Homeಅಂತರಾಷ್ಟ್ರೀಯಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ಅಂಬಾನಿಯ ಜಿಯೋದೊಂದಿಗೆ ಫೇಸ್‌ಬುಕ್‌ ಕೈಜೋಡಿಸಿದ್ದು ಏಕೆ: ಮಾರ್ಕ್ ಜುಕರ್‌ಬರ್ಗ್ ಸ್ಪಷ್ಟನೆ

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

- Advertisement -
- Advertisement -

ಭಾರತವು ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ದೇಶಾದ್ಯಂತ ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯಲು ಫೇಸ್‌ಬುಕ್ ಬದ್ಧವಾಗಿದೆ ಎಂದು ಸಂಸ್ಥಾಪಕ ಮಾರ್ಕ್ ಜುಕರ್‌ಬರ್ಗ್ ಇಂದು ಬೆಳಿಗ್ಗೆ ಹೇಳಿದ್ದಾರೆ.

ಸಾಮಾಜಿಕ ಮಾಧ್ಯಮದ ದೈತ್ಯ ಕಂಪನಿಯಾದ ಫೇಸ್‌ಬುಕ್, ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಒಡೆತನದ ಮೊಬೈಲ್ ಟೆಲಿಕಾಂ ಕಂಪನಿ ರಿಲಯನ್ಸ್ ಜಿಯೋದಲ್ಲಿ 5.7 ಬಿಲಿಯನ್ ಡಾಲರ್‌ಗಳನ್ನು ಹೂಡಿಕೆ ಮಾಡಿ ಶೇ.10ರಷ್ಟು ಷೇರುಗಳನ್ನು ಕೊಂಡುಕೊಂಡಿದೆ. ಅದಾದ ಒಂದು ದಿನದ ನಂತರ ಜುಕರ್‌ಬರ್ಗ್ ಸಹಭಾಗಿತ್ವಕ್ಕಾಗಿ ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಖೇಶ್ ಅಂಬಾನಿ ಅವರಿಗೆ ಧನ್ಯವಾದ ಅರ್ಪಿಸಿದ್ದಾರೆ.

ಹೂಡಿಕೆಯ ಬಗ್ಗೆ ಪ್ರಕಟಿಸಿದ ಫೇಸ್‌ಬುಕ್, ತನ್ನ ಮೆಸೇಜಿಂಗ್ ಪ್ಲಾಟ್‌ಫಾರ್ಮ್ ವಾಟ್ಸಾಪ್ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್‌ನ ಇ-ಕಾಮರ್ಸ್ ಉದ್ಯಮವಾದ ಜಿಯೋಮಾರ್ಟ್ ನಡುವಿನ ಸಹಯೋಗದ ಬಗ್ಗೆ ಗಮನ ಹರಿಸುವುದಾಗಿ ತಿಳಿಸಿದೆ.

“ಫೇಸ್‌ಬುಕ್, ಜಿಯೋ ಪ್ಲಾಟ್‌ಫಾರ್ಮ್‌ಗಳೊಂದಿಗೆ ಕೈಜೋಡಿಸುತ್ತಿದೆ – ನಾವು ಹಣಕಾಸಿನ ಹೂಡಿಕೆ ಮಾಡುತ್ತಿದ್ದೇವೆ ಹಾಗೂ ಅದಕ್ಕಿಂತ ಹೆಚ್ಚಾಗಿ ಭಾರತದಾದ್ಯಂತದ, ಜನರಿಗೆ ವಾಣಿಜ್ಯ ಅವಕಾಶಗಳನ್ನು ತೆರೆಯುವ ಕೆಲವು ಪ್ರಮುಖ ಯೋಜನೆಗಳಲ್ಲಿ ಒಟ್ಟಾಗಿ ಕೆಲಸ ಮಾಡಲು ಬದ್ಧರಾಗಿದ್ದೇವೆ” ಎಂದು ಜುಕರ್‌ಬರ್ಗ್ ತನ್ನ ಫೇಸ್‌ಬುಕ್ ಪುಟದಲ್ಲಿ ಬರೆದಿದ್ದಾರೆ.

