Homeಮುಖಪುಟದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ದೆಹಲಿ ಅಲ್ಪಸಂಖ್ಯಾತರ ಆಯೋಗ ರಚಿಸಿದ್ದ ಸತ್ಯ ಶೋಧನಾ ಸಮಿತಿ ವರದಿ ಸಲ್ಲಿಸಿದ್ದು, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರ ಭಾಷಣವನ್ನು ಮುಸ್ಲಿಂ ವಿರೋಧಿ, ಹಿಂಸಾಚಾರಕ್ಕೆ ಪ್ರಚೋದನಕಾರಿ ಎಂದು ಗುರುತಿಸಿದೆ.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿಯಾಗಬೇಕು ಎಂದು ಶಾಂತಿ ಮತ್ತು ಸಾಮರಸ್ಯದ ಸಭೆಯಲ್ಲಿ ದೆಹಲಿ ಶಾಸಕಾಂಗ ಸಮಿತಿಯ ವರದಿ ತಿಳಿಸಿದೆ.

ದೆಹಲಿ ಗಲಭೆಗಳ ಕುರಿತು ಸತ್ಯಾಸತ್ಯತೆಗಳನ್ನು ಕಂಡುಹಿಡಿಯಲು ದೆಹಲಿ ಅಲ್ಪಸಂಖ್ಯಾತರ ಆಯೋಗ ರಚಿಸಿದ್ದ ಸತ್ಯ ಶೋಧನಾ ಸಮಿತಿ ವರದಿ ಸಲ್ಲಿಸಿದ್ದು, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಷಣವನ್ನು ಮುಸ್ಲಿಂ ವಿರೋಧಿ, ಹಿಂಸಾಚಾರಕ್ಕೆ ಪ್ರಚೋದನಕಾರಿ ಎಂದು ಗುರುತಿಸಿದೆ.

ಫೆಬ್ರವರಿ 24-25ರಂದು ಅಮೆರಿಕಾ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ “ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಕಪಿಲ್ ಮಿಶ್ರಾ ಆಡಿದ್ದ ಮಾತುಗಳು ವೈರಲ್‌ ಆಗಿದ್ದವು.

ಇದನ್ನೂ ಓದಿ; ದೆಹಲಿ ಹಿಂಸಾಚಾರಕ್ಕೆ ಪ್ರಚೋದನೆ: BJPಯ ಕಪಿಲ್‌ ಮಿಶ್ರಾ ವಿರುದ್ಧ ದೂರು ದಾಖಲು

ವಾಲ್ ಸ್ಟ್ರೀಟ್ ಜರ್ನಲ್ ವರದಿಯಂತೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಫೇಸ್‌ಬುಕ್‌ನಲ್ಲಿ ಕಾರ್ಯನಿರ್ವಹಿಸಿದ್ದ ಅಂಖಿದಾಸ್ ದ್ವೇಷ ಭಾಷಣಗಳನ್ನು ಮಾಡುವ ಕನಿಷ್ಟ ಮೂವರು ಬಿಜೆಪಿ ನಾಯಕರನ್ನು ರಕ್ಷಿಸಿದ್ದು, ಅವರಲ್ಲಿ ಕಪಿಲ್ ಮಿಶ್ರಾ ಕೂಡ ಒಬ್ಬರಾಗಿದ್ದಾರೆ.

ಹಿಂಸಾಚಾರ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮಾರ್ಚ್ ತಿಂಗಳಲ್ಲಿ ಶಾಂತಿ ಮತ್ತು ಸಾಮರಸ್ಯ ಸಮಿತಿ ರಚಿಸಿತ್ತು. ಈ ಸಮಿತಿಯು ಸೌರಭ್ ಭಾರದ್ವಾಜ್, ಅತಿಶಿ, ರಾಘವ್ ಚಾಡ್ಡಾ, ಅಬ್ದುಲ್ ರೆಹಮಾನ್, ಅಜಯ್ ಕುಮಾರ್ ಮಹಾವರ್, ಬಿ.ಎಸ್.ಜೋನ್, ದಿಲೀಪ್ ಪಾಂಡೆ, ಜಮೈಲ್ ಸಿಂಗ್ ಮತ್ತು ಕುಲದೀಪ್ ಕುಮಾರ್‌ರನ್ನು ಒಳಗೊಂಡಿತ್ತು. ಇದರಲ್ಲಿ ಬಹಳಷ್ಟು ಜನ ಆಪ್‌ ಶಾಸಕರಾಗಿದ್ದಾರೆ.

ಅಮೆರಿಕದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಬಳಿಕ ಎಚ್ಚೆತ್ತ ಶಾಂತಿ ಮತ್ತು ಸಾಮರಸ್ಯ ಸಮಿತಿ, ಅಂಖಿದಾಸ್ ಸೇರಿದಂತೆ ಫೇಸ್‌ಬುಕ್ ಅಧಿಕಾರಿಗಳನ್ನು ಕರೆಸಿ ಭಾರತದಲ್ಲಿ ದ್ವೇಷದ ವಿಷಯಗಳನ್ನು ಹರಡುವ ಬಗ್ಗೆ ವಿಚಾರಣೆ ನಡೆಸುವುದಾಗಿ ಘೋಷಿಸಿತ್ತು.

ದೆಹಲಿ ಹಿಂಸಾಚಾರದ ಬಗ್ಗೆ ಪರಿಶೀಲಿಸಲು ಸಮಿತಿಯ ಇಬ್ಬರು ಸದಸ್ಯರು  ಆಗಸ್ಟ್ 25 ರಂದು ಪರ್ತಕರ್ತರ ಜೊತೆಗೆ ಮಾತನಾಡಿದ್ದಾರೆ.  ಅವರಲ್ಲಿ “ದಿ ರಿಯಲ್ ಫೇಸ್ ಆಫ್ ಫೇಸ್‌ಬುಕ್‌ ಇನ್ ಇಂಡಿಯಾ” ದ ಸಹ ಲೇಖಕ ಪರಂಜೋಯ್ ಠಾಕುರ್ತಾ ಕಳೆದ 6-7 ವರ್ಷಗಳಲ್ಲಿ ನಡೆದ ಹತ್ಯೆಗಳ ಹಿಂದೆ ಫೇಸ್‌ಬುಕ್ ಮತ್ತು ವಾಟ್ಸಾಪ್ ಮೇಸೆಜ್‌ಗಳ ಕೈವಾಡವಿದೆ ಎಂದಿದ್ದಾರೆ. ಆದರೆ ಮುಖಪುಟದಲ್ಲಿ ಪೋಸ್ಟ್ ಹಾಕಿದವರ ಮೂಲವನ್ನು ಬಿಟ್ಟುಕೊಡುವುದಿಲ್ಲ ಎಂದು ಸಮಿತಿ ಬಳಿ ಹೇಳಿದ್ದಾರೆ.

ಇನ್ನು ಫೇಸ್‌ಬುಕ್ ಮಾನ್ಯತೆ ಹೊಂದಿಲ್ಲದ ನ್ಯೂಸ್ ಚಾನೆಲ್‌ಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಇವುಗಳ ಕೆಲಸ ಬರೀ ದ್ವೇಷ ಬಿತ್ತುವ, ಸುಳ್ಳನ್ನು ಆಳವಾಗಿಸಿ ಬೇರೂರಿಸುವುದೇ ಆಗಿದೆ. ಸಾಮರಸ್ಯ ಮತ್ತು ಭ್ರಾತೃತ್ವ ಬೆಳೆಸುವ ವಿಚಾರಗಳನ್ನು ತೆಗೆದುಹಾಕಿ ಕೋಮುಗಲಭೆಗೆ ಕಾರಣವಾಗುವಂತಹದನ್ನು ಪ್ರಚಾರ ಮಾಡುತ್ತದೆ ಎಂದು ಶಾಸಕಾಂಗ ಸಮಿತಿ ತಿಳಿಸಿದೆ.

ಈ ಎಲ್ಲಾ ಅಂಶಗಳನ್ನು ಇಟ್ಟುಕೊಂಡು ಪತ್ರಿಕಾಗೋಷ್ಟಿ ನಡೆಸಿದ ಸಮಿತಿಯ ರಾಘವ್ ಚಾಡ್ಡಾ ಫೇಸ್‌ಬುಕ್‌ಅನ್ನು ಸಹ ಆರೋಪಿಯಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.  ಫೇಸ್‌ಬುಕ್ ಇಂತಹ ಸಂದೇಶಗಳ ವಿರುದ್ಧದ ದೂರುಗಳನ್ನು ಸ್ವೀಕರಿಸುವ ಬದಲು ದೋಷಾರೋಪಣೆ ಮಾಡುವ ವಸ್ತು ಎಂದು ತಿಳಿಸುತ್ತದೆ ಎಂದು ಶಾಸಕ ರಾಘವ್ ಚಾಡ್ಡಾ ತಿಳಿಸಿದ್ದಾರೆ.


ಇದನ್ನೂ ಓದಿ:BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...