Homeಫ್ಯಾಕ್ಟ್‌ಚೆಕ್FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

FACT CHECK : ಕೋಲ್ಕತ್ತಾದ ಪ್ರತಿಭಟನೆಯದ್ದು ಎಂದು ಬಾಂಗ್ಲಾದೇಶದ ವಿಡಿಯೋ ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಕೋಲ್ಕತ್ತಾದ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಆಗಸ್ಟ್ 9ರಂದು ನಡೆದ ವೈದ್ಯೆಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಖಂಡಿಸಿದ ನಡೆದ ಪ್ರತಿಭಟನೆ ಎಂದು ಡ್ರೋನ್‌ನಲ್ಲಿ ಚಿತ್ರೀಕರಿಸಿದ ವಿಡಿಯೋವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿದೆ.

ವಿಡಿಯೋ ಹಿನ್ನೆಲೆಯಲ್ಲಿ ದ್ವಿಜೇಂದ್ರಲಾಲ್ ರಾಯ್ ಬರೆದ ದೇಶ ಭಕ್ತಿಯ ಬಂಗಾಳಿ ಹಾಡು “ಧನ ಧನ್ಯೋ ಪುಷ್ಪೇ ಭೋರಾ” ಹಾಕಿರುವುದು ಕೇಳಿಸುತ್ತದೆ. ಅಲ್ಲದೆ, ಸಾವಿರಾರು ಜನರು ಮೇಣದ ದೀಪ ಹಿಡಿದು ನಿಂತಿರುವುದು ಇದೆ.

ಬಿಜೆಪಿ ಯುವಮೋರ್ಚಾ, ಬಿಜೆಪಿಯೊಂದಿಗೆ ಗುರುತಿಸಿಕೊಂಡಿರುವ ಹಿಂದುತ್ವವಾದಿ ದೇಬಜಿತ್ ಸರ್ಕಾರ್ (@debajits3110) ಸೆಪ್ಟೆಂಬರ್ 5ರಂದು ವೈರಲ್ ವಿಡಿಯೋ ಹಂಚಿಕೊಂಡು, “ಇತಿಹಾಸ ಸೃಷ್ಟಿಯಾಗಿದೆ! ಇಡೀ ಕೋಲ್ಕತ್ತಾದ ಜನರು ಇಂದು ಬೀದಿಗಿಳಿದಿದ್ದಾರೆ. ತಿಲೋತ್ತಮನಿಗೆ ನ್ಯಾಯ ಸಿಗುವವರೆಗೂ ಈ ಚಳವಳಿಯನ್ನು ನಿಲ್ಲಿಸುವುದು ಅಸಾಧ್ಯ” ಎಂದು ಬರೆದುಕೊಂಡಿದ್ದರು.

ಬಿಜೆಪಿ ಐಟಿ ಸೆಲ್ ಮುಖ್ಯಸ್ಥ ಅಮಿತ್ ಮಾಳವಿಯಾ ಸೆಪ್ಟೆಂಬರ್ 5ರಂದು ವಿಡಿಯೋ ಹಂಚಿಕೊಂಡು “ಕಳೆದ ರಾತ್ರಿ ಪಶ್ಚಿಮ ಬಂಗಾಳದಲ್ಲಿ ದ್ವಿಜೇಂದ್ರಲಾಲ್ ರಾಯ್ ಅವರ ದೇಶ ಭಕ್ತಿಯ ಕ್ಲಾಸಿಕ್ ಹಾಡು ‘ಧನ್ ಧನ್ಯ ಪುಷ್ಪೇ ವ್ರಾ’ದೊಂದಿಗೆ ಆರ್‌ಜಿ ಕರ್‌ ಘಟನೆಯ ನ್ಯಾಯಕ್ಕಾಗಿ ಪ್ರತಿಭಟನೆ ಸ್ಪೋಟಗೊಂಡಿತು” ಎಂದು ಬರೆದುಕೊಂಡಿದ್ದರು.

ಬಿಜೆಪಿ ವಕ್ತಾರ ಪ್ರತ್ಯೂಷ್ ಕಾಂತ್ ಸೆಪ್ಟೆಂಬರ್ 5ರಂದು ವಿಡಿಯೋ ಹಂಚಿಕೊಂಡು “ಕಳೆದ ರಾತ್ರಿ, ಪಶ್ಚಿಮ ಬಂಗಾಳದಲ್ಲಿ ದ್ವಿಜೇಂದ್ರಲಾಲ್ ರಾಯ್ ಅವರ ದೇಶಭಕ್ತಿಯ ಕ್ಲಾಸಿಕ್, ‘ಧನ್ ಧನ್ಯ ಪುಷ್ಪೇ ವ್ರಾ’ ನೊಂದಿಗೆ #JUSTCAforrogkar ಪ್ರತಿಭಟನೆ ಸ್ಫೋಟಿಸಿತು” ಎಂದು ಬರೆದುಕೊಂಡಿದ್ದರು.

ಇನ್ನೂ ಅನೇಕ ಫೇಸ್‌ಬುಕ್ ಮತ್ತು ಎಕ್ಸ್‌ ಬಳಕೆದಾರರು ವೈರಲ್ ವಿಡಿಯೋ ಹಂಚಿಕೊಂಡು “ಕೋಲ್ಕತ್ತಾದಲ್ಲಿ ಪ್ರತಿಭಟನೆ ನಡೆದಿದೆ” ಎಂದಿದ್ದರು.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಸತ್ಯಾಸತ್ಯತೆ ಪರಿಶೀಲಿಸಿದ್ದೇವೆ. ವಿಡಿಯೋ ಸ್ಕ್ರೀನ್ ಶಾಟ್ ಅನ್ನು ಗೂಗಲ್‌ ರಿವರ್ಸ್‌ ಇಮೇಜ್‌ನಲ್ಲಿ ಹಾಕಿ ಸರ್ಚ್ ಮಾಡಿದಾಗ ‘ANICUR ROHOMAN M‘ಎಂಬ ಯೂಟ್ಯೂಬ್‌ ಚಾನೆಲ್‌ನಲ್ಲಿ ಆಗಸ್ಟ್ 11ರಂದು ವಿಡಿಯೋ ಅಪ್ಲೋಡ್‌ ಆಗಿರುವುದು ಕಂಡು ಬಂದಿದೆ. ವಿಡಿಯೋಗೆ ಕೊಟ್ಟಿದ್ದ ಬೆಂಗಾಲಿ ಭಾಷೆಯ ಕ್ಯಾಪ್ಶನ್ ಅನ್ನು ಭಾಷಾಂತರಿಸಿ ನೋಡಿದಾಗ “24ರ ಹುತಾತ್ಮರ ಸ್ಮರಣಾರ್ಥ ಇಂದು ಉತ್ತರದಲ್ಲಿ ಮೇಣದ ಬತ್ತಿ ಬೆಳಗಳಾಯಿತು. ನಾವು ನಿಮ್ಮನ್ನು ಮರೆಯುವುದಿಲ್ಲ” ಎಂದು ಬರೆದಿರುವುದು ಗೊತ್ತಾಗಿದೆ. ಉತ್ತರ ಎಂಬುವುದು ಎಲ್ಲಿ ಎಂದು ನೋಡಿದಾಗ, ಅದು ಬಾಂಗ್ಲಾದೇಶದ ರಾಜಧಾನಿ ಢಾಕಾದ ಸಮೀಪದ ಪ್ರದೇಶದ ಎಂದು ತಿಳಿದು ಬಂದಿದೆ.

ನಾವು ಇನ್ನಷ್ಟು ಮಾಹಿತಿ ಹುಡುಕಿದಾಗ, ಆಗಸ್ಟ್ 9ರಂದು ಫೇಸ್‌ಬುಕ್ ಖಾತೆಯೊಂದರಲ್ಲಿ ವಿಡಿಯೋ ಅಪ್ಲೋಡ್ ಆಗಿರುವುದು ಕಂಡು ಬಂದಿದೆ. ವಿಡಿಯೋಗೆ “ಹುತಾತ್ಮರಿಗೆ ಗೌರವ ಸಲ್ಲಿಸುವ ಸಲುವಾಗಿ ಆಗಸ್ಟ್ 9, 2024ರಂದು ಉತ್ತರದಲ್ಲಿ ಕ್ಯಾಂಡಲ್ ಲೈಟ್ ಮೆರವಣಿಗೆ ನಡೆಯಿತು” ಎಂದು ಕ್ಯಾಪ್ಶನ್ ಕೊಡಲಾಗಿದೆ.

faiyaz (@catstits) ಎಂಬ ಎಕ್ಸ್‌ ಖಾತೆಯಲ್ಲಿ ಆಗಸ್ಟ್ 9, 2024ರಂದು ವಿಡಿಯೋ ಅಪ್ಲೋಡ್ ಮಾಡಲಾಗಿದ್ದು, “ಇಂದು ಉತ್ತರ ಫ್ರೆಂಡ್ಸ್‌ ಕ್ಲಬ್‌ನಲ್ಲಿ ಹುತಾತ್ಮರನ್ನು ಸ್ಮರಿಸಲು ಇಡೀ ದೇಶ ಒಗ್ಗೂಡಿ, ಕ್ಯಾಂಡಲ್ ಲೈಟ್‌ ಹಚ್ಚಲಾಯಿತು” ಎಂದು ಬರೆದುಕೊಂಡಿದ್ದರು.

ಬಾಂಗ್ಲಾದೇಶದ ಉತ್ತರದಲ್ಲಿ ಕ್ಯಾಂಡಲ್ ಮಾರ್ಚ್ ನಡೆದಿರುವ ಬಗ್ಗೆ ಮಾಧ್ಯಮಗಳು ವರದಿ ಮಾಡಿತ್ತು. ಈ ಕುರಿತು ಬಂಗಾಳಿ ಭಾಷೆಯ ಸುದ್ದಿ ವಾಹಿನಿ ಎನ್‌ಟಿವಿ ಮಾಡಿರುವ ವರದಿಯ ಲಿಂಕ್ ಇಲ್ಲಿದೆ.

‘Rajuk College Photography Club – RCPC’ ಫೇಸ್‌ಬುಕ್ ಖಾತೆಯಲ್ಲಿ ಆಗಸ್ಟ್ 7ರಂದು ಕ್ಯಾಂಡಲ್ ಮಾರ್ಚ್ ಕುರಿತು ಪೋಸ್ಟರ್ ಹಂಚಿಕೊಳ್ಳಲಾಗಿತ್ತು. ಅದರಲ್ಲಿ ಪ್ರತಿಭಟನಾ ಸ್ಥಳ ಫ್ರೆಂಡ್ಸ್ ಕ್ಲಬ್ ಫೀಲ್ಡ್ ಸೆಕ್ಟರ್ 3, ಉತ್ತರ, ಢಾಕಾ ಎಂದು ಬರೆಯಲಾಗಿತ್ತು.

ಒಟ್ಟಿನಲ್ಲಿ ಬಾಂಗ್ಲಾದೇಶದ ಢಾಕಾ ಸಮೀಪದ ಉತ್ತರ ಎಂಬ ಸ್ಥಳದಲ್ಲಿ ಹುತಾತ್ಮರನ್ನು ಸ್ಮರಿಸಿ ಕ್ಯಾಂಡಲ್ ಲೈಟ್ ಮಾರ್ಚ್ ಮಾಡಿರುವುದನ್ನು ಕೋಲ್ಕತ್ತಾದ ಪ್ರತಿಭಟನೆಯ ವಿಡಿಯೋ ಎಂದು ಹಂಚಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ : FACT CHECK : ಹಿಂದೂ ಬಾಲಕನ ತಾಯತವನ್ನು ಮುಸ್ಲಿಮರು ಬಲವಂತದಿಂದ ತೆಗೆದಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...