Homeಮುಖಪುಟಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಉದ್ಯೋಗಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ ಗುರುವಾರ ಫೇಸ್‌ಬುಕ್ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಮತ್ತು ಫೇಸ್‌ಬುಕ್ ಸ್ವಯಂ ನಿಯಂತ್ರಣ ಹೊಂದಿದೆ ಎಂದು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ ಅವರ ಅಧ್ಯಕ್ಷತೆಯಲ್ಲಿರುವ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿ ಜೊತೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಲಕ್ಕಿ, “ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿರುವುದು ನಿಜ” ಎಂದು ಹೇಳಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯಲ್ಲಿ, ಫೇಸ್‌ಬುಕ್ ದ್ವೇಷ ಭಾಷಣ ನಿಯಮಗಳು ಮತ್ತು ನೀತಿಗಳನ್ನು ಸರಿಯಾಗಿ ಅನ್ವಯಿಸದೆ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ ಎಂಬುದರ ಕುರಿತು  ಶಾಸಕ ರಾಘವ್ ಚಾಡ್ಡ ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಎಸ್ ಲಕ್ಕಿಯನ್ನು ಪ್ರಶ್ನಿಸಿದರು.

ದೆಹಲಿಯಲ್ಲಿ ನಡೆದ ಗಲಭೆಗಳಲ್ಲಿ ಫೇಸ್‌ಬುಕ್‌ನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಮುಂದೆ ಲಕ್ಕಿ ಈ ಅಭಿಪ್ರಾಯಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಟ್ಲಾಂಟಾ ಮೂಲದ ಮಾಜಿ ಫೇಸ್‌ಬುಕ್ ಉದ್ಯೋಗಿ ಲಕ್ಕಿ, 2018ರಲ್ಲಿ ಫೇಸ್‌ಬುಕ್ ತನ್ನ ವೈವಿಧ್ಯತೆಯ ಕೊರತೆಯನ್ನು ಪರಿಹರಿಸಲು ಸಾಕಷ್ಟು ಕೆಲಸ ಮಾಡಲಿಲ್ಲ ಎಂದು ಆರೋಪಿಸಿ ರಾಜೀನಾಮೆ ನೀಡಿ ಹೊರನಡೆದಿದ್ದರು.

ಸಮುದಾಯ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಹೊಂದಾಣಿಕೆಗಳಿವೆ ಎಂಬುದರ ಬಗ್ಗೆ ಲಕ್ಕಿ ಗಮನ ಸೆಳೆದಿದ್ದಾರೆ. ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ ಸಾಮಾಜಿಕ ಜಾಲತಾಣದ ಕಾರ್ಯನಿರ್ವಾಹಕ ತಂಡಗಳಿಗೆ “ಇಂತಹ ಸ್ಥೂಲ ನಿಷ್ಕ್ರಿಯತೆ ಮತ್ತು ದುರುಪಯೋಗದ ಬಗ್ಗೆ ಸಾಮಾನ್ಯವಾಗಿ ತಿಳಿದಿರುತ್ತದೆ” ಎಂದು ಲಕ್ಕಿ ಹೇಳಿದ್ದಾರೆ.

ಆಪ್ ಬಿಡುಗಡೆ ಮಾಡಿರುವ ವಿಡಿಯೋ ತುಣುಕುಗಳಲ್ಲಿ, ಲಕ್ಕಿ ಹೇಳುವಂತೆ, “ದುರದೃಷ್ಟವಶಾತ್, ದ್ವೇಷ ಮತ್ತು ವಿಭಜಕ ವಿಷಯಗಳು ಹೆಚ್ಚಾಗಿ ಫೇಸ್‌ಬುಕ್ ಬಳಕೆದಾರರಲ್ಲಿ ಹೆಚ್ಚು ಷೇರುಗಳು, ಲೈಕ್ ಅಥವಾ ಕಾಮೆಂಟ್‌ಗಳನ್ನು ಹೊಂದಿವೆ. ಹೌದು, ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ” ಎಂದಿದ್ದಾರೆ.

