Homeಮುಖಪುಟದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ದೆಹಲಿ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿ: ಶಾಸಕಾಂಗ ಸಮಿತಿ

ದೆಹಲಿ ಅಲ್ಪಸಂಖ್ಯಾತರ ಆಯೋಗ ರಚಿಸಿದ್ದ ಸತ್ಯ ಶೋಧನಾ ಸಮಿತಿ ವರದಿ ಸಲ್ಲಿಸಿದ್ದು, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರ ಭಾಷಣವನ್ನು ಮುಸ್ಲಿಂ ವಿರೋಧಿ, ಹಿಂಸಾಚಾರಕ್ಕೆ ಪ್ರಚೋದನಕಾರಿ ಎಂದು ಗುರುತಿಸಿದೆ.

- Advertisement -
- Advertisement -

ಫೆಬ್ರವರಿಯಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರದಲ್ಲಿ ಫೇಸ್‌ಬುಕ್ ಸಹ ಆರೋಪಿಯಾಗಬೇಕು ಎಂದು ಶಾಂತಿ ಮತ್ತು ಸಾಮರಸ್ಯದ ಸಭೆಯಲ್ಲಿ ದೆಹಲಿ ಶಾಸಕಾಂಗ ಸಮಿತಿಯ ವರದಿ ತಿಳಿಸಿದೆ.

ದೆಹಲಿ ಗಲಭೆಗಳ ಕುರಿತು ಸತ್ಯಾಸತ್ಯತೆಗಳನ್ನು ಕಂಡುಹಿಡಿಯಲು ದೆಹಲಿ ಅಲ್ಪಸಂಖ್ಯಾತರ ಆಯೋಗ ರಚಿಸಿದ್ದ ಸತ್ಯ ಶೋಧನಾ ಸಮಿತಿ ವರದಿ ಸಲ್ಲಿಸಿದ್ದು, ಬಿಜೆಪಿ ನಾಯಕ ಕಪಿಲ್ ಮಿಶ್ರಾ ಅವರು ಭಾಷಣವನ್ನು ಮುಸ್ಲಿಂ ವಿರೋಧಿ, ಹಿಂಸಾಚಾರಕ್ಕೆ ಪ್ರಚೋದನಕಾರಿ ಎಂದು ಗುರುತಿಸಿದೆ.

ಫೆಬ್ರವರಿ 24-25ರಂದು ಅಮೆರಿಕಾ ಅಧ್ಯಕ್ಷರ ಭಾರತ ಭೇಟಿ ಸಂದರ್ಭದಲ್ಲಿ “ಮೂರು ದಿನಗಳೊಳಗೆ ಪೊಲೀಸರು ಪ್ರತಿಭಟನಾಕಾರರನ್ನು ತೆಗೆದುಹಾಕಬೇಕೆಂದು ಒತ್ತಾಯಿಸುತ್ತೇನೆ. ಯುಎಸ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ದೆಹಲಿಯಲ್ಲಿ ಇರುವವರೆಗೂ ನಾವು ಕಾಯುತ್ತೇವೆ. ಆದರೆ ಅದರ ನಂತರ, ರಸ್ತೆಗಳನ್ನು ತೆರವುಗೊಳಿಸದಿದ್ದರೆ ನಾವು ಪೊಲೀಸರನ್ನು ಕೇಳುವುದಿಲ್ಲ, ಬೀದಿಗಿಳಿಯಬೇಕಾಗುತ್ತದೆ” ಎಂದು ಪೊಲೀಸ್‌ ಅಧಿಕಾರಿಗಳ ಎದುರಿಗೆ ಕಪಿಲ್ ಮಿಶ್ರಾ ಆಡಿದ್ದ ಮಾತುಗಳು ವೈರಲ್‌ ಆಗಿದ್ದವು.

ಇದನ್ನೂ ಓದಿ; ದೆಹಲಿ ಹಿಂಸಾಚಾರಕ್ಕೆ ಪ್ರಚೋದನೆ: BJPಯ ಕಪಿಲ್‌ ಮಿಶ್ರಾ ವಿರುದ್ಧ ದೂರು ದಾಖಲು

ವಾಲ್ ಸ್ಟ್ರೀಟ್ ಜರ್ನಲ್ ವರದಿಯಂತೆ ಬಿಜೆಪಿ ಸರ್ಕಾರ ಆಡಳಿತಕ್ಕೆ ಬರಲು ಫೇಸ್‌ಬುಕ್‌ನಲ್ಲಿ ಕಾರ್ಯನಿರ್ವಹಿಸಿದ್ದ ಅಂಖಿದಾಸ್ ದ್ವೇಷ ಭಾಷಣಗಳನ್ನು ಮಾಡುವ ಕನಿಷ್ಟ ಮೂವರು ಬಿಜೆಪಿ ನಾಯಕರನ್ನು ರಕ್ಷಿಸಿದ್ದು, ಅವರಲ್ಲಿ ಕಪಿಲ್ ಮಿಶ್ರಾ ಕೂಡ ಒಬ್ಬರಾಗಿದ್ದಾರೆ.

