HomeಮುಖಪುಟBJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

BJP ಗೆಲುವಿಗೆ ಫೇಸ್‌ಬುಕ್ ಕೆಲಸ: ತನಿಖೆಗೆ ರಾಹುಲ್ ಗಾಂಧಿ ಆಗ್ರಹ

ಅಂತಾರಾಷ್ಟ್ರೀಯ ಕಂಪನಿಯೊಂದು ನಮ್ಮ ದೇಶದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ಯಾರು ಸಹಿಸುವುದಿಲ್ಲ. ಈ ಕುರಿತು ತಕ್ಷಣ ತನಿಖೆಯಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ರಾಹುಲ್ ಒತ್ತಾಯಿಸಿದ್ದಾರೆ.

- Advertisement -
- Advertisement -

ಭಾರತೀಯ ಜನತಾ ಪಾರ್ಟಿ ಚುನಾವಣೆಯಲ್ಲಿ ಗೆಲ್ಲಲ್ಲು ಫೇಸ್‌ಬುಕ್ ಇಂಡಿಯಾ ಕಾರ್ಯನಿರ್ವಾಹಕ ಅಧಿಕಾರಿ ಅಂಖಿದಾಸ್ ಹೇಗೆ ಸಹಾಯ ಮಾಡಿದರು ಎಂಬುದನ್ನು ಅಮೆರಿಕದ ವಾಲ್ ಸ್ಟ್ರೀಟ್ ಜರ್ನಲ್ ಬಯಲು ಮಾಡಿರುವುದು ಹೊಸ ವಿವಾದಕ್ಕೆ ಕಾರಣವಾಗಿದೆ.

ವಾಲ್ ಸ್ಟ್ರೀಟ್ ಜರ್ನಲ್ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಇದು ಪ್ರಜಾಪ್ರಭುತ್ವದ ಮತ್ತು ಸಾಮಾಜಿಕ ಸೌಹಾರ್ದದ ಮೇಲೆ ಫೇಸ್‌ಬುಕ್- ವಾಟ್ಸಾಪ್ ನಡೆಸುತ್ತಿರುವ ದಾಳಿ. ಇದನ್ನು ಅಂತಾರಾಷ್ಟ್ರೀಯ ಮಾಧ್ಯಮವೊಂದು ಬಯಲಿಗೆಳೆದಿದೆ ಎಂದು ಟ್ವೀಟ್ ಮಾಡಿದ್ದಾರೆ.

ಅಂತಾರಾಷ್ಟ್ರೀಯ ಕಂಪನಿಯೊಂದು ನಮ್ಮ ದೇಶದ ಆಂತರಿಕ ವಿಷಯಗಳಲ್ಲಿ ಹಸ್ತಕ್ಷೇಪ ಮಾಡುವುದನ್ನು ಯಾರು ಸಹಿಸುವುದಿಲ್ಲ. ಈ ಕುರಿತು ತಕ್ಷಣ ತನಿಖೆಯಾಗಬೇಕು, ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದಿದ್ದಾರೆ.

ಇದನ್ನೂ ಓದಿ: ಬಿಜೆಪಿ ಪರ ಚುನಾವಣಾ ಪ್ರಚಾರ ಮಾಡಿದ್ದ ಫೇಸ್‌ಬುಕ್‌ನ ಅಂಖಿದಾಸ್: ವಾಲ್ ಸ್ಟ್ರೀಟ್ ಜರ್ನಲ್ ತೆರೆದಿಟ್ಟ ಸ್ಪೋಟಕ ಸತ್ಯ!

ವಾಲ್ ಸ್ಟ್ರೀಟ್ ಜರ್ನಲ್ ವರದಿಯಲ್ಲಿ ಅಂಖಿದಾಸ್ ಹೇಗೆ ಹಲವಾರು ವರ್ಷಗಳಿಂದ ಬೆಜೆಪಿಯನ್ನು ಬೆಂಬಲಿಸಿ ಪೋಸ್ಟ್‌ಗಳನ್ನು ಹಂಚಿದ್ದರು, 2014ರ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಗೆಲ್ಲಲ್ಲು ಸಹಾಯ ಮಾಡುವ ಪ್ರಯತ್ನಗಳು ಹೇಗಿದ್ದವು ಎಂಬುದನ್ನು ವಿವರಿಸಿದ ನಂತರ ರಾಹುಲ್ ಗಾಂಧಿ ಈ ಟ್ವೀಟ್ ಮಾಡಿದ್ದಾರೆ.

