Homeಮುಖಪುಟಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಉದ್ಯೋಗಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ ಗುರುವಾರ ಫೇಸ್‌ಬುಕ್ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಮತ್ತು ಫೇಸ್‌ಬುಕ್ ಸ್ವಯಂ ನಿಯಂತ್ರಣ ಹೊಂದಿದೆ ಎಂದು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ ಅವರ ಅಧ್ಯಕ್ಷತೆಯಲ್ಲಿರುವ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿ ಜೊತೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಲಕ್ಕಿ, “ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿರುವುದು ನಿಜ” ಎಂದು ಹೇಳಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯಲ್ಲಿ, ಫೇಸ್‌ಬುಕ್ ದ್ವೇಷ ಭಾಷಣ ನಿಯಮಗಳು ಮತ್ತು ನೀತಿಗಳನ್ನು ಸರಿಯಾಗಿ ಅನ್ವಯಿಸದೆ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ ಎಂಬುದರ ಕುರಿತು  ಶಾಸಕ ರಾಘವ್ ಚಾಡ್ಡ ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಎಸ್ ಲಕ್ಕಿಯನ್ನು ಪ್ರಶ್ನಿಸಿದರು.

ದೆಹಲಿಯಲ್ಲಿ ನಡೆದ ಗಲಭೆಗಳಲ್ಲಿ ಫೇಸ್‌ಬುಕ್‌ನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಮುಂದೆ ಲಕ್ಕಿ ಈ ಅಭಿಪ್ರಾಯಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಟ್ಲಾಂಟಾ ಮೂಲದ ಮಾಜಿ ಫೇಸ್‌ಬುಕ್ ಉದ್ಯೋಗಿ ಲಕ್ಕಿ, 2018ರಲ್ಲಿ ಫೇಸ್‌ಬುಕ್ ತನ್ನ ವೈವಿಧ್ಯತೆಯ ಕೊರತೆಯನ್ನು ಪರಿಹರಿಸಲು ಸಾಕಷ್ಟು ಕೆಲಸ ಮಾಡಲಿಲ್ಲ ಎಂದು ಆರೋಪಿಸಿ ರಾಜೀನಾಮೆ ನೀಡಿ ಹೊರನಡೆದಿದ್ದರು.

ಸಮುದಾಯ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಹೊಂದಾಣಿಕೆಗಳಿವೆ ಎಂಬುದರ ಬಗ್ಗೆ ಲಕ್ಕಿ ಗಮನ ಸೆಳೆದಿದ್ದಾರೆ. ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ ಸಾಮಾಜಿಕ ಜಾಲತಾಣದ ಕಾರ್ಯನಿರ್ವಾಹಕ ತಂಡಗಳಿಗೆ “ಇಂತಹ ಸ್ಥೂಲ ನಿಷ್ಕ್ರಿಯತೆ ಮತ್ತು ದುರುಪಯೋಗದ ಬಗ್ಗೆ ಸಾಮಾನ್ಯವಾಗಿ ತಿಳಿದಿರುತ್ತದೆ” ಎಂದು ಲಕ್ಕಿ ಹೇಳಿದ್ದಾರೆ.

ಆಪ್ ಬಿಡುಗಡೆ ಮಾಡಿರುವ ವಿಡಿಯೋ ತುಣುಕುಗಳಲ್ಲಿ, ಲಕ್ಕಿ ಹೇಳುವಂತೆ, “ದುರದೃಷ್ಟವಶಾತ್, ದ್ವೇಷ ಮತ್ತು ವಿಭಜಕ ವಿಷಯಗಳು ಹೆಚ್ಚಾಗಿ ಫೇಸ್‌ಬುಕ್ ಬಳಕೆದಾರರಲ್ಲಿ ಹೆಚ್ಚು ಷೇರುಗಳು, ಲೈಕ್ ಅಥವಾ ಕಾಮೆಂಟ್‌ಗಳನ್ನು ಹೊಂದಿವೆ. ಹೌದು, ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ” ಎಂದಿದ್ದಾರೆ.

