Homeಮುಖಪುಟಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಿರಂತರವಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ದ ಮಾತನಾಡುತ್ತಾ ಅವರ ಕಾರ್ಯತಂತ್ರಗಳ ವಿರುದ್ದ ಕಾನೂನಾತ್ಮಕವಾಗಿ ಹೋರಾಡುತ್ತಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ಫೇಸ್‌‌ಬುಕ್ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಸಿದೆ.

ಸಂವಿಧಾನದ ಎಲ್ಲಾ ಅಂಗಗಳು ಆರೆಸ್ಸೆಸ್ಸ್‌ ವಶಪಡಿಸಿಕೊಂಡಿರುವ ಸಮಯದಲ್ಲಿ ಅವರ ವಿರುದ್ದವಾಗಿ ಮಾತನಾಡುವ ನನ್ನ ಪೇಜನ್ನು ಫೇಸ್‌‌ಬುಕ್ ಡಿಲಿಟ್ ಮಾಡುತ್ತಿದೆ ಎಂದು ನಿನ್ನೆ ವಿಡಿಯೋ ಮಾಡಿ ಆರೋಪಿಸಿದ್ದ ಅವರು, ಇಂದು ಮತ್ತೊಂದು ವಿಡಿಯೋ ತಮ್ಮ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದು ಅದರಲ್ಲಿ ತನ್ನ ಐಟಿ ಸ್ನೇಹಿತರು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

ತಮ್ಮ ಫೇಸ್‌‌ಬುಕ್‌ ಪೇಜ್‌‌ನ ವಿಡಿಯೋದಲ್ಲಿ ನಿನ್ನೆ ಮಾಹಿತಿ ನೀಡಿರುವ ’ಭಾರತೀಯ ಬೌದ್ದ ಸಮಾಜ’ದ ಅಧ್ಯಕ್ಷರೂ ಆಗಿರುವ ರಾಜರತ್ನ ಅಂಬೇಡ್ಕರ್‌, “ಇದು ನನ್ನ ಕೊನೆಯ ವಿಡಿಯೋವಾಗಿದೆ, ಯಾಕೆಂದರೆ ನೆವೆಂಬರ್‌ 12 ರಂದು ನನ್ನ ಪೇಜನ್ನು ಡಿಲೀಟ್ ಮಾಡುವುದಾಗಿ ಪೇಸ್‌‌ಬುಕ್ ಈ ಮೈಲ್ ಮಾಡಿದೆ. ಪೇಜ್‌‌ನಲ್ಲಿ ಯಾವುದಾದರು ಸಾಮುದಾಯಿಕ ನಿಯಮದ ಉಲ್ಲಂಘನೆ ಮೀರಿರುವ ವಿಷಯವನ್ನು ಹಾಕಿದ್ದರೆ, ಅವರು ಅದರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದರೆ ಇಲ್ಲಿ ನನ್ನ ಇಡಿ ಪೇಜನ್ನೆ ಡಿಲಿಟ್ ಮಾಡುತ್ತಿದ್ದಾರೆ. ನನ್ನ ಪೇಜ್‌‌ನಲ್ಲಿ ಒಂದು ವಿಡಿಯೋ ಹಾಕಿದರೆ 8 ನಿಮಿಷಕ್ಕೆ ಸುಮಾರು 56 ಲಕ್ಷ ಜನರನ್ನು ತಲುಪುತ್ತದೆ. ಇದು ಒಂದೇ ದಿನದಲ್ಲಿ ಹೆಚ್ಚಿದ್ದಲ್ಲ ಮೂರು ನಾಲ್ಕು ವರ್ಷದಿಂದ ಈ ಬೆಳವಣಿಗೆ ಆಗಿದೆ, ಆದರೆ ಪೇಸ್‌‌ಬುಕ್ ಈಗ ಪೇಜ್ ಡಿಲೀಟ್ ಮಾಡುವುದಾಗಿ ನೋಟಿಸ್ ನೀಡಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
“ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು. ನನ್ನ ಪೇಜ್‌ಅನ್ನು ಭಾರತ ಮಾತ್ರವಲ್ಲದೆ ವಿಶ್ವದ 18 ದೇಶಗಳಲ್ಲಿ ವೀಕ್ಷಿಸುತ್ತಿದ್ದರು, ಈಗ ಇದನ್ನು ಅನಿರೀಕ್ಷಿತವಾಗಿ ಡಿಲೀಟ್ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.

ಇದೀಗ ಮತ್ತೆ ಇನ್ನೊಂದು ವಿಡಿಯೋ ಹಾಕಿರುವ ಅವರು ಹಲವಾರು ಐಟಿ ಕ್ಷೇತ್ರದ ತಜ್ಞರು ನಿನ್ನೆ ರಾತ್ರಿ ಪೂರ್ತಿ ಕುಳಿತು ಕೊಂಡು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದು, ಪ್ರಸ್ತುತ ನನ್ನ ಫೇಸ್‌‌ಬುಕ್ ಪೇಜ್ ಉಳಿದೆ ಎಂದಿರುವ ಅವರು, “ಈ ಪುಟವನ್ನು ಉಳಿಸಿದ್ದಕ್ಕಾಗಿ ಎಲ್ಲಾ ಐಟಿ ವೃತ್ತಿಪರರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇದನ್ನೂಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ವಡಾಲಾದ ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೂ ಆಗಿರುವ ರಾಜರತ್ನ ಅಂಬೇಡ್ಕರ್, ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಕಡು ಟೀಕಾಕಾರರಾಗಿರುವ ರಾಜರತ್ನ, ಆರೆಸ್ಸೆಸ್ ಒಂದು ಭಯೋತ್ಪಾದನಾ ಸಂಘಟನೆ ಹಾಗೂ ಅದನ್ನು ಬ್ಯಾನ್ ಮಾಡಬೇಕಾಗಿದೆ, ಅದರ ವಿಚಾರದಾರೆಯನ್ನು ಧ್ವಂಸಗೊಳಿಸಿ ಎಂದು ಈ ಹಿಂದೆ ಅವರು ಕರೆ ನೀಡಿದ್ದರು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....