Homeಅಂತರಾಷ್ಟ್ರೀಯಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

- Advertisement -
- Advertisement -

ಭಾರತವು ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ದೇಶಾದ್ಯಂತ ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯಲು ಫೇಸ್‌ಬುಕ್ ಬದ್ಧವಾಗಿದೆ ಎಂದು ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಇಂದು ಬೆಳಿಗ್ಗೆ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ದೈತ್ಯ ಕಂಪನಿಯಾದ ಫೇಸ್‌ಬುಕ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಡೆತನದ ಮೊಬೈಲ್ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋದಲ್ಲಿ 5.7 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡಿ ಶೇ.10ರಷ್ಟು ಷೇರುಗಳನ್ನು ಕೊಂಡುಕೊಂಡಿದೆ. ಅದಾದ ಒಂದು ದಿನದ ನಂತರ ಜುಕರ್‌ಬರ್ಗ್ ಸಹಭಾಗಿತ್ವಕ್ಕಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹೂಡಿಕೆಯ ಬಗ್ಗೆ ಪ್ರಕಟಿಸಿದ ಫೇಸ್‌ಬುಕ್, ತನ್ನ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಇ-ಕಾಮರ್ಸ್ ಉದ್ಯಮವಾದ ಜಿಯೋಮಾರ್ಟ್ ನಡುವಿನ ಸಹಯೋಗದ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದೆ.

“ಫೇಸ್‌ಬುಕ್, ಜಿಯೋ ಪ್ಲಾಟ್‌ಫಾರ್ಮ್‌ಗಳೊಂದಿಗೆ ಕೈಜೋಡಿಸುತ್ತಿದೆ – ನಾವು ಹಣಕಾಸಿನ ಹೂಡಿಕೆ ಮಾಡುತ್ತಿದ್ದೇವೆ ಹಾಗೂ ಅದಕ್ಕಿಂತ ಹೆಚ್ಚಾಗಿ ಭಾರತದಾದ್ಯಂತದ, ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯುವ ಕೆಲವು ಪ್ರಮುಖ ಯೋಜನೆಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ” ಎಂದು ಜುಕರ್‌ಬರ್ಗ್ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.

“ಭಾರತವು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಸಾಕಷ್ಟು ಪ್ರತಿಭಾವಂತ ಉದ್ಯಮಿಗಳಿರುವ ಅತಿದೊಡ್ಡ ಸಮುದಾಯಗಳ ನೆಲೆಯಾಗಿದೆ. ದೇಶವು ಒಂದು ಪ್ರಮುಖ ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ಜಿಯೋನಂತಹ ಸಂಸ್ಥೆಗಳು ಆನ್‌ಲೈನ್‌ನಲ್ಲಿ ನೂರಾರು ಮಿಲಿಯನ್ ಭಾರತೀಯರನ್ನು, ಸಣ್ಣ ಉದ್ಯಮಗಳನ್ನು ಪಡೆಯುವಲ್ಲಿ ದೊಡ್ಡ ಪಾತ್ರವನ್ನು ವಹಿಸಿವೆ” ಅವರು ಹೇಳಿದರು.

There's a lot going on in the world right now, but I wanted to share an update on our work in India. Facebook is teaming…

Posted by Mark Zuckerberg on Tuesday, April 21, 2020

“ಭಾರತೀಯರೇ, ನಿಮ್ಮೊಂದಿಗೆ ಕೆಲವು ರೋಚಕ ಸುದ್ದಿಗಳನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ. ರಿಲಯನ್ಸ್ ಜಿಯೋದಲ್ಲಿ, ನಮ್ಮ ಪಾಲುದಾರರಾಗಿ ಫೇಸ್‌ಬುಕ್ ಅನ್ನು ಸ್ವಾಗತಿಸಲು ಸಂತೋಷಪಡುತ್ತೇವೆ” ಎಂದು  ಮುಕೇಶ್ ಅಂಬಾನಿ,  ಜುಕರ್‌ಬರ್ಗ್‌ಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ದೇಶಾದ್ಯಂತ ಸುಮಾರು ಮೂರು ಕೋಟಿ ದಿನಸಿ ಮಳಿಗೆಗಳಿಗೆ ಫೇಸ್‌ಬುಕ್-ಜಿಯೋ ಒಪ್ಪಂದದ ಪ್ರಯೋಜನಗಳಾಗಳಿವೆ ಎಂದು ಅಂಬಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಈ ಒಪ್ಪಂದದಿಂದಾಗಿ ದಿನಸಿ ಮಳಿಗೆಗಳು ಸಬಲೀಕರಣಗೊಳ್ಳಲಿದೆ ಮತ್ತು ಡಿಜಿಟಲ್ ತಂತ್ರಜ್ಞಾನದೊಂದಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಅಂಬಾನಿ ಹೇಳಿದ್ದಾರೆ.