“ಜನರು ನೋಡುವ ಮತ್ತು ನೋಡದ ವಿಷಯಗಳಲ್ಲಿ ಫೇಸ್‌ಬುಕ್ ಸಕ್ರಿಯವಾಗಿ ಹಸ್ತಕ್ಷೇಪ ಮಾಡುತ್ತದೆ. ಫ್ಲಾಟ್‌ಫಾರಂನಲ್ಲಿ ಮುಂದುವರಿಯಲು ಫೇಸ್‌ಬುಕ್ ಬಹಳಷ್ಟು ಹಿಂಸಾಚಾರ ಮತ್ತು ತಪ್ಪು ಮಾಹಿತಿಯ ಮೇಲೆ ಪ್ರಭಾವ ಬೀರುತ್ತದೆ ಜೊತೆಗೆ ಅಂತಹ ವಿಷಯಗಳಿಗೆ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

 

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಹೇಳಿಕೆಯನ್ನು ಉಲ್ಲೇಖಿಸಿದ ಎಎನ್‌ಐ ದೆಹಲಿ ಕೋಮು ಹಿಂಸಾಚಾರ, ಮ್ಯಾನ್ಮಾರ್ ನರಮೇಧ ಮತ್ತು ಶ್ರೀಲಂಕಾದ ಕೋಮು ಹಿಂಸಾಚಾರದಂತಹ ಘಟನೆಗಳಲ್ಲಿ ಫೇಸ್‌ಬುಕ್ “ಹೆಚ್ಚು ಪೂರ್ವಭಾವಿಯಾಗಿ ಮತ್ತು ತ್ವರಿತವಾಗಿ ನಡೆದುಕೊಂಡಿದ್ದರೆ ಅದನ್ನು ಸುಲಭವಾಗಿ ತಪ್ಪಿಸಬಹುದಿತ್ತು” ಎಂದು ಹೇಳಿದೆ.

ಮಾಜಿ ಉದ್ಯೋಗಿ ಮಾರ್ಕ್ ಲಕ್ಕಿಯ ಹೇಳಿಕೆಗಳ ಕುರಿತು ಫೇಸ್‌ಬುಕ್ ಇನ್ನೂ ಪ್ರತಿಕ್ರಿಯಿಸಿಲ್ಲ.

ಘಟನೆಯನ್ನು ವರದಿ ಮಾಡುವ ಜನರ ಸಂಖ್ಯೆಯನ್ನು ಅವಲಂಬಿಸಿ ಮೇಲ್ವಿಚಾರಕರಿಗೆ ದ್ವೇಷಪೂರಿತ ಪೋಸ್ಟ್‌ಗಳನ್ನು ಫ್ಲ್ಯಾಗ್ ಮಾಡಲಾಗುತ್ತದೆ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಒಳಗೊಳ್ಳುವಿಕೆ ಕೂಡ ಒಂದು ಘಟನೆಯ ಪರಿಣಾಮವನ್ನು ಅಳೆಯಲು ಆಧರಿಸಿದೆ ಎಂದು ಲಕ್ಕಿ ದೆಹಲಿ ಅಸೆಂಬ್ಲಿ ಪ್ಯಾನೆಲ್‌ಗೆ ತಿಳಿಸಿದ್ದಾರೆ.

ಭಾರತದಲ್ಲಿ ದ್ವೇಷದ ಭಾಷಣವನ್ನು ಹರಡುವಲ್ಲಿ ಫೇಸ್‌ಬುಕ್‌ನ ಪಾತ್ರವು ಪರಿಶೀಲನೆಗೆ ಒಳಪಟ್ಟಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಲೇಖನವೊಂದು ಬಹಿರಂಗಪಡಿಸಿದ ನಂತರ ಭಾರತದಲ್ಲಿ ಫೇಸ್‌ಬುಕ್ ಉನ್ನತ ಶ್ರೇಣಿಯ ಅಧಿಕಾರಿಗಳು ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸುತ್ತಿದೆ ಎಂದು ತಿಳಿದುಬಂದಿದೆ.

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ಎರಡು ವಾರಗಳ ಹಿಂದೆ ತಮ್ಮ ಹುದ್ದೆಯಿಂದ ಕೆಳಗಿಳಿದರು.  “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಅವರು ಮೋದಿಯನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆಂದು ಆರೋಪಿಸಲಾಗಿತ್ತು ಮತ್ತು 2014 ರ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಗೆ ಸಹಾಯ ಮಾಡುವ ಬಗ್ಗೆಯೂ ಮಾತನಾಡಿದ್ದರು.


ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...