Homeಮುಖಪುಟಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

ಮೆಸೆಂಜರ್‌ನ ವಾಯ್ಸ್‌ ಮತ್ತು ವಿಡಿಯೊ ಕರೆಗಳಿಗೆ ‘ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ನೀಡಲಿರುವ ಫೇಸ್‌ಬುಕ್‌!

- Advertisement -
- Advertisement -

ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ವಾಯ್ಸ್‌ ಮತ್ತು ವೀಡಿಯೊ ಕರೆಗಳನ್ನು ‘ಎಂಡ್-ಟು-ಎಂಡ್ ಎನ್‌ಕ್ರಿಪ್ಟ್’ ಮಾಡುವ ಹೊಸ ಆಯ್ಕೆಯನ್ನು ನೀಡಲು ಕಂಪೆನಿ ನಿರ್ಧರಿಸಿದೆ. ಇದರ ಜೊತೆಗೆ ‘ಡಿಸ್‌ಅಪಿಯರಿಂಗ್‌‌ ಮೇಸೇಜ್‌’ ಅನ್ನು ನಿಯಂತ್ರಣ ಮಾಡುವ ಆಯ್ಕೆಯನ್ನೂ ಫೇಸ್‌ಬುಕ್‌ ನೀಡಲಿದೆ.

ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್’ ಎಂದರೆ, ಒಂದು ವೇಳೆ ನೀವು ಫೇಸ್‌ಬುಕ್‌ ಮೆಸೆಂಜರ್‌ನಲ್ಲಿ ಯಾರಿಗಾದರೂ ಸಂದೇಶ ಕಳುಹಿಸಿದರೆ, ಅದನ್ನು ಯಾರಿಗೆ ಕಳುಹಿಸಿದ್ದೀರೋ ಅವರನ್ನು ಮತ್ತು ಕಳುಹಿಸಿರುವ ನಿಮ್ಮನ್ನು ಬಿಟ್ಟರೆ ಬೇರೆ ಯಾರಿಗೂ ನೋಡಲು ಸಾಧ್ಯವಿಲ್ಲ, ಸ್ವತಃ ಫೇಸ್‌ಬುಕ್‌ ಕೂಡಾ ಇದನ್ನು ನೋಡುವುದಿಲ್ಲ ಎಂದರ್ಥ. ಈ ರೀತಿಯಾದ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್ ಅನ್ನು ಈಗಾಗಲೇ ವಾಟ್ಸ್‌ಆ್ಯಪ್‌ನಂತಹ ಆಪ್‌ಗಳು ಬಳಸುತ್ತಿದೆ.

ಟೆಕ್ಸ್ಟ್‌‌ ಚಾಟ್‌ಗಳ ಸುರಕ್ಷತೆಗಾಗಿ ಎಂಡ್-ಟು-ಎಂಡ್ ಎನ್‌ಕ್ರಿಪ್ಶನ್‌ ಅನ್ನು ಕಂಪೆನಿಯು 2016 ರಿಂದ ನೀಡಿತ್ತು ಎಂದು ಫೇಸ್‌ಬುಕ್‌ ಹೇಳಿದೆ.

ಇದನ್ನೂ ಓದಿ: ಹೋರಾಟಗಾರನ ಫೇಸ್‌ಬುಕ್ ಪೋಸ್ಟ್‌ಗೆ NSA ಪ್ರಕರಣ: ಸಂಜೆಯೊಳಗೆ ಬಿಡುಗಡೆಗೊಳಿಸಿ ಎಂದ ಸುಪ್ರೀಂ