ಇದನ್ನೂ ಓದಿ:  ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!


ವಾಟ್ಸ್‌ಆ್ಯಪ್‌ನ ಡಿಜಿಟಲ್ ಪಾವತಿ ಸೇವೆಯನ್ನು ಸರ್ಕಾರ ಅನುಮೋದಿಸಿದ ನಂತರ ಫೇಸ್‌ಬುಕ್‌ನ್ನು ಜಿಯೋದಲ್ಲಿ ಅತಿದೊಡ್ಡ ಷೇರುದಾರರನ್ನಾಗಿ ಮಾಡುವ ಒಪ್ಪಂದವಾಗಿದೆ. ಅಸ್ಸೋಚಾಮ್-ಪಿಡಬ್ಲ್ಯೂಸಿ ಇಂಡಿಯಾ ಅಧ್ಯಯನದ ಪ್ರಕಾರ, 2023 ರಲ್ಲಿ 135.2 ಬಿಲಿಯನ್ ಡಾಲರ್‌ ಮೌಲ್ಯದ ಮಾರುಕಟ್ಟೆಗಾಗಿ ಫೇಸ್‌ಬುಕ್ ಒಡೆತನದ ಪ್ಲಾಟ್‌ಫಾರ್ಮ್ ಈಗ ಗೂಗಲ್ ಪೇ ಮತ್ತು ಪೇಟಿಎಂನ ಜೊತೆಗೆ ಸ್ಪರ್ಧೆಗಿಳಿಯಲು ಸಜ್ಜಾಗಿದೆ.

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

ಜುಕರ್‌ಬರ್ಗ್ ತಮ್ಮ ಪೋಸ್ಟ್‌ನಲ್ಲಿ ಸಣ್ಣ ವ್ಯವಹಾರಗಳ ಬಗ್ಗೆ ಗಮನಸೆಳೆದು, ಇವುಗಳಲ್ಲಿ 60 ದಶಲಕ್ಷಕ್ಕೂ ಹೆಚ್ಚಿನ ಮೊತ್ತದ ವ್ಯವಹಾರ ಭಾರತದಲ್ಲಿದೆ. ಇವುಗಳಲ್ಲಿ ಹೆಚ್ಚಿನವು Paytm ಮತ್ತು Google Pay ನಂತಹ ಡಿಜಿಟಲ್ ಪಾವತಿ ಸೇವೆಗಳನ್ನು ಬಳಸುತ್ತವೆ ಎಂದು ಸೂಚಿಸಿದ್ದಾರೆ.

“ಪ್ರಪಂಚದಾದ್ಯಂತದ ಸಮುದಾಯಗಳು ಲಾಕ್‌ಡೌನ್‌ನಲ್ಲಿರುವುದರಿಂದ, ಈ ಉದ್ಯಮಿಗಳಲ್ಲಿ ಅನೇಕರಿಗೆ ಗ್ರಾಹಕರನ್ನು ಹುಡುಕಲು ಮತ್ತು ಸಂವಹನ ಮಾಡಲು ಮತ್ತು ಅವರ ವ್ಯವಹಾರಗಳನ್ನು ಬೆಳೆಸಲು ಅವರು ಅವಲಂಬಿಸಬಹುದಾದ ಡಿಜಿಟಲ್ ಪರಿಕರಗಳು ಬೇಕಾಗುತ್ತವೆ. ಇದು ನಾವು ಸಹಾಯ ಮಾಡುವ ವಿಷಯವಾಗಿದ್ದು, ಅದಕ್ಕಾಗಿಯೇ ನಾವು ಜಿಯೋ ಜೊತೆ ಪಾಲುದಾರಿಕೆ ಹೊಂದಿದ್ದೇವೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...