Homeನಿಜವೋ ಸುಳ್ಳೋFact Check: ಭಾರತ-ಚೀನಾ ಗಡಿಯಲ್ಲಿ 158 ಭಾರತೀಯ ಸೈನಿಕರ ಹತ್ಯೆ?

Fact Check: ಭಾರತ-ಚೀನಾ ಗಡಿಯಲ್ಲಿ 158 ಭಾರತೀಯ ಸೈನಿಕರ ಹತ್ಯೆ?

- Advertisement -
- Advertisement -

ಲಡಾಕ್‌ನಲ್ಲಿ ಭಾರತ ಚೀನಾ ಸೇನಾಪಡೆಗಳ ನಡುವೆ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿದೆ. ಎರಡೂ ದೇಶಗಳು ತಮ್ಮ ಹೆಚ್ಚಿನ ಸೇನೆಯನ್ನು ನಿಯೋಜಿಸುತ್ತಿವೆ. ಇಂತಹ ಸಂದರ್ಭದಲ್ಲಿ ಗಡಿಯಲ್ಲಿ 158 ಭಾರತೀಯ ಸೈನಿಕರ ಹತ್ಯೆಯಾಗಿದೆ ಎಂಬ ಸಂದೇಶ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದೆ.

ಫೇಸ್‌ಬುಕ್‌ನಲ್ಲಿ ಈ ರೀತಿಯ ಸಂದೇಶಗಳು ಹರಿದಾಡುತ್ತಿವೆ. ನಾರ್ಥ್ ಸಿಕ್ಕಿಂನಲ್ಲಿ ನಡೆದ ಘರ್ಷಣೆಯಲ್ಲಿ ಚೀನಾದ ಸೈನಿಕರಿಂದ 158 ಭಾರತೀಯ ಸೈನಿಕರು ಹತರಾಗಿದ್ದಾರೆ ಎಂದು ಫೋಟೊ ಜೊತೆಗೆ ಷೇರ್ ಮಾಡಲಾಗಿದೆ.

ಫ್ಯಾಕ್ಟ್‌ಚೆಕ್‌

ವೈರಲ್‌ ಚಿತ್ರವನ್ನು ರಿವರ್ಸ್ ಇಮೇಜ್ ಸರ್ಚ್ ಮಾಡಿದಾಗ ಜುಲೈ 2017 ರಿಂದ ಹಲವಾರು ಪಾಕಿಸ್ತಾನಿ ಮತ್ತು ಚೀನೀ ಮಾಧ್ಯಮಗಳು ಈ ಚಿತ್ರವನ್ನು ಹಲವಾರು ಬಾರಿ ಬಳಸಿದೆ ಎಂದು ತಿಳಿದುಬಂದಿದೆ.

2017 ರಲ್ಲಿ ಭಾರತ ಮತ್ತು ಚೀನಾ ನಡುವಿನ ಡೋಕ್ಲಾಮ್ ಉದ್ವಿಗ್ನತೆಯ ಸಮಯದಲ್ಲಿ ಹಲವಾರು ಪಾಕಿಸ್ತಾನಿ ಮಾಧ್ಯಮಗಳು ಈ ಚಿತ್ರವನ್ನು ಪ್ರಕಟಿಸಿದ್ದು ‌ಆಗ “158 ಭಾರತೀಯ ಸೈನಿಕರನ್ನು ಚೀನಾದ ಸೇನೆಯು ಹತ್ಯೆಗೈದಿದೆ” ಎಂದು ವರದಿ ಮಾಡಲಾಗಿತ್ತು.

ಆದರೆ ಆಗಲೇ ಭಾರತ ಮತ್ತು ಚೀನಾ ಎರಡೂ ದೇಶಗಳು ಸಹ ಪಾಕಿಸ್ತಾನದ ವರದಿಗಳನ್ನು ನಕಲಿ ಸುದ್ದಿ ಎಂದು ತಳ್ಳಿಹಾಕಿದ್ದವು. ವೈರಲ್ ಚಿತ್ರವು ಸಿಕ್ಕಿಂ ಬಳಿಯದಲ್ಲ ಎಂದು ಭಾರತ ಸರ್ಕಾರ ಸ್ಪಷ್ಟವಾಗಿ ಹೇಳಿದೆ ಎಂದು ಹಲವು ಮಾಧ್ಯಮಗಳು ವರದಿ ಮಾಡಿದ್ದವು.

