Homeಮುಖಪುಟತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ತನ್ನ ವ್ಯವಹಾರದ ರಕ್ಷಣೆಗೆ ಭಜರಂಗದಳದ ಪರ ನಿಂತ ಫೇಸ್‌ಬುಕ್‌: ವಾಲ್‌ಸ್ಟ್ರೀಟ್ ಜರ್ನಲ್ ವರದಿ

ನವದೆಹಲಿಯ ಹೊರವಲಯದಲ್ಲಿ ಚರ್ಚ್ ಒಂದರ ಮೇಲೆ ಬಜರಂಗದಳ ದಾಳಿ ನಡೆಸಿದ ವಿಡಿಯೋವನ್ನು ಫೇಸ್‌ಬುಕ್‌ನಲ್ಲಿ ಪೋಸ್ಟ್ ಮಾಡಿತ್ತು. ಎರಡೂವರೆ ಲಕ್ಷ ವೀಕ್ಷಣೆಯಾಗುವವರೆಗೂ ಫೇಸ್‌ಬುಕ್‌ ಅದನ್ನು ತೆಗೆದಿರಲಿಲ್ಲ!

- Advertisement -
- Advertisement -

ಬಜರಂಗದಳವು ಭಾರತದಾದ್ಯಂತ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರವನ್ನು ಬೆಂಬಲಿಸುವ ಅಪಾಯಕಾರಿ ಸಂಘಟನೆಯೆಂದು ಫೇಸ್‌ಬುಕ್‌ನ ಭದ್ರತಾ ತಂಡವು ಗುರುತಿಸಿದ್ದರೂ, ರಾಜಕೀಯ ಮತ್ತು ವ್ಯವಹಾರದ ರಕ್ಷಣೆಯ ಕಾರಣಕ್ಕಾಗಿ ಸಾಮಾಜಿಕ ಜಾಲತಾಣದಲ್ಲಿ ಅದಕ್ಕೆ ಮುಂದುವರೆಯಲು ಅವಕಾಶ ನೀಡಲಾಗಿದೆ ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ಬಜರಂಗದಳವು ಆಡಳಿತಾರೂಢ ಬಿಜೆಪಿಯೊಂದಿಗೆ ಸಂಬಂಧ ಹೊಂದಿರುವ ಬಗ್ಗೆ ಫೇಸ್‌ಬುಕ್ ಅರಿತುಕೊಂಡು, “ಬಜರಂಗದಳದ ವಿರುದ್ದ ಕ್ರಮ ಕೈಗೊಂಡರೆ ಕಂಪನಿ ವ್ಯವಹಾರದ ಭವಿಷ್ಯ ಮತ್ತು ಭಾರತದಲ್ಲಿನ ತನ್ನ ಸಿಬ್ಬಂದಿಗೆ ಅಪಾಯವಾಗಬಹುದು” ಎಂದು ಫೇಸ್‌ಬುಕ್ ಹೆದರಿತ್ತು‌‌ ಎಂದು ಪತ್ರಿಕೆ ಉಲ್ಲೇಖಿಸಿದೆ.

ಇದನ್ನೂ ಓದಿ: ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌! 

ವಾಲ್ ಸ್ಟ್ರೀಟ್ ಜರ್ನಲ್‌‌ನ ಹೊಸ ವರದಿಯು, ಜೂನ್‌ ತಿಂಗಳಲ್ಲಿ ನವದೆಹಲಿಯ ಹೊರ ವಲಯದಲ್ಲಿರುವ ಚರ್ಚ್‌ ಮೇಲೆ ನಡೆದ ದಾಳಿಯ ವಿಡಿಯೋವನ್ನು ಉಲ್ಲೇಖಿಸಿದೆ. ಈ ದಾಳಿಯ ಹೊಣೆಯನ್ನು ಬಜರಂಗದಳ ವಹಿಸಿಕೊಂಡಿತ್ತು. ಆದರೆ ಆ ವಿಡಿಯೋ 2.5 ಲಕ್ಷ ವೀಕ್ಷಣೆ ಆಗುವವರೆಗೂ ಅನುಮತಿ ನೀಡಿತ್ತು. ಈ ವಿಡಿಯೋವನ್ನು ತೆಗೆದು ಹಾಕಬೇಕು ಎಂದು ಫೇಸ್‌‌ಬುಕ್ ಭದ್ರತಾ ತಂಡ ಹೇಳಿದ್ದರೂ, “ನಿಷೇಧಿಸುವುದರಿಂದ ಫೇಸ್‌ಬುಕ್ ಸಿಬ್ಬಂದಿ ಅಥವಾ ಸೌಲಭ್ಯಗಳ ವಿರುದ್ಧ ದೈಹಿಕ ದಾಳಿ ನಡೆಯಬಹುದು” ಎಂದು ಆಂತರಿಕ ಫೇಸ್‌ಬುಕ್ ಸಿಬ್ಬಂದಿಯೊಬ್ಬರು ತಿಳಿಸಿದ್ದರು ಎಂದು ಜರ್ನಲ್ ವರದಿ ಮಾಡಿದೆ.

