Homeಫ್ಯಾಕ್ಟ್‌ಚೆಕ್FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

FACT CHECK : ಇಸ್ಕಾನ್‌ ದೇವಸ್ಥಾನದಿಂದ ಬಾಂಗ್ಲಾ ನಿರಾಶ್ರಿತರಿಗೆ ನೆರವು ಎಂಬ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

“ತಿನ್ನುವ ಬಟ್ಟಲಿಗೆ ವಿಷ ಹಾಕಿದರೂ ತಿರುಗಿ ಅವರಿಗೆ ಅಮೃತ ಬಡಿಸುವ ಧರ್ಮ ಅಂತ ಈ ಭೂಮಿಯ ಮೇಲೆ ಇದ್ದರೆ ಅದು ಸನಾತನ ಹಿಂದೂ ಧರ್ಮ ಮಾತ್ರ. ಯಾವ ಜನರು ಬಾಂಗ್ಲಾದೇಶದಲ್ಲಿ ಇಸ್ಕಾನ್ ಟೆಂಪಲ್ ಧ್ವಂಸ ಮಾಡಿದರೋ ಇಂದು ಅದೇ ಪ್ರವಾಹ ಪೀಡಿತ ಜನರಿಗೆ ಇಸ್ಕಾನ್ ಆಹಾರವನ್ನು ಬಡಿಸುವ ಮೂಲಕ ಅವರ ನೆರವಿಗೆ ಧಾವಿಸಿದೆ” ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

ಬಾಂಗ್ಲಾ ಪ್ರವಾಹದ ಕುರಿತು ಅನೇಕ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ. ಇದೀಗ ಇತ್ತೀಚೆಗಷ್ಟೆ ನಡೆದ ಹಿಂಸಾಚಾರದಲ್ಲಿ ಕಿಡಿಗೇಡಿಗಳು ಬಾಂಗ್ಲಾದ ಖುಲ್ನಾ ವಿಭಾಗದಲ್ಲಿ ನೆಲೆಗೊಂಡಿರುವ ಮೆಹರ್‌ಪುರದಲ್ಲಿರುವ ಇಸ್ಕಾನ್ ದೇವಾಲಯವನ್ನು ಧ್ವಂಸಗೊಳಿಸಿ ಬೆಂಕಿ ಹಚ್ಚಿದ್ದರು. ಹೀಗಿದ್ದರೂ ಇಸ್ಕಾನ್, ಪ್ರವಾಹದಲ್ಲಿ ಸಿಲುಕಿರುವ ಬಾಂಗ್ಲಾ ಪ್ರಜೆಗಳಿಗೆ ಸಹಾಯ ಮಾಡುತ್ತಿದೆ ಎಂಬ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.

ಪ್ರವಾಹ ಪೀಡಿತ ಬಾಂಗ್ಲಾ ಜನರಿಗೆ ಇಸ್ಕಾನ್ ಸಹಾಯ ಮಾಡುತ್ತಿದೆ ಎಂದು ಪ್ರತಿಪಾದಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾಗುತ್ತಿರುವ ವಿಡಿಯೋಗಳನ್ನು  ನೀವು ಇಲ್ಲಿಇಲ್ಲಿ ನೋಡಬಹುದು. ಹಾಗಿದ್ದರೆ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ನಿಜವೇ? ಎಂದು ಪರಿಶೀಲಿಸೋಣ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆಯನ್ನು ಪರಿಶೀಲಿಸಲು ವಿಡಿಯೋ ಕುರಿತು ಮಾಹಿತಿ ಹುಡುಕಿದಾಗ ಇಸ್ಕಾನ್​ ಬಾಂಗ್ಲಾದೇಶ ವೆಬ್​ಸೈಟ್​ನಲ್ಲಿ ಜೂನ್ 22, 2022 ರಲ್ಲಿ ಪ್ರಕಟವಾದ ಲೇಖನವೊಂದು ಲಭ್ಯವಾಗಿದೆ. ಇದಕ್ಕೆ ‘ಇಸ್ಕಾನ್ ಸಿಲ್ಹೆಟ್ ಪ್ರವಾಹ ಸಂತ್ರಸ್ತರ ಪರವಾಗಿ ನಿಂತಿದೆ’ ಎಂಬ ಶೀರ್ಷಿಕೆಯೊಂದಿಗೆ ವೈರಲ್ ಆಗುತ್ತಿರುವ ವಿಡಿಯೋವನ್ನು ಲಗತ್ತಿಸಿದೆ.