ಅರುಣಾಚಲ ಪ್ರದೇಶದ ತವಾಂಗ್‌ನಲ್ಲಿರುವ ಸೇನಾ ಶಿಬಿರದಲ್ಲಿ ಆಕಸ್ಮಿಕ ಸ್ಫೋಟ ಸಂಭವಿಸಿ ಒಬ್ಬರು ಮೃತರಾಗಿದ್ದು, ಆರು ಜನ ಗಾಯಗೊಂಡಿದ್ದರು ಎಂದು ಮೇ 2017 ರಿಂದ ಹಲವಾರು ಮಾಧ್ಯಮಗಳ ವರದಿಗಳು ತಿಳಿಸಿವೆ.

ಸ್ಥಳೀಯ ಸೇನಾ ಮೂಲಗಳ ಪ್ರಕಾರ, ಈಗ ವೈರಲ್ ಆಗಿರುವ ಚಿತ್ರವು ಅದೇ ಘಟನೆಯಾಗಿದೆ. ಅಲ್ಲಿಗೆ ಭಾರತ ಚೀನಾದ ಸೇನಾ ಸಮರಕ್ಕೂ ಈ ಚಿತ್ರಕ್ಕೂ ಸಂಬಂಧವಿಲ್ಲ ಮತ್ತು ಈ ಚಿತ್ರವು ಮೂರು ವರ್ಷದಷ್ಟು ಹಳೆಯದು ಎಂಬುದು ಸ್ಪಷ್ಟವಾಗುತ್ತದೆ.

ಅಲ್ಲದೇ ಭಾರತೀಯ ಅಥವಾ ಚೀನಾದ ಕಡೆಯಿಂದ ಇತ್ತೀಚಿನ ಬಿಕ್ಕಟ್ಟಿನ ಸಂದರ್ಭದಲ್ಲಿ ಯಾವುದೇ ಭಾರತೀಯ ಸೈನಿಕನು ಪ್ರಾಣ ಕಳೆದುಕೊಂಡಿದ್ದಾನೆ ಎಂಬ ವರದಿಗಳು ಬಂದಿಲ್ಲ. ಹಾಗಾಗಿ ಚೀನಾದ ಸೇನೆಯಿಂದ 158 ಭಾರತೀಯ ಸೈನಿಕರನ್ನು ಹತ್ಯೆ ಎಂಬುದು ಸಂಪೂರ್ಣ ಸುಳ್ಳು ಸುದ್ದಿಯಾಗಿದೆ.

ಸತ್ಯ: ಈ ಫೋಟೊ ಮೂರು ವರ್ಷ ಹಳೆಯದಾಗಿದ್ದು, 2017ರಲ್ಲಿ ಪಾಕಿಸ್ತಾನದ ಕೆಲವು ಮಾಧ್ಯಮಗಳು ಚೀನಾ ಗಡಿಯಲ್ಲಿ ಭಾರತೀಯ ಸೈನಿಕರ ಹತ್ಯೆ ಎಂದು ಪ್ರಕಟಿಸಿದ್ದವು. ಆದರೆ ಇದನ್ನು ಭಾರತ ಮತ್ತು ಚೀನಾ ಎರಡು ದೇಶಗಳು ಸುಳ್ಳು ಸುದ್ದಿ ಎಂದು ಸ್ಪಷ್ಟಪಡಿಸಿದ್ದವು.


ಇದನ್ನೂ ಓದಿ: Fact Check: ಕೊರೊನಾ ರೋಗಿಯನ್ನೇ ಪ್ರೇಮಿಸಿ, ನಿಶ್ಚಿತಾರ್ಥವಾದ ಡಾಕ್ಟರ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...