Homeಫ್ಯಾಕ್ಟ್‌ಚೆಕ್FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿದ ನಡೆದ ಪ್ರತಿಭಟನೆ ಎಂದು ಡ್ರೋನ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಿನ್ನೆಲೆಯಲ್ಲಿ ದ್ವಿಜೇಂದ್ರಲಾಲ್ ರಾಯ್ ಬರೆದ ದೇಶ ಭಕ್ತಿಯ ಬಂಗಾಳಿ ಹಾಡು “ಧನ ಧನ್ಯೋ ಪುಷ್ಪೇ ಭೋರಾ” ಹಾಕಿರುವುದು ಕೇಳಿಸುತ್ತದೆ. ಅಲ್ಲದೆ, ಸಾವಿರಾರು ಜನರು ಮೇಣದ ದೀಪ ಹಿಡಿದು ನಿಂತಿರುವುದು ಇದೆ.

ಬಿಜೆಪಿ ಯುವಮೋರ್ಚಾ, ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಹಿಂದುತ್ವವಾದಿ ದೇಬಜಿತ್ ಸರ್ಕಾರ್ (@debajits3110) ಸೆಪ್ಟೆಂಬರ್ 5ರಂದು ವೈರಲ್ ವಿಡಿಯೋ ಹಂಚಿಕೊಂಡು, “ಇತಿಹಾಸ ಸೃಷ್ಟಿಯಾಗಿದೆ! ಇಡೀ ಕೋಲ್ಕತ್ತಾದ ಜನರು ಇಂದು ಬೀದಿಗಿಳಿದಿದ್ದಾರೆ. ತಿಲೋತ್ತಮನಿಗೆ ನ್ಯಾಯ ಸಿಗುವವರೆಗೂ ಈ ಚಳವಳಿಯನ್ನು ನಿಲ್ಲಿಸುವುದು ಅಸಾಧ್ಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೆಪ್ಟೆಂಬರ್ 5ರಂದು ವಿಡಿಯೋ ಹಂಚಿಕೊಂಡು “ಕಳೆದ ರಾತ್ರಿ ಪಶ್ಚಿಮ ಬಂಗಾಳದಲ್ಲಿ ದ್ವಿಜೇಂದ್ರಲಾಲ್ ರಾಯ್ ಅವರ ದೇಶ ಭಕ್ತಿಯ ಕ್ಲಾಸಿಕ್ ಹಾಡು ‘ಧನ್ ಧನ್ಯ ಪುಷ್ಪೇ ವ್ರಾ’ದೊಂದಿಗೆ ಆರ್‌ಜಿ ಕರ್‌ ಘಟನೆಯ ನ್ಯಾಯಕ್ಕಾಗಿ ಪ್ರತಿಭಟನೆ ಸ್ಪೋಟಗೊಂಡಿತು” ಎಂದು ಬರೆದುಕೊಂಡಿದ್ದರು.

ಬಿಜೆಪಿ ವಕ್ತಾರ ಪ್ರತ್ಯೂಷ್ ಕಾಂತ್ ಸೆಪ್ಟೆಂಬರ್ 5ರಂದು ವಿಡಿಯೋ ಹಂಚಿಕೊಂಡು “ಕಳೆದ ರಾತ್ರಿ, ಪಶ್ಚಿಮ ಬಂಗಾಳದಲ್ಲಿ ದ್ವಿಜೇಂದ್ರಲಾಲ್ ರಾಯ್ ಅವರ ದೇಶಭಕ್ತಿಯ ಕ್ಲಾಸಿಕ್, ‘ಧನ್ ಧನ್ಯ ಪುಷ್ಪೇ ವ್ರಾ’ ನೊಂದಿಗೆ #JUSTCAforrogkar ಪ್ರತಿಭಟನೆ ಸ್ಫೋಟಿಸಿತು” ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಫೇಸ್‌ಬುಕ್ ಮತ್ತು ಎಕ್ಸ್‌ ಬಳಕೆದಾರರು ವೈರಲ್ ವಿಡಿಯೋ ಹಂಚಿಕೊಂಡು “ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆದಿದೆ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ ‘ANICUR ROHOMAN M‘ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗಸ್ಟ್ 11ರಂದು ವಿಡಿಯೋ ಅಪ್ಲೋಡ್‌ ಆಗಿರುವುದು ಕಂಡು ಬಂದಿದೆ. ವಿಡಿಯೋಗೆ ಕೊಟ್ಟಿದ್ದ ಬೆಂಗಾಲಿ ಭಾಷೆಯ ಕ್ಯಾಪ್ಶನ್ ಅನ್ನು ಭಾಷಾಂತರಿಸಿ ನೋಡಿದಾಗ “24ರ ಹುತಾತ್ಮರ ಸ್ಮರಣಾರ್ಥ ಇಂದು ಉತ್ತರದಲ್ಲಿ ಮೇಣದ ಬತ್ತಿ ಬೆಳಗಳಾಯಿತು. ನಾವು ನಿಮ್ಮನ್ನು ಮರೆಯುವುದಿಲ್ಲ” ಎಂದು ಬರೆದಿರುವುದು ಗೊತ್ತಾಗಿದೆ. ಉತ್ತರ ಎಂಬುವುದು ಎಲ್ಲಿ ಎಂದು ನೋಡಿದಾಗ, ಅದು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸಮೀಪದ ಪ್ರದೇಶದ ಎಂದು ತಿಳಿದು ಬಂದಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಆಗಸ್ಟ್ 9ರಂದು ಫೇಸ್‌ಬುಕ್ ಖಾತೆಯೊಂದರಲ್ಲಿ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ವಿಡಿಯೋಗೆ “ಹುತಾತ್ಮರಿಗೆ ಗೌರವ ಸಲ್ಲಿಸುವ ಸಲುವಾಗಿ ಆಗಸ್ಟ್ 9, 2024ರಂದು ಉತ್ತರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಯಿತು” ಎಂದು ಕ್ಯಾಪ್ಶನ್ ಕೊಡಲಾಗಿದೆ.

