Homeಮುಖಪುಟಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಎಂದು ಮಾಜಿ ಉದ್ಯೋಗಿ ಅಭಿಪ್ರಾಯಪಟ್ಟಿದ್ದಾರೆ.

- Advertisement -
- Advertisement -

ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ ಗುರುವಾರ ಫೇಸ್‌ಬುಕ್ ವಿರುದ್ಧ ತೀವ್ರ ಆರೋಪಗಳನ್ನು ಮಾಡಿದ್ದು, ಫೇಸ್‌ಬುಕ್ ಸಮಯಕ್ಕೆ ಸರಿಯಾಗಿ ಕಾರ್ಯನಿರ್ವಹಿಸಿದ್ದರೆ ದೆಹಲಿ ಗಲಭೆಗಳನ್ನು ತಪ್ಪಿಸಬಹುದಿತ್ತು ಮತ್ತು ಫೇಸ್‌ಬುಕ್ ಸ್ವಯಂ ನಿಯಂತ್ರಣ ಹೊಂದಿದೆ ಎಂದು ನಂಬಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.

ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಾಡ್ಡ ಅವರ ಅಧ್ಯಕ್ಷತೆಯಲ್ಲಿರುವ ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿ ಜೊತೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಮಾತನಾಡಿದ ಲಕ್ಕಿ, “ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿರುವುದು ನಿಜ” ಎಂದು ಹೇಳಿದ್ದಾರೆ.

ಕಳೆದ ಫೆಬ್ರವರಿಯಲ್ಲಿ ದೆಹಲಿಯ ಈಶಾನ್ಯ ಭಾಗಗಳಲ್ಲಿ ನಡೆದ ಗಲಭೆಯಲ್ಲಿ, ಫೇಸ್‌ಬುಕ್ ದ್ವೇಷ ಭಾಷಣ ನಿಯಮಗಳು ಮತ್ತು ನೀತಿಗಳನ್ನು ಸರಿಯಾಗಿ ಅನ್ವಯಿಸದೆ ಕೋಮು ಹಿಂಸಾಚಾರಕ್ಕೆ ಕಾರಣವಾಗಿದೆ ಎಂಬುದರ ಕುರಿತು  ಶಾಸಕ ರಾಘವ್ ಚಾಡ್ಡ ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಎಸ್ ಲಕ್ಕಿಯನ್ನು ಪ್ರಶ್ನಿಸಿದರು.

ದೆಹಲಿಯಲ್ಲಿ ನಡೆದ ಗಲಭೆಗಳಲ್ಲಿ ಫೇಸ್‌ಬುಕ್‌ನ ಪಾತ್ರದ ಬಗ್ಗೆ ತನಿಖೆ ನಡೆಸುತ್ತಿರುವ ದೆಹಲಿ ಅಸೆಂಬ್ಲಿಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಮುಂದೆ ಲಕ್ಕಿ ಈ ಅಭಿಪ್ರಾಯಗಳನ್ನು ನೀಡಿದ್ದಾರೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಟ್ಲಾಂಟಾ ಮೂಲದ ಮಾಜಿ ಫೇಸ್‌ಬುಕ್ ಉದ್ಯೋಗಿ ಲಕ್ಕಿ, 2018ರಲ್ಲಿ ಫೇಸ್‌ಬುಕ್ ತನ್ನ ವೈವಿಧ್ಯತೆಯ ಕೊರತೆಯನ್ನು ಪರಿಹರಿಸಲು ಸಾಕಷ್ಟು ಕೆಲಸ ಮಾಡಲಿಲ್ಲ ಎಂದು ಆರೋಪಿಸಿ ರಾಜೀನಾಮೆ ನೀಡಿ ಹೊರನಡೆದಿದ್ದರು.