ಹಿಂಸಾಚಾರ ಹಿನ್ನೆಲೆಯಲ್ಲಿ ದೆಹಲಿ ಸರ್ಕಾರ ಮಾರ್ಚ್ ತಿಂಗಳಲ್ಲಿ ಶಾಂತಿ ಮತ್ತು ಸಾಮರಸ್ಯ ಸಮಿತಿ ರಚಿಸಿತ್ತು. ಈ ಸಮಿತಿಯು ಸೌರಭ್ ಭಾರದ್ವಾಜ್, ಅತಿಶಿ, ರಾಘವ್ ಚಾಡ್ಡಾ, ಅಬ್ದುಲ್ ರೆಹಮಾನ್, ಅಜಯ್ ಕುಮಾರ್ ಮಹಾವರ್, ಬಿ.ಎಸ್.ಜೋನ್, ದಿಲೀಪ್ ಪಾಂಡೆ, ಜಮೈಲ್ ಸಿಂಗ್ ಮತ್ತು ಕುಲದೀಪ್ ಕುಮಾರ್‌ರನ್ನು ಒಳಗೊಂಡಿತ್ತು. ಇದರಲ್ಲಿ ಬಹಳಷ್ಟು ಜನ ಆಪ್‌ ಶಾಸಕರಾಗಿದ್ದಾರೆ.

ಅಮೆರಿಕದ ವಾಲ್ ಸ್ಟ್ರೀಟ್ ಜರ್ನಲ್ ವರದಿ ಬಳಿಕ ಎಚ್ಚೆತ್ತ ಶಾಂತಿ ಮತ್ತು ಸಾಮರಸ್ಯ ಸಮಿತಿ, ಅಂಖಿದಾಸ್ ಸೇರಿದಂತೆ ಫೇಸ್‌ಬುಕ್ ಅಧಿಕಾರಿಗಳನ್ನು ಕರೆಸಿ ಭಾರತದಲ್ಲಿ ದ್ವೇಷದ ವಿಷಯಗಳನ್ನು ಹರಡುವ ಬಗ್ಗೆ ವಿಚಾರಣೆ ನಡೆಸುವುದಾಗಿ ಘೋಷಿಸಿತ್ತು.

ದೆಹಲಿ ಹಿಂಸಾಚಾರದ ಬಗ್ಗೆ ಪರಿಶೀಲಿಸಲು ಸಮಿತಿಯ ಇಬ್ಬರು ಸದಸ್ಯರು  ಆಗಸ್ಟ್ 25 ರಂದು ಪರ್ತಕರ್ತರ ಜೊತೆಗೆ ಮಾತನಾಡಿದ್ದಾರೆ.  ಅವರಲ್ಲಿ “ದಿ ರಿಯಲ್ ಫೇಸ್ ಆಫ್ ಫೇಸ್‌ಬುಕ್‌ ಇನ್ ಇಂಡಿಯಾ” ದ ಸಹ ಲೇಖಕ ಪರಂಜೋಯ್ ಠಾಕುರ್ತಾ ಕಳೆದ 6-7 ವರ್ಷಗಳಲ್ಲಿ ನಡೆದ ಹತ್ಯೆಗಳ ಹಿಂದೆ ಫೇಸ್‌ಬುಕ್ ಮತ್ತು ವಾಟ್ಸಾಪ್ ಮೇಸೆಜ್‌ಗಳ ಕೈವಾಡವಿದೆ ಎಂದಿದ್ದಾರೆ. ಆದರೆ ಮುಖಪುಟದಲ್ಲಿ ಪೋಸ್ಟ್ ಹಾಕಿದವರ ಮೂಲವನ್ನು ಬಿಟ್ಟುಕೊಡುವುದಿಲ್ಲ ಎಂದು ಸಮಿತಿ ಬಳಿ ಹೇಳಿದ್ದಾರೆ.

ಇನ್ನು ಫೇಸ್‌ಬುಕ್ ಮಾನ್ಯತೆ ಹೊಂದಿಲ್ಲದ ನ್ಯೂಸ್ ಚಾನೆಲ್‌ಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದೆ. ಇವುಗಳ ಕೆಲಸ ಬರೀ ದ್ವೇಷ ಬಿತ್ತುವ, ಸುಳ್ಳನ್ನು ಆಳವಾಗಿಸಿ ಬೇರೂರಿಸುವುದೇ ಆಗಿದೆ. ಸಾಮರಸ್ಯ ಮತ್ತು ಭ್ರಾತೃತ್ವ ಬೆಳೆಸುವ ವಿಚಾರಗಳನ್ನು ತೆಗೆದುಹಾಕಿ ಕೋಮುಗಲಭೆಗೆ ಕಾರಣವಾಗುವಂತಹದನ್ನು ಪ್ರಚಾರ ಮಾಡುತ್ತದೆ ಎಂದು ಶಾಸಕಾಂಗ ಸಮಿತಿ ತಿಳಿಸಿದೆ.

ಈ ಎಲ್ಲಾ ಅಂಶಗಳನ್ನು ಇಟ್ಟುಕೊಂಡು ಪತ್ರಿಕಾಗೋಷ್ಟಿ ನಡೆಸಿದ ಸಮಿತಿಯ ರಾಘವ್ ಚಾಡ್ಡಾ ಫೇಸ್‌ಬುಕ್‌ಅನ್ನು ಸಹ ಆರೋಪಿಯಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.  ಫೇಸ್‌ಬುಕ್ ಇಂತಹ ಸಂದೇಶಗಳ ವಿರುದ್ಧದ ದೂರುಗಳನ್ನು ಸ್ವೀಕರಿಸುವ ಬದಲು ದೋಷಾರೋಪಣೆ ಮಾಡುವ ವಸ್ತು ಎಂದು ತಿಳಿಸುತ್ತದೆ ಎಂದು ಶಾಸಕ ರಾಘವ್ ಚಾಡ್ಡಾ ತಿಳಿಸಿದ್ದಾರೆ.


ಇದನ್ನೂ ಓದಿ:BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...