Homeಅಂತರಾಷ್ಟ್ರೀಯಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

- Advertisement -
- Advertisement -

ಭಾರತವು ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ದೇಶಾದ್ಯಂತ ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯಲು ಫೇಸ್‌ಬುಕ್ ಬದ್ಧವಾಗಿದೆ ಎಂದು ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಇಂದು ಬೆಳಿಗ್ಗೆ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ದೈತ್ಯ ಕಂಪನಿಯಾದ ಫೇಸ್‌ಬುಕ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಡೆತನದ ಮೊಬೈಲ್ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋದಲ್ಲಿ 5.7 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡಿ ಶೇ.10ರಷ್ಟು ಷೇರುಗಳನ್ನು ಕೊಂಡುಕೊಂಡಿದೆ. ಅದಾದ ಒಂದು ದಿನದ ನಂತರ ಜುಕರ್‌ಬರ್ಗ್ ಸಹಭಾಗಿತ್ವಕ್ಕಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹೂಡಿಕೆಯ ಬಗ್ಗೆ ಪ್ರಕಟಿಸಿದ ಫೇಸ್‌ಬುಕ್, ತನ್ನ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಇ-ಕಾಮರ್ಸ್ ಉದ್ಯಮವಾದ ಜಿಯೋಮಾರ್ಟ್ ನಡುವಿನ ಸಹಯೋಗದ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದೆ.

“ಫೇಸ್‌ಬುಕ್, ಜಿಯೋ ಪ್ಲಾಟ್‌ಫಾರ್ಮ್‌ಗಳೊಂದಿಗೆ ಕೈಜೋಡಿಸುತ್ತಿದೆ – ನಾವು ಹಣಕಾಸಿನ ಹೂಡಿಕೆ ಮಾಡುತ್ತಿದ್ದೇವೆ ಹಾಗೂ ಅದಕ್ಕಿಂತ ಹೆಚ್ಚಾಗಿ ಭಾರತದಾದ್ಯಂತದ, ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯುವ ಕೆಲವು ಪ್ರಮುಖ ಯೋಜನೆಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ” ಎಂದು ಜುಕರ್‌ಬರ್ಗ್ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.

“ಭಾರತವು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಸಾಕಷ್ಟು ಪ್ರತಿಭಾವಂತ ಉದ್ಯಮಿಗಳಿರುವ ಅತಿದೊಡ್ಡ ಸಮುದಾಯಗಳ ನೆಲೆಯಾಗಿದೆ. ದೇಶವು ಒಂದು ಪ್ರಮುಖ ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ಜಿಯೋನಂತಹ ಸಂಸ್ಥೆಗಳು ಆನ್‌ಲೈನ್‌ನಲ್ಲಿ ನೂರಾರು ಮಿಲಿಯನ್ ಭಾರತೀಯರನ್ನು, ಸಣ್ಣ ಉದ್ಯಮಗಳನ್ನು ಪಡೆಯುವಲ್ಲಿ ದೊಡ್ಡ ಪಾತ್ರವನ್ನು ವಹಿಸಿವೆ” ಅವರು ಹೇಳಿದರು.

There's a lot going on in the world right now, but I wanted to share an update on our work in India. Facebook is teaming…

Posted by Mark Zuckerberg on Tuesday, April 21, 2020

“ಭಾರತೀಯರೇ, ನಿಮ್ಮೊಂದಿಗೆ ಕೆಲವು ರೋಚಕ ಸುದ್ದಿಗಳನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ. ರಿಲಯನ್ಸ್ ಜಿಯೋದಲ್ಲಿ, ನಮ್ಮ ಪಾಲುದಾರರಾಗಿ ಫೇಸ್‌ಬುಕ್ ಅನ್ನು ಸ್ವಾಗತಿಸಲು ಸಂತೋಷಪಡುತ್ತೇವೆ” ಎಂದು  ಮುಕೇಶ್ ಅಂಬಾನಿ,  ಜುಕರ್‌ಬರ್ಗ್‌ಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ದೇಶಾದ್ಯಂತ ಸುಮಾರು ಮೂರು ಕೋಟಿ ದಿನಸಿ ಮಳಿಗೆಗಳಿಗೆ ಫೇಸ್‌ಬುಕ್-ಜಿಯೋ ಒಪ್ಪಂದದ ಪ್ರಯೋಜನಗಳಾಗಳಿವೆ ಎಂದು ಅಂಬಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಈ ಒಪ್ಪಂದದಿಂದಾಗಿ ದಿನಸಿ ಮಳಿಗೆಗಳು ಸಬಲೀಕರಣಗೊಳ್ಳಲಿದೆ ಮತ್ತು ಡಿಜಿಟಲ್ ತಂತ್ರಜ್ಞಾನದೊಂದಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಅಂಬಾನಿ ಹೇಳಿದ್ದಾರೆ.


