Homeಅಂತರಾಷ್ಟ್ರೀಯಬ್ರೆಜಿಲ್ ಅಧ್ಯಕ್ಷರ ಬೆಂಬಲಿಗರ ಖಾತೆ ಮೇಲೆ ಕ್ರಮ: ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದ ಫೇಸ್‌ಬುಕ್

ಬ್ರೆಜಿಲ್ ಅಧ್ಯಕ್ಷರ ಬೆಂಬಲಿಗರ ಖಾತೆ ಮೇಲೆ ಕ್ರಮ: ಕೋರ್ಟ್ ಆದೇಶ ಪಾಲಿಸುತ್ತೇವೆ ಎಂದ ಫೇಸ್‌ಬುಕ್

- Advertisement -
- Advertisement -

ನಕಲಿ ಸುದ್ದಿ ಜಾಲ ನಡೆಸುತ್ತಿದ್ದಾರೆ ಎಂಬ ಆರೋಪದಡಿ ತನಿಖೆ ಎದುರಿಸುತ್ತಿರುವ ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸೊನಾರೊ ಬೆಂಬಲಿಗರ 12 ಮಂದಿಯ ಖಾತೆಗಳ ಮೇಲೆ ವಿಶ್ವದಾದ್ಯಂತ ನಿರ್ಬಂಧ ಹೇರಬೇಕೆಂಬ ಬ್ರೆಜಿಲ್ ನ್ಯಾಯಾಧೀಶರ ಆದೇಶವನ್ನು ಪಾಲಿಸುವುದಾಗಿ ಫೇಸ್‌ಬುಕ್ ಹೇಳಿದೆ.

ಆ ಖಾತೆಗಳನ್ನು ಮುಚ್ಚುವಂತೆ ಆದೇಶಿಸಿದ್ದ ಹಿಂದಿನ ತೀರ್ಪನ್ನು ಸಂಪೂರ್ಣವಾಗಿ ಪಾಲಿಸುವಲ್ಲಿ ಫೇಸ್‌ಬುಕ್‌ ವಿಫಲವಾಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಲೆಕ್ಸಾಂಡ್ರೆ ಡಿ ಮೊರೇಸ್ ಹೇಳಿದ್ದಾರೆ. ಆ ಖಾತೆಗಳು ಇನ್ನೂ ಸಕ್ರಿಯವಾಗಿದ್ದು ಬ್ರೆಜಿಲ್ ಹೊರಗೆ ತಮ್ಮ ನೋಂದಣಿ ಮತ್ತು ಸ್ಥಳ ಬದಲಿಸುವ ಮೂಲಕ ಕೆಲಸ ಮಾಡುತ್ತಿವೆ ಎಂದು ಹೇಳಿದ್ದಾರೆ.

ಕೋರ್ಟ್‌ನ ಹೊಸ ಆದೇಶವನ್ನು ಫೇಸ್‌ಬುಕ್‌  ಅತಿಯಾದುದ್ದು ಎಂದು ಕರೆದಿದೆ. ಇದು ಬ್ರೆಜಿಲ್ ನ್ಯಾಯವ್ಯಾಪ್ತಿಯ ಹೊರಗೆ ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಪಾಯವನ್ನುಂಟುಮಾಡುತ್ತದೆ. ವಿಶ್ವದ ಇತರ ಕಾನೂನುಗಳೊಂದಿಗೆ ಸಂಘರ್ಷವೇರ್ಪಡುತ್ತದೆ. ಹಾಗಾಗಿ ತೀರ್ಪಿನ ವಿರುದ್ಧ ಮೆಲ್ಮನವಿ ಸಲ್ಲಿಸುವುದಾಗಿ ತಿಳಿಸಿದೆ.

