Homeಮುಖಪುಟತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ನವದೆಹಲಿಯ ಹೊರವಲಯದಲ್ಲಿ ಚರ್ಚ್ ಒಂದರ ಮೇಲೆ ಬಜರಂಗದಳ ದಾಳಿ ನಡೆಸಿದ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿತ್ತು. ಎರಡೂವರೆ ಲಕ್ಷ ವೀಕ್ಷಣೆಯಾಗುವವರೆಗೂ ಫೇಸ್‌ಬುಕ್‌ ಅದನ್ನು ತೆಗೆದಿರಲಿಲ್ಲ!

- Advertisement -
- Advertisement -

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌! 

ವಾಲ್ ಸ್ಟ್ರೀಟ್ ಜರ್ನಲ್‌‌ನ ಹೊಸ ವರದಿಯು, ಜೂನ್‌ ತಿಂಗಳಲ್ಲಿ ನವದೆಹಲಿಯ ಹೊರ ವಲಯದಲ್ಲಿರುವ ಚರ್ಚ್‌ ಮೇಲೆ ನಡೆದ ದಾಳಿಯ ವಿಡಿಯೋವನ್ನು ಉಲ್ಲೇಖಿಸಿದೆ. ಈ ದಾಳಿಯ ಹೊಣೆಯನ್ನು ಬಜರಂಗದಳ ವಹಿಸಿಕೊಂಡಿತ್ತು. ಆದರೆ ಆ ವಿಡಿಯೋ 2.5 ಲಕ್ಷ ವೀಕ್ಷಣೆ ಆಗುವವರೆಗೂ ಅನುಮತಿ ನೀಡಿತ್ತು. ಈ ವಿಡಿಯೋವನ್ನು ತೆಗೆದು ಹಾಕಬೇಕು ಎಂದು ಫೇಸ್‌‌ಬುಕ್ ಭದ್ರತಾ ತಂಡ ಹೇಳಿದ್ದರೂ, “ನಿಷೇಧಿಸುವುದರಿಂದ ಫೇಸ್‌ಬುಕ್ ಸಿಬ್ಬಂದಿ ಅಥವಾ ಸೌಲಭ್ಯಗಳ ವಿರುದ್ಧ ದೈಹಿಕ ದಾಳಿ ನಡೆಯಬಹುದು” ಎಂದು ಆಂತರಿಕ ಫೇಸ್‌ಬುಕ್ ಸಿಬ್ಬಂದಿಯೊಬ್ಬರು ತಿಳಿಸಿದ್ದರು ಎಂದು ಜರ್ನಲ್ ವರದಿ ಮಾಡಿದೆ.

ಜರ್ನಲ್ ವರದಿಗೆ ಫೇಸ್‌ಬುಕ್ ವಕ್ತಾರ ಆಂಡಿ ಸ್ಟೋನ್ ಪ್ರತಿಕ್ರಿಯಿಸಿದ್ದು, “ರಾಜಕೀಯ ಸ್ಥಾನಮಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ನಾವು ಜಾಗತಿಕವಾಗಿ ಅಪಾಯಕಾರಿ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ದ ನೀತಿಯನ್ನು ಜಾರಿಗೊಳಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರುವ ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....