Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷರ ಬೆಂಬಲಿಗರ ಖಾತೆ ಮೇಲೆ ಕ್ರಮ: ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದ ಫೇಸ್‌ಬುಕ್

ಬ್ರೆಜಿಲ್ ಅಧ್ಯಕ್ಷರ ಬೆಂಬಲಿಗರ ಖಾತೆ ಮೇಲೆ ಕ್ರಮ: ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದ ಫೇಸ್‌ಬುಕ್

- Advertisement -
- Advertisement -

ನಕಲಿ ಸುದ್ದಿ ಜಾಲ ನಡೆಸುತ್ತಿದ್ದಾರೆ ಎಂಬ ಆರೋಪದಡಿ ತನಿಖೆ ಎದುರಿಸುತ್ತಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಬೆಂಬಲಿಗರ 12 ಮಂದಿಯ ಖಾತೆಗಳ ಮೇಲೆ ವಿಶ್ವದಾದ್ಯಂತ ನಿರ್ಬಂಧ ಹೇರಬೇಕೆಂಬ ಬ್ರೆಜಿಲ್ ನ್ಯಾಯಾಧೀಶರ ಆದೇಶವನ್ನು ಪಾಲಿಸುವುದಾಗಿ ಫೇಸ್‌ಬುಕ್ ಹೇಳಿದೆ.

ಆ ಖಾತೆಗಳನ್ನು ಮುಚ್ಚುವಂತೆ ಆದೇಶಿಸಿದ್ದ ಹಿಂದಿನ ತೀರ್ಪನ್ನು ಸಂಪೂರ್ಣವಾಗಿ ಪಾಲಿಸುವಲ್ಲಿ ಫೇಸ್‌ಬುಕ್‌ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಲೆಕ್ಸಾಂಡ್ರೆ ಡಿ ಮೊರೇಸ್ ಹೇಳಿದ್ದಾರೆ. ಆ ಖಾತೆಗಳು ಇನ್ನೂ ಸಕ್ರಿಯವಾಗಿದ್ದು ಬ್ರೆಜಿಲ್ ಹೊರಗೆ ತಮ್ಮ ನೋಂದಣಿ ಮತ್ತು ಸ್ಥಳ ಬದಲಿಸುವ ಮೂಲಕ ಕೆಲಸ ಮಾಡುತ್ತಿವೆ ಎಂದು ಹೇಳಿದ್ದಾರೆ.

ಕೋರ್ಟ್‌ನ ಹೊಸ ಆದೇಶವನ್ನು ಫೇಸ್‌ಬುಕ್‌  ಅತಿಯಾದುದ್ದು ಎಂದು ಕರೆದಿದೆ. ಇದು ಬ್ರೆಜಿಲ್ ನ್ಯಾಯವ್ಯಾಪ್ತಿಯ ಹೊರಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ವಿಶ್ವದ ಇತರ ಕಾನೂನುಗಳೊಂದಿಗೆ ಸಂಘರ್ಷವೇರ್ಪಡುತ್ತದೆ. ಹಾಗಾಗಿ ತೀರ್ಪಿನ ವಿರುದ್ಧ ಮೆಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.

ಅಧ್ಯಕ್ಷರ ಅನುಯಾಯಿಗಳ ಫೇಸ್‌ಬುಕ್ ಪೇಜ್‌ಗಳು ಮತ್ತು ಪ್ರೊಫೈಲ್‌ಗಳನ್ನು ಬ್ರೆಜಿಲ್‌ನ ಐಪಿ ಸ್ಥಳಗಳಿಂದ ನೋಡುವುದನ್ನು ನಿರ್ಬಂಧಿಸುವ ಮೂಲಕ ಹಿಂದಿನ ಆದೇಶವನ್ನು ಪಾಲಿಸಲಾಗಿದೆ ಎಂದು ಫೇಸ್‌ಬುಕ್ ವಾದಿಸಿದೆ. ಆ ಖಾತೆಗಲು ತಮ್ಮ ನೋಂದಣಿ ಮತ್ತು ಸ್ಥಳ ಬದಲಿಸಿಕೊಂಡರೂ ಸಹ  ಬ್ರೆಜಿಲ್‌ನ ಐಪಿ ಸ್ಥಳಗಳ ಜನರು ಅವುಗಳನ್ನು ನೋಡಲಾಗುವುದಿಲ್ಲ ಎಂದು ಕಂಪನಿ ಹೇಳಿದೆ.

ಕಳೆದ ಎಂಟು ದಿನಗಳಲ್ಲಿ ತನ್ನ ಹಿಂದಿನ ನಿರ್ಧಾರವನ್ನು ಪಾಲಿಸದಿದ್ದಕ್ಕಾಗಿ 3,67,000 ಡಾಲರ್ ದಂಡವನ್ನು ಫೇಸ್‌ಬುಕ್‌ ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಧೀಶರಾದ ಮೊರೇಸ್ ಹೇಳಿದ್ದಾರೆ.

