Homeಫ್ಯಾಕ್ಟ್‌ಚೆಕ್FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

“ತಿನ್ನುವ ಬಟ್ಟಲಿಗೆ ವಿಷ ಹಾಕಿದರೂ ತಿರುಗಿ ಅವರಿಗೆ ಅಮೃತ ಬಡಿಸುವ ಧರ್ಮ ಅಂತ ಈ ಭೂಮಿಯ ಮೇಲೆ ಇದ್ದರೆ ಅದು ಸನಾತನ ಹಿಂದೂ ಧರ್ಮ ಮಾತ್ರ. ಯಾವ ಜನರು ಬಾಂಗ್ಲಾದೇಶದಲ್ಲಿ ಇಸ್ಕಾನ್ ಟೆಂಪಲ್ ಧ್ವಂಸ ಮಾಡಿದರೋ ಇಂದು ಅದೇ ಪ್ರವಾಹ ಪೀಡಿತ ಜನರಿಗೆ ಇಸ್ಕಾನ್ ಆಹಾರವನ್ನು ಬಡಿಸುವ ಮೂಲಕ ಅವರ ನೆರವಿಗೆ ಧಾವಿಸಿದೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಬಾಂಗ್ಲಾ ಪ್ರವಾಹದ ಕುರಿತು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದೀಗ ಇತ್ತೀಚೆಗಷ್ಟೆ ನಡೆದ ಹಿಂಸಾಚಾರದಲ್ಲಿ ಕಿಡಿಗೇಡಿಗಳು ಬಾಂಗ್ಲಾದ ಖುಲ್ನಾ ವಿಭಾಗದಲ್ಲಿ ನೆಲೆಗೊಂಡಿರುವ ಮೆಹರ್‌ಪುರದಲ್ಲಿರುವ ಇಸ್ಕಾನ್ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದರು. ಹೀಗಿದ್ದರೂ ಇಸ್ಕಾನ್, ಪ್ರವಾಹದಲ್ಲಿ ಸಿಲುಕಿರುವ ಬಾಂಗ್ಲಾ ಪ್ರಜೆಗಳಿಗೆ ಸಹಾಯ ಮಾಡುತ್ತಿದೆ ಎಂಬ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಪ್ರವಾಹ ಪೀಡಿತ ಬಾಂಗ್ಲಾ ಜನರಿಗೆ ಇಸ್ಕಾನ್ ಸಹಾಯ ಮಾಡುತ್ತಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋಗಳನ್ನು  ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ ಇಸ್ಕಾನ್​ ಬಾಂಗ್ಲಾದೇಶ ವೆಬ್​ಸೈಟ್​ನಲ್ಲಿ ಜೂನ್ 22, 2022 ರಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. ಇದಕ್ಕೆ ‘ಇಸ್ಕಾನ್ ಸಿಲ್ಹೆಟ್ ಪ್ರವಾಹ ಸಂತ್ರಸ್ತರ ಪರವಾಗಿ ನಿಂತಿದೆ’ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗುತ್ತಿರುವ ವಿಡಿಯೋವನ್ನು ಲಗತ್ತಿಸಿದೆ.

ವೆಬ್‌ಸೈಟ್‌ನಲ್ಲಿ ಲಭ್ಯವಾದ ವರದಿಯ ಪ್ರಕಾರ, ‘ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಸಿಲ್ಹೆಟ್ ಮತ್ತು ಸುನಮ್‌ಗಂಜ್‌ನಲ್ಲಿ ಪ್ರವಾಹದಿಂದ  ಪರಿಸ್ಥಿತಿ ಗಂಭೀರವಾಗಿದೆ. ಸರ್ಕಾರ ವಿವಿಧೆಡೆ ಪರಿಹಾರ ವಿತರಣೆ ಮಾಡಿದರೂ ಹಲವರಿಗೆ ಕೈತುಂಬ ಆಹಾರ ಸಿಕ್ಕಿಲ್ಲ. ಪ್ರವಾಹ ಸಂತ್ರಸ್ತರ ಮನೆಗಳಿಗೆ ತೆರಳಿ ಸಾಧ್ಯವಾದಷ್ಟು ಆಹಾರ ನೆರವು ನೀಡುತ್ತಿದ್ದೇವೆ. ಸಿಲ್ಹೆಟ್ ನಗರದ ಹೊರತಾಗಿ, ಸಮೀಪದ ಉಪಜಿಲಾಗಳಲ್ಲಿ ಪ್ರತಿದಿನ 3-4 ಸಾವಿರ ಜನರಿಗೆ ಬೇಯಿಸಿದ ಆಹಾರವನ್ನು ವಿತರಿಸಲಾಗುತ್ತದೆ. ಆಹಾರದ ಜೊತೆಗೆ, ಇಸ್ಕಾನ್ ಬಟ್ಟೆಗಳು, ಅಗತ್ಯ ಔಷಧಗಳು, ನೀರು ಶುದ್ಧೀಕರಣಕ್ಕಾಗಿ ಮಾತ್ರೆಗಳು ಮತ್ತು ವೈದ್ಯಕೀಯ ಆರೈಕೆಯಂತಹ ಇತರ ಅಗತ್ಯ ಸಹಾಯವನ್ನು ವಿತರಿಸುತ್ತದೆ. ಪ್ರವಾಹ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಇಸ್ಕಾನ್ ಪ್ರವಾಹ ಸಂತ್ರಸ್ತರ ಪಕ್ಕದಲ್ಲಿರುತ್ತದೆ’ ಎಂದು ವರದಿಯಲ್ಲಿದೆ.

ಹಾಗೆಯೆ ಜೂನ್ 20, 2022 ರಂದು Iskcon Youth Forum, Sylhet ಫೇಸ್​ಬುಕ್ ಖಾತೆಯಲ್ಲಿ ‘ಇದು ಅನ್ನವಲ್ಲ ಕೋಟ್ಯಾಂತರ ರೂಪಾಯಿಗಳ ಸಂಪತ್ತು. ಸ್ವಲ್ಪ ಆಹಾರಕ್ಕಾಗಿ ಜನರು ಎಷ್ಟು ಚಡಪಡಿಸುತ್ತಾರೆ ನೋಡಿ. ಪ್ರವಾಹ ಸಂತ್ರಸ್ತರ ಪಕ್ಕದಲ್ಲಿ ಇಸ್ಕಾನ್ ಸಿಲ್ಹೆಟ್‌. ನೀವೂ ಮುಂದೆ ಬನ್ನಿ’ ಎಂಬ ಅಡಿಬರಹದೊಂದಿಗೆ ಇದೇ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ಸಂಕೀರ್ತನ್ ಫೆಸ್ಟ್ ಎಂಬ ಯೂಟ್ಯೂಬ್ ಚಾನೆಲ್​ನಲ್ಲಿಯೂ ಜೂನ್ 20, 2022 ರಂದು ಇದೇ ವಿಡಿಯೋವನ್ನು ಶೇರ್ ಮಾಡಲಾಗಿದ್ದು, ‘ಇಸ್ಕಾನ್ ಸಿಲ್ಹೆಟ್ ಮತ್ತು ಸಂಕೀರ್ತನ್ ಫೆಸ್ಟ್ ಸಿಲ್ಹೆಟ್-ಸುನಮ್‌ಗಂಜ್‌ನಲ್ಲಿನ ಪ್ರವಾಹ ಪೀಡಿತರಿಗೆ ಸಹಾಯ ಮಾಡುತ್ತಿರುವುದು’ ಎಂಬ ಶೀರ್ಷಿಕೆ ನೀಡಿದೆ.  ಹೀಗಾಗಿ ಬಾಂಗ್ಲಾದೇಶದ ಇತ್ತೀಚಿನ ಗಲಭೆಯಲ್ಲಿ ಕಿಡಿಗೇಡಿಗಳು ಇಸ್ಕಾನ್ ದೇವಾಲಯಕ್ಕೆ ಹಾನಿ ಮಾಡಿದ್ದರೂ, ಇಸ್ಕಾನ್ ಅಲ್ಲಿನ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದೆ ಎಂಬುದು ಸುಳ್ಳು ಎಂದು ವಿಡಿಯೋ ಆಧರಿಸಿ ಸೌತ್‌ಚೆಕ್ ವೆಬ್‌ಸೈಟ್ ವರದಿ ಮಾಡಿದೆ.

ಒಟ್ಟಿನಲ್ಲಿ , ಬಾಂಗ್ಲಾದೇಶದಲ್ಲಿ 2022ರಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಅಲ್ಲಿನ ಜನ ತೊಂದರೆ ಅನುಭವಿಸುವಂತಾಗಿತ್ತು. ಆಗ ಸಿಲ್ಹೆಟ್ ಪ್ರವಾಹ ಸಂತ್ರಸ್ತರಿಗೆ ಇಸ್ಕಾನ್ ಸಹಾಯ ಮಾಡುತ್ತಿರುವ ವಿಡಿಯೋವನ್ನು 2024ರದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...