ ಆಯ್ಕೆಯನ್ನು ನೀಡಲು ಕಂಪೆನಿ ನಿರ್ಧರಿಸಿದೆ. ಇದರ ಜೊತೆಗೆ ‘ಡಿಸ್‌ಅಪಿಯರಿಂಗ್‌‌ ಮೇಸೇಜ್‌’ ಅನ್ನು ನಿಯಂತ್ರಣ ಮಾಡುವ ಆಯ್ಕೆಯನ್ನೂ ಫೇಸ್‌ಬುಕ್‌ ನೀಡಲಿದೆ.

ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ಎಂದರೆ, ಒಂದು ವೇಳೆ ನೀವು ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ಯಾರಿಗಾದರೂ ಸಂದೇಶ ಕಳುಹಿಸಿದರೆ, ಅದನ್ನು ಯಾರಿಗೆ ಕಳುಹಿಸಿದ್ದೀರೋ ಅವರನ್ನು ಮತ್ತು ಕಳುಹಿಸಿರುವ ನಿಮ್ಮನ್ನು ಬಿಟ್ಟರೆ ಬೇರೆ ಯಾರಿಗೂ ನೋಡಲು ಸಾಧ್ಯವಿಲ್ಲ, ಸ್ವತಃ ಫೇಸ್‌ಬುಕ್‌ ಕೂಡಾ ಇದನ್ನು ನೋಡುವುದಿಲ್ಲ ಎಂದರ್ಥ. ಈ ರೀತಿಯಾದ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಈಗಾಗಲೇ ವಾಟ್ಸ್‌ಆ್ಯಪ್‌ನಂತಹ ಆಪ್‌ಗಳು ಬಳಸುತ್ತಿದೆ.

ಟೆಕ್ಸ್ಟ್‌‌ ಚಾಟ್‌ಗಳ ಸುರಕ್ಷತೆಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್‌ ಅನ್ನು ಕಂಪೆನಿಯು 2016 ರಿಂದ ನೀಡಿತ್ತು ಎಂದು ಫೇಸ್‌ಬುಕ್‌ ಹೇಳಿದೆ.

ಇದನ್ನೂ ಓದಿ: ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ಮೆಸೆಂಜರ್‌ನ ಪ್ರಾಡಕ್ಟ್ ಮ್ಯಾನೇಜ್‌ಮೆಂಟ್ ನಿರ್ದೇಶಕಿ ರುತ್ ಕ್ರಿಚೆಲಿ ಬ್ಲಾಗ್ ಅವರು ಇದನ್ನು ಘೋಷಿಸಿದ್ದಾರೆ. ಅವರು ತನ್ನ ಬ್ಲಾಗ್‌ನಲ್ಲಿ ಬರೆದಂತೆ, “ಜನರು ತಮ್ಮ ಮೆಸೇಜಿಂಗ್ ಆಪ್‌ಗಳು ಸುರಕ್ಷಿತ ಮತ್ತು ಖಾಸಗಿಯಾಗಿರಬೇಕು ಎಂದು ನಿರೀಕ್ಷಿಸುತ್ತಾರೆ. ಈಗ ನೀಡುತ್ತಿರುವ ಹೊಸ ವೈಶಿಷ್ಟ್ಯಗಳೊಂದಿಗೆ ಅವರ ಕರೆಗಳು ಮತ್ತು ಚಾಟ್‌ಗಳು ತಮಗೆ ಎಷ್ಟು ಖಾಸಗಿಯಾಗಿ ಬೇಕು ಎಂಬುದರ ಮೇಲೆ ನಾವು ಅವರಿಗೆ ಹೆಚ್ಚಿನ ನಿಯಂತ್ರಣವನ್ನು ನೀಡುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂಭಾಷಣೆಯಲ್ಲಿ ನಿಮ್ಮ ಸಂದೇಶಗಳು ಮತ್ತು ಕರೆಗಳು ನಿಮ್ಮ ಸಾಧನವನ್ನು ಬಿಟ್ಟ ಕ್ಷಣದಿಂದ ರಿಸೀವರ್‌ನ ಸಾಧನವನ್ನು ತಲುಪುವವರೆಗೂ ರಕ್ಷಿಸುತ್ತದೆ” ಎಂದು ಕಂಪನಿ ಹೇಳಿದೆ.

“ಇದರರ್ಥ, ಫೇಸ್‌ಬುಕ್ ಸೇರಿದಂತೆ ಬೇರೆ ಯಾರಿಗೂ ನೀವು ಕಳುಹಿಸಿದ ಅಥವಾ ಹೇಳಿದ್ದನ್ನು ನೋಡಲು ಅಥವಾ ಕೇಳಲು ಸಾಧ್ಯವಿಲ್ಲ. ಇವುಗಳಲ್ಲಿ ಏನಾದರೂ ತಪ್ಪಾಗಿದ್ದರೆ ನೀವು ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶವನ್ನು ನಮಗೆ ದೂರು ನೀಡಬಹುದು” ಎಂದು ಫೇಸ್‌ಬುಕ್‌ ಹೇಳಿದೆ.

ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಚಾಟ್‌ಗಳ ಜೊತೆಗೆ ಕಂಪೆನಿಯು ‘ಡಿಸಪಿಯರಿಂಗ್‌ ಮೆಸೇಜ್‌’ ಎನ್ನುವ ಅಪ್‌ಡೇಟ್‌ಗಳನ್ನೂ ನೀಡುತ್ತಿದೆ. ಡಿಸಪಿಯರಿಂಗ್ ಮೆಸೇಜ್‌‌ ಎಂದರೆ, ನಿರ್ದಿಷ್ಟ ಸಮಯದ ನಂತರ ನಮಗೆ ಬಂದಂತಹ ಮತ್ತು ನಾವು ಕಳುಹಿಸಿದ ಮೇಸೇಜ್‌ಗಳು ಅದಾಗಿಯೆ ಡಿಲೀಟ್‌ ಆಗುವುದಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...