Homeಮುಖಪುಟಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಉದ್ಯೋಗಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ ಗುರುವಾರ ಫೇಸ್‌ಬುಕ್ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಮತ್ತು ಫೇಸ್‌ಬುಕ್ ಸ್ವಯಂ ನಿಯಂತ್ರಣ ಹೊಂದಿದೆ ಎಂದು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ ಅವರ ಅಧ್ಯಕ್ಷತೆಯಲ್ಲಿರುವ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿ ಜೊತೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಲಕ್ಕಿ, “ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿರುವುದು ನಿಜ” ಎಂದು ಹೇಳಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯಲ್ಲಿ, ಫೇಸ್‌ಬುಕ್ ದ್ವೇಷ ಭಾಷಣ ನಿಯಮಗಳು ಮತ್ತು ನೀತಿಗಳನ್ನು ಸರಿಯಾಗಿ ಅನ್ವಯಿಸದೆ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ ಎಂಬುದರ ಕುರಿತು  ಶಾಸಕ ರಾಘವ್ ಚಾಡ್ಡ ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಎಸ್ ಲಕ್ಕಿಯನ್ನು ಪ್ರಶ್ನಿಸಿದರು.

ದೆಹಲಿಯಲ್ಲಿ ನಡೆದ ಗಲಭೆಗಳಲ್ಲಿ ಫೇಸ್‌ಬುಕ್‌ನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಮುಂದೆ ಲಕ್ಕಿ ಈ ಅಭಿಪ್ರಾಯಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಟ್ಲಾಂಟಾ ಮೂಲದ ಮಾಜಿ ಫೇಸ್‌ಬುಕ್ ಉದ್ಯೋಗಿ ಲಕ್ಕಿ, 2018ರಲ್ಲಿ ಫೇಸ್‌ಬುಕ್ ತನ್ನ ವೈವಿಧ್ಯತೆಯ ಕೊರತೆಯನ್ನು ಪರಿಹರಿಸಲು ಸಾಕಷ್ಟು ಕೆಲಸ ಮಾಡಲಿಲ್ಲ ಎಂದು ಆರೋಪಿಸಿ ರಾಜೀನಾಮೆ ನೀಡಿ ಹೊರನಡೆದಿದ್ದರು.

ಸಮುದಾಯ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಹೊಂದಾಣಿಕೆಗಳಿವೆ ಎಂಬುದರ ಬಗ್ಗೆ ಲಕ್ಕಿ ಗಮನ ಸೆಳೆದಿದ್ದಾರೆ. ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ ಸಾಮಾಜಿಕ ಜಾಲತಾಣದ ಕಾರ್ಯನಿರ್ವಾಹಕ ತಂಡಗಳಿಗೆ “ಇಂತಹ ಸ್ಥೂಲ ನಿಷ್ಕ್ರಿಯತೆ ಮತ್ತು ದುರುಪಯೋಗದ ಬಗ್ಗೆ ಸಾಮಾನ್ಯವಾಗಿ ತಿಳಿದಿರುತ್ತದೆ” ಎಂದು ಲಕ್ಕಿ ಹೇಳಿದ್ದಾರೆ.

ಆಪ್ ಬಿಡುಗಡೆ ಮಾಡಿರುವ ವಿಡಿಯೋ ತುಣುಕುಗಳಲ್ಲಿ, ಲಕ್ಕಿ ಹೇಳುವಂತೆ, “ದುರದೃಷ್ಟವಶಾತ್, ದ್ವೇಷ ಮತ್ತು ವಿಭಜಕ ವಿಷಯಗಳು ಹೆಚ್ಚಾಗಿ ಫೇಸ್‌ಬುಕ್ ಬಳಕೆದಾರರಲ್ಲಿ ಹೆಚ್ಚು ಷೇರುಗಳು, ಲೈಕ್ ಅಥವಾ ಕಾಮೆಂಟ್‌ಗಳನ್ನು ಹೊಂದಿವೆ. ಹೌದು, ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ” ಎಂದಿದ್ದಾರೆ.

