Homeಮುಖಪುಟಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಿರಂತರವಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ದ ಮಾತನಾಡುತ್ತಾ ಅವರ ಕಾರ್ಯತಂತ್ರಗಳ ವಿರುದ್ದ ಕಾನೂನಾತ್ಮಕವಾಗಿ ಹೋರಾಡುತ್ತಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ಫೇಸ್‌‌ಬುಕ್ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಸಿದೆ.

ಸಂವಿಧಾನದ ಎಲ್ಲಾ ಅಂಗಗಳು ಆರೆಸ್ಸೆಸ್ಸ್‌ ವಶಪಡಿಸಿಕೊಂಡಿರುವ ಸಮಯದಲ್ಲಿ ಅವರ ವಿರುದ್ದವಾಗಿ ಮಾತನಾಡುವ ನನ್ನ ಪೇಜನ್ನು ಫೇಸ್‌‌ಬುಕ್ ಡಿಲಿಟ್ ಮಾಡುತ್ತಿದೆ ಎಂದು ನಿನ್ನೆ ವಿಡಿಯೋ ಮಾಡಿ ಆರೋಪಿಸಿದ್ದ ಅವರು, ಇಂದು ಮತ್ತೊಂದು ವಿಡಿಯೋ ತಮ್ಮ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದು ಅದರಲ್ಲಿ ತನ್ನ ಐಟಿ ಸ್ನೇಹಿತರು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

ತಮ್ಮ ಫೇಸ್‌‌ಬುಕ್‌ ಪೇಜ್‌‌ನ ವಿಡಿಯೋದಲ್ಲಿ ನಿನ್ನೆ ಮಾಹಿತಿ ನೀಡಿರುವ ’ಭಾರತೀಯ ಬೌದ್ದ ಸಮಾಜ’ದ ಅಧ್ಯಕ್ಷರೂ ಆಗಿರುವ ರಾಜರತ್ನ ಅಂಬೇಡ್ಕರ್‌, “ಇದು ನನ್ನ ಕೊನೆಯ ವಿಡಿಯೋವಾಗಿದೆ, ಯಾಕೆಂದರೆ ನೆವೆಂಬರ್‌ 12 ರಂದು ನನ್ನ ಪೇಜನ್ನು ಡಿಲೀಟ್ ಮಾಡುವುದಾಗಿ ಪೇಸ್‌‌ಬುಕ್ ಈ ಮೈಲ್ ಮಾಡಿದೆ. ಪೇಜ್‌‌ನಲ್ಲಿ ಯಾವುದಾದರು ಸಾಮುದಾಯಿಕ ನಿಯಮದ ಉಲ್ಲಂಘನೆ ಮೀರಿರುವ ವಿಷಯವನ್ನು ಹಾಕಿದ್ದರೆ, ಅವರು ಅದರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದರೆ ಇಲ್ಲಿ ನನ್ನ ಇಡಿ ಪೇಜನ್ನೆ ಡಿಲಿಟ್ ಮಾಡುತ್ತಿದ್ದಾರೆ. ನನ್ನ ಪೇಜ್‌‌ನಲ್ಲಿ ಒಂದು ವಿಡಿಯೋ ಹಾಕಿದರೆ 8 ನಿಮಿಷಕ್ಕೆ ಸುಮಾರು 56 ಲಕ್ಷ ಜನರನ್ನು ತಲುಪುತ್ತದೆ. ಇದು ಒಂದೇ ದಿನದಲ್ಲಿ ಹೆಚ್ಚಿದ್ದಲ್ಲ ಮೂರು ನಾಲ್ಕು ವರ್ಷದಿಂದ ಈ ಬೆಳವಣಿಗೆ ಆಗಿದೆ, ಆದರೆ ಪೇಸ್‌‌ಬುಕ್ ಈಗ ಪೇಜ್ ಡಿಲೀಟ್ ಮಾಡುವುದಾಗಿ ನೋಟಿಸ್ ನೀಡಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
“ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು. ನನ್ನ ಪೇಜ್‌ಅನ್ನು ಭಾರತ ಮಾತ್ರವಲ್ಲದೆ ವಿಶ್ವದ 18 ದೇಶಗಳಲ್ಲಿ ವೀಕ್ಷಿಸುತ್ತಿದ್ದರು, ಈಗ ಇದನ್ನು ಅನಿರೀಕ್ಷಿತವಾಗಿ ಡಿಲೀಟ್ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.

ಇದೀಗ ಮತ್ತೆ ಇನ್ನೊಂದು ವಿಡಿಯೋ ಹಾಕಿರುವ ಅವರು ಹಲವಾರು ಐಟಿ ಕ್ಷೇತ್ರದ ತಜ್ಞರು ನಿನ್ನೆ ರಾತ್ರಿ ಪೂರ್ತಿ ಕುಳಿತು ಕೊಂಡು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದು, ಪ್ರಸ್ತುತ ನನ್ನ ಫೇಸ್‌‌ಬುಕ್ ಪೇಜ್ ಉಳಿದೆ ಎಂದಿರುವ ಅವರು, “ಈ ಪುಟವನ್ನು ಉಳಿಸಿದ್ದಕ್ಕಾಗಿ ಎಲ್ಲಾ ಐಟಿ ವೃತ್ತಿಪರರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇದನ್ನೂಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ವಡಾಲಾದ ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೂ ಆಗಿರುವ ರಾಜರತ್ನ ಅಂಬೇಡ್ಕರ್, ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಕಡು ಟೀಕಾಕಾರರಾಗಿರುವ ರಾಜರತ್ನ, ಆರೆಸ್ಸೆಸ್ ಒಂದು ಭಯೋತ್ಪಾದನಾ ಸಂಘಟನೆ ಹಾಗೂ ಅದನ್ನು ಬ್ಯಾನ್ ಮಾಡಬೇಕಾಗಿದೆ, ಅದರ ವಿಚಾರದಾರೆಯನ್ನು ಧ್ವಂಸಗೊಳಿಸಿ ಎಂದು ಈ ಹಿಂದೆ ಅವರು ಕರೆ ನೀಡಿದ್ದರು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...