Homeಅಂತರಾಷ್ಟ್ರೀಯಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

- Advertisement -
- Advertisement -

ಭಾರತವು ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ದೇಶಾದ್ಯಂತ ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯಲು ಫೇಸ್‌ಬುಕ್ ಬದ್ಧವಾಗಿದೆ ಎಂದು ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಇಂದು ಬೆಳಿಗ್ಗೆ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ದೈತ್ಯ ಕಂಪನಿಯಾದ ಫೇಸ್‌ಬುಕ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಡೆತನದ ಮೊಬೈಲ್ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋದಲ್ಲಿ 5.7 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡಿ ಶೇ.10ರಷ್ಟು ಷೇರುಗಳನ್ನು ಕೊಂಡುಕೊಂಡಿದೆ. ಅದಾದ ಒಂದು ದಿನದ ನಂತರ ಜುಕರ್‌ಬರ್ಗ್ ಸಹಭಾಗಿತ್ವಕ್ಕಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹೂಡಿಕೆಯ ಬಗ್ಗೆ ಪ್ರಕಟಿಸಿದ ಫೇಸ್‌ಬುಕ್, ತನ್ನ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಇ-ಕಾಮರ್ಸ್ ಉದ್ಯಮವಾದ ಜಿಯೋಮಾರ್ಟ್ ನಡುವಿನ ಸಹಯೋಗದ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದೆ.

“ಫೇಸ್‌ಬುಕ್, ಜಿಯೋ ಪ್ಲಾಟ್‌ಫಾರ್ಮ್‌ಗಳೊಂದಿಗೆ ಕೈಜೋಡಿಸುತ್ತಿದೆ – ನಾವು ಹಣಕಾಸಿನ ಹೂಡಿಕೆ ಮಾಡುತ್ತಿದ್ದೇವೆ ಹಾಗೂ ಅದಕ್ಕಿಂತ ಹೆಚ್ಚಾಗಿ ಭಾರತದಾದ್ಯಂತದ, ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯುವ ಕೆಲವು ಪ್ರಮುಖ ಯೋಜನೆಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ” ಎಂದು ಜುಕರ್‌ಬರ್ಗ್ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.

“ಭಾರತವು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಸಾಕಷ್ಟು ಪ್ರತಿಭಾವಂತ ಉದ್ಯಮಿಗಳಿರುವ ಅತಿದೊಡ್ಡ ಸಮುದಾಯಗಳ ನೆಲೆಯಾಗಿದೆ. ದೇಶವು ಒಂದು ಪ್ರಮುಖ ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ಜಿಯೋನಂತಹ ಸಂಸ್ಥೆಗಳು ಆನ್‌ಲೈನ್‌ನಲ್ಲಿ ನೂರಾರು ಮಿಲಿಯನ್ ಭಾರತೀಯರನ್ನು, ಸಣ್ಣ ಉದ್ಯಮಗಳನ್ನು ಪಡೆಯುವಲ್ಲಿ ದೊಡ್ಡ ಪಾತ್ರವನ್ನು ವಹಿಸಿವೆ” ಅವರು ಹೇಳಿದರು.

There's a lot going on in the world right now, but I wanted to share an update on our work in India. Facebook is teaming…

Posted by Mark Zuckerberg on Tuesday, April 21, 2020

“ಭಾರತೀಯರೇ, ನಿಮ್ಮೊಂದಿಗೆ ಕೆಲವು ರೋಚಕ ಸುದ್ದಿಗಳನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ. ರಿಲಯನ್ಸ್ ಜಿಯೋದಲ್ಲಿ, ನಮ್ಮ ಪಾಲುದಾರರಾಗಿ ಫೇಸ್‌ಬುಕ್ ಅನ್ನು ಸ್ವಾಗತಿಸಲು ಸಂತೋಷಪಡುತ್ತೇವೆ” ಎಂದು  ಮುಕೇಶ್ ಅಂಬಾನಿ,  ಜುಕರ್‌ಬರ್ಗ್‌ಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ದೇಶಾದ್ಯಂತ ಸುಮಾರು ಮೂರು ಕೋಟಿ ದಿನಸಿ ಮಳಿಗೆಗಳಿಗೆ ಫೇಸ್‌ಬುಕ್-ಜಿಯೋ ಒಪ್ಪಂದದ ಪ್ರಯೋಜನಗಳಾಗಳಿವೆ ಎಂದು ಅಂಬಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಈ ಒಪ್ಪಂದದಿಂದಾಗಿ ದಿನಸಿ ಮಳಿಗೆಗಳು ಸಬಲೀಕರಣಗೊಳ್ಳಲಿದೆ ಮತ್ತು ಡಿಜಿಟಲ್ ತಂತ್ರಜ್ಞಾನದೊಂದಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಅಂಬಾನಿ ಹೇಳಿದ್ದಾರೆ.