ಮೆಸೆಂಜರ್‌ನ ಪ್ರಾಡಕ್ಟ್ ಮ್ಯಾನೇಜ್‌ಮೆಂಟ್ ನಿರ್ದೇಶಕಿ ರುತ್ ಕ್ರಿಚೆಲಿ ಬ್ಲಾಗ್ ಅವರು ಇದನ್ನು ಘೋಷಿಸಿದ್ದಾರೆ. ಅವರು ತನ್ನ ಬ್ಲಾಗ್‌ನಲ್ಲಿ ಬರೆದಂತೆ, “ಜನರು ತಮ್ಮ ಮೆಸೇಜಿಂಗ್ ಆಪ್‌ಗಳು ಸುರಕ್ಷಿತ ಮತ್ತು ಖಾಸಗಿಯಾಗಿರಬೇಕು ಎಂದು ನಿರೀಕ್ಷಿಸುತ್ತಾರೆ. ಈಗ ನೀಡುತ್ತಿರುವ ಹೊಸ ವೈಶಿಷ್ಟ್ಯಗಳೊಂದಿಗೆ ಅವರ ಕರೆಗಳು ಮತ್ತು ಚಾಟ್‌ಗಳು ತಮಗೆ ಎಷ್ಟು ಖಾಸಗಿಯಾಗಿ ಬೇಕು ಎಂಬುದರ ಮೇಲೆ ನಾವು ಅವರಿಗೆ ಹೆಚ್ಚಿನ ನಿಯಂತ್ರಣವನ್ನು ನೀಡುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂಭಾಷಣೆಯಲ್ಲಿ ನಿಮ್ಮ ಸಂದೇಶಗಳು ಮತ್ತು ಕರೆಗಳು ನಿಮ್ಮ ಸಾಧನವನ್ನು ಬಿಟ್ಟ ಕ್ಷಣದಿಂದ ರಿಸೀವರ್‌ನ ಸಾಧನವನ್ನು ತಲುಪುವವರೆಗೂ ರಕ್ಷಿಸುತ್ತದೆ” ಎಂದು ಕಂಪನಿ ಹೇಳಿದೆ.

“ಇದರರ್ಥ, ಫೇಸ್‌ಬುಕ್ ಸೇರಿದಂತೆ ಬೇರೆ ಯಾರಿಗೂ ನೀವು ಕಳುಹಿಸಿದ ಅಥವಾ ಹೇಳಿದ್ದನ್ನು ನೋಡಲು ಅಥವಾ ಕೇಳಲು ಸಾಧ್ಯವಿಲ್ಲ. ಇವುಗಳಲ್ಲಿ ಏನಾದರೂ ತಪ್ಪಾಗಿದ್ದರೆ ನೀವು ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಸಂದೇಶವನ್ನು ನಮಗೆ ದೂರು ನೀಡಬಹುದು” ಎಂದು ಫೇಸ್‌ಬುಕ್‌ ಹೇಳಿದೆ.

ಎಂಡ್-ಟು-ಎಂಡ್ ಎನ್‌ಕ್ರಿಪ್ಟ್ ಮಾಡಿದ ಚಾಟ್‌ಗಳ ಜೊತೆಗೆ ಕಂಪೆನಿಯು ‘ಡಿಸಪಿಯರಿಂಗ್‌ ಮೆಸೇಜ್‌’ ಎನ್ನುವ ಅಪ್‌ಡೇಟ್‌ಗಳನ್ನೂ ನೀಡುತ್ತಿದೆ. ಡಿಸಪಿಯರಿಂಗ್ ಮೆಸೇಜ್‌‌ ಎಂದರೆ, ನಿರ್ದಿಷ್ಟ ಸಮಯದ ನಂತರ ನಮಗೆ ಬಂದಂತಹ ಮತ್ತು ನಾವು ಕಳುಹಿಸಿದ ಮೇಸೇಜ್‌ಗಳು ಅದಾಗಿಯೆ ಡಿಲೀಟ್‌ ಆಗುವುದಾಗಿದೆ.

ಇದನ್ನೂ ಓದಿ: ಫೇಸ್‌ಬುಕ್ ಪೋಸ್ಟ್ ವಿರುದ್ಧ ಬಿಜೆಪಿ ದೂರು: ಮಣಿಪುರದಲ್ಲಿ ಇಬ್ಬರ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...