ವೆಬ್‌ಸೈಟ್‌ನಲ್ಲಿ ಲಭ್ಯವಾದ ವರದಿಯ ಪ್ರಕಾರ, ‘ಭಾರೀ ಮಳೆ ಮತ್ತು ಭೂಕುಸಿತದಿಂದಾಗಿ ಸಿಲ್ಹೆಟ್ ಮತ್ತು ಸುನಮ್‌ಗಂಜ್‌ನಲ್ಲಿ ಪ್ರವಾಹದಿಂದ  ಪರಿಸ್ಥಿತಿ ಗಂಭೀರವಾಗಿದೆ. ಸರ್ಕಾರ ವಿವಿಧೆಡೆ ಪರಿಹಾರ ವಿತರಣೆ ಮಾಡಿದರೂ ಹಲವರಿಗೆ ಕೈತುಂಬ ಆಹಾರ ಸಿಕ್ಕಿಲ್ಲ. ಪ್ರವಾಹ ಸಂತ್ರಸ್ತರ ಮನೆಗಳಿಗೆ ತೆರಳಿ ಸಾಧ್ಯವಾದಷ್ಟು ಆಹಾರ ನೆರವು ನೀಡುತ್ತಿದ್ದೇವೆ. ಸಿಲ್ಹೆಟ್ ನಗರದ ಹೊರತಾಗಿ, ಸಮೀಪದ ಉಪಜಿಲಾಗಳಲ್ಲಿ ಪ್ರತಿದಿನ 3-4 ಸಾವಿರ ಜನರಿಗೆ ಬೇಯಿಸಿದ ಆಹಾರವನ್ನು ವಿತರಿಸಲಾಗುತ್ತದೆ. ಆಹಾರದ ಜೊತೆಗೆ, ಇಸ್ಕಾನ್ ಬಟ್ಟೆಗಳು, ಅಗತ್ಯ ಔಷಧಗಳು, ನೀರು ಶುದ್ಧೀಕರಣಕ್ಕಾಗಿ ಮಾತ್ರೆಗಳು ಮತ್ತು ವೈದ್ಯಕೀಯ ಆರೈಕೆಯಂತಹ ಇತರ ಅಗತ್ಯ ಸಹಾಯವನ್ನು ವಿತರಿಸುತ್ತದೆ. ಪ್ರವಾಹ ಪರಿಸ್ಥಿತಿ ಸಹಜ ಸ್ಥಿತಿಗೆ ಬರುವವರೆಗೆ ಇಸ್ಕಾನ್ ಪ್ರವಾಹ ಸಂತ್ರಸ್ತರ ಪಕ್ಕದಲ್ಲಿರುತ್ತದೆ’ ಎಂದು ವರದಿಯಲ್ಲಿದೆ.

ಹಾಗೆಯೆ ಜೂನ್ 20, 2022 ರಂದು Iskcon Youth Forum, Sylhet ಫೇಸ್​ಬುಕ್ ಖಾತೆಯಲ್ಲಿ ‘ಇದು ಅನ್ನವಲ್ಲ ಕೋಟ್ಯಾಂತರ ರೂಪಾಯಿಗಳ ಸಂಪತ್ತು. ಸ್ವಲ್ಪ ಆಹಾರಕ್ಕಾಗಿ ಜನರು ಎಷ್ಟು ಚಡಪಡಿಸುತ್ತಾರೆ ನೋಡಿ. ಪ್ರವಾಹ ಸಂತ್ರಸ್ತರ ಪಕ್ಕದಲ್ಲಿ ಇಸ್ಕಾನ್ ಸಿಲ್ಹೆಟ್‌. ನೀವೂ ಮುಂದೆ ಬನ್ನಿ’ ಎಂಬ ಅಡಿಬರಹದೊಂದಿಗೆ ಇದೇ ವಿಡಿಯೊವನ್ನು ಹಂಚಿಕೊಳ್ಳಲಾಗಿದೆ.