ಅಧ್ಯಕ್ಷರ ಅನುಯಾಯಿಗಳ ಫೇಸ್‌ಬುಕ್ ಪೇಜ್‌ಗಳು ಮತ್ತು ಪ್ರೊಫೈಲ್‌ಗಳನ್ನು ಬ್ರೆಜಿಲ್‌ನ ಐಪಿ ಸ್ಥಳಗಳಿಂದ ನೋಡುವುದನ್ನು ನಿರ್ಬಂಧಿಸುವ ಮೂಲಕ ಹಿಂದಿನ ಆದೇಶವನ್ನು ಪಾಲಿಸಲಾಗಿದೆ ಎಂದು ಫೇಸ್‌ಬುಕ್ ವಾದಿಸಿದೆ. ಆ ಖಾತೆಗಲು ತಮ್ಮ ನೋಂದಣಿ ಮತ್ತು ಸ್ಥಳ ಬದಲಿಸಿಕೊಂಡರೂ ಸಹ  ಬ್ರೆಜಿಲ್‌ನ ಐಪಿ ಸ್ಥಳಗಳ ಜನರು ಅವುಗಳನ್ನು ನೋಡಲಾಗುವುದಿಲ್ಲ ಎಂದು ಕಂಪನಿ ಹೇಳಿದೆ.

ಕಳೆದ ಎಂಟು ದಿನಗಳಲ್ಲಿ ತನ್ನ ಹಿಂದಿನ ನಿರ್ಧಾರವನ್ನು ಪಾಲಿಸದಿದ್ದಕ್ಕಾಗಿ 3,67,000 ಡಾಲರ್ ದಂಡವನ್ನು ಫೇಸ್‌ಬುಕ್‌ ಪಾವತಿಸಬೇಕಾಗುತ್ತದೆ ಎಂದು ನ್ಯಾಯಾಧೀಶರಾದ ಮೊರೇಸ್ ಹೇಳಿದ್ದಾರೆ.

ಟ್ವಿಟ್ಟರ್ ಖಾತೆಗಳನ್ನು ಸಹ ನಿರ್ಬಂಧಿಸಬೇಕು ಮೊರೆಸ್‌ ತೀರ್ಪು ನೀಡಿದ್ದರು. ಆದರೆ ಈ ನಿರ್ಧಾರವು “ಬ್ರೆಜಿಲ್‌ನ ವಾಕ್ ಸ್ವಾತಂತ್ರ್ಯದ ಅಡಿಯಲ್ಲಿ ಅಸಮಾನವಾಗಿದೆ ಎಂದ ಟ್ವಿಟ್ಟರ್‌, ಮೇಲ್ಮನವಿ ಸಲ್ಲಿಸಲ್ಲಿದೆ. ಇದೇ ಸಮಯದಲ್ಲಿ ಉದ್ದೇಶಿತ ಪ್ರೊಫೈಲ್‌ಗಳನ್ನು ನಿಷ್ಕ್ರಿಯಗೊಳಿಸಲಾಗಿದೆ.

ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವಿರುದ್ಧ ಬೆದರಿಕೆಗಳು ಮತ್ತು ಸುಳ್ಳು ಸುದ್ದಿಗಳನ್ನು ಹರಡುತ್ತಿರುವ ಬೋಲ್ಸೊನಾರೊ ಬೆಂಬಲಿಗರ ನಕಲಿ ಜಾಲತಾಣಗಳ ಕುರಿತು ವಿವಾದಾತ್ಮಕ ಪ್ರಕರಣವನ್ನು ಮೊರೇಸ್ ವಿಚಾರಣೆ ನಡೆಸುತ್ತಿದ್ದಾರೆ. ಅಧ್ಯಕ್ಷ ಬೋಲ್ಸನಾರೊ ಮತ್ತು ಸುಪ್ರೀಂ ಕೋರ್ಟ್‌ ನಡುವಿನ ಮುಖಾಮುಖಿಯೇ ತನಿಖೆಯ ಪ್ರಮುಖ ಅಂಶವಾಗಿದೆ. ತನ್ನ ಬೆಂಬಲಿಗರ ಖಾತೆಗಳ ಮೇಲಿನ ನಿರ್ಬಂಧವನ್ನು ತೆರವುಗೊಳಸಬೇಕೆಂದು ಬೋಲ್ಸನಾರೋ ಒತ್ತಾಯಿಸಿದ್ದಾರೆ.


ಇದನ್ನೂ ಓದಿ: ಬಲಪಂಥೀಯ ಧೋರಣೆಯ ಫೇಸ್‌ಬುಕ್ ಸೆನ್ಸಾರ್‌ಶಿಪ್‌ಗೆ ಮತ್ತೊಂದು ಹೆಸರು ‘ತಾಂತ್ರಿಕ ದೋಷ’ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...