Homeಮುಖಪುಟಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಅಂಬೇಡ್ಕರ್‌‌ ಮೊಮ್ಮಗ ’ರಾಜರತ್ನ’ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಿಸಿದ ಫೇಸ್‌ಬುಕ್‌!

ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು ಎಂದು ಅವರು ಹೇಳಿದ್ದಾರೆ

- Advertisement -
- Advertisement -

ನಿರಂತರವಗಿ ಬಿಜೆಪಿ ಹಾಗೂ ಆರೆಸ್ಸೆಸ್ ವಿರುದ್ದ ಮಾತನಾಡುತ್ತಾ ಅವರ ಕಾರ್ಯತಂತ್ರಗಳ ವಿರುದ್ದ ಕಾನೂನಾತ್ಮಕವಾಗಿ ಹೋರಾಡುತ್ತಿರುವ ಸಂವಿಧಾನ ಶಿಲ್ಪಿ ಅಂಬೇಡ್ಕರ್‌ ಅವರ ಮರಿ ಮೊಮ್ಮಗ ರಾಜರತ್ನ ಅಂಬೇಡ್ಕರ್ ಅವರ ಫೇಸ್‌‌ಬುಕ್ ಪೇಜನ್ನು ಡಿಲೀಟ್ ಮಾಡಲು ಪ್ರಯತ್ನಸಿದೆ.

ಸಂವಿಧಾನದ ಎಲ್ಲಾ ಅಂಗಗಳು ಆರೆಸ್ಸೆಸ್ಸ್‌ ವಶಪಡಿಸಿಕೊಂಡಿರುವ ಸಮಯದಲ್ಲಿ ಅವರ ವಿರುದ್ದವಾಗಿ ಮಾತನಾಡುವ ನನ್ನ ಪೇಜನ್ನು ಫೇಸ್‌‌ಬುಕ್ ಡಿಲಿಟ್ ಮಾಡುತ್ತಿದೆ ಎಂದು ನಿನ್ನೆ ವಿಡಿಯೋ ಮಾಡಿ ಆರೋಪಿಸಿದ್ದ ಅವರು, ಇಂದು ಮತ್ತೊಂದು ವಿಡಿಯೋ ತಮ್ಮ ಪೇಜ್‌ನಲ್ಲಿ ಅಪ್ಲೋಡ್ ಮಾಡಿದ್ದು ಅದರಲ್ಲಿ ತನ್ನ ಐಟಿ ಸ್ನೇಹಿತರು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದಾರೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹತ್ರಾಸ್: ಸಂತ್ರಸ್ತ ಕುಟುಂಬದ ಪರವಾಗಿ ಹೈಕೋರ್ಟ್ ಮೆಟ್ಟಿಲೇರಿದ ರಾಜರತ್ನ ಅಂಬೇಡ್ಕರ್

ತಮ್ಮ ಫೇಸ್‌‌ಬುಕ್‌ ಪೇಜ್‌‌ನ ವಿಡಿಯೋದಲ್ಲಿ ನಿನ್ನೆ ಮಾಹಿತಿ ನೀಡಿರುವ ’ಭಾರತೀಯ ಬೌದ್ದ ಸಮಾಜ’ದ ಅಧ್ಯಕ್ಷರೂ ಆಗಿರುವ ರಾಜರತ್ನ ಅಂಬೇಡ್ಕರ್‌, “ಇದು ನನ್ನ ಕೊನೆಯ ವಿಡಿಯೋವಾಗಿದೆ, ಯಾಕೆಂದರೆ ನೆವೆಂಬರ್‌ 12 ರಂದು ನನ್ನ ಪೇಜನ್ನು ಡಿಲೀಟ್ ಮಾಡುವುದಾಗಿ ಪೇಸ್‌‌ಬುಕ್ ಈ ಮೈಲ್ ಮಾಡಿದೆ. ಪೇಜ್‌‌ನಲ್ಲಿ ಯಾವುದಾದರು ಸಾಮುದಾಯಿಕ ನಿಯಮದ ಉಲ್ಲಂಘನೆ ಮೀರಿರುವ ವಿಷಯವನ್ನು ಹಾಕಿದ್ದರೆ, ಅವರು ಅದರ ವಿರುದ್ದ ಕ್ರಮಗಳನ್ನು ತೆಗೆದುಕೊಳ್ಳಬೇಕು, ಆದರೆ ಇಲ್ಲಿ ನನ್ನ ಇಡಿ ಪೇಜನ್ನೆ ಡಿಲಿಟ್ ಮಾಡುತ್ತಿದ್ದಾರೆ. ನನ್ನ ಪೇಜ್‌‌ನಲ್ಲಿ ಒಂದು ವಿಡಿಯೋ ಹಾಕಿದರೆ 8 ನಿಮಿಷಕ್ಕೆ ಸುಮಾರು 56 ಲಕ್ಷ ಜನರನ್ನು ತಲುಪುತ್ತದೆ. ಇದು ಒಂದೇ ದಿನದಲ್ಲಿ ಹೆಚ್ಚಿದ್ದಲ್ಲ ಮೂರು ನಾಲ್ಕು ವರ್ಷದಿಂದ ಈ ಬೆಳವಣಿಗೆ ಆಗಿದೆ, ಆದರೆ ಪೇಸ್‌‌ಬುಕ್ ಈಗ ಪೇಜ್ ಡಿಲೀಟ್ ಮಾಡುವುದಾಗಿ ನೋಟಿಸ್ ನೀಡಿದೆ” ಎಂದು ಅಸಮಧಾನ ವ್ಯಕ್ತಪಡಿಸಿದ್ದರು.
“ಇದು ಯಾಕೆ ಆಗುತ್ತಿದೆ ಎಂದರೆ, ಮಾಧ್ಯಮ ಸೇರಿದಂತೆ ಸಂವಿಧಾನದ ಎಲ್ಲಾ ಅಂಗಗಳನ್ನು ಆರೆಸ್ಸೆಸ್ ವಶಪಡಿಸಿಕೊಂಡಾಗಿದೆ. ಕೊನೆಯದಾಗಿ ನಮಗೆ ಸಾಮಾಜಿಕ ಜಾಲತಾಣವೆಂಬ ಹೊಸ ಅಂಗ ಸಿಕ್ಕಿತ್ತು. ಇದರಲ್ಲಿ ನಮ್ಮ ಮಾತನ್ನು ಜನರಿಗೆ ತಲುಪಿಸಬಹುದಾಗಿತ್ತು. ನನ್ನ ಪೇಜ್‌ಅನ್ನು ಭಾರತ ಮಾತ್ರವಲ್ಲದೆ ವಿಶ್ವದ 18 ದೇಶಗಳಲ್ಲಿ ವೀಕ್ಷಿಸುತ್ತಿದ್ದರು, ಈಗ ಇದನ್ನು ಅನಿರೀಕ್ಷಿತವಾಗಿ ಡಿಲೀಟ್ ಮಾಡುತ್ತಿದ್ದಾರೆ” ಎಂದು ಅವರು ಆರೋಪಿಸಿದ್ದರು.

