Homeಮುಖಪುಟಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಉದ್ಯೋಗಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ ಗುರುವಾರ ಫೇಸ್‌ಬುಕ್ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಮತ್ತು ಫೇಸ್‌ಬುಕ್ ಸ್ವಯಂ ನಿಯಂತ್ರಣ ಹೊಂದಿದೆ ಎಂದು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ ಅವರ ಅಧ್ಯಕ್ಷತೆಯಲ್ಲಿರುವ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿ ಜೊತೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಲಕ್ಕಿ, “ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿರುವುದು ನಿಜ” ಎಂದು ಹೇಳಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯಲ್ಲಿ, ಫೇಸ್‌ಬುಕ್ ದ್ವೇಷ ಭಾಷಣ ನಿಯಮಗಳು ಮತ್ತು ನೀತಿಗಳನ್ನು ಸರಿಯಾಗಿ ಅನ್ವಯಿಸದೆ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ ಎಂಬುದರ ಕುರಿತು  ಶಾಸಕ ರಾಘವ್ ಚಾಡ್ಡ ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಎಸ್ ಲಕ್ಕಿಯನ್ನು ಪ್ರಶ್ನಿಸಿದರು.

ದೆಹಲಿಯಲ್ಲಿ ನಡೆದ ಗಲಭೆಗಳಲ್ಲಿ ಫೇಸ್‌ಬುಕ್‌ನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಮುಂದೆ ಲಕ್ಕಿ ಈ ಅಭಿಪ್ರಾಯಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಟ್ಲಾಂಟಾ ಮೂಲದ ಮಾಜಿ ಫೇಸ್‌ಬುಕ್ ಉದ್ಯೋಗಿ ಲಕ್ಕಿ, 2018ರಲ್ಲಿ ಫೇಸ್‌ಬುಕ್ ತನ್ನ ವೈವಿಧ್ಯತೆಯ ಕೊರತೆಯನ್ನು ಪರಿಹರಿಸಲು ಸಾಕಷ್ಟು ಕೆಲಸ ಮಾಡಲಿಲ್ಲ ಎಂದು ಆರೋಪಿಸಿ ರಾಜೀನಾಮೆ ನೀಡಿ ಹೊರನಡೆದಿದ್ದರು.

ಸಮುದಾಯ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಹೊಂದಾಣಿಕೆಗಳಿವೆ ಎಂಬುದರ ಬಗ್ಗೆ ಲಕ್ಕಿ ಗಮನ ಸೆಳೆದಿದ್ದಾರೆ. ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ ಸಾಮಾಜಿಕ ಜಾಲತಾಣದ ಕಾರ್ಯನಿರ್ವಾಹಕ ತಂಡಗಳಿಗೆ “ಇಂತಹ ಸ್ಥೂಲ ನಿಷ್ಕ್ರಿಯತೆ ಮತ್ತು ದುರುಪಯೋಗದ ಬಗ್ಗೆ ಸಾಮಾನ್ಯವಾಗಿ ತಿಳಿದಿರುತ್ತದೆ” ಎಂದು ಲಕ್ಕಿ ಹೇಳಿದ್ದಾರೆ.

ಆಪ್ ಬಿಡುಗಡೆ ಮಾಡಿರುವ ವಿಡಿಯೋ ತುಣುಕುಗಳಲ್ಲಿ, ಲಕ್ಕಿ ಹೇಳುವಂತೆ, “ದುರದೃಷ್ಟವಶಾತ್, ದ್ವೇಷ ಮತ್ತು ವಿಭಜಕ ವಿಷಯಗಳು ಹೆಚ್ಚಾಗಿ ಫೇಸ್‌ಬುಕ್ ಬಳಕೆದಾರರಲ್ಲಿ ಹೆಚ್ಚು ಷೇರುಗಳು, ಲೈಕ್ ಅಥವಾ ಕಾಮೆಂಟ್‌ಗಳನ್ನು ಹೊಂದಿವೆ. ಹೌದು, ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ” ಎಂದಿದ್ದಾರೆ.

