Homeಮುಖಪುಟಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಿರಂತರವಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ದ ಮಾತನಾಡುತ್ತಾ ಅವರ ಕಾರ್ಯತಂತ್ರಗಳ ವಿರುದ್ದ ಕಾನೂನಾತ್ಮಕವಾಗಿ ಹೋರಾಡುತ್ತಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ಫೇಸ್‌‌ಬುಕ್ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಸಿದೆ.

ಸಂವಿಧಾನದ ಎಲ್ಲಾ ಅಂಗಗಳು ಆರೆಸ್ಸೆಸ್ಸ್‌ ವಶಪಡಿಸಿಕೊಂಡಿರುವ ಸಮಯದಲ್ಲಿ ಅವರ ವಿರುದ್ದವಾಗಿ ಮಾತನಾಡುವ ನನ್ನ ಪೇಜನ್ನು ಫೇಸ್‌‌ಬುಕ್ ಡಿಲಿಟ್ ಮಾಡುತ್ತಿದೆ ಎಂದು ನಿನ್ನೆ ವಿಡಿಯೋ ಮಾಡಿ ಆರೋಪಿಸಿದ್ದ ಅವರು, ಇಂದು ಮತ್ತೊಂದು ವಿಡಿಯೋ ತಮ್ಮ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದು ಅದರಲ್ಲಿ ತನ್ನ ಐಟಿ ಸ್ನೇಹಿತರು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

ತಮ್ಮ ಫೇಸ್‌‌ಬುಕ್‌ ಪೇಜ್‌‌ನ ವಿಡಿಯೋದಲ್ಲಿ ನಿನ್ನೆ ಮಾಹಿತಿ ನೀಡಿರುವ ’ಭಾರತೀಯ ಬೌದ್ದ ಸಮಾಜ’ದ ಅಧ್ಯಕ್ಷರೂ ಆಗಿರುವ ರಾಜರತ್ನ ಅಂಬೇಡ್ಕರ್‌, “ಇದು ನನ್ನ ಕೊನೆಯ ವಿಡಿಯೋವಾಗಿದೆ, ಯಾಕೆಂದರೆ ನೆವೆಂಬರ್‌ 12 ರಂದು ನನ್ನ ಪೇಜನ್ನು ಡಿಲೀಟ್ ಮಾಡುವುದಾಗಿ ಪೇಸ್‌‌ಬುಕ್ ಈ ಮೈಲ್ ಮಾಡಿದೆ. ಪೇಜ್‌‌ನಲ್ಲಿ ಯಾವುದಾದರು ಸಾಮುದಾಯಿಕ ನಿಯಮದ ಉಲ್ಲಂಘನೆ ಮೀರಿರುವ ವಿಷಯವನ್ನು ಹಾಕಿದ್ದರೆ, ಅವರು ಅದರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದರೆ ಇಲ್ಲಿ ನನ್ನ ಇಡಿ ಪೇಜನ್ನೆ ಡಿಲಿಟ್ ಮಾಡುತ್ತಿದ್ದಾರೆ. ನನ್ನ ಪೇಜ್‌‌ನಲ್ಲಿ ಒಂದು ವಿಡಿಯೋ ಹಾಕಿದರೆ 8 ನಿಮಿಷಕ್ಕೆ ಸುಮಾರು 56 ಲಕ್ಷ ಜನರನ್ನು ತಲುಪುತ್ತದೆ. ಇದು ಒಂದೇ ದಿನದಲ್ಲಿ ಹೆಚ್ಚಿದ್ದಲ್ಲ ಮೂರು ನಾಲ್ಕು ವರ್ಷದಿಂದ ಈ ಬೆಳವಣಿಗೆ ಆಗಿದೆ, ಆದರೆ ಪೇಸ್‌‌ಬುಕ್ ಈಗ ಪೇಜ್ ಡಿಲೀಟ್ ಮಾಡುವುದಾಗಿ ನೋಟಿಸ್ ನೀಡಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
“ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು. ನನ್ನ ಪೇಜ್‌ಅನ್ನು ಭಾರತ ಮಾತ್ರವಲ್ಲದೆ ವಿಶ್ವದ 18 ದೇಶಗಳಲ್ಲಿ ವೀಕ್ಷಿಸುತ್ತಿದ್ದರು, ಈಗ ಇದನ್ನು ಅನಿರೀಕ್ಷಿತವಾಗಿ ಡಿಲೀಟ್ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.

ಇದೀಗ ಮತ್ತೆ ಇನ್ನೊಂದು ವಿಡಿಯೋ ಹಾಕಿರುವ ಅವರು ಹಲವಾರು ಐಟಿ ಕ್ಷೇತ್ರದ ತಜ್ಞರು ನಿನ್ನೆ ರಾತ್ರಿ ಪೂರ್ತಿ ಕುಳಿತು ಕೊಂಡು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದು, ಪ್ರಸ್ತುತ ನನ್ನ ಫೇಸ್‌‌ಬುಕ್ ಪೇಜ್ ಉಳಿದೆ ಎಂದಿರುವ ಅವರು, “ಈ ಪುಟವನ್ನು ಉಳಿಸಿದ್ದಕ್ಕಾಗಿ ಎಲ್ಲಾ ಐಟಿ ವೃತ್ತಿಪರರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇದನ್ನೂಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ವಡಾಲಾದ ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೂ ಆಗಿರುವ ರಾಜರತ್ನ ಅಂಬೇಡ್ಕರ್, ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಕಡು ಟೀಕಾಕಾರರಾಗಿರುವ ರಾಜರತ್ನ, ಆರೆಸ್ಸೆಸ್ ಒಂದು ಭಯೋತ್ಪಾದನಾ ಸಂಘಟನೆ ಹಾಗೂ ಅದನ್ನು ಬ್ಯಾನ್ ಮಾಡಬೇಕಾಗಿದೆ, ಅದರ ವಿಚಾರದಾರೆಯನ್ನು ಧ್ವಂಸಗೊಳಿಸಿ ಎಂದು ಈ ಹಿಂದೆ ಅವರು ಕರೆ ನೀಡಿದ್ದರು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...