ಇದೀಗ ಮತ್ತೆ ಇನ್ನೊಂದು ವಿಡಿಯೋ ಹಾಕಿರುವ ಅವರು ಹಲವಾರು ಐಟಿ ಕ್ಷೇತ್ರದ ತಜ್ಞರು ನಿನ್ನೆ ರಾತ್ರಿ ಪೂರ್ತಿ ಕುಳಿತು ಕೊಂಡು ಫೇಸ್‌ಬುಕ್‌ನೊಂದಿಗೆ ವ್ಯವಹರಿಸಿ ಸಮಸ್ಯೆಯನ್ನು ಬಗೆಹರಿಸಿದ್ದು, ಪ್ರಸ್ತುತ ನನ್ನ ಫೇಸ್‌‌ಬುಕ್ ಪೇಜ್ ಉಳಿದೆ ಎಂದಿರುವ ಅವರು, “ಈ ಪುಟವನ್ನು ಉಳಿಸಿದ್ದಕ್ಕಾಗಿ ಎಲ್ಲಾ ಐಟಿ ವೃತ್ತಿಪರರಿಗೆ ಧನ್ಯವಾದಗಳು” ಎಂದು ಹೇಳಿದ್ದಾರೆ.

ಇದನ್ನೂಓದಿ: ಪಟ್ಟು ಬಿಡದೇ ಕೊನೆಗೂ ಹತ್ರಾಸ್‌ ಸಂತ್ರಸ್ತ ಕುಟುಂಬ ಭೇಟಿಗೆ ಹೊರಟ ರಾಹುಲ್, ಪ್ರಿಯಾಂಕ ಗಾಂಧಿ

ವಡಾಲಾದ ಡಾ.ಅಂಬೇಡ್ಕರ್ ಕಾಲೇಜಿನ ಪ್ರಾಧ್ಯಾಪಕರೂ ಆಗಿರುವ ರಾಜರತ್ನ ಅಂಬೇಡ್ಕರ್, ಹತ್ರಾಸ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬ ಸದಸ್ಯರನ್ನು ಗೃಹ ಬಂಧನದಿಂದ ಬಿಡುಗಡೆ ಮಾಡುವಂತೆ ಹಾಗೂ ಸಂತ್ರಸ್ತೆಯ ಕುಟುಂಬಕ್ಕೆ ಸೂಕ್ತ ರಕ್ಷಣೆ ಮತ್ತು ಪರಿಹಾರ ನೀಡುವಂತೆ ಉತ್ತರ ಪ್ರದೇಶ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಅಲಹಾಬಾದ್ ಹೈಕೋರ್ಟ್‌ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ಭಾರತದಲ್ಲಿ ಬಿಜೆಪಿ ಹಾಗೂ ಆರೆಸ್ಸೆಸ್‌ನ ಕಡು ಟೀಕಾಕಾರರಾಗಿರುವ ರಾಜರತ್ನ, ಆರೆಸ್ಸೆಸ್ ಒಂದು ಭಯೋತ್ಪಾದನಾ ಸಂಘಟನೆ ಹಾಗೂ ಅದನ್ನು ಬ್ಯಾನ್ ಮಾಡಬೇಕಾಗಿದೆ, ಅದರ ವಿಚಾರದಾರೆಯನ್ನು ಧ್ವಂಸಗೊಳಿಸಿ ಎಂದು ಈ ಹಿಂದೆ ಅವರು ಕರೆ ನೀಡಿದ್ದರು.

ಇದನ್ನೂ ಓದಿ: ಸಿನೆಮಾದ ಮೂಲಕ ಜಾತಿ ಮುಕ್ತ ಸಮಾಜ ಕಟ್ಟಲೊರಟ ಅಂಬೇಡ್ಕರ್‌ವಾದಿ ನಿರ್ದೇಶಕ ಪ.ರಂಜಿತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...