“ಭಾರತವು ಫೇಸ್‌ಬುಕ್ ಮತ್ತು ವಾಟ್ಸಾಪ್‌ನಲ್ಲಿ ಸಾಕಷ್ಟು ಪ್ರತಿಭಾವಂತ ಉದ್ಯಮಿಗಳಿರುವ ಅತಿದೊಡ್ಡ ಸಮುದಾಯಗಳ ನೆಲೆಯಾಗಿದೆ. ದೇಶವು ಒಂದು ಪ್ರಮುಖ ಡಿಜಿಟಲ್ ಪರಿವರ್ತನೆಯ ಮಧ್ಯದಲ್ಲಿದೆ ಹಾಗೂ ಜಿಯೋನಂತಹ ಸಂಸ್ಥೆಗಳು ಆನ್‌ಲೈನ್‌ನಲ್ಲಿ ನೂರಾರು ಮಿಲಿಯನ್ ಭಾರತೀಯರನ್ನು, ಸಣ್ಣ ಉದ್ಯಮಗಳನ್ನು ಪಡೆಯುವಲ್ಲಿ ದೊಡ್ಡ ಪಾತ್ರವನ್ನು ವಹಿಸಿವೆ” ಅವರು ಹೇಳಿದರು.

There's a lot going on in the world right now, but I wanted to share an update on our work in India. Facebook is teaming…

Posted by Mark Zuckerberg on Tuesday, April 21, 2020

“ಭಾರತೀಯರೇ, ನಿಮ್ಮೊಂದಿಗೆ ಕೆಲವು ರೋಚಕ ಸುದ್ದಿಗಳನ್ನು ಹಂಚಿಕೊಳ್ಳಲು ನಾನು ಇಲ್ಲಿದ್ದೇನೆ. ರಿಲಯನ್ಸ್ ಜಿಯೋದಲ್ಲಿ, ನಮ್ಮ ಪಾಲುದಾರರಾಗಿ ಫೇಸ್‌ಬುಕ್ ಅನ್ನು ಸ್ವಾಗತಿಸಲು ಸಂತೋಷಪಡುತ್ತೇವೆ” ಎಂದು  ಮುಕೇಶ್ ಅಂಬಾನಿ,  ಜುಕರ್‌ಬರ್ಗ್‌ಗೆ ಪ್ರತಿಕ್ರಿಯೆಯಾಗಿ ಹೇಳಿದ್ದಾರೆ.

ದೇಶಾದ್ಯಂತ ಸುಮಾರು ಮೂರು ಕೋಟಿ ದಿನಸಿ ಮಳಿಗೆಗಳಿಗೆ ಫೇಸ್‌ಬುಕ್-ಜಿಯೋ ಒಪ್ಪಂದದ ಪ್ರಯೋಜನಗಳಾಗಳಿವೆ ಎಂದು ಅಂಬಾನಿ ತಮ್ಮ ಸಂದೇಶದಲ್ಲಿ ಹೇಳಿದ್ದಾರೆ. ಈ ಒಪ್ಪಂದದಿಂದಾಗಿ ದಿನಸಿ ಮಳಿಗೆಗಳು ಸಬಲೀಕರಣಗೊಳ್ಳಲಿದೆ ಮತ್ತು ಡಿಜಿಟಲ್ ತಂತ್ರಜ್ಞಾನದೊಂದಿಗೆ ಹೊಸ ಉದ್ಯೋಗಾವಕಾಶಗಳನ್ನು ಸೃಷ್ಟಿಸಬಹುದು ಎಂದು ಅಂಬಾನಿ ಹೇಳಿದ್ದಾರೆ.


ಇದನ್ನೂ ಓದಿ:  ಮುಖೇಶ್‌ ಅಂಬಾನಿಯ ರಿಲಯನ್ಸ್ ಇಂಡಸ್ಟ್ರೀಸ್ ಲಿ. ವಿಶ್ವದ 6ನೇ ಅತಿದೊಡ್ಡ ತೈಲ ಕಂಪನಿ…!