“ಫೇಸ್‌ಬುಕ್‌ ಉದ್ಯೋಗಿಗಳನ್ನು ಮಾತ್ರ ಒಳಗೊಂಡಿರುವ ಕಂಪನಿಯ ಆಂತರಿಕ ಗುಂಪಿನಲ್ಲಿ ಅಂಖಿ ದಾಸ್ ಹಲವು ವರ್ಷಗಳಿಂದ ಸತತವಾಗಿ ಬಿಜೆಪಿ ಪರವಾದ ಮತ್ತು ವಿರೋಧ ಪಕ್ಷ ಕಾಂಗ್ರೆಸ್‌ ವಿರುದ್ಧದ ಪೂರ್ವಗ್ರಹದ ಪೋಸ್ಟ್‌ಗಳನ್ನು ಹಾಕುತ್ತಿದ್ದರು” ಎಂದು ವಾಲ್ ಸ್ಟ್ರೀಟ್ ಜರ್ನಲ್ ವರದಿ ಮಾಡಿದೆ.

ನರೇಂದ್ರ ಮೋದಿಯವರು 2014ರ ಚುನಾವಣೆಯಲ್ಲಿ ಗೆಲುವನು ಪಡೆದ ಹಿಂದಿನ ದಿನ, ದೇಶದ ಫೇಸ್‌ಬುಕ್‌ನ ಸಾರ್ವಜನಿಕ ನೀತಿಯ ಮುಖ್ಯಸ್ಥರಾದ ಅಂಖಿ ದಾಸ್‌ ಈ ರೀತಿ ಸಂದೇಶ ಕಳಿಸಿದ್ದರು “ನಾವು ಅವರ (ಮೋದಿಯವರ) ಸೋಷಿಯಲ್‌ ಮೀಡಿಯಾ ಕ್ಯಾಂಪೇನ್‌ಗೆ ಅಗತ್ಯವಿದ್ದ ಕಾವನ್ನು ಹೊತ್ತಿಸಿದೆವು. ಅಲ್ಲಿಂದಾಚೆಗಿನದ್ದು ಇತಿಹಾಸ”.

“ಅಂತಿಮವಾಗಿ ಭಾರತವನ್ನು ಸಮಾಜವಾದದಿಂದ ಮುಕ್ತಗೊಳಿಸಲು ಮೂವತ್ತು ವರ್ಷಗಳ ತಳಮಟ್ಟದ ಕೆಲಸವನ್ನು ತೆಗೆದುಕೊಂಡಿದೆ” ಎಂದು ಕಾಂಗ್ರೆಸ್ ಸೋಲಿನ ಬಗ್ಗೆ ಅಂಖಿ ದಾಸ್ ಮತ್ತೊಂದು ಪೋಸ್ಟ್ ಮಾಡಿದ್ದರು ಎನ್ನಲಾಗಿದೆ.

ನರೇಂದ್ರ ಮೋದಿಯವರು ಶಕ್ತಿಯುತ ಮನುಷ್ಯ ಎಂದು ಹೊಗಳಿದ್ದ ಅವರು ಕಾಂಗ್ರೆಸ್ ಪಕ್ಷವನ್ನು ಸೋಲಿಸಿದ್ದಕ್ಕಾಗಿ ಅವರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದರು. ಅಂಖಿ ದಾಸ್ ಅವರು ಫೇಸ್‌ಬುಕ್‌ನ ಉನ್ನತ ಜಾಗತಿಕ ಚುನಾವಣಾ ಅಧಿಕಾರಿ ಕಾಟೀ ಹರ್ಬಾತ್ ಅವರನ್ನು ಈ ಬಿಜೆಪಿ ಪರವಾಗಿನ ಅಭಿಯಾನದಲ್ಲಿ ಒಳಗೊಂಡಿದ್ದಲ್ಲೇ ಮೋದಿಯವರು ವಿಜಯ ಸಾಧಿಸಿದ್ದ ಸಂದರ್ಭದಲ್ಲಿ ನರೇಂದ್ರ ಮೋದಿ ಮತ್ತು ಹರ್ಬಾತ್ ನಡುವೆ ನಗುತ್ತಾ ಫೋಟೊ ತೆಗೆಸಿಕೊಂಡಿದ್ದರು.

ಇನ್ನು ಫೇಸ್‌ಬುಕ್‌ಗೆ ಬರುವ ಜಾಹೀರಾತುಗಳಲ್ಲಿ ಕಾರ್ಪೋರೇಟ್ ಕಂಪನಿಗಳಿಗಿಂತ ಬಿಜೆಪಿಯ ಪಾಲು ಶೇ.70ರಷ್ಟು ಎಂಬುದನ್ನು ಡೇಟಾ ಟ್ರ್ಯಾಕಿಂಗ್ ಮಾಹಿತಿ ನೀಡಿತ್ತು.


ಇದನ್ನೂ ಓದಿ: ಫೇಸ್‌ಬುಕ್‌ಗೆ ಬಿಜೆಪಿಯೇ ಅತಿದೊಡ್ಡ ಜಾಹೀರಾತುದಾರ: ಮೋದಿ ಪಕ್ಷದಿಂದ ಶೇ.70ರಷ್ಟು ಜಾಹೀರಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...