Homeಮುಖಪುಟಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಿರಂತರವಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ದ ಮಾತನಾಡುತ್ತಾ ಅವರ ಕಾರ್ಯತಂತ್ರಗಳ ವಿರುದ್ದ ಕಾನೂನಾತ್ಮಕವಾಗಿ ಹೋರಾಡುತ್ತಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ಫೇಸ್‌‌ಬುಕ್ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಸಿದೆ.

ಸಂವಿಧಾನದ ಎಲ್ಲಾ ಅಂಗಗಳು ಆರೆಸ್ಸೆಸ್ಸ್‌ ವಶಪಡಿಸಿಕೊಂಡಿರುವ ಸಮಯದಲ್ಲಿ ಅವರ ವಿರುದ್ದವಾಗಿ ಮಾತನಾಡುವ ನನ್ನ ಪೇಜನ್ನು ಫೇಸ್‌‌ಬುಕ್ ಡಿಲಿಟ್ ಮಾಡುತ್ತಿದೆ ಎಂದು ನಿನ್ನೆ ವಿಡಿಯೋ ಮಾಡಿ ಆರೋಪಿಸಿದ್ದ ಅವರು, ಇಂದು ಮತ್ತೊಂದು ವಿಡಿಯೋ ತಮ್ಮ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದು ಅದರಲ್ಲಿ ತನ್ನ ಐಟಿ ಸ್ನೇಹಿತರು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

ತಮ್ಮ ಫೇಸ್‌‌ಬುಕ್‌ ಪೇಜ್‌‌ನ ವಿಡಿಯೋದಲ್ಲಿ ನಿನ್ನೆ ಮಾಹಿತಿ ನೀಡಿರುವ ’ಭಾರತೀಯ ಬೌದ್ದ ಸಮಾಜ’ದ ಅಧ್ಯಕ್ಷರೂ ಆಗಿರುವ ರಾಜರತ್ನ ಅಂಬೇಡ್ಕರ್‌, “ಇದು ನನ್ನ ಕೊನೆಯ ವಿಡಿಯೋವಾಗಿದೆ, ಯಾಕೆಂದರೆ ನೆವೆಂಬರ್‌ 12 ರಂದು ನನ್ನ ಪೇಜನ್ನು ಡಿಲೀಟ್ ಮಾಡುವುದಾಗಿ ಪೇಸ್‌‌ಬುಕ್ ಈ ಮೈಲ್ ಮಾಡಿದೆ. ಪೇಜ್‌‌ನಲ್ಲಿ ಯಾವುದಾದರು ಸಾಮುದಾಯಿಕ ನಿಯಮದ ಉಲ್ಲಂಘನೆ ಮೀರಿರುವ ವಿಷಯವನ್ನು ಹಾಕಿದ್ದರೆ, ಅವರು ಅದರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದರೆ ಇಲ್ಲಿ ನನ್ನ ಇಡಿ ಪೇಜನ್ನೆ ಡಿಲಿಟ್ ಮಾಡುತ್ತಿದ್ದಾರೆ. ನನ್ನ ಪೇಜ್‌‌ನಲ್ಲಿ ಒಂದು ವಿಡಿಯೋ ಹಾಕಿದರೆ 8 ನಿಮಿಷಕ್ಕೆ ಸುಮಾರು 56 ಲಕ್ಷ ಜನರನ್ನು ತಲುಪುತ್ತದೆ. ಇದು ಒಂದೇ ದಿನದಲ್ಲಿ ಹೆಚ್ಚಿದ್ದಲ್ಲ ಮೂರು ನಾಲ್ಕು ವರ್ಷದಿಂದ ಈ ಬೆಳವಣಿಗೆ ಆಗಿದೆ, ಆದರೆ ಪೇಸ್‌‌ಬುಕ್ ಈಗ ಪೇಜ್ ಡಿಲೀಟ್ ಮಾಡುವುದಾಗಿ ನೋಟಿಸ್ ನೀಡಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
“ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು. ನನ್ನ ಪೇಜ್‌ಅನ್ನು ಭಾರತ ಮಾತ್ರವಲ್ಲದೆ ವಿಶ್ವದ 18 ದೇಶಗಳಲ್ಲಿ ವೀಕ್ಷಿಸುತ್ತಿದ್ದರು, ಈಗ ಇದನ್ನು ಅನಿರೀಕ್ಷಿತವಾಗಿ ಡಿಲೀಟ್ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.

ಇದೀಗ ಮತ್ತೆ ಇನ್ನೊಂದು ವಿಡಿಯೋ ಹಾಕಿರುವ ಅವರು ಹಲವಾರು ಐಟಿ ಕ್ಷೇತ್ರದ ತಜ್ಞರು ನಿನ್ನೆ ರಾತ್ರಿ ಪೂರ್ತಿ ಕುಳಿತು ಕೊಂಡು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದು, ಪ್ರಸ್ತುತ ನನ್ನ ಫೇಸ್‌‌ಬುಕ್ ಪೇಜ್ ಉಳಿದೆ ಎಂದಿರುವ ಅವರು, “ಈ ಪುಟವನ್ನು ಉಳಿಸಿದ್ದಕ್ಕಾಗಿ ಎಲ್ಲಾ ಐಟಿ ವೃತ್ತಿಪರರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇದನ್ನೂಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ವಡಾಲಾದ ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೂ ಆಗಿರುವ ರಾಜರತ್ನ ಅಂಬೇಡ್ಕರ್, ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಕಡು ಟೀಕಾಕಾರರಾಗಿರುವ ರಾಜರತ್ನ, ಆರೆಸ್ಸೆಸ್ ಒಂದು ಭಯೋತ್ಪಾದನಾ ಸಂಘಟನೆ ಹಾಗೂ ಅದನ್ನು ಬ್ಯಾನ್ ಮಾಡಬೇಕಾಗಿದೆ, ಅದರ ವಿಚಾರದಾರೆಯನ್ನು ಧ್ವಂಸಗೊಳಿಸಿ ಎಂದು ಈ ಹಿಂದೆ ಅವರು ಕರೆ ನೀಡಿದ್ದರು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...