Homeಮುಖಪುಟಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಉದ್ಯೋಗಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ ಗುರುವಾರ ಫೇಸ್‌ಬುಕ್ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಮತ್ತು ಫೇಸ್‌ಬುಕ್ ಸ್ವಯಂ ನಿಯಂತ್ರಣ ಹೊಂದಿದೆ ಎಂದು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ ಅವರ ಅಧ್ಯಕ್ಷತೆಯಲ್ಲಿರುವ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿ ಜೊತೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಲಕ್ಕಿ, “ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿರುವುದು ನಿಜ” ಎಂದು ಹೇಳಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯಲ್ಲಿ, ಫೇಸ್‌ಬುಕ್ ದ್ವೇಷ ಭಾಷಣ ನಿಯಮಗಳು ಮತ್ತು ನೀತಿಗಳನ್ನು ಸರಿಯಾಗಿ ಅನ್ವಯಿಸದೆ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ ಎಂಬುದರ ಕುರಿತು  ಶಾಸಕ ರಾಘವ್ ಚಾಡ್ಡ ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಎಸ್ ಲಕ್ಕಿಯನ್ನು ಪ್ರಶ್ನಿಸಿದರು.

ದೆಹಲಿಯಲ್ಲಿ ನಡೆದ ಗಲಭೆಗಳಲ್ಲಿ ಫೇಸ್‌ಬುಕ್‌ನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಮುಂದೆ ಲಕ್ಕಿ ಈ ಅಭಿಪ್ರಾಯಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಟ್ಲಾಂಟಾ ಮೂಲದ ಮಾಜಿ ಫೇಸ್‌ಬುಕ್ ಉದ್ಯೋಗಿ ಲಕ್ಕಿ, 2018ರಲ್ಲಿ ಫೇಸ್‌ಬುಕ್ ತನ್ನ ವೈವಿಧ್ಯತೆಯ ಕೊರತೆಯನ್ನು ಪರಿಹರಿಸಲು ಸಾಕಷ್ಟು ಕೆಲಸ ಮಾಡಲಿಲ್ಲ ಎಂದು ಆರೋಪಿಸಿ ರಾಜೀನಾಮೆ ನೀಡಿ ಹೊರನಡೆದಿದ್ದರು.

ಸಮುದಾಯ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಹೊಂದಾಣಿಕೆಗಳಿವೆ ಎಂಬುದರ ಬಗ್ಗೆ ಲಕ್ಕಿ ಗಮನ ಸೆಳೆದಿದ್ದಾರೆ. ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ ಸಾಮಾಜಿಕ ಜಾಲತಾಣದ ಕಾರ್ಯನಿರ್ವಾಹಕ ತಂಡಗಳಿಗೆ “ಇಂತಹ ಸ್ಥೂಲ ನಿಷ್ಕ್ರಿಯತೆ ಮತ್ತು ದುರುಪಯೋಗದ ಬಗ್ಗೆ ಸಾಮಾನ್ಯವಾಗಿ ತಿಳಿದಿರುತ್ತದೆ” ಎಂದು ಲಕ್ಕಿ ಹೇಳಿದ್ದಾರೆ.

ಆಪ್ ಬಿಡುಗಡೆ ಮಾಡಿರುವ ವಿಡಿಯೋ ತುಣುಕುಗಳಲ್ಲಿ, ಲಕ್ಕಿ ಹೇಳುವಂತೆ, “ದುರದೃಷ್ಟವಶಾತ್, ದ್ವೇಷ ಮತ್ತು ವಿಭಜಕ ವಿಷಯಗಳು ಹೆಚ್ಚಾಗಿ ಫೇಸ್‌ಬುಕ್ ಬಳಕೆದಾರರಲ್ಲಿ ಹೆಚ್ಚು ಷೇರುಗಳು, ಲೈಕ್ ಅಥವಾ ಕಾಮೆಂಟ್‌ಗಳನ್ನು ಹೊಂದಿವೆ. ಹೌದು, ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ” ಎಂದಿದ್ದಾರೆ.