ಸಮುದಾಯ ಮಾರ್ಗಸೂಚಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಂಪೂರ್ಣ ಹೊಂದಾಣಿಕೆಗಳಿವೆ ಎಂಬುದರ ಬಗ್ಗೆ ಲಕ್ಕಿ ಗಮನ ಸೆಳೆದಿದ್ದಾರೆ. ಫೇಸ್‌ಬುಕ್ ಸಿಇಒ ಮಾರ್ಕ್ ಜುಕರ್‌ಬರ್ಗ್ ಸೇರಿದಂತೆ ಸಾಮಾಜಿಕ ಜಾಲತಾಣದ ಕಾರ್ಯನಿರ್ವಾಹಕ ತಂಡಗಳಿಗೆ “ಇಂತಹ ಸ್ಥೂಲ ನಿಷ್ಕ್ರಿಯತೆ ಮತ್ತು ದುರುಪಯೋಗದ ಬಗ್ಗೆ ಸಾಮಾನ್ಯವಾಗಿ ತಿಳಿದಿರುತ್ತದೆ” ಎಂದು ಲಕ್ಕಿ ಹೇಳಿದ್ದಾರೆ.

ಆಪ್ ಬಿಡುಗಡೆ ಮಾಡಿರುವ ವಿಡಿಯೋ ತುಣುಕುಗಳಲ್ಲಿ, ಲಕ್ಕಿ ಹೇಳುವಂತೆ, “ದುರದೃಷ್ಟವಶಾತ್, ದ್ವೇಷ ಮತ್ತು ವಿಭಜಕ ವಿಷಯಗಳು ಹೆಚ್ಚಾಗಿ ಫೇಸ್‌ಬುಕ್ ಬಳಕೆದಾರರಲ್ಲಿ ಹೆಚ್ಚು ಷೇರುಗಳು, ಲೈಕ್ ಅಥವಾ ಕಾಮೆಂಟ್‌ಗಳನ್ನು ಹೊಂದಿವೆ. ಹೌದು, ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ” ಎಂದಿದ್ದಾರೆ.

“ಜನರು ನೋಡುವ ಮತ್ತು ನೋಡದ ವಿಷಯಗಳಲ್ಲಿ ಫೇಸ್‌ಬುಕ್ ಸಕ್ರಿಯವಾಗಿ ಹಸ್ತಕ್ಷೇಪ ಮಾಡುತ್ತದೆ. ಫ್ಲಾಟ್‌ಫಾರಂನಲ್ಲಿ ಮುಂದುವರಿಯಲು ಫೇಸ್‌ಬುಕ್ ಬಹಳಷ್ಟು ಹಿಂಸಾಚಾರ ಮತ್ತು ತಪ್ಪು ಮಾಹಿತಿಯ ಮೇಲೆ ಪ್ರಭಾವ ಬೀರುತ್ತದೆ ಜೊತೆಗೆ ಅಂತಹ ವಿಷಯಗಳಿಗೆ ಸಹಾಯ ಮಾಡುತ್ತದೆ” ಎಂದು ಅವರು ಹೇಳಿದರು.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

 

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸಾಮರಸ್ಯ ಸಮಿತಿಯ ಹೇಳಿಕೆಯನ್ನು ಉಲ್ಲೇಖಿಸಿದ ಎಎನ್‌ಐ ದೆಹಲಿ ಕೋಮು ಹಿಂಸಾಚಾರ, ಮ್ಯಾನ್ಮಾರ್ ನರಮೇಧ ಮತ್ತು ಶ್ರೀಲಂಕಾದ ಕೋಮು ಹಿಂಸಾಚಾರದಂತಹ ಘಟನೆಗಳಲ್ಲಿ ಫೇಸ್‌ಬುಕ್ “ಹೆಚ್ಚು ಪೂರ್ವಭಾವಿಯಾಗಿ ಮತ್ತು ತ್ವರಿತವಾಗಿ ನಡೆದುಕೊಂಡಿದ್ದರೆ ಅದನ್ನು ಸುಲಭವಾಗಿ ತಪ್ಪಿಸಬಹುದಿತ್ತು” ಎಂದು ಹೇಳಿದೆ.

ಮಾಜಿ ಉದ್ಯೋಗಿ ಮಾರ್ಕ್ ಲಕ್ಕಿಯ ಹೇಳಿಕೆಗಳ ಕುರಿತು ಫೇಸ್‌ಬುಕ್ ಇನ್ನೂ ಪ್ರತಿಕ್ರಿಯಿಸಿಲ್ಲ.

