Homeಫ್ಯಾಕ್ಟ್‌ಚೆಕ್FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

“ತಿನ್ನುವ ಬಟ್ಟಲಿಗೆ ವಿಷ ಹಾಕಿದರೂ ತಿರುಗಿ ಅವರಿಗೆ ಅಮೃತ ಬಡಿಸುವ ಧರ್ಮ ಅಂತ ಈ ಭೂಮಿಯ ಮೇಲೆ ಇದ್ದರೆ ಅದು ಸನಾತನ ಹಿಂದೂ ಧರ್ಮ ಮಾತ್ರ. ಯಾವ ಜನರು ಬಾಂಗ್ಲಾದೇಶದಲ್ಲಿ ಇಸ್ಕಾನ್ ಟೆಂಪಲ್ ಧ್ವಂಸ ಮಾಡಿದರೋ ಇಂದು ಅದೇ ಪ್ರವಾಹ ಪೀಡಿತ ಜನರಿಗೆ ಇಸ್ಕಾನ್ ಆಹಾರವನ್ನು ಬಡಿಸುವ ಮೂಲಕ ಅವರ ನೆರವಿಗೆ ಧಾವಿಸಿದೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಬಾಂಗ್ಲಾ ಪ್ರವಾಹದ ಕುರಿತು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದೀಗ ಇತ್ತೀಚೆಗಷ್ಟೆ ನಡೆದ ಹಿಂಸಾಚಾರದಲ್ಲಿ ಕಿಡಿಗೇಡಿಗಳು ಬಾಂಗ್ಲಾದ ಖುಲ್ನಾ ವಿಭಾಗದಲ್ಲಿ ನೆಲೆಗೊಂಡಿರುವ ಮೆಹರ್‌ಪುರದಲ್ಲಿರುವ ಇಸ್ಕಾನ್ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದರು. ಹೀಗಿದ್ದರೂ ಇಸ್ಕಾನ್, ಪ್ರವಾಹದಲ್ಲಿ ಸಿಲುಕಿರುವ ಬಾಂಗ್ಲಾ ಪ್ರಜೆಗಳಿಗೆ ಸಹಾಯ ಮಾಡುತ್ತಿದೆ ಎಂಬ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಪ್ರವಾಹ ಪೀಡಿತ ಬಾಂಗ್ಲಾ ಜನರಿಗೆ ಇಸ್ಕಾನ್ ಸಹಾಯ ಮಾಡುತ್ತಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋಗಳನ್ನು  ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ ಇಸ್ಕಾನ್​ ಬಾಂಗ್ಲಾದೇಶ ವೆಬ್​ಸೈಟ್​ನಲ್ಲಿ ಜೂನ್ 22, 2022 ರಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. ಇದಕ್ಕೆ ‘ಇಸ್ಕಾನ್ ಸಿಲ್ಹೆಟ್ ಪ್ರವಾಹ ಸಂತ್ರಸ್ತರ ಪರವಾಗಿ ನಿಂತಿದೆ’ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗುತ್ತಿರುವ ವಿಡಿಯೋವನ್ನು ಲಗತ್ತಿಸಿದೆ.

ವೆಬ್‌ಸೈಟ್‌ನಲ್ಲಿ ಲಭ್ಯವಾದ ವರದಿಯ ಪ್ರಕಾರ, ‘ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಸಿಲ್ಹೆಟ್ ಮತ್ತು ಸುನಮ್‌ಗಂಜ್‌ನಲ್ಲಿ ಪ್ರವಾಹದಿಂದ  ಪರಿಸ್ಥಿತಿ ಗಂಭೀರವಾಗಿದೆ. ಸರ್ಕಾರ ವಿವಿಧೆಡೆ ಪರಿಹಾರ ವಿತರಣೆ ಮಾಡಿದರೂ ಹಲವರಿಗೆ ಕೈತುಂಬ ಆಹಾರ ಸಿಕ್ಕಿಲ್ಲ. ಪ್ರವಾಹ ಸಂತ್ರಸ್ತರ ಮನೆಗಳಿಗೆ ತೆರಳಿ ಸಾಧ್ಯವಾದಷ್ಟು ಆಹಾರ ನೆರವು ನೀಡುತ್ತಿದ್ದೇವೆ. ಸಿಲ್ಹೆಟ್ ನಗರದ ಹೊರತಾಗಿ, ಸಮೀಪದ ಉಪಜಿಲಾಗಳಲ್ಲಿ ಪ್ರತಿದಿನ 3-4 ಸಾವಿರ ಜನರಿಗೆ ಬೇಯಿಸಿದ ಆಹಾರವನ್ನು ವಿತರಿಸಲಾಗುತ್ತದೆ. ಆಹಾರದ ಜೊತೆಗೆ, ಇಸ್ಕಾನ್ ಬಟ್ಟೆಗಳು, ಅಗತ್ಯ ಔಷಧಗಳು, ನೀರು ಶುದ್ಧೀಕರಣಕ್ಕಾಗಿ ಮಾತ್ರೆಗಳು ಮತ್ತು ವೈದ್ಯಕೀಯ ಆರೈಕೆಯಂತಹ ಇತರ ಅಗತ್ಯ ಸಹಾಯವನ್ನು ವಿತರಿಸುತ್ತದೆ. ಪ್ರವಾಹ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಇಸ್ಕಾನ್ ಪ್ರವಾಹ ಸಂತ್ರಸ್ತರ ಪಕ್ಕದಲ್ಲಿರುತ್ತದೆ’ ಎಂದು ವರದಿಯಲ್ಲಿದೆ.