ಇದನ್ನೂ ಓದಿ:  ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!


ವಾಟ್ಸ್‌ಆ್ಯಪ್‌ನ ಡಿಜಿಟಲ್ ಪಾವತಿ ಸೇವೆಯನ್ನು ಸರ್ಕಾರ ಅನುಮೋದಿಸಿದ ನಂತರ ಫೇಸ್‌ಬುಕ್‌ನ್ನು ಜಿಯೋದಲ್ಲಿ ಅತಿದೊಡ್ಡ ಷೇರುದಾರರನ್ನಾಗಿ ಮಾಡುವ ಒಪ್ಪಂದವಾಗಿದೆ. ಅಸ್ಸೋಚಾಮ್-ಪಿಡಬ್ಲ್ಯೂಸಿ ಇಂಡಿಯಾ ಅಧ್ಯಯನದ ಪ್ರಕಾರ, 2023 ರಲ್ಲಿ 135.2 ಬಿಲಿಯನ್ ಡಾಲರ್‌ ಮೌಲ್ಯದ ಮಾರುಕಟ್ಟೆಗಾಗಿ ಫೇಸ್‌ಬುಕ್ ಒಡೆತನದ ಪ್ಲಾಟ್‌ಫಾರ್ಮ್ ಈಗ ಗೂಗಲ್ ಪೇ ಮತ್ತು ಪೇಟಿಎಂನ ಜೊತೆಗೆ ಸ್ಪರ್ಧೆಗಿಳಿಯಲು ಸಜ್ಜಾಗಿದೆ.

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

ಜುಕರ್‌ಬರ್ಗ್ ತಮ್ಮ ಪೋಸ್ಟ್‌ನಲ್ಲಿ ಸಣ್ಣ ವ್ಯವಹಾರಗಳ ಬಗ್ಗೆ ಗಮನಸೆಳೆದು, ಇವುಗಳಲ್ಲಿ 60 ದಶಲಕ್ಷಕ್ಕೂ ಹೆಚ್ಚಿನ ಮೊತ್ತದ ವ್ಯವಹಾರ ಭಾರತದಲ್ಲಿದೆ. ಇವುಗಳಲ್ಲಿ ಹೆಚ್ಚಿನವು Paytm ಮತ್ತು Google Pay ನಂತಹ ಡಿಜಿಟಲ್ ಪಾವತಿ ಸೇವೆಗಳನ್ನು ಬಳಸುತ್ತವೆ ಎಂದು ಸೂಚಿಸಿದ್ದಾರೆ.

“ಪ್ರಪಂಚದಾದ್ಯಂತದ ಸಮುದಾಯಗಳು ಲಾಕ್‌ಡೌನ್‌ನಲ್ಲಿರುವುದರಿಂದ, ಈ ಉದ್ಯಮಿಗಳಲ್ಲಿ ಅನೇಕರಿಗೆ ಗ್ರಾಹಕರನ್ನು ಹುಡುಕಲು ಮತ್ತು ಸಂವಹನ ಮಾಡಲು ಮತ್ತು ಅವರ ವ್ಯವಹಾರಗಳನ್ನು ಬೆಳೆಸಲು ಅವರು ಅವಲಂಬಿಸಬಹುದಾದ ಡಿಜಿಟಲ್ ಪರಿಕರಗಳು ಬೇಕಾಗುತ್ತವೆ. ಇದು ನಾವು ಸಹಾಯ ಮಾಡುವ ವಿಷಯವಾಗಿದ್ದು, ಅದಕ್ಕಾಗಿಯೇ ನಾವು ಜಿಯೋ ಜೊತೆ ಪಾಲುದಾರಿಕೆ ಹೊಂದಿದ್ದೇವೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...