Homeಅಂತರಾಷ್ಟ್ರೀಯಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

- Advertisement -
- Advertisement -

ಭಾರತವು ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ದೇಶಾದ್ಯಂತ ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯಲು ಫೇಸ್‌ಬುಕ್ ಬದ್ಧವಾಗಿದೆ ಎಂದು ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಇಂದು ಬೆಳಿಗ್ಗೆ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ದೈತ್ಯ ಕಂಪನಿಯಾದ ಫೇಸ್‌ಬುಕ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಡೆತನದ ಮೊಬೈಲ್ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋದಲ್ಲಿ 5.7 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡಿ ಶೇ.10ರಷ್ಟು ಷೇರುಗಳನ್ನು ಕೊಂಡುಕೊಂಡಿದೆ. ಅದಾದ ಒಂದು ದಿನದ ನಂತರ ಜುಕರ್‌ಬರ್ಗ್ ಸಹಭಾಗಿತ್ವಕ್ಕಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹೂಡಿಕೆಯ ಬಗ್ಗೆ ಪ್ರಕಟಿಸಿದ ಫೇಸ್‌ಬುಕ್, ತನ್ನ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಇ-ಕಾಮರ್ಸ್ ಉದ್ಯಮವಾದ ಜಿಯೋಮಾರ್ಟ್ ನಡುವಿನ ಸಹಯೋಗದ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದೆ.

“ಫೇಸ್‌ಬುಕ್, ಜಿಯೋ ಪ್ಲಾಟ್‌ಫಾರ್ಮ್‌ಗಳೊಂದಿಗೆ ಕೈಜೋಡಿಸುತ್ತಿದೆ – ನಾವು ಹಣಕಾಸಿನ ಹೂಡಿಕೆ ಮಾಡುತ್ತಿದ್ದೇವೆ ಹಾಗೂ ಅದಕ್ಕಿಂತ ಹೆಚ್ಚಾಗಿ ಭಾರತದಾದ್ಯಂತದ, ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯುವ ಕೆಲವು ಪ್ರಮುಖ ಯೋಜನೆಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ” ಎಂದು ಜುಕರ್‌ಬರ್ಗ್ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.

“ಭಾರತವು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಸಾಕಷ್ಟು ಪ್ರತಿಭಾವಂತ ಉದ್ಯಮಿಗಳಿರುವ ಅತಿದೊಡ್ಡ ಸಮುದಾಯಗಳ ನೆಲೆಯಾಗಿದೆ. ದೇಶವು ಒಂದು ಪ್ರಮುಖ ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ಜಿಯೋನಂತಹ ಸಂಸ್ಥೆಗಳು ಆನ್‌ಲೈನ್‌ನಲ್ಲಿ ನೂರಾರು ಮಿಲಿಯನ್ ಭಾರತೀಯರನ್ನು, ಸಣ್ಣ ಉದ್ಯಮಗಳನ್ನು ಪಡೆಯುವಲ್ಲಿ ದೊಡ್ಡ ಪಾತ್ರವನ್ನು ವಹಿಸಿವೆ” ಅವರು ಹೇಳಿದರು.

There's a lot going on in the world right now, but I wanted to share an update on our work in India. Facebook is teaming…

Posted by Mark Zuckerberg on Tuesday, April 21, 2020

“ಭಾರತೀಯರೇ, ನಿಮ್ಮೊಂದಿಗೆ ಕೆಲವು ರೋಚಕ ಸುದ್ದಿಗಳನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ. ರಿಲಯನ್ಸ್ ಜಿಯೋದಲ್ಲಿ, ನಮ್ಮ ಪಾಲುದಾರರಾಗಿ ಫೇಸ್‌ಬುಕ್ ಅನ್ನು ಸ್ವಾಗತಿಸಲು ಸಂತೋಷಪಡುತ್ತೇವೆ” ಎಂದು  ಮುಕೇಶ್ ಅಂಬಾನಿ,  ಜುಕರ್‌ಬರ್ಗ್‌ಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ದೇಶಾದ್ಯಂತ ಸುಮಾರು ಮೂರು ಕೋಟಿ ದಿನಸಿ ಮಳಿಗೆಗಳಿಗೆ ಫೇಸ್‌ಬುಕ್-ಜಿಯೋ ಒಪ್ಪಂದದ ಪ್ರಯೋಜನಗಳಾಗಳಿವೆ ಎಂದು ಅಂಬಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಈ ಒಪ್ಪಂದದಿಂದಾಗಿ ದಿನಸಿ ಮಳಿಗೆಗಳು ಸಬಲೀಕರಣಗೊಳ್ಳಲಿದೆ ಮತ್ತು ಡಿಜಿಟಲ್ ತಂತ್ರಜ್ಞಾನದೊಂದಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಅಂಬಾನಿ ಹೇಳಿದ್ದಾರೆ.


