Homeಮುಖಪುಟಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಉದ್ಯೋಗಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ ಗುರುವಾರ ಫೇಸ್‌ಬುಕ್ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಮತ್ತು ಫೇಸ್‌ಬುಕ್ ಸ್ವಯಂ ನಿಯಂತ್ರಣ ಹೊಂದಿದೆ ಎಂದು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ ಅವರ ಅಧ್ಯಕ್ಷತೆಯಲ್ಲಿರುವ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿ ಜೊತೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಲಕ್ಕಿ, “ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿರುವುದು ನಿಜ” ಎಂದು ಹೇಳಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯಲ್ಲಿ, ಫೇಸ್‌ಬುಕ್ ದ್ವೇಷ ಭಾಷಣ ನಿಯಮಗಳು ಮತ್ತು ನೀತಿಗಳನ್ನು ಸರಿಯಾಗಿ ಅನ್ವಯಿಸದೆ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ ಎಂಬುದರ ಕುರಿತು  ಶಾಸಕ ರಾಘವ್ ಚಾಡ್ಡ ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಎಸ್ ಲಕ್ಕಿಯನ್ನು ಪ್ರಶ್ನಿಸಿದರು.

ದೆಹಲಿಯಲ್ಲಿ ನಡೆದ ಗಲಭೆಗಳಲ್ಲಿ ಫೇಸ್‌ಬುಕ್‌ನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಮುಂದೆ ಲಕ್ಕಿ ಈ ಅಭಿಪ್ರಾಯಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಟ್ಲಾಂಟಾ ಮೂಲದ ಮಾಜಿ ಫೇಸ್‌ಬುಕ್ ಉದ್ಯೋಗಿ ಲಕ್ಕಿ, 2018ರಲ್ಲಿ ಫೇಸ್‌ಬುಕ್ ತನ್ನ ವೈವಿಧ್ಯತೆಯ ಕೊರತೆಯನ್ನು ಪರಿಹರಿಸಲು ಸಾಕಷ್ಟು ಕೆಲಸ ಮಾಡಲಿಲ್ಲ ಎಂದು ಆರೋಪಿಸಿ ರಾಜೀನಾಮೆ ನೀಡಿ ಹೊರನಡೆದಿದ್ದರು.

ಸಮುದಾಯ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಹೊಂದಾಣಿಕೆಗಳಿವೆ ಎಂಬುದರ ಬಗ್ಗೆ ಲಕ್ಕಿ ಗಮನ ಸೆಳೆದಿದ್ದಾರೆ. ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ ಸಾಮಾಜಿಕ ಜಾಲತಾಣದ ಕಾರ್ಯನಿರ್ವಾಹಕ ತಂಡಗಳಿಗೆ “ಇಂತಹ ಸ್ಥೂಲ ನಿಷ್ಕ್ರಿಯತೆ ಮತ್ತು ದುರುಪಯೋಗದ ಬಗ್ಗೆ ಸಾಮಾನ್ಯವಾಗಿ ತಿಳಿದಿರುತ್ತದೆ” ಎಂದು ಲಕ್ಕಿ ಹೇಳಿದ್ದಾರೆ.

ಆಪ್ ಬಿಡುಗಡೆ ಮಾಡಿರುವ ವಿಡಿಯೋ ತುಣುಕುಗಳಲ್ಲಿ, ಲಕ್ಕಿ ಹೇಳುವಂತೆ, “ದುರದೃಷ್ಟವಶಾತ್, ದ್ವೇಷ ಮತ್ತು ವಿಭಜಕ ವಿಷಯಗಳು ಹೆಚ್ಚಾಗಿ ಫೇಸ್‌ಬುಕ್ ಬಳಕೆದಾರರಲ್ಲಿ ಹೆಚ್ಚು ಷೇರುಗಳು, ಲೈಕ್ ಅಥವಾ ಕಾಮೆಂಟ್‌ಗಳನ್ನು ಹೊಂದಿವೆ. ಹೌದು, ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ” ಎಂದಿದ್ದಾರೆ.