ವಾಟ್ಸ್‌ಆ್ಯಪ್‌ನ ಡಿಜಿಟಲ್ ಪಾವತಿ ಸೇವೆಯನ್ನು ಸರ್ಕಾರ ಅನುಮೋದಿಸಿದ ನಂತರ ಫೇಸ್‌ಬುಕ್‌ನ್ನು ಜಿಯೋದಲ್ಲಿ ಅತಿದೊಡ್ಡ ಷೇರುದಾರರನ್ನಾಗಿ ಮಾಡುವ ಒಪ್ಪಂದವಾಗಿದೆ. ಅಸ್ಸೋಚಾಮ್-ಪಿಡಬ್ಲ್ಯೂಸಿ ಇಂಡಿಯಾ ಅಧ್ಯಯನದ ಪ್ರಕಾರ, 2023 ರಲ್ಲಿ 135.2 ಬಿಲಿಯನ್ ಡಾಲರ್‌ ಮೌಲ್ಯದ ಮಾರುಕಟ್ಟೆಗಾಗಿ ಫೇಸ್‌ಬುಕ್ ಒಡೆತನದ ಪ್ಲಾಟ್‌ಫಾರ್ಮ್ ಈಗ ಗೂಗಲ್ ಪೇ ಮತ್ತು ಪೇಟಿಎಂನ ಜೊತೆಗೆ ಸ್ಪರ್ಧೆಗಿಳಿಯಲು ಸಜ್ಜಾಗಿದೆ.

ವಾಟ್ಸಾಪ್ ಭಾರತದಲ್ಲಿ 400 ಮಿಲಿಯನ್ ಬಳಕೆದಾರರನ್ನು ಹೊಂದಿದೆ, ಇದು ಅತಿದೊಡ್ಡ ಮಾರುಕಟ್ಟೆಯಾಗಿದ್ದು, ದೇಶದ ಸುಮಾರು 80 ಪ್ರತಿಶತದಷ್ಟು ಸ್ಮಾರ್ಟ್‌ಫೋನ್ ಬಳಕೆದಾರರು ವಾಟ್ಸಪ್ ಬಳಸುತ್ತಿದ್ದಾರೆ.

ಜುಕರ್‌ಬರ್ಗ್ ತಮ್ಮ ಪೋಸ್ಟ್‌ನಲ್ಲಿ ಸಣ್ಣ ವ್ಯವಹಾರಗಳ ಬಗ್ಗೆ ಗಮನಸೆಳೆದು, ಇವುಗಳಲ್ಲಿ 60 ದಶಲಕ್ಷಕ್ಕೂ ಹೆಚ್ಚಿನ ಮೊತ್ತದ ವ್ಯವಹಾರ ಭಾರತದಲ್ಲಿದೆ. ಇವುಗಳಲ್ಲಿ ಹೆಚ್ಚಿನವು Paytm ಮತ್ತು Google Pay ನಂತಹ ಡಿಜಿಟಲ್ ಪಾವತಿ ಸೇವೆಗಳನ್ನು ಬಳಸುತ್ತವೆ ಎಂದು ಸೂಚಿಸಿದ್ದಾರೆ.

“ಪ್ರಪಂಚದಾದ್ಯಂತದ ಸಮುದಾಯಗಳು ಲಾಕ್‌ಡೌನ್‌ನಲ್ಲಿರುವುದರಿಂದ, ಈ ಉದ್ಯಮಿಗಳಲ್ಲಿ ಅನೇಕರಿಗೆ ಗ್ರಾಹಕರನ್ನು ಹುಡುಕಲು ಮತ್ತು ಸಂವಹನ ಮಾಡಲು ಮತ್ತು ಅವರ ವ್ಯವಹಾರಗಳನ್ನು ಬೆಳೆಸಲು ಅವರು ಅವಲಂಬಿಸಬಹುದಾದ ಡಿಜಿಟಲ್ ಪರಿಕರಗಳು ಬೇಕಾಗುತ್ತವೆ. ಇದು ನಾವು ಸಹಾಯ ಮಾಡುವ ವಿಷಯವಾಗಿದ್ದು, ಅದಕ್ಕಾಗಿಯೇ ನಾವು ಜಿಯೋ ಜೊತೆ ಪಾಲುದಾರಿಕೆ ಹೊಂದಿದ್ದೇವೆ” ಎಂದು ಅವರು ಹೇಳಿದರು.


ಇದನ್ನೂ ಓದಿ: ಆನಿ ಬಂದವು ಆನಿ ಎರಡೆರಡು ಆನಿ – ಒಂದು ಅಂಬಾನಿ, ಇನ್ನೊಂದು ಅಡಾನಿ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...