ಟ್ವಿಟ್ಟರ್ ಖಾತೆಗಳನ್ನು ಸಹ ನಿರ್ಬಂಧಿಸಬೇಕು ಮೊರೆಸ್‌ ತೀರ್ಪು ನೀಡಿದ್ದರು. ಆದರೆ ಈ ನಿರ್ಧಾರವು “ಬ್ರೆಜಿಲ್‌ನ ವಾಕ್ ಸ್ವಾತಂತ್ರ್ಯದ ಅಡಿಯಲ್ಲಿ ಅಸಮಾನವಾಗಿದೆ ಎಂದ ಟ್ವಿಟ್ಟರ್‌, ಮೇಲ್ಮನವಿ ಸಲ್ಲಿಸಲ್ಲಿದೆ. ಇದೇ ಸಮಯದಲ್ಲಿ ಉದ್ದೇಶಿತ ಪ್ರೊಫೈಲ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ಬೆದರಿಕೆಗಳು ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಬೋಲ್ಸೊನಾರೊ ಬೆಂಬಲಿಗರ ನಕಲಿ ಜಾಲತಾಣಗಳ ಕುರಿತು ವಿವಾದಾತ್ಮಕ ಪ್ರಕರಣವನ್ನು ಮೊರೇಸ್ ವಿಚಾರಣೆ ನಡೆಸುತ್ತಿದ್ದಾರೆ. ಅಧ್ಯಕ್ಷ ಬೋಲ್ಸನಾರೊ ಮತ್ತು ಸುಪ್ರೀಂ ಕೋರ್ಟ್‌ ನಡುವಿನ ಮುಖಾಮುಖಿಯೇ ತನಿಖೆಯ ಪ್ರಮುಖ ಅಂಶವಾಗಿದೆ. ತನ್ನ ಬೆಂಬಲಿಗರ ಖಾತೆಗಳ ಮೇಲಿನ ನಿರ್ಬಂಧವನ್ನು ತೆರವುಗೊಳಸಬೇಕೆಂದು ಬೋಲ್ಸನಾರೋ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಲಪಂಥೀಯ ಧೋರಣೆಯ ಫೇಸ್‌ಬುಕ್ ಸೆನ್ಸಾರ್‌ಶಿಪ್‌ಗೆ ಮತ್ತೊಂದು ಹೆಸರು ‘ತಾಂತ್ರಿಕ ದೋಷ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....

‘ಗೋಮಾಂಸ’ ತಂದ ನೆಪ: ಅಸ್ಸಾಂನಲ್ಲಿ ಐವರು ಮುಸ್ಲಿಂ ವಿದ್ಯಾರ್ಥಿಗಳ ವಿರುದ್ಧ ಕ್ರಮ; ಸುಳ್ಳು ಪ್ರಕರಣದಡಿ ಒಂಟಿ ತಾಯಿ ಮತ್ತು ಅಪ್ರಾಪ್ತ ಮಗನ ಬಂಧನ

ಧಾರ್ಮಿಕ ಭಾವನೆಗೆ ಧಕ್ಕೆ ಎಂಬ ಹೆಸರಿನಲ್ಲಿ ಶಾಲಾ ಆವರಣಗಳೂ ಸಹ ಕೋಮು ರಾಜಕಾರಣದ ಪ್ರಯೋಗಶಾಲೆಗಳಾಗುತ್ತಿರುವುದಕ್ಕೆ ಅಸ್ಸಾಂನಿಂದ ಮತ್ತೊಂದು ಆಘಾತಕಾರಿ ಘಟನೆ ವರದಿಯಾಗಿದೆ. ಅಸ್ಸಾಂನ ಗೋಲ್‌ಪಾರ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯೊಂದರಲ್ಲಿ ಮುಸ್ಲಿಂ...

ಪ್ರಧಾನಿ ನರೇಂದ್ರ ಮೋದಿಯ 12 ವರ್ಷದ ಸಾಧನೆ ಏನು? ಅವರು ಮುರಿದ ದಾಖಲೆಯಾದರೂ ಯಾವುದು?

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014ರಿಂದ ಸತತ 12ವರ್ಷಗಳು (4,399 ದಿನಗಳು) ಪ್ರಧಾನಿ ಹುದ್ದೆ ಅಲಂಕರಿಸುವ ಮೂಲಕ ದಾಖಲೆ ನಿರ್ಮಿಸಿದ್ದಾರೆ. ಮೋದಿ ನೇತೃತ್ವದ ಸರ್ಕಾರಕ್ಕೆ 12 ವರ್ಷ ತುಂಬಿದ ಹಿನ್ನೆಲೆ ಬಿಜೆಪಿ...

ಉತ್ತರಾಖಂಡ: ಮೇಲ್ಜಾತಿ ಯುವತಿ ಜೊತೆ ಸ್ನೇಹ ಬೆಳೆಸಿದ 18 ವರ್ಷದ ದಲಿತ ಯುವಕನ ಹತ್ಯೆ, ಸ್ನೇಹಿತನ ಮೇಲೂ ಮಾರಣಾಂತಿಕ ಹಲ್ಲೆ 

ದೇಶದಲ್ಲಿ ಜಾತಿ ವ್ಯವಸ್ಥೆಯ ಕರಾಳ ಮುಖ ಮತ್ತೊಮ್ಮೆ ಅನಾವರಣಗೊಂಡಿದೆ. ಉತ್ತರಾಖಂಡದ ನ್ಯೂ ತೆಹ್ರಿ ಜಿಲ್ಲೆಯ ಪ್ರತಾಪ್ ನಗರ ಬ್ಲಾಕ್ ವ್ಯಾಪ್ತಿಯಲ್ಲಿ ಮೇಲ್ಜಾತಿಯ ಅಪ್ರಾಪ್ತ ಯುವತಿಯೊಂದಿಗೆ ಸ್ನೇಹ ಬೆಳೆಸಿದ್ದಕ್ಕಾಗಿ 18 ವರ್ಷದ ದಲಿತ ಹದಿಹರೆಯದ...