“ಜನರು ನೋಡುವ ಮತ್ತು ನೋಡದ ವಿಷಯಗಳಲ್ಲಿ ಫೇಸ್‌ಬುಕ್ ಸಕ್ರಿಯವಾಗಿ ಹಸ್ತಕ್ಷೇಪ ಮಾಡುತ್ತದೆ. ಫ್ಲಾಟ್‌ಫಾರಂನಲ್ಲಿ ಮುಂದುವರಿಯಲು ಫೇಸ್‌ಬುಕ್ ಬಹಳಷ್ಟು ಹಿಂಸಾಚಾರ ಮತ್ತು ತಪ್ಪು ಮಾಹಿತಿಯ ಮೇಲೆ ಪ್ರಭಾವ ಬೀರುತ್ತದೆ ಜೊತೆಗೆ ಅಂತಹ ವಿಷಯಗಳಿಗೆ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

 

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಹೇಳಿಕೆಯನ್ನು ಉಲ್ಲೇಖಿಸಿದ ಎಎನ್‌ಐ ದೆಹಲಿ ಕೋಮು ಹಿಂಸಾಚಾರ, ಮ್ಯಾನ್ಮಾರ್ ನರಮೇಧ ಮತ್ತು ಶ್ರೀಲಂಕಾದ ಕೋಮು ಹಿಂಸಾಚಾರದಂತಹ ಘಟನೆಗಳಲ್ಲಿ ಫೇಸ್‌ಬುಕ್ “ಹೆಚ್ಚು ಪೂರ್ವಭಾವಿಯಾಗಿ ಮತ್ತು ತ್ವರಿತವಾಗಿ ನಡೆದುಕೊಂಡಿದ್ದರೆ ಅದನ್ನು ಸುಲಭವಾಗಿ ತಪ್ಪಿಸಬಹುದಿತ್ತು” ಎಂದು ಹೇಳಿದೆ.

ಮಾಜಿ ಉದ್ಯೋಗಿ ಮಾರ್ಕ್ ಲಕ್ಕಿಯ ಹೇಳಿಕೆಗಳ ಕುರಿತು ಫೇಸ್‌ಬುಕ್ ಇನ್ನೂ ಪ್ರತಿಕ್ರಿಯಿಸಿಲ್ಲ.

ಘಟನೆಯನ್ನು ವರದಿ ಮಾಡುವ ಜನರ ಸಂಖ್ಯೆಯನ್ನು ಅವಲಂಬಿಸಿ ಮೇಲ್ವಿಚಾರಕರಿಗೆ ದ್ವೇಷಪೂರಿತ ಪೋಸ್ಟ್‌ಗಳನ್ನು ಫ್ಲ್ಯಾಗ್ ಮಾಡಲಾಗುತ್ತದೆ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಒಳಗೊಳ್ಳುವಿಕೆ ಕೂಡ ಒಂದು ಘಟನೆಯ ಪರಿಣಾಮವನ್ನು ಅಳೆಯಲು ಆಧರಿಸಿದೆ ಎಂದು ಲಕ್ಕಿ ದೆಹಲಿ ಅಸೆಂಬ್ಲಿ ಪ್ಯಾನೆಲ್‌ಗೆ ತಿಳಿಸಿದ್ದಾರೆ.

ಭಾರತದಲ್ಲಿ ದ್ವೇಷದ ಭಾಷಣವನ್ನು ಹರಡುವಲ್ಲಿ ಫೇಸ್‌ಬುಕ್‌ನ ಪಾತ್ರವು ಪರಿಶೀಲನೆಗೆ ಒಳಪಟ್ಟಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಲೇಖನವೊಂದು ಬಹಿರಂಗಪಡಿಸಿದ ನಂತರ ಭಾರತದಲ್ಲಿ ಫೇಸ್‌ಬುಕ್ ಉನ್ನತ ಶ್ರೇಣಿಯ ಅಧಿಕಾರಿಗಳು ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸುತ್ತಿದೆ ಎಂದು ತಿಳಿದುಬಂದಿದೆ.

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ಎರಡು ವಾರಗಳ ಹಿಂದೆ ತಮ್ಮ ಹುದ್ದೆಯಿಂದ ಕೆಳಗಿಳಿದರು.  “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಅವರು ಮೋದಿಯನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆಂದು ಆರೋಪಿಸಲಾಗಿತ್ತು ಮತ್ತು 2014 ರ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಗೆ ಸಹಾಯ ಮಾಡುವ ಬಗ್ಗೆಯೂ ಮಾತನಾಡಿದ್ದರು.


ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...