ಸಂಕೀರ್ತನ್ ಫೆಸ್ಟ್ ಎಂಬ ಯೂಟ್ಯೂಬ್ ಚಾನೆಲ್​ನಲ್ಲಿಯೂ ಜೂನ್ 20, 2022 ರಂದು ಇದೇ ವಿಡಿಯೋವನ್ನು ಶೇರ್ ಮಾಡಲಾಗಿದ್ದು, ‘ಇಸ್ಕಾನ್ ಸಿಲ್ಹೆಟ್ ಮತ್ತು ಸಂಕೀರ್ತನ್ ಫೆಸ್ಟ್ ಸಿಲ್ಹೆಟ್-ಸುನಮ್‌ಗಂಜ್‌ನಲ್ಲಿನ ಪ್ರವಾಹ ಪೀಡಿತರಿಗೆ ಸಹಾಯ ಮಾಡುತ್ತಿರುವುದು’ ಎಂಬ ಶೀರ್ಷಿಕೆ ನೀಡಿದೆ.  ಹೀಗಾಗಿ ಬಾಂಗ್ಲಾದೇಶದ ಇತ್ತೀಚಿನ ಗಲಭೆಯಲ್ಲಿ ಕಿಡಿಗೇಡಿಗಳು ಇಸ್ಕಾನ್ ದೇವಾಲಯಕ್ಕೆ ಹಾನಿ ಮಾಡಿದ್ದರೂ, ಇಸ್ಕಾನ್ ಅಲ್ಲಿನ ಪ್ರವಾಹ ಸಂತ್ರಸ್ತರಿಗೆ ಸಹಾಯ ಮಾಡಿದೆ ಎಂಬುದು ಸುಳ್ಳು ಎಂದು ವಿಡಿಯೋ ಆಧರಿಸಿ ಸೌತ್‌ಚೆಕ್ ವೆಬ್‌ಸೈಟ್ ವರದಿ ಮಾಡಿದೆ.

ಒಟ್ಟಿನಲ್ಲಿ , ಬಾಂಗ್ಲಾದೇಶದಲ್ಲಿ 2022ರಲ್ಲಿ ಭಾರೀ ಮಳೆಯಿಂದಾಗಿ ಉಂಟಾದ ಪ್ರವಾಹದಿಂದ ಅಲ್ಲಿನ ಜನ ತೊಂದರೆ ಅನುಭವಿಸುವಂತಾಗಿತ್ತು. ಆಗ ಸಿಲ್ಹೆಟ್ ಪ್ರವಾಹ ಸಂತ್ರಸ್ತರಿಗೆ ಇಸ್ಕಾನ್ ಸಹಾಯ ಮಾಡುತ್ತಿರುವ ವಿಡಿಯೋವನ್ನು 2024ರದ್ದು ಎಂದು ತಪ್ಪಾಗಿ ಹಂಚಿಕೊಳ್ಳಲಾಗಿದೆ. ಹಾಗಾಗಿ ಪೋಸ್ಟ್‌ನಲ್ಲಿ ಮಾಡಿದ ಪ್ರತಿಪಾದನೆ ತಪ್ಪಾಗಿದೆ.

ಇದನ್ನೂ ಓದಿ : FACT CHECK : ಬಾಹ್ಯಾಕಾಶದಿಂದ ಜಿಗಿದು ಭೂಮಿ ತಲುಪಿದ ವಿಜ್ಞಾನಿ ಆಸ್ಟ್ರೇಲಿಯಾದವರಲ್ಲ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...