“ಜನರು ನೋಡುವ ಮತ್ತು ನೋಡದ ವಿಷಯಗಳಲ್ಲಿ ಫೇಸ್‌ಬುಕ್ ಸಕ್ರಿಯವಾಗಿ ಹಸ್ತಕ್ಷೇಪ ಮಾಡುತ್ತದೆ. ಫ್ಲಾಟ್‌ಫಾರಂನಲ್ಲಿ ಮುಂದುವರಿಯಲು ಫೇಸ್‌ಬುಕ್ ಬಹಳಷ್ಟು ಹಿಂಸಾಚಾರ ಮತ್ತು ತಪ್ಪು ಮಾಹಿತಿಯ ಮೇಲೆ ಪ್ರಭಾವ ಬೀರುತ್ತದೆ ಜೊತೆಗೆ ಅಂತಹ ವಿಷಯಗಳಿಗೆ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

 

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಹೇಳಿಕೆಯನ್ನು ಉಲ್ಲೇಖಿಸಿದ ಎಎನ್‌ಐ ದೆಹಲಿ ಕೋಮು ಹಿಂಸಾಚಾರ, ಮ್ಯಾನ್ಮಾರ್ ನರಮೇಧ ಮತ್ತು ಶ್ರೀಲಂಕಾದ ಕೋಮು ಹಿಂಸಾಚಾರದಂತಹ ಘಟನೆಗಳಲ್ಲಿ ಫೇಸ್‌ಬುಕ್ “ಹೆಚ್ಚು ಪೂರ್ವಭಾವಿಯಾಗಿ ಮತ್ತು ತ್ವರಿತವಾಗಿ ನಡೆದುಕೊಂಡಿದ್ದರೆ ಅದನ್ನು ಸುಲಭವಾಗಿ ತಪ್ಪಿಸಬಹುದಿತ್ತು” ಎಂದು ಹೇಳಿದೆ.

ಮಾಜಿ ಉದ್ಯೋಗಿ ಮಾರ್ಕ್ ಲಕ್ಕಿಯ ಹೇಳಿಕೆಗಳ ಕುರಿತು ಫೇಸ್‌ಬುಕ್ ಇನ್ನೂ ಪ್ರತಿಕ್ರಿಯಿಸಿಲ್ಲ.

ಘಟನೆಯನ್ನು ವರದಿ ಮಾಡುವ ಜನರ ಸಂಖ್ಯೆಯನ್ನು ಅವಲಂಬಿಸಿ ಮೇಲ್ವಿಚಾರಕರಿಗೆ ದ್ವೇಷಪೂರಿತ ಪೋಸ್ಟ್‌ಗಳನ್ನು ಫ್ಲ್ಯಾಗ್ ಮಾಡಲಾಗುತ್ತದೆ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಒಳಗೊಳ್ಳುವಿಕೆ ಕೂಡ ಒಂದು ಘಟನೆಯ ಪರಿಣಾಮವನ್ನು ಅಳೆಯಲು ಆಧರಿಸಿದೆ ಎಂದು ಲಕ್ಕಿ ದೆಹಲಿ ಅಸೆಂಬ್ಲಿ ಪ್ಯಾನೆಲ್‌ಗೆ ತಿಳಿಸಿದ್ದಾರೆ.

ಭಾರತದಲ್ಲಿ ದ್ವೇಷದ ಭಾಷಣವನ್ನು ಹರಡುವಲ್ಲಿ ಫೇಸ್‌ಬುಕ್‌ನ ಪಾತ್ರವು ಪರಿಶೀಲನೆಗೆ ಒಳಪಟ್ಟಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಲೇಖನವೊಂದು ಬಹಿರಂಗಪಡಿಸಿದ ನಂತರ ಭಾರತದಲ್ಲಿ ಫೇಸ್‌ಬುಕ್ ಉನ್ನತ ಶ್ರೇಣಿಯ ಅಧಿಕಾರಿಗಳು ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸುತ್ತಿದೆ ಎಂದು ತಿಳಿದುಬಂದಿದೆ.

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ಎರಡು ವಾರಗಳ ಹಿಂದೆ ತಮ್ಮ ಹುದ್ದೆಯಿಂದ ಕೆಳಗಿಳಿದರು.  “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಅವರು ಮೋದಿಯನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆಂದು ಆರೋಪಿಸಲಾಗಿತ್ತು ಮತ್ತು 2014 ರ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಗೆ ಸಹಾಯ ಮಾಡುವ ಬಗ್ಗೆಯೂ ಮಾತನಾಡಿದ್ದರು.


ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...