Homeಫ್ಯಾಕ್ಟ್‌ಚೆಕ್FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿದ ನಡೆದ ಪ್ರತಿಭಟನೆ ಎಂದು ಡ್ರೋನ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಿನ್ನೆಲೆಯಲ್ಲಿ ದ್ವಿಜೇಂದ್ರಲಾಲ್ ರಾಯ್ ಬರೆದ ದೇಶ ಭಕ್ತಿಯ ಬಂಗಾಳಿ ಹಾಡು “ಧನ ಧನ್ಯೋ ಪುಷ್ಪೇ ಭೋರಾ” ಹಾಕಿರುವುದು ಕೇಳಿಸುತ್ತದೆ. ಅಲ್ಲದೆ, ಸಾವಿರಾರು ಜನರು ಮೇಣದ ದೀಪ ಹಿಡಿದು ನಿಂತಿರುವುದು ಇದೆ.

ಬಿಜೆಪಿ ಯುವಮೋರ್ಚಾ, ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಹಿಂದುತ್ವವಾದಿ ದೇಬಜಿತ್ ಸರ್ಕಾರ್ (@debajits3110) ಸೆಪ್ಟೆಂಬರ್ 5ರಂದು ವೈರಲ್ ವಿಡಿಯೋ ಹಂಚಿಕೊಂಡು, “ಇತಿಹಾಸ ಸೃಷ್ಟಿಯಾಗಿದೆ! ಇಡೀ ಕೋಲ್ಕತ್ತಾದ ಜನರು ಇಂದು ಬೀದಿಗಿಳಿದಿದ್ದಾರೆ. ತಿಲೋತ್ತಮನಿಗೆ ನ್ಯಾಯ ಸಿಗುವವರೆಗೂ ಈ ಚಳವಳಿಯನ್ನು ನಿಲ್ಲಿಸುವುದು ಅಸಾಧ್ಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೆಪ್ಟೆಂಬರ್ 5ರಂದು ವಿಡಿಯೋ ಹಂಚಿಕೊಂಡು “ಕಳೆದ ರಾತ್ರಿ ಪಶ್ಚಿಮ ಬಂಗಾಳದಲ್ಲಿ ದ್ವಿಜೇಂದ್ರಲಾಲ್ ರಾಯ್ ಅವರ ದೇಶ ಭಕ್ತಿಯ ಕ್ಲಾಸಿಕ್ ಹಾಡು ‘ಧನ್ ಧನ್ಯ ಪುಷ್ಪೇ ವ್ರಾ’ದೊಂದಿಗೆ ಆರ್‌ಜಿ ಕರ್‌ ಘಟನೆಯ ನ್ಯಾಯಕ್ಕಾಗಿ ಪ್ರತಿಭಟನೆ ಸ್ಪೋಟಗೊಂಡಿತು” ಎಂದು ಬರೆದುಕೊಂಡಿದ್ದರು.

ಬಿಜೆಪಿ ವಕ್ತಾರ ಪ್ರತ್ಯೂಷ್ ಕಾಂತ್ ಸೆಪ್ಟೆಂಬರ್ 5ರಂದು ವಿಡಿಯೋ ಹಂಚಿಕೊಂಡು “ಕಳೆದ ರಾತ್ರಿ, ಪಶ್ಚಿಮ ಬಂಗಾಳದಲ್ಲಿ ದ್ವಿಜೇಂದ್ರಲಾಲ್ ರಾಯ್ ಅವರ ದೇಶಭಕ್ತಿಯ ಕ್ಲಾಸಿಕ್, ‘ಧನ್ ಧನ್ಯ ಪುಷ್ಪೇ ವ್ರಾ’ ನೊಂದಿಗೆ #JUSTCAforrogkar ಪ್ರತಿಭಟನೆ ಸ್ಫೋಟಿಸಿತು” ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಫೇಸ್‌ಬುಕ್ ಮತ್ತು ಎಕ್ಸ್‌ ಬಳಕೆದಾರರು ವೈರಲ್ ವಿಡಿಯೋ ಹಂಚಿಕೊಂಡು “ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆದಿದೆ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ ‘ANICUR ROHOMAN M‘ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗಸ್ಟ್ 11ರಂದು ವಿಡಿಯೋ ಅಪ್ಲೋಡ್‌ ಆಗಿರುವುದು ಕಂಡು ಬಂದಿದೆ. ವಿಡಿಯೋಗೆ ಕೊಟ್ಟಿದ್ದ ಬೆಂಗಾಲಿ ಭಾಷೆಯ ಕ್ಯಾಪ್ಶನ್ ಅನ್ನು ಭಾಷಾಂತರಿಸಿ ನೋಡಿದಾಗ “24ರ ಹುತಾತ್ಮರ ಸ್ಮರಣಾರ್ಥ ಇಂದು ಉತ್ತರದಲ್ಲಿ ಮೇಣದ ಬತ್ತಿ ಬೆಳಗಳಾಯಿತು. ನಾವು ನಿಮ್ಮನ್ನು ಮರೆಯುವುದಿಲ್ಲ” ಎಂದು ಬರೆದಿರುವುದು ಗೊತ್ತಾಗಿದೆ. ಉತ್ತರ ಎಂಬುವುದು ಎಲ್ಲಿ ಎಂದು ನೋಡಿದಾಗ, ಅದು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸಮೀಪದ ಪ್ರದೇಶದ ಎಂದು ತಿಳಿದು ಬಂದಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಆಗಸ್ಟ್ 9ರಂದು ಫೇಸ್‌ಬುಕ್ ಖಾತೆಯೊಂದರಲ್ಲಿ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ವಿಡಿಯೋಗೆ “ಹುತಾತ್ಮರಿಗೆ ಗೌರವ ಸಲ್ಲಿಸುವ ಸಲುವಾಗಿ ಆಗಸ್ಟ್ 9, 2024ರಂದು ಉತ್ತರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಯಿತು” ಎಂದು ಕ್ಯಾಪ್ಶನ್ ಕೊಡಲಾಗಿದೆ.

faiyaz (@catstits) ಎಂಬ ಎಕ್ಸ್‌ ಖಾತೆಯಲ್ಲಿ ಆಗಸ್ಟ್ 9, 2024ರಂದು ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, “ಇಂದು ಉತ್ತರ ಫ್ರೆಂಡ್ಸ್‌ ಕ್ಲಬ್‌ನಲ್ಲಿ ಹುತಾತ್ಮರನ್ನು ಸ್ಮರಿಸಲು ಇಡೀ ದೇಶ ಒಗ್ಗೂಡಿ, ಕ್ಯಾಂಡಲ್ ಲೈಟ್‌ ಹಚ್ಚಲಾಯಿತು” ಎಂದು ಬರೆದುಕೊಂಡಿದ್ದರು.

ಬಾಂಗ್ಲಾದೇಶದ ಉತ್ತರದಲ್ಲಿ ಕ್ಯಾಂಡಲ್ ಮಾರ್ಚ್ ನಡೆದಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿತ್ತು. ಈ ಕುರಿತು ಬಂಗಾಳಿ ಭಾಷೆಯ ಸುದ್ದಿ ವಾಹಿನಿ ಎನ್‌ಟಿವಿ ಮಾಡಿರುವ ವರದಿಯ ಲಿಂಕ್ ಇಲ್ಲಿದೆ.

‘Rajuk College Photography Club – RCPC’ ಫೇಸ್‌ಬುಕ್ ಖಾತೆಯಲ್ಲಿ ಆಗಸ್ಟ್ 7ರಂದು ಕ್ಯಾಂಡಲ್ ಮಾರ್ಚ್ ಕುರಿತು ಪೋಸ್ಟರ್ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ಪ್ರತಿಭಟನಾ ಸ್ಥಳ ಫ್ರೆಂಡ್ಸ್ ಕ್ಲಬ್ ಫೀಲ್ಡ್ ಸೆಕ್ಟರ್ 3, ಉತ್ತರ, ಢಾಕಾ ಎಂದು ಬರೆಯಲಾಗಿತ್ತು.

ಒಟ್ಟಿನಲ್ಲಿ ಬಾಂಗ್ಲಾದೇಶದ ಢಾಕಾ ಸಮೀಪದ ಉತ್ತರ ಎಂಬ ಸ್ಥಳದಲ್ಲಿ ಹುತಾತ್ಮರನ್ನು ಸ್ಮರಿಸಿ ಕ್ಯಾಂಡಲ್ ಲೈಟ್ ಮಾರ್ಚ್ ಮಾಡಿರುವುದನ್ನು ಕೋಲ್ಕತ್ತಾದ ಪ್ರತಿಭಟನೆಯ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...