ಜರ್ನಲ್ ವರದಿಗೆ ಫೇಸ್‌ಬುಕ್ ವಕ್ತಾರ ಆಂಡಿ ಸ್ಟೋನ್ ಪ್ರತಿಕ್ರಿಯಿಸಿದ್ದು, “ರಾಜಕೀಯ ಸ್ಥಾನಮಾನ ಅಥವಾ ಪಕ್ಷದ ಸಂಬಂಧವನ್ನು ಪರಿಗಣಿಸದೆ ನಾವು ಜಾಗತಿಕವಾಗಿ ಅಪಾಯಕಾರಿ ವ್ಯಕ್ತಿಗಳು ಮತ್ತು ಸಂಸ್ಥೆಗಳ ವಿರುದ್ದ ನೀತಿಯನ್ನು ಜಾರಿಗೊಳಿಸುತ್ತೇವೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಫೇಸ್‌ಬುಕ್ ದ್ವೇಷದಿಂದ ಲಾಭ ಗಳಿಸುತ್ತಿದೆ: ಮಾಜಿ ಫೇಸ್‌ಬುಕ್ ಉದ್ಯೋಗಿ ಮಾರ್ಕ್ ಲಕ್ಕಿ

ಕಳೆದ ಆಗಸ್ಟ್‌‌ನಲ್ಲಿ ತನ್ನ ನೀತಿಗಳಲ್ಲಿ ಫೇಸ್‌ಬುಕ್ ಪಕ್ಷಪಾತ ಮಾಡುತ್ತಿದೆ ಎಂದು ವಾಲ್‌ಸ್ಟ್ರೀಟ್ ಜರ್ನಲ್ ವರದಿ ಮಾಡಿತ್ತು. ವರದಿಯಲ್ಲಿ, “ಆಡಳಿತರೂಡ ಬಿಜೆಪಿಯ ಬಗ್ಗೆ ತನ್ನ ವ್ಯಾಪಾರ ಹಿತಾಸಕ್ತಿಗಳಿಗಾಗಿ ಒಲವು ತೋರಿಸಿದೆ ಹಾಗೂ ಫೇಸ್‌ಬುಕ್‌ನ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಮುಸ್ಲಿಂ ವಿರೋಧಿ ಟೀಕೆಗಳನ್ನು ಮಾಡಿದ್ದ ಬಿಜೆಪಿ ನಾಯಕನ ಪರವಾಗಿ ಲಾಬಿ ಮಾಡಿದ್ದಾರೆ” ಎಂದು ಹೇಳಲಾಗಿತ್ತು.

ಈ ವರದಿ ಪ್ರಕಟವಾದ ಕೆಲವೇ ದಿನಗಳಲ್ಲಿ ರಾಜಕಾರಣಿಯೊಬ್ಬರ ಖಾತೆಯನ್ನು ಅಮಾನತ್ತು ಮಾಡಿದ್ದ ಫೇಸ್‌ಬುಕ್, ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿತ್ತಾದರೂ ದ್ವೇಷ ಭಾಷಣಗಳನ್ನು ನಿಗ್ರಹಿಸಲು ಇನ್ನೂ ಉತ್ತಮವಾಗಿ ಕ್ರಮಕೈಗೊಳ್ಳಬೇಕಾಗಿದೆ ಎಂದು ಒಪ್ಪಿಕೊಂಡಿತ್ತು. ಅಲ್ಲದೆ ಅದರ ಕಾರ್ಯನಿರ್ವಾಹಕಿಯಾಗಿದ್ದ ಆಂಖೀ ದಾಸ್ ಕೂಡಾ ಫೇಸ್‌ಬುಕ್ ತೊರೆದಿದ್ದರು.

ಭಾರತದಲ್ಲಿ ಐದು ಕಚೇರಿಗಳನ್ನು ನಡೆಸುತ್ತಿರುವ ಫೇಸ್‌ಬುಕ್, ಅಕ್ಟೋಬರ್ ತಿಂಗಳೊಂದರಲ್ಲೇ ಶತಕೋಟಿ ಡಾಲರ್‌ಗಳಷ್ಟು ದುಡ್ಡನ್ನು ಹೂಡಿಕೆ ಮಾಡಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಫೇಸ್‌ಬುಕ್ ಭಾರತವನ್ನು ಬಳಕೆದಾರರ ವಿಷಯದಲ್ಲಿ ತನ್ನ ಅತಿದೊಡ್ಡ ಮಾರುಕಟ್ಟೆಯೆಂದು ಪರಿಗಣಿಸಿದೆ.

ಇದನ್ನೂ ಓದಿ: ಬಿಜೆಪಿ-ಫೇಸ್‌ಬುಕ್ ಸಖ್ಯ: ಹುದ್ದೆ ತ್ಯಜಿಸಿದ ಫೇಸ್‌ಬುಕ್ ಇಂಡಿಯಾದ ಮುಖ್ಯಸ್ಥೆ ಅಂಖಿದಾಸ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...