“ಜನರು ನೋಡುವ ಮತ್ತು ನೋಡದ ವಿಷಯಗಳಲ್ಲಿ ಫೇಸ್‌ಬುಕ್ ಸಕ್ರಿಯವಾಗಿ ಹಸ್ತಕ್ಷೇಪ ಮಾಡುತ್ತದೆ. ಫ್ಲಾಟ್‌ಫಾರಂನಲ್ಲಿ ಮುಂದುವರಿಯಲು ಫೇಸ್‌ಬುಕ್ ಬಹಳಷ್ಟು ಹಿಂಸಾಚಾರ ಮತ್ತು ತಪ್ಪು ಮಾಹಿತಿಯ ಮೇಲೆ ಪ್ರಭಾವ ಬೀರುತ್ತದೆ ಜೊತೆಗೆ ಅಂತಹ ವಿಷಯಗಳಿಗೆ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

 

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಹೇಳಿಕೆಯನ್ನು ಉಲ್ಲೇಖಿಸಿದ ಎಎನ್‌ಐ ದೆಹಲಿ ಕೋಮು ಹಿಂಸಾಚಾರ, ಮ್ಯಾನ್ಮಾರ್ ನರಮೇಧ ಮತ್ತು ಶ್ರೀಲಂಕಾದ ಕೋಮು ಹಿಂಸಾಚಾರದಂತಹ ಘಟನೆಗಳಲ್ಲಿ ಫೇಸ್‌ಬುಕ್ “ಹೆಚ್ಚು ಪೂರ್ವಭಾವಿಯಾಗಿ ಮತ್ತು ತ್ವರಿತವಾಗಿ ನಡೆದುಕೊಂಡಿದ್ದರೆ ಅದನ್ನು ಸುಲಭವಾಗಿ ತಪ್ಪಿಸಬಹುದಿತ್ತು” ಎಂದು ಹೇಳಿದೆ.

ಮಾಜಿ ಉದ್ಯೋಗಿ ಮಾರ್ಕ್ ಲಕ್ಕಿಯ ಹೇಳಿಕೆಗಳ ಕುರಿತು ಫೇಸ್‌ಬುಕ್ ಇನ್ನೂ ಪ್ರತಿಕ್ರಿಯಿಸಿಲ್ಲ.

ಘಟನೆಯನ್ನು ವರದಿ ಮಾಡುವ ಜನರ ಸಂಖ್ಯೆಯನ್ನು ಅವಲಂಬಿಸಿ ಮೇಲ್ವಿಚಾರಕರಿಗೆ ದ್ವೇಷಪೂರಿತ ಪೋಸ್ಟ್‌ಗಳನ್ನು ಫ್ಲ್ಯಾಗ್ ಮಾಡಲಾಗುತ್ತದೆ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಒಳಗೊಳ್ಳುವಿಕೆ ಕೂಡ ಒಂದು ಘಟನೆಯ ಪರಿಣಾಮವನ್ನು ಅಳೆಯಲು ಆಧರಿಸಿದೆ ಎಂದು ಲಕ್ಕಿ ದೆಹಲಿ ಅಸೆಂಬ್ಲಿ ಪ್ಯಾನೆಲ್‌ಗೆ ತಿಳಿಸಿದ್ದಾರೆ.

ಭಾರತದಲ್ಲಿ ದ್ವೇಷದ ಭಾಷಣವನ್ನು ಹರಡುವಲ್ಲಿ ಫೇಸ್‌ಬುಕ್‌ನ ಪಾತ್ರವು ಪರಿಶೀಲನೆಗೆ ಒಳಪಟ್ಟಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಲೇಖನವೊಂದು ಬಹಿರಂಗಪಡಿಸಿದ ನಂತರ ಭಾರತದಲ್ಲಿ ಫೇಸ್‌ಬುಕ್ ಉನ್ನತ ಶ್ರೇಣಿಯ ಅಧಿಕಾರಿಗಳು ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸುತ್ತಿದೆ ಎಂದು ತಿಳಿದುಬಂದಿದೆ.

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ಎರಡು ವಾರಗಳ ಹಿಂದೆ ತಮ್ಮ ಹುದ್ದೆಯಿಂದ ಕೆಳಗಿಳಿದರು.  “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಅವರು ಮೋದಿಯನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆಂದು ಆರೋಪಿಸಲಾಗಿತ್ತು ಮತ್ತು 2014 ರ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಗೆ ಸಹಾಯ ಮಾಡುವ ಬಗ್ಗೆಯೂ ಮಾತನಾಡಿದ್ದರು.


ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...