“ಜನರು ನೋಡುವ ಮತ್ತು ನೋಡದ ವಿಷಯಗಳಲ್ಲಿ ಫೇಸ್‌ಬುಕ್ ಸಕ್ರಿಯವಾಗಿ ಹಸ್ತಕ್ಷೇಪ ಮಾಡುತ್ತದೆ. ಫ್ಲಾಟ್‌ಫಾರಂನಲ್ಲಿ ಮುಂದುವರಿಯಲು ಫೇಸ್‌ಬುಕ್ ಬಹಳಷ್ಟು ಹಿಂಸಾಚಾರ ಮತ್ತು ತಪ್ಪು ಮಾಹಿತಿಯ ಮೇಲೆ ಪ್ರಭಾವ ಬೀರುತ್ತದೆ ಜೊತೆಗೆ ಅಂತಹ ವಿಷಯಗಳಿಗೆ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

 

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಹೇಳಿಕೆಯನ್ನು ಉಲ್ಲೇಖಿಸಿದ ಎಎನ್‌ಐ ದೆಹಲಿ ಕೋಮು ಹಿಂಸಾಚಾರ, ಮ್ಯಾನ್ಮಾರ್ ನರಮೇಧ ಮತ್ತು ಶ್ರೀಲಂಕಾದ ಕೋಮು ಹಿಂಸಾಚಾರದಂತಹ ಘಟನೆಗಳಲ್ಲಿ ಫೇಸ್‌ಬುಕ್ “ಹೆಚ್ಚು ಪೂರ್ವಭಾವಿಯಾಗಿ ಮತ್ತು ತ್ವರಿತವಾಗಿ ನಡೆದುಕೊಂಡಿದ್ದರೆ ಅದನ್ನು ಸುಲಭವಾಗಿ ತಪ್ಪಿಸಬಹುದಿತ್ತು” ಎಂದು ಹೇಳಿದೆ.

ಮಾಜಿ ಉದ್ಯೋಗಿ ಮಾರ್ಕ್ ಲಕ್ಕಿಯ ಹೇಳಿಕೆಗಳ ಕುರಿತು ಫೇಸ್‌ಬುಕ್ ಇನ್ನೂ ಪ್ರತಿಕ್ರಿಯಿಸಿಲ್ಲ.

ಘಟನೆಯನ್ನು ವರದಿ ಮಾಡುವ ಜನರ ಸಂಖ್ಯೆಯನ್ನು ಅವಲಂಬಿಸಿ ಮೇಲ್ವಿಚಾರಕರಿಗೆ ದ್ವೇಷಪೂರಿತ ಪೋಸ್ಟ್‌ಗಳನ್ನು ಫ್ಲ್ಯಾಗ್ ಮಾಡಲಾಗುತ್ತದೆ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಒಳಗೊಳ್ಳುವಿಕೆ ಕೂಡ ಒಂದು ಘಟನೆಯ ಪರಿಣಾಮವನ್ನು ಅಳೆಯಲು ಆಧರಿಸಿದೆ ಎಂದು ಲಕ್ಕಿ ದೆಹಲಿ ಅಸೆಂಬ್ಲಿ ಪ್ಯಾನೆಲ್‌ಗೆ ತಿಳಿಸಿದ್ದಾರೆ.

ಭಾರತದಲ್ಲಿ ದ್ವೇಷದ ಭಾಷಣವನ್ನು ಹರಡುವಲ್ಲಿ ಫೇಸ್‌ಬುಕ್‌ನ ಪಾತ್ರವು ಪರಿಶೀಲನೆಗೆ ಒಳಪಟ್ಟಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಲೇಖನವೊಂದು ಬಹಿರಂಗಪಡಿಸಿದ ನಂತರ ಭಾರತದಲ್ಲಿ ಫೇಸ್‌ಬುಕ್ ಉನ್ನತ ಶ್ರೇಣಿಯ ಅಧಿಕಾರಿಗಳು ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸುತ್ತಿದೆ ಎಂದು ತಿಳಿದುಬಂದಿದೆ.

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ಎರಡು ವಾರಗಳ ಹಿಂದೆ ತಮ್ಮ ಹುದ್ದೆಯಿಂದ ಕೆಳಗಿಳಿದರು.  “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಅವರು ಮೋದಿಯನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆಂದು ಆರೋಪಿಸಲಾಗಿತ್ತು ಮತ್ತು 2014 ರ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಗೆ ಸಹಾಯ ಮಾಡುವ ಬಗ್ಗೆಯೂ ಮಾತನಾಡಿದ್ದರು.


ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...