ಹಾಗೆಯೆ ಜೂನ್ 20, 2022 ರಂದು Iskcon Youth Forum, Sylhet ಫೇಸ್​ಬುಕ್ ಖಾತೆಯಲ್ಲಿ ‘ಇದು ಅನ್ನವಲ್ಲ ಕೋಟ್ಯಾಂತರ ರೂಪಾಯಿಗಳ ಸಂಪತ್ತು. ಸ್ವಲ್ಪ ಆಹಾರಕ್ಕಾಗಿ ಜನರು ಎಷ್ಟು ಚಡಪಡಿಸುತ್ತಾರೆ ನೋಡಿ. ಪ್ರವಾಹ ಸಂತ್ರಸ್ತರ ಪಕ್ಕದಲ್ಲಿ ಇಸ್ಕಾನ್ ಸಿಲ್ಹೆಟ್‌. ನೀವೂ ಮುಂದೆ ಬನ್ನಿ’ ಎಂಬ ಅಡಿಬರಹದೊಂದಿಗೆ ಇದೇ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ಸಂಕೀರ್ತನ್ ಫೆಸ್ಟ್ ಎಂಬ ಯೂಟ್ಯೂಬ್ ಚಾನೆಲ್​ನಲ್ಲಿಯೂ ಜೂನ್ 20, 2022 ರಂದು ಇದೇ ವಿಡಿಯೋವನ್ನು ಶೇರ್ ಮಾಡಲಾಗಿದ್ದು, ‘ಇಸ್ಕಾನ್ ಸಿಲ್ಹೆಟ್ ಮತ್ತು ಸಂಕೀರ್ತನ್ ಫೆಸ್ಟ್ ಸಿಲ್ಹೆಟ್-ಸುನಮ್‌ಗಂಜ್‌ನಲ್ಲಿನ ಪ್ರವಾಹ ಪೀಡಿತರಿಗೆ ಸಹಾಯ ಮಾಡುತ್ತಿರುವುದು’ ಎಂಬ ಶೀರ್ಷಿಕೆ ನೀಡಿದೆ.  ಹೀಗಾಗಿ ಬಾಂಗ್ಲಾದೇಶದ ಇತ್ತೀಚಿನ ಗಲಭೆಯಲ್ಲಿ ಕಿಡಿಗೇಡಿಗಳು ಇಸ್ಕಾನ್ ದೇವಾಲಯಕ್ಕೆ ಹಾನಿ ಮಾಡಿದ್ದರೂ, ಇಸ್ಕಾನ್ ಅಲ್ಲಿನ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದೆ ಎಂಬುದು ಸುಳ್ಳು ಎಂದು ವಿಡಿಯೋ ಆಧರಿಸಿ ಸೌತ್‌ಚೆಕ್ ವೆಬ್‌ಸೈಟ್ ವರದಿ ಮಾಡಿದೆ.

ಒಟ್ಟಿನಲ್ಲಿ , ಬಾಂಗ್ಲಾದೇಶದಲ್ಲಿ 2022ರಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಅಲ್ಲಿನ ಜನ ತೊಂದರೆ ಅನುಭವಿಸುವಂತಾಗಿತ್ತು. ಆಗ ಸಿಲ್ಹೆಟ್ ಪ್ರವಾಹ ಸಂತ್ರಸ್ತರಿಗೆ ಇಸ್ಕಾನ್ ಸಹಾಯ ಮಾಡುತ್ತಿರುವ ವಿಡಿಯೋವನ್ನು 2024ರದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...