faiyaz (@catstits) ಎಂಬ ಎಕ್ಸ್‌ ಖಾತೆಯಲ್ಲಿ ಆಗಸ್ಟ್ 9, 2024ರಂದು ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, “ಇಂದು ಉತ್ತರ ಫ್ರೆಂಡ್ಸ್‌ ಕ್ಲಬ್‌ನಲ್ಲಿ ಹುತಾತ್ಮರನ್ನು ಸ್ಮರಿಸಲು ಇಡೀ ದೇಶ ಒಗ್ಗೂಡಿ, ಕ್ಯಾಂಡಲ್ ಲೈಟ್‌ ಹಚ್ಚಲಾಯಿತು” ಎಂದು ಬರೆದುಕೊಂಡಿದ್ದರು.

ಬಾಂಗ್ಲಾದೇಶದ ಉತ್ತರದಲ್ಲಿ ಕ್ಯಾಂಡಲ್ ಮಾರ್ಚ್ ನಡೆದಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿತ್ತು. ಈ ಕುರಿತು ಬಂಗಾಳಿ ಭಾಷೆಯ ಸುದ್ದಿ ವಾಹಿನಿ ಎನ್‌ಟಿವಿ ಮಾಡಿರುವ ವರದಿಯ ಲಿಂಕ್ ಇಲ್ಲಿದೆ.

‘Rajuk College Photography Club – RCPC’ ಫೇಸ್‌ಬುಕ್ ಖಾತೆಯಲ್ಲಿ ಆಗಸ್ಟ್ 7ರಂದು ಕ್ಯಾಂಡಲ್ ಮಾರ್ಚ್ ಕುರಿತು ಪೋಸ್ಟರ್ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ಪ್ರತಿಭಟನಾ ಸ್ಥಳ ಫ್ರೆಂಡ್ಸ್ ಕ್ಲಬ್ ಫೀಲ್ಡ್ ಸೆಕ್ಟರ್ 3, ಉತ್ತರ, ಢಾಕಾ ಎಂದು ಬರೆಯಲಾಗಿತ್ತು.

ಒಟ್ಟಿನಲ್ಲಿ ಬಾಂಗ್ಲಾದೇಶದ ಢಾಕಾ ಸಮೀಪದ ಉತ್ತರ ಎಂಬ ಸ್ಥಳದಲ್ಲಿ ಹುತಾತ್ಮರನ್ನು ಸ್ಮರಿಸಿ ಕ್ಯಾಂಡಲ್ ಲೈಟ್ ಮಾರ್ಚ್ ಮಾಡಿರುವುದನ್ನು ಕೋಲ್ಕತ್ತಾದ ಪ್ರತಿಭಟನೆಯ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನ ಬದಲಿಸಿ ಮನುಸ್ಮೃತಿ ತರಲು SIR ಷಡ್ಯಂತ್ರ: ನಟ ಕಿಶೋರ್

ದೇಶದ ಬಹುಕೋಟಿ ಉದ್ಯಮಿ ಗೌತಮ್ ಅದಾನಿಯದ್ದೇ ಇರಲಿ ಅಥವಾ ಒಬ್ಬ ಬಡ ರೈತನದ್ದೇ ಇರಲಿ, ಪ್ರಜಾಪ್ರಭುತ್ವದಲ್ಲಿ ಎಲ್ಲರ ಮತವೂ ಒಂದೇ ಸಮ. ಪ್ರಜೆಗಳನ್ನೆಲ್ಲ ಸಮಾನವಾಗಿ ಕಾಣುವ ಏಕೈಕ ಅಸ್ತ್ರ ಎಂದರೆ ಅದು ಮತದಾನದ...

Nepal: ಭೀಕರ ಪ್ರವಾಹಕ್ಕೆ ಸವಾಲೆಸೆದು ನಿಂತ ‘ಗ್ರೀನ್ ಹೌಸ್’ ಸ್ಟೋರಿ

'ನಮ್ಮ ಬದುಕು ಇಷ್ಟಕ್ಕೇ ಅಂತ್ಯವಾಯಿತು ಎನಿಸುವ ಕ್ಷಣಗಳು ಎದುರಾದಾಗ ಮನಸ್ಸಿನಲ್ಲಿ ಏನು ಓಡಬಹುದು? ಪ್ರವಾಹ ಬಂದಾಗ ನನಗೂ ಅದೇ ಅನಿಸಿತ್ತು' ಇದು ನೇಪಾಳದ ನುವಾಕೋಟ್ ಜಿಲ್ಲೆಯ ತ್ರಿಶೂಲಿ ನದಿಯಲ್ಲಿ ಹರಿದುಬಂದ ಭೀಕರ ಪ್ರವಾಹದಿಂದ...

NEET: ದೇಶಾದ್ಯಂತ ಪ್ರತಿಭಟನಾಕಾರರ ವಿರುದ್ದ ದಾಖಲಾಗಿದ್ದ ಎಲ್ಲಾ FIRಗಳನ್ನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಮರುಪರೀಕ್ಷೆ ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ಯ (CJP) ಪ್ರತಿಭಟನಾಕಾರರ ವಿರುದ್ಧ ದಾಖಲಾಗಿದ್ದ ಎಲ್ಲಾ FIR ಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ರದ್ದುಗೊಳಿಸಿದೆ. ಕೇಂದ್ರ ಸರ್ಕಾರವು ಈ...

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...