“ಜನರು ನೋಡುವ ಮತ್ತು ನೋಡದ ವಿಷಯಗಳಲ್ಲಿ ಫೇಸ್‌ಬುಕ್ ಸಕ್ರಿಯವಾಗಿ ಹಸ್ತಕ್ಷೇಪ ಮಾಡುತ್ತದೆ. ಫ್ಲಾಟ್‌ಫಾರಂನಲ್ಲಿ ಮುಂದುವರಿಯಲು ಫೇಸ್‌ಬುಕ್ ಬಹಳಷ್ಟು ಹಿಂಸಾಚಾರ ಮತ್ತು ತಪ್ಪು ಮಾಹಿತಿಯ ಮೇಲೆ ಪ್ರಭಾವ ಬೀರುತ್ತದೆ ಜೊತೆಗೆ ಅಂತಹ ವಿಷಯಗಳಿಗೆ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

 

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಹೇಳಿಕೆಯನ್ನು ಉಲ್ಲೇಖಿಸಿದ ಎಎನ್‌ಐ ದೆಹಲಿ ಕೋಮು ಹಿಂಸಾಚಾರ, ಮ್ಯಾನ್ಮಾರ್ ನರಮೇಧ ಮತ್ತು ಶ್ರೀಲಂಕಾದ ಕೋಮು ಹಿಂಸಾಚಾರದಂತಹ ಘಟನೆಗಳಲ್ಲಿ ಫೇಸ್‌ಬುಕ್ “ಹೆಚ್ಚು ಪೂರ್ವಭಾವಿಯಾಗಿ ಮತ್ತು ತ್ವರಿತವಾಗಿ ನಡೆದುಕೊಂಡಿದ್ದರೆ ಅದನ್ನು ಸುಲಭವಾಗಿ ತಪ್ಪಿಸಬಹುದಿತ್ತು” ಎಂದು ಹೇಳಿದೆ.

ಮಾಜಿ ಉದ್ಯೋಗಿ ಮಾರ್ಕ್ ಲಕ್ಕಿಯ ಹೇಳಿಕೆಗಳ ಕುರಿತು ಫೇಸ್‌ಬುಕ್ ಇನ್ನೂ ಪ್ರತಿಕ್ರಿಯಿಸಿಲ್ಲ.

ಘಟನೆಯನ್ನು ವರದಿ ಮಾಡುವ ಜನರ ಸಂಖ್ಯೆಯನ್ನು ಅವಲಂಬಿಸಿ ಮೇಲ್ವಿಚಾರಕರಿಗೆ ದ್ವೇಷಪೂರಿತ ಪೋಸ್ಟ್‌ಗಳನ್ನು ಫ್ಲ್ಯಾಗ್ ಮಾಡಲಾಗುತ್ತದೆ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಒಳಗೊಳ್ಳುವಿಕೆ ಕೂಡ ಒಂದು ಘಟನೆಯ ಪರಿಣಾಮವನ್ನು ಅಳೆಯಲು ಆಧರಿಸಿದೆ ಎಂದು ಲಕ್ಕಿ ದೆಹಲಿ ಅಸೆಂಬ್ಲಿ ಪ್ಯಾನೆಲ್‌ಗೆ ತಿಳಿಸಿದ್ದಾರೆ.

ಭಾರತದಲ್ಲಿ ದ್ವೇಷದ ಭಾಷಣವನ್ನು ಹರಡುವಲ್ಲಿ ಫೇಸ್‌ಬುಕ್‌ನ ಪಾತ್ರವು ಪರಿಶೀಲನೆಗೆ ಒಳಪಟ್ಟಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಲೇಖನವೊಂದು ಬಹಿರಂಗಪಡಿಸಿದ ನಂತರ ಭಾರತದಲ್ಲಿ ಫೇಸ್‌ಬುಕ್ ಉನ್ನತ ಶ್ರೇಣಿಯ ಅಧಿಕಾರಿಗಳು ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸುತ್ತಿದೆ ಎಂದು ತಿಳಿದುಬಂದಿದೆ.

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ಎರಡು ವಾರಗಳ ಹಿಂದೆ ತಮ್ಮ ಹುದ್ದೆಯಿಂದ ಕೆಳಗಿಳಿದರು.  “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಅವರು ಮೋದಿಯನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆಂದು ಆರೋಪಿಸಲಾಗಿತ್ತು ಮತ್ತು 2014 ರ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಗೆ ಸಹಾಯ ಮಾಡುವ ಬಗ್ಗೆಯೂ ಮಾತನಾಡಿದ್ದರು.


ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...