ಇದನ್ನೂ ಓದಿ:  ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!


ವಾಟ್ಸ್‌ಆ್ಯಪ್‌ನ ಡಿಜಿಟಲ್ ಪಾವತಿ ಸೇವೆಯನ್ನು ಸರ್ಕಾರ ಅನುಮೋದಿಸಿದ ನಂತರ ಫೇಸ್‌ಬುಕ್‌ನ್ನು ಜಿಯೋದಲ್ಲಿ ಅತಿದೊಡ್ಡ ಷೇರುದಾರರನ್ನಾಗಿ ಮಾಡುವ ಒಪ್ಪಂದವಾಗಿದೆ. ಅಸ್ಸೋಚಾಮ್-ಪಿಡಬ್ಲ್ಯೂಸಿ ಇಂಡಿಯಾ ಅಧ್ಯಯನದ ಪ್ರಕಾರ, 2023 ರಲ್ಲಿ 135.2 ಬಿಲಿಯನ್ ಡಾಲರ್‌ ಮೌಲ್ಯದ ಮಾರುಕಟ್ಟೆಗಾಗಿ ಫೇಸ್‌ಬುಕ್ ಒಡೆತನದ ಪ್ಲಾಟ್‌ಫಾರ್ಮ್ ಈಗ ಗೂಗಲ್ ಪೇ ಮತ್ತು ಪೇಟಿಎಂನ ಜೊತೆಗೆ ಸ್ಪರ್ಧೆಗಿಳಿಯಲು ಸಜ್ಜಾಗಿದೆ.

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

ಜುಕರ್‌ಬರ್ಗ್ ತಮ್ಮ ಪೋಸ್ಟ್‌ನಲ್ಲಿ ಸಣ್ಣ ವ್ಯವಹಾರಗಳ ಬಗ್ಗೆ ಗಮನಸೆಳೆದು, ಇವುಗಳಲ್ಲಿ 60 ದಶಲಕ್ಷಕ್ಕೂ ಹೆಚ್ಚಿನ ಮೊತ್ತದ ವ್ಯವಹಾರ ಭಾರತದಲ್ಲಿದೆ. ಇವುಗಳಲ್ಲಿ ಹೆಚ್ಚಿನವು Paytm ಮತ್ತು Google Pay ನಂತಹ ಡಿಜಿಟಲ್ ಪಾವತಿ ಸೇವೆಗಳನ್ನು ಬಳಸುತ್ತವೆ ಎಂದು ಸೂಚಿಸಿದ್ದಾರೆ.

“ಪ್ರಪಂಚದಾದ್ಯಂತದ ಸಮುದಾಯಗಳು ಲಾಕ್‌ಡೌನ್‌ನಲ್ಲಿರುವುದರಿಂದ, ಈ ಉದ್ಯಮಿಗಳಲ್ಲಿ ಅನೇಕರಿಗೆ ಗ್ರಾಹಕರನ್ನು ಹುಡುಕಲು ಮತ್ತು ಸಂವಹನ ಮಾಡಲು ಮತ್ತು ಅವರ ವ್ಯವಹಾರಗಳನ್ನು ಬೆಳೆಸಲು ಅವರು ಅವಲಂಬಿಸಬಹುದಾದ ಡಿಜಿಟಲ್ ಪರಿಕರಗಳು ಬೇಕಾಗುತ್ತವೆ. ಇದು ನಾವು ಸಹಾಯ ಮಾಡುವ ವಿಷಯವಾಗಿದ್ದು, ಅದಕ್ಕಾಗಿಯೇ ನಾವು ಜಿಯೋ ಜೊತೆ ಪಾಲುದಾರಿಕೆ ಹೊಂದಿದ್ದೇವೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...