Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ವರದಿ ಮಾಡಿದ ಶ್ಯಾಮ್ ಪರೇಖ್ "ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು" ಎಂದಿದ್ದಾರೆ.

- Advertisement -
- Advertisement -

ಅಸ್ಸಾಂನಲ್ಲಿ ಹುಟ್ಟಿದ ಕೂಡಲೇ ತಾಯಿ ಕಳೆದುಕೊಂಡ ಚಿರತೆ ಮರಿಗೆ ಹಸುವೊಂದು ಅಮ್ಮನ ಪ್ರೀತಿ ನೀಡುತ್ತಿದೆ ಎಂಬ ಚಿತ್ರಗಳು ಮತ್ತು ಸುದ್ದಿ ವೈರಲ್ ಆಗತೊಡಗಿವೆ. ಉದ್ಯಮಿ ಸಿದ್ಧಾರ್ಥ್‌ ಪೈ ಇದೇ ಸ್ಕ್ರೀನ್‌ಶಾಟ್‌ ಅನ್ನು ಟ್ವೀಟ್ ಮಾಡಿ ನಂತರ ಡಿಲಿಟ್ ಮಾಡಿದ್ದಾರೆ.

If only some Humans could learn from this….This took place in Assam. A man bought a cow from the neighboring village…

Posted by Robindro Sharma on Saturday, June 6, 2020

ಚಿತ್ರಗಳೊಂದಿಗೆ ಹಂಚಿಕೊಂಡ ಕಥೆಯಲ್ಲಿ ಹಸು ಚಿರತೆ ಮರಿಯನ್ನು ರಾತ್ರಿವೇಳೆ ಮುದ್ದಾಡುತ್ತದೆ ಎಂದು ಹೇಳಲಾಗುತ್ತಿದೆ. ಸಂಪೂರ್ಣ ಕಥೆ ಹೀಗಿದೆ, “ಇದು ಅಸ್ಸಾಂನಲ್ಲಿ ನಡೆಯಿತು. ಒಬ್ಬ ವ್ಯಕ್ತಿಯು ಪಕ್ಕದ ಹಳ್ಳಿಯಿಂದ ಹಸುವೊಂದನ್ನು ಖರೀದಿಸಿ ಮನೆಗೆ ತಂದನು, ಅದರ ನಂತರ ಆ ಹಳ್ಳಿಯಲ್ಲಿ ಪ್ರತಿ ರಾತ್ರಿ ನಾಯಿಗಳು ನಿರಂತರವಾಗಿ ಬೊಗಳುತ್ತಿದ್ದವು. ಆಗ ಅವನು ಕಳ್ಳರು ಲಾಕ್ ಡೌನ್‌ನ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆಂದು ಅನುಮಾನಿಸಿ, ಹಸು ಕಟ್ಟಿರುವಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದನು. ಬೆಳಿಗ್ಗೆ ಎದ್ದು ಆ ವೀಡಿಯೊ ನೋಡಿ ಅವನು ನೋಡಿ ಆಘಾತಕ್ಕೊಳಗಾದನು. ಏಕೆಂದರೆ ಪ್ರತಿದಿನ ರಾತ್ರಿ ಹಸುವಿರುವಲ್ಲಿಗೆ ಚಿರತೆ ಮರಿಯೊಂದು ಬರುತ್ತಿದ್ದು ಹಸು ಅದನ್ನು ಮುದ್ದಾಡುತ್ತಿತ್ತು. ಆಗ ಅವನು ಹಸುವನ್ನು ಖರೀದಿಸಿದ ಹಳ್ಳಿಗೆ ಹಿಂತಿರುಗಿ, ಹಿಂದಿನ ಮಾಲೀಕರ ಬಳಿಗೆ ಹೋಗಿ ಚಿರತೆ ಬಗ್ಗೆ ತಿಳಿಸಿ, ಚಿತ್ರ ಮತ್ತು ವೀಡಿಯೊಗಳನ್ನು ತೋರಿಸಿದರು. ಆಗ ಹಿಂದಿನ ಮಾಲೀಕರು ಆ ಮನುಷ್ಯನಿಗೆ ನಡೆದ ಕಥೆಯನ್ನು ಹೇಳಿದರು. ಚಿರತೆ ಮರಿಗೆ ಕೇವಲ 20 ದಿನವಾಗಿದ್ದಾಗ, ಅದರ ತಾಯಿಯನ್ನು ಕೊಲ್ಲಲ್ಪಟ್ಟಿತು. ನಂತರ ಅವನು ಮರಿಯನ್ನು ನೋಡಿ ಕನಿಕರವಾಗಿ ತನ್ನ ಹಸುವಿನ ಬಳಿಗೆ ತಂದುಬಿಟ್ಟನು. ಹಸು ಅದನ್ನು ಸಾಕಿತು. ಚಿರತೆ ಬೆಳೆದು ದೊಡ್ಡದಾದಾಗ ಅದನ್ನು ಕಾಡಿಗೆ ಬಿಡಲಾಯಿತು. ಆದರೆ ಅದು ಯಾವಾಗಲೂ ಹಸುವಿನೊಂದಿಗೆ ಮುದ್ದಾಡಲು ಮತ್ತು ವಿಶ್ರಾಂತಿ ಪಡೆಯಲು ಮರಳಿ ಬರುತ್ತಿದೆ”.

MOTHER'S DAYThese are pictures of a village in Assam (India). A man bought the cow from a neighboring village and…

Posted by John Helios on Tuesday, May 12, 2020

ಈ ಪೋಸ್ಟ್ ಅನ್ನು ಹಲವಾರು ವೈಯಕ್ತಿಕ ಬಳಕೆದಾರರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಇತ್ತೀಚೆಗೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಸಾವಿಗೆ ಇದನ್ನು ಲಿಂಕ್ ಮಾಡಿ ಆನೆ ಮರಿಯೂ ಉಳಿಯಲಿಲ್ಲ. ಪಶುಗಳಿಗಿಂತ ಮನುಷ್ಯರೆ ಕೆಟ್ಟವರು ಎಂದು ಹೇಳಲಾಗಿದೆ. ಇನ್ನು ಕೆಲವರು ಕಳೆದ ಮೇ ತಿಂಗಳಿನಲ್ಲಿ ಅಮ್ಮಂದಿರ ದಿನದಂದು ಇದೇ ಕಥೆಯನ್ನು ಫೋಟೊ ಜೊತೆಗೆ ಹಂಚಿಕೊಂಡಿದ್ದರು. ಇದಲ್ಲವೇ ತಾಯಿ ಪ್ರೀತಿ ಎಂದು ಬರೆದಿದ್ದರು. ಆ ಪೋಸ್ಟನ್ನು 9000 ಜನ ಹಂಚಿಕೊಂಡಿದ್ದರು.

ಫ್ಯಾಕ್ಟ್-ಚೆಕ್

ಗೂಗಲ್‌ನಲ್ಲಿ ಹಲವು ಕೀವರ್ಡ್ ಹುಡುಕಾಟ ನಡೆಸಿದಾಗ ಅಸ್ಸಾಂನಲ್ಲಿ ಈ ಘಟನೆ ನಡೆದ ಯಾವುದೇ ಸಾಕ್ಷ್ಯ ಸಿಗಲಿಲಲ್ಲ. ಆದರೆ onforest.com ವೆಬ್‌ಸೈಟ್‌ನಲ್ಲಿನ ಲೇಖನವೊಂದು ಸಿಕ್ಕಿತು. ಅಲ್ಲಿ ಹೆಚ್ಚಿನ ರೆಸಲ್ಯೂಶನ್‌ನ ಅದೇ ಚಿತ್ರಗಳು ಲಭ್ಯವಿದೆ. 2002 ರಲ್ಲಿ ಗುಜರಾತ್‌ನ ವಡೋದರಾ ಜಿಲ್ಲೆಯ ಆಂಟೋಲಿ ಗ್ರಾಮದಲ್ಲಿ ಹಸು ಮತ್ತು ಚಿರತೆ ಜೊತೆಗಿದ್ದ ವಿಚಿತ್ರ ಘಟನೆ ನಡೆದಿದೆ ಎಂದು ಲೇಖನ ಹೇಳುತ್ತದೆ.

ಪತ್ರಕರ್ತ ಶ್ಯಾಮ್ ಪರೇಖ್ ಅವರು 2002 ರಲ್ಲಿ ಟೈಮ್ಸ್ ಆಫ್ ಇಂಡಿಯಾಕ್ಕಾಗಿ ಈ ಚಿತ್ರವನ್ನು ಕಳಿಸಿ ವರದಿ ಮಾಡಿದ್ದಾರೆ. ಆದರೆ ಮೇಲಿನ ಕಥೆ ಹೇಳುವಂತೆ ಚಿರತೆ ಮರಿಯ ತಾಯಿ ಸತ್ತು ಹೋಯಿತು, ಹಸು ಸಾಕಿತು ಎಂಬುದು ಯಾವುದೂ ಇಲ್ಲಿ ಉಲ್ಲೇಖವಾಗಿಲ್ಲ. ಅಲ್ಲಿನ ಕಥೆಗೂ ಇಲ್ಲಿನ ವರದಿಗೂ ಯಾವುದೇ ಸಂಬಂಧವಿಲ್ಲ.

ಆದರೆ ಹಸು ಜೊತೆ ಚಿರತೆ ಮರಿ ಇದ್ದುದು ನಿಜವಾಗಿದ್ದರೆ ಅದು ಹೇಗೆ ಸಾಧ್ಯ ಎಂದು ಟೈಮ್ಸ್ ಆಫ್ ಇಂಡಿಯಾ ವಡೋದರಾದ ಕಾಡು ಸಂರಕ್ಷಣಾಧಿಕಾರಿ ಎಚ್ ಎಸ್ ಸಿಂಗ್ ಅವರನ್ನು ಪ್ರಶ್ನಿಸಿದೆ. ಅವರು “ಕೆಲವೊಮ್ಮೆ ಪ್ರಾಣಿಗಳ ನಡವಳಿಕೆಯನ್ನು ಮಾರ್ಪಡಿಸಬಹುದು. ಈ ಸಂದರ್ಭದಲ್ಲಿ, ಬಹುಶಃ ಚಿರತೆ ಉಪ-ವಯಸ್ಕ ಹಂತವನ್ನು ದಾಟಿದೆ, ಅದು ಕಾಡು ಪರಿಸರದಲ್ಲಿ ಬೆಳೆಯದೇ ಗ್ರಾಮೀಣ ಪ್ರದೇಶದಲ್ಲಿ ಬೆಳೆದುದರಿಂದ ಅದು ಬೇಟೆಯಾಡುವ ಪ್ರವೃತ್ತಿಯನ್ನು ರೂಢಿಸಿಕೊಂಡಿಲ್ಲ” ಎಂದಿದ್ದಾರೆ.

ವರದಿ ಮಾಡಿದ ಶ್ಯಾಮ್ ಪರೇಖ್ “ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು” ಎಂದಿದ್ದಾರೆ.

ತೀರ್ಮಾನ

ಗುಜರಾತ್‌ನಲ್ಲಿ ವರದಿಯಾದ ಸುಮಾರು ಎರಡು ದಶಕಗಳಷ್ಟು ಹಳೆಯದಾದ ಚಿತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಇದು ಅಸ್ಸಾಂನಲ್ಲಿ ಸಂಭವಿಸಿದೆ ಎಂಬ ಸುಳ್ಳು ಹೇಳಿಕೆಯೊಂದಿಗೆ, ಅದಕ್ಕೆ ಮತ್ತಷ್ಟು  ವಿಸ್ತಾರವಾದ ಕಥೆ ಕಟ್ಟಿ ಪುನರುಜ್ಜೀವನಗೊಳಿಸಲಾಗಿದೆ.


ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...