Homeಮುಖಪುಟಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಿರಂತರವಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ದ ಮಾತನಾಡುತ್ತಾ ಅವರ ಕಾರ್ಯತಂತ್ರಗಳ ವಿರುದ್ದ ಕಾನೂನಾತ್ಮಕವಾಗಿ ಹೋರಾಡುತ್ತಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ಫೇಸ್‌‌ಬುಕ್ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಸಿದೆ.

ಸಂವಿಧಾನದ ಎಲ್ಲಾ ಅಂಗಗಳು ಆರೆಸ್ಸೆಸ್ಸ್‌ ವಶಪಡಿಸಿಕೊಂಡಿರುವ ಸಮಯದಲ್ಲಿ ಅವರ ವಿರುದ್ದವಾಗಿ ಮಾತನಾಡುವ ನನ್ನ ಪೇಜನ್ನು ಫೇಸ್‌‌ಬುಕ್ ಡಿಲಿಟ್ ಮಾಡುತ್ತಿದೆ ಎಂದು ನಿನ್ನೆ ವಿಡಿಯೋ ಮಾಡಿ ಆರೋಪಿಸಿದ್ದ ಅವರು, ಇಂದು ಮತ್ತೊಂದು ವಿಡಿಯೋ ತಮ್ಮ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದು ಅದರಲ್ಲಿ ತನ್ನ ಐಟಿ ಸ್ನೇಹಿತರು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

ತಮ್ಮ ಫೇಸ್‌‌ಬುಕ್‌ ಪೇಜ್‌‌ನ ವಿಡಿಯೋದಲ್ಲಿ ನಿನ್ನೆ ಮಾಹಿತಿ ನೀಡಿರುವ ’ಭಾರತೀಯ ಬೌದ್ದ ಸಮಾಜ’ದ ಅಧ್ಯಕ್ಷರೂ ಆಗಿರುವ ರಾಜರತ್ನ ಅಂಬೇಡ್ಕರ್‌, “ಇದು ನನ್ನ ಕೊನೆಯ ವಿಡಿಯೋವಾಗಿದೆ, ಯಾಕೆಂದರೆ ನೆವೆಂಬರ್‌ 12 ರಂದು ನನ್ನ ಪೇಜನ್ನು ಡಿಲೀಟ್ ಮಾಡುವುದಾಗಿ ಪೇಸ್‌‌ಬುಕ್ ಈ ಮೈಲ್ ಮಾಡಿದೆ. ಪೇಜ್‌‌ನಲ್ಲಿ ಯಾವುದಾದರು ಸಾಮುದಾಯಿಕ ನಿಯಮದ ಉಲ್ಲಂಘನೆ ಮೀರಿರುವ ವಿಷಯವನ್ನು ಹಾಕಿದ್ದರೆ, ಅವರು ಅದರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದರೆ ಇಲ್ಲಿ ನನ್ನ ಇಡಿ ಪೇಜನ್ನೆ ಡಿಲಿಟ್ ಮಾಡುತ್ತಿದ್ದಾರೆ. ನನ್ನ ಪೇಜ್‌‌ನಲ್ಲಿ ಒಂದು ವಿಡಿಯೋ ಹಾಕಿದರೆ 8 ನಿಮಿಷಕ್ಕೆ ಸುಮಾರು 56 ಲಕ್ಷ ಜನರನ್ನು ತಲುಪುತ್ತದೆ. ಇದು ಒಂದೇ ದಿನದಲ್ಲಿ ಹೆಚ್ಚಿದ್ದಲ್ಲ ಮೂರು ನಾಲ್ಕು ವರ್ಷದಿಂದ ಈ ಬೆಳವಣಿಗೆ ಆಗಿದೆ, ಆದರೆ ಪೇಸ್‌‌ಬುಕ್ ಈಗ ಪೇಜ್ ಡಿಲೀಟ್ ಮಾಡುವುದಾಗಿ ನೋಟಿಸ್ ನೀಡಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
“ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು. ನನ್ನ ಪೇಜ್‌ಅನ್ನು ಭಾರತ ಮಾತ್ರವಲ್ಲದೆ ವಿಶ್ವದ 18 ದೇಶಗಳಲ್ಲಿ ವೀಕ್ಷಿಸುತ್ತಿದ್ದರು, ಈಗ ಇದನ್ನು ಅನಿರೀಕ್ಷಿತವಾಗಿ ಡಿಲೀಟ್ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.

ಇದೀಗ ಮತ್ತೆ ಇನ್ನೊಂದು ವಿಡಿಯೋ ಹಾಕಿರುವ ಅವರು ಹಲವಾರು ಐಟಿ ಕ್ಷೇತ್ರದ ತಜ್ಞರು ನಿನ್ನೆ ರಾತ್ರಿ ಪೂರ್ತಿ ಕುಳಿತು ಕೊಂಡು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದು, ಪ್ರಸ್ತುತ ನನ್ನ ಫೇಸ್‌‌ಬುಕ್ ಪೇಜ್ ಉಳಿದೆ ಎಂದಿರುವ ಅವರು, “ಈ ಪುಟವನ್ನು ಉಳಿಸಿದ್ದಕ್ಕಾಗಿ ಎಲ್ಲಾ ಐಟಿ ವೃತ್ತಿಪರರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇದನ್ನೂಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ವಡಾಲಾದ ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೂ ಆಗಿರುವ ರಾಜರತ್ನ ಅಂಬೇಡ್ಕರ್, ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಕಡು ಟೀಕಾಕಾರರಾಗಿರುವ ರಾಜರತ್ನ, ಆರೆಸ್ಸೆಸ್ ಒಂದು ಭಯೋತ್ಪಾದನಾ ಸಂಘಟನೆ ಹಾಗೂ ಅದನ್ನು ಬ್ಯಾನ್ ಮಾಡಬೇಕಾಗಿದೆ, ಅದರ ವಿಚಾರದಾರೆಯನ್ನು ಧ್ವಂಸಗೊಳಿಸಿ ಎಂದು ಈ ಹಿಂದೆ ಅವರು ಕರೆ ನೀಡಿದ್ದರು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...