Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷರ ಬೆಂಬಲಿಗರ ಖಾತೆ ಮೇಲೆ ಕ್ರಮ: ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದ ಫೇಸ್‌ಬುಕ್

ಬ್ರೆಜಿಲ್ ಅಧ್ಯಕ್ಷರ ಬೆಂಬಲಿಗರ ಖಾತೆ ಮೇಲೆ ಕ್ರಮ: ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದ ಫೇಸ್‌ಬುಕ್

- Advertisement -
- Advertisement -

ನಕಲಿ ಸುದ್ದಿ ಜಾಲ ನಡೆಸುತ್ತಿದ್ದಾರೆ ಎಂಬ ಆರೋಪದಡಿ ತನಿಖೆ ಎದುರಿಸುತ್ತಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಬೆಂಬಲಿಗರ 12 ಮಂದಿಯ ಖಾತೆಗಳ ಮೇಲೆ ವಿಶ್ವದಾದ್ಯಂತ ನಿರ್ಬಂಧ ಹೇರಬೇಕೆಂಬ ಬ್ರೆಜಿಲ್ ನ್ಯಾಯಾಧೀಶರ ಆದೇಶವನ್ನು ಪಾಲಿಸುವುದಾಗಿ ಫೇಸ್‌ಬುಕ್ ಹೇಳಿದೆ.

ಆ ಖಾತೆಗಳನ್ನು ಮುಚ್ಚುವಂತೆ ಆದೇಶಿಸಿದ್ದ ಹಿಂದಿನ ತೀರ್ಪನ್ನು ಸಂಪೂರ್ಣವಾಗಿ ಪಾಲಿಸುವಲ್ಲಿ ಫೇಸ್‌ಬುಕ್‌ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಲೆಕ್ಸಾಂಡ್ರೆ ಡಿ ಮೊರೇಸ್ ಹೇಳಿದ್ದಾರೆ. ಆ ಖಾತೆಗಳು ಇನ್ನೂ ಸಕ್ರಿಯವಾಗಿದ್ದು ಬ್ರೆಜಿಲ್ ಹೊರಗೆ ತಮ್ಮ ನೋಂದಣಿ ಮತ್ತು ಸ್ಥಳ ಬದಲಿಸುವ ಮೂಲಕ ಕೆಲಸ ಮಾಡುತ್ತಿವೆ ಎಂದು ಹೇಳಿದ್ದಾರೆ.

ಕೋರ್ಟ್‌ನ ಹೊಸ ಆದೇಶವನ್ನು ಫೇಸ್‌ಬುಕ್‌  ಅತಿಯಾದುದ್ದು ಎಂದು ಕರೆದಿದೆ. ಇದು ಬ್ರೆಜಿಲ್ ನ್ಯಾಯವ್ಯಾಪ್ತಿಯ ಹೊರಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ವಿಶ್ವದ ಇತರ ಕಾನೂನುಗಳೊಂದಿಗೆ ಸಂಘರ್ಷವೇರ್ಪಡುತ್ತದೆ. ಹಾಗಾಗಿ ತೀರ್ಪಿನ ವಿರುದ್ಧ ಮೆಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.

ಅಧ್ಯಕ್ಷರ ಅನುಯಾಯಿಗಳ ಫೇಸ್‌ಬುಕ್ ಪೇಜ್‌ಗಳು ಮತ್ತು ಪ್ರೊಫೈಲ್‌ಗಳನ್ನು ಬ್ರೆಜಿಲ್‌ನ ಐಪಿ ಸ್ಥಳಗಳಿಂದ ನೋಡುವುದನ್ನು ನಿರ್ಬಂಧಿಸುವ ಮೂಲಕ ಹಿಂದಿನ ಆದೇಶವನ್ನು ಪಾಲಿಸಲಾಗಿದೆ ಎಂದು ಫೇಸ್‌ಬುಕ್ ವಾದಿಸಿದೆ. ಆ ಖಾತೆಗಲು ತಮ್ಮ ನೋಂದಣಿ ಮತ್ತು ಸ್ಥಳ ಬದಲಿಸಿಕೊಂಡರೂ ಸಹ  ಬ್ರೆಜಿಲ್‌ನ ಐಪಿ ಸ್ಥಳಗಳ ಜನರು ಅವುಗಳನ್ನು ನೋಡಲಾಗುವುದಿಲ್ಲ ಎಂದು ಕಂಪನಿ ಹೇಳಿದೆ.

ಕಳೆದ ಎಂಟು ದಿನಗಳಲ್ಲಿ ತನ್ನ ಹಿಂದಿನ ನಿರ್ಧಾರವನ್ನು ಪಾಲಿಸದಿದ್ದಕ್ಕಾಗಿ 3,67,000 ಡಾಲರ್ ದಂಡವನ್ನು ಫೇಸ್‌ಬುಕ್‌ ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಧೀಶರಾದ ಮೊರೇಸ್ ಹೇಳಿದ್ದಾರೆ.

ಟ್ವಿಟ್ಟರ್ ಖಾತೆಗಳನ್ನು ಸಹ ನಿರ್ಬಂಧಿಸಬೇಕು ಮೊರೆಸ್‌ ತೀರ್ಪು ನೀಡಿದ್ದರು. ಆದರೆ ಈ ನಿರ್ಧಾರವು “ಬ್ರೆಜಿಲ್‌ನ ವಾಕ್ ಸ್ವಾತಂತ್ರ್ಯದ ಅಡಿಯಲ್ಲಿ ಅಸಮಾನವಾಗಿದೆ ಎಂದ ಟ್ವಿಟ್ಟರ್‌, ಮೇಲ್ಮನವಿ ಸಲ್ಲಿಸಲ್ಲಿದೆ. ಇದೇ ಸಮಯದಲ್ಲಿ ಉದ್ದೇಶಿತ ಪ್ರೊಫೈಲ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ಬೆದರಿಕೆಗಳು ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಬೋಲ್ಸೊನಾರೊ ಬೆಂಬಲಿಗರ ನಕಲಿ ಜಾಲತಾಣಗಳ ಕುರಿತು ವಿವಾದಾತ್ಮಕ ಪ್ರಕರಣವನ್ನು ಮೊರೇಸ್ ವಿಚಾರಣೆ ನಡೆಸುತ್ತಿದ್ದಾರೆ. ಅಧ್ಯಕ್ಷ ಬೋಲ್ಸನಾರೊ ಮತ್ತು ಸುಪ್ರೀಂ ಕೋರ್ಟ್‌ ನಡುವಿನ ಮುಖಾಮುಖಿಯೇ ತನಿಖೆಯ ಪ್ರಮುಖ ಅಂಶವಾಗಿದೆ. ತನ್ನ ಬೆಂಬಲಿಗರ ಖಾತೆಗಳ ಮೇಲಿನ ನಿರ್ಬಂಧವನ್ನು ತೆರವುಗೊಳಸಬೇಕೆಂದು ಬೋಲ್ಸನಾರೋ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಲಪಂಥೀಯ ಧೋರಣೆಯ ಫೇಸ್‌ಬುಕ್ ಸೆನ್ಸಾರ್‌ಶಿಪ್‌ಗೆ ಮತ್ತೊಂದು ಹೆಸರು ‘ತಾಂತ್ರಿಕ ದೋಷ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...