Homeಮುಖಪುಟಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಿರಂತರವಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ದ ಮಾತನಾಡುತ್ತಾ ಅವರ ಕಾರ್ಯತಂತ್ರಗಳ ವಿರುದ್ದ ಕಾನೂನಾತ್ಮಕವಾಗಿ ಹೋರಾಡುತ್ತಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ಫೇಸ್‌‌ಬುಕ್ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಸಿದೆ.

ಸಂವಿಧಾನದ ಎಲ್ಲಾ ಅಂಗಗಳು ಆರೆಸ್ಸೆಸ್ಸ್‌ ವಶಪಡಿಸಿಕೊಂಡಿರುವ ಸಮಯದಲ್ಲಿ ಅವರ ವಿರುದ್ದವಾಗಿ ಮಾತನಾಡುವ ನನ್ನ ಪೇಜನ್ನು ಫೇಸ್‌‌ಬುಕ್ ಡಿಲಿಟ್ ಮಾಡುತ್ತಿದೆ ಎಂದು ನಿನ್ನೆ ವಿಡಿಯೋ ಮಾಡಿ ಆರೋಪಿಸಿದ್ದ ಅವರು, ಇಂದು ಮತ್ತೊಂದು ವಿಡಿಯೋ ತಮ್ಮ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದು ಅದರಲ್ಲಿ ತನ್ನ ಐಟಿ ಸ್ನೇಹಿತರು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

ತಮ್ಮ ಫೇಸ್‌‌ಬುಕ್‌ ಪೇಜ್‌‌ನ ವಿಡಿಯೋದಲ್ಲಿ ನಿನ್ನೆ ಮಾಹಿತಿ ನೀಡಿರುವ ’ಭಾರತೀಯ ಬೌದ್ದ ಸಮಾಜ’ದ ಅಧ್ಯಕ್ಷರೂ ಆಗಿರುವ ರಾಜರತ್ನ ಅಂಬೇಡ್ಕರ್‌, “ಇದು ನನ್ನ ಕೊನೆಯ ವಿಡಿಯೋವಾಗಿದೆ, ಯಾಕೆಂದರೆ ನೆವೆಂಬರ್‌ 12 ರಂದು ನನ್ನ ಪೇಜನ್ನು ಡಿಲೀಟ್ ಮಾಡುವುದಾಗಿ ಪೇಸ್‌‌ಬುಕ್ ಈ ಮೈಲ್ ಮಾಡಿದೆ. ಪೇಜ್‌‌ನಲ್ಲಿ ಯಾವುದಾದರು ಸಾಮುದಾಯಿಕ ನಿಯಮದ ಉಲ್ಲಂಘನೆ ಮೀರಿರುವ ವಿಷಯವನ್ನು ಹಾಕಿದ್ದರೆ, ಅವರು ಅದರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದರೆ ಇಲ್ಲಿ ನನ್ನ ಇಡಿ ಪೇಜನ್ನೆ ಡಿಲಿಟ್ ಮಾಡುತ್ತಿದ್ದಾರೆ. ನನ್ನ ಪೇಜ್‌‌ನಲ್ಲಿ ಒಂದು ವಿಡಿಯೋ ಹಾಕಿದರೆ 8 ನಿಮಿಷಕ್ಕೆ ಸುಮಾರು 56 ಲಕ್ಷ ಜನರನ್ನು ತಲುಪುತ್ತದೆ. ಇದು ಒಂದೇ ದಿನದಲ್ಲಿ ಹೆಚ್ಚಿದ್ದಲ್ಲ ಮೂರು ನಾಲ್ಕು ವರ್ಷದಿಂದ ಈ ಬೆಳವಣಿಗೆ ಆಗಿದೆ, ಆದರೆ ಪೇಸ್‌‌ಬುಕ್ ಈಗ ಪೇಜ್ ಡಿಲೀಟ್ ಮಾಡುವುದಾಗಿ ನೋಟಿಸ್ ನೀಡಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
“ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು. ನನ್ನ ಪೇಜ್‌ಅನ್ನು ಭಾರತ ಮಾತ್ರವಲ್ಲದೆ ವಿಶ್ವದ 18 ದೇಶಗಳಲ್ಲಿ ವೀಕ್ಷಿಸುತ್ತಿದ್ದರು, ಈಗ ಇದನ್ನು ಅನಿರೀಕ್ಷಿತವಾಗಿ ಡಿಲೀಟ್ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.

ಇದೀಗ ಮತ್ತೆ ಇನ್ನೊಂದು ವಿಡಿಯೋ ಹಾಕಿರುವ ಅವರು ಹಲವಾರು ಐಟಿ ಕ್ಷೇತ್ರದ ತಜ್ಞರು ನಿನ್ನೆ ರಾತ್ರಿ ಪೂರ್ತಿ ಕುಳಿತು ಕೊಂಡು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದು, ಪ್ರಸ್ತುತ ನನ್ನ ಫೇಸ್‌‌ಬುಕ್ ಪೇಜ್ ಉಳಿದೆ ಎಂದಿರುವ ಅವರು, “ಈ ಪುಟವನ್ನು ಉಳಿಸಿದ್ದಕ್ಕಾಗಿ ಎಲ್ಲಾ ಐಟಿ ವೃತ್ತಿಪರರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇದನ್ನೂಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ವಡಾಲಾದ ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೂ ಆಗಿರುವ ರಾಜರತ್ನ ಅಂಬೇಡ್ಕರ್, ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಕಡು ಟೀಕಾಕಾರರಾಗಿರುವ ರಾಜರತ್ನ, ಆರೆಸ್ಸೆಸ್ ಒಂದು ಭಯೋತ್ಪಾದನಾ ಸಂಘಟನೆ ಹಾಗೂ ಅದನ್ನು ಬ್ಯಾನ್ ಮಾಡಬೇಕಾಗಿದೆ, ಅದರ ವಿಚಾರದಾರೆಯನ್ನು ಧ್ವಂಸಗೊಳಿಸಿ ಎಂದು ಈ ಹಿಂದೆ ಅವರು ಕರೆ ನೀಡಿದ್ದರು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...