ಘಟನೆಯನ್ನು ವರದಿ ಮಾಡುವ ಜನರ ಸಂಖ್ಯೆಯನ್ನು ಅವಲಂಬಿಸಿ ಮೇಲ್ವಿಚಾರಕರಿಗೆ ದ್ವೇಷಪೂರಿತ ಪೋಸ್ಟ್‌ಗಳನ್ನು ಫ್ಲ್ಯಾಗ್ ಮಾಡಲಾಗುತ್ತದೆ ಮತ್ತು ಉನ್ನತ ಮಟ್ಟದ ಅಧಿಕಾರಿಗಳ ಒಳಗೊಳ್ಳುವಿಕೆ ಕೂಡ ಒಂದು ಘಟನೆಯ ಪರಿಣಾಮವನ್ನು ಅಳೆಯಲು ಆಧರಿಸಿದೆ ಎಂದು ಲಕ್ಕಿ ದೆಹಲಿ ಅಸೆಂಬ್ಲಿ ಪ್ಯಾನೆಲ್‌ಗೆ ತಿಳಿಸಿದ್ದಾರೆ.

ಭಾರತದಲ್ಲಿ ದ್ವೇಷದ ಭಾಷಣವನ್ನು ಹರಡುವಲ್ಲಿ ಫೇಸ್‌ಬುಕ್‌ನ ಪಾತ್ರವು ಪರಿಶೀಲನೆಗೆ ಒಳಪಟ್ಟಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ಲೇಖನವೊಂದು ಬಹಿರಂಗಪಡಿಸಿದ ನಂತರ ಭಾರತದಲ್ಲಿ ಫೇಸ್‌ಬುಕ್ ಉನ್ನತ ಶ್ರೇಣಿಯ ಅಧಿಕಾರಿಗಳು ನರೇಂದ್ರ ಮೋದಿ ಸರ್ಕಾರವನ್ನು ಬೆಂಬಲಿಸುತ್ತಿದೆ ಎಂದು ತಿಳಿದುಬಂದಿದೆ.

ಭಾರತದ ಫೇಸ್‌ಬುಕ್ ಮುಖ್ಯಸ್ಥರಾದ ಅಂಖಿದಾಸ್ ಎರಡು ವಾರಗಳ ಹಿಂದೆ ತಮ್ಮ ಹುದ್ದೆಯಿಂದ ಕೆಳಗಿಳಿದರು.  “ಬಿಜೆಪಿಗೆ ಸಹಕಾರಿಯಾಗಿ ಸಾಮಾಜಿಕ ಮಾಧ್ಯಮ ಫೇಸ್‌ಬುಕ್‌ ಅನ್ನು ದುರುಪಯೋಗಪಡಿಸಿಕೊಂಡಿದ್ದರು” ಎಂಬ ಆರೋಪದ ಮೇಲೆ ಕೆಲವು ದಿನಗಳಿಂದ ವಿಚಾರಣೆ ಎದುರಿಸುತ್ತಿದ್ದರು. ಅವರು ಮೋದಿಯನ್ನು ಬಹಿರಂಗವಾಗಿ ಬೆಂಬಲಿಸಿದ್ದಾರೆಂದು ಆರೋಪಿಸಲಾಗಿತ್ತು ಮತ್ತು 2014 ರ ಚುನಾವಣೆಯಲ್ಲಿ ಗೆಲ್ಲಲು ಬಿಜೆಪಿಗೆ ಸಹಾಯ ಮಾಡುವ ಬಗ್ಗೆಯೂ ಮಾತನಾಡಿದ್ದರು.


ಇದನ್ನೂ ಓದಿ: ಗುಡ್ ನ್ಯೂಸ್: ಸುಡು ಬಿಸಿಲಿನಲ್ಲಿ ಗಿಡ ಮಾರುತ್ತಿದ್ದ ಅಜ್ಜನ ಮುಖದಲ್ಲಿ ಮಂದಹಾಸ ಮೂಡಿಸಿದ ಫೇಸ್‌ಬುಕ್ ಪೋಸ್ಟ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...