ಇದನ್ನೂ ಓದಿ:  ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!


ವಾಟ್ಸ್‌ಆ್ಯಪ್‌ನ ಡಿಜಿಟಲ್ ಪಾವತಿ ಸೇವೆಯನ್ನು ಸರ್ಕಾರ ಅನುಮೋದಿಸಿದ ನಂತರ ಫೇಸ್‌ಬುಕ್‌ನ್ನು ಜಿಯೋದಲ್ಲಿ ಅತಿದೊಡ್ಡ ಷೇರುದಾರರನ್ನಾಗಿ ಮಾಡುವ ಒಪ್ಪಂದವಾಗಿದೆ. ಅಸ್ಸೋಚಾಮ್-ಪಿಡಬ್ಲ್ಯೂಸಿ ಇಂಡಿಯಾ ಅಧ್ಯಯನದ ಪ್ರಕಾರ, 2023 ರಲ್ಲಿ 135.2 ಬಿಲಿಯನ್ ಡಾಲರ್‌ ಮೌಲ್ಯದ ಮಾರುಕಟ್ಟೆಗಾಗಿ ಫೇಸ್‌ಬುಕ್ ಒಡೆತನದ ಪ್ಲಾಟ್‌ಫಾರ್ಮ್ ಈಗ ಗೂಗಲ್ ಪೇ ಮತ್ತು ಪೇಟಿಎಂನ ಜೊತೆಗೆ ಸ್ಪರ್ಧೆಗಿಳಿಯಲು ಸಜ್ಜಾಗಿದೆ.

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

ಜುಕರ್‌ಬರ್ಗ್ ತಮ್ಮ ಪೋಸ್ಟ್‌ನಲ್ಲಿ ಸಣ್ಣ ವ್ಯವಹಾರಗಳ ಬಗ್ಗೆ ಗಮನಸೆಳೆದು, ಇವುಗಳಲ್ಲಿ 60 ದಶಲಕ್ಷಕ್ಕೂ ಹೆಚ್ಚಿನ ಮೊತ್ತದ ವ್ಯವಹಾರ ಭಾರತದಲ್ಲಿದೆ. ಇವುಗಳಲ್ಲಿ ಹೆಚ್ಚಿನವು Paytm ಮತ್ತು Google Pay ನಂತಹ ಡಿಜಿಟಲ್ ಪಾವತಿ ಸೇವೆಗಳನ್ನು ಬಳಸುತ್ತವೆ ಎಂದು ಸೂಚಿಸಿದ್ದಾರೆ.

“ಪ್ರಪಂಚದಾದ್ಯಂತದ ಸಮುದಾಯಗಳು ಲಾಕ್‌ಡೌನ್‌ನಲ್ಲಿರುವುದರಿಂದ, ಈ ಉದ್ಯಮಿಗಳಲ್ಲಿ ಅನೇಕರಿಗೆ ಗ್ರಾಹಕರನ್ನು ಹುಡುಕಲು ಮತ್ತು ಸಂವಹನ ಮಾಡಲು ಮತ್ತು ಅವರ ವ್ಯವಹಾರಗಳನ್ನು ಬೆಳೆಸಲು ಅವರು ಅವಲಂಬಿಸಬಹುದಾದ ಡಿಜಿಟಲ್ ಪರಿಕರಗಳು ಬೇಕಾಗುತ್ತವೆ. ಇದು ನಾವು ಸಹಾಯ ಮಾಡುವ ವಿಷಯವಾಗಿದ್ದು, ಅದಕ್ಕಾಗಿಯೇ ನಾವು ಜಿಯೋ ಜೊತೆ ಪಾಲುದಾರಿಕೆ ಹೊಂದಿದ್ದೇವೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...