Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ವರದಿ ಮಾಡಿದ ಶ್ಯಾಮ್ ಪರೇಖ್ "ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು" ಎಂದಿದ್ದಾರೆ.

- Advertisement -
- Advertisement -

ಅಸ್ಸಾಂನಲ್ಲಿ ಹುಟ್ಟಿದ ಕೂಡಲೇ ತಾಯಿ ಕಳೆದುಕೊಂಡ ಚಿರತೆ ಮರಿಗೆ ಹಸುವೊಂದು ಅಮ್ಮನ ಪ್ರೀತಿ ನೀಡುತ್ತಿದೆ ಎಂಬ ಚಿತ್ರಗಳು ಮತ್ತು ಸುದ್ದಿ ವೈರಲ್ ಆಗತೊಡಗಿವೆ. ಉದ್ಯಮಿ ಸಿದ್ಧಾರ್ಥ್‌ ಪೈ ಇದೇ ಸ್ಕ್ರೀನ್‌ಶಾಟ್‌ ಅನ್ನು ಟ್ವೀಟ್ ಮಾಡಿ ನಂತರ ಡಿಲಿಟ್ ಮಾಡಿದ್ದಾರೆ.

If only some Humans could learn from this….This took place in Assam. A man bought a cow from the neighboring village…

Posted by Robindro Sharma on Saturday, June 6, 2020

ಚಿತ್ರಗಳೊಂದಿಗೆ ಹಂಚಿಕೊಂಡ ಕಥೆಯಲ್ಲಿ ಹಸು ಚಿರತೆ ಮರಿಯನ್ನು ರಾತ್ರಿವೇಳೆ ಮುದ್ದಾಡುತ್ತದೆ ಎಂದು ಹೇಳಲಾಗುತ್ತಿದೆ. ಸಂಪೂರ್ಣ ಕಥೆ ಹೀಗಿದೆ, “ಇದು ಅಸ್ಸಾಂನಲ್ಲಿ ನಡೆಯಿತು. ಒಬ್ಬ ವ್ಯಕ್ತಿಯು ಪಕ್ಕದ ಹಳ್ಳಿಯಿಂದ ಹಸುವೊಂದನ್ನು ಖರೀದಿಸಿ ಮನೆಗೆ ತಂದನು, ಅದರ ನಂತರ ಆ ಹಳ್ಳಿಯಲ್ಲಿ ಪ್ರತಿ ರಾತ್ರಿ ನಾಯಿಗಳು ನಿರಂತರವಾಗಿ ಬೊಗಳುತ್ತಿದ್ದವು. ಆಗ ಅವನು ಕಳ್ಳರು ಲಾಕ್ ಡೌನ್‌ನ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆಂದು ಅನುಮಾನಿಸಿ, ಹಸು ಕಟ್ಟಿರುವಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದನು. ಬೆಳಿಗ್ಗೆ ಎದ್ದು ಆ ವೀಡಿಯೊ ನೋಡಿ ಅವನು ನೋಡಿ ಆಘಾತಕ್ಕೊಳಗಾದನು. ಏಕೆಂದರೆ ಪ್ರತಿದಿನ ರಾತ್ರಿ ಹಸುವಿರುವಲ್ಲಿಗೆ ಚಿರತೆ ಮರಿಯೊಂದು ಬರುತ್ತಿದ್ದು ಹಸು ಅದನ್ನು ಮುದ್ದಾಡುತ್ತಿತ್ತು. ಆಗ ಅವನು ಹಸುವನ್ನು ಖರೀದಿಸಿದ ಹಳ್ಳಿಗೆ ಹಿಂತಿರುಗಿ, ಹಿಂದಿನ ಮಾಲೀಕರ ಬಳಿಗೆ ಹೋಗಿ ಚಿರತೆ ಬಗ್ಗೆ ತಿಳಿಸಿ, ಚಿತ್ರ ಮತ್ತು ವೀಡಿಯೊಗಳನ್ನು ತೋರಿಸಿದರು. ಆಗ ಹಿಂದಿನ ಮಾಲೀಕರು ಆ ಮನುಷ್ಯನಿಗೆ ನಡೆದ ಕಥೆಯನ್ನು ಹೇಳಿದರು. ಚಿರತೆ ಮರಿಗೆ ಕೇವಲ 20 ದಿನವಾಗಿದ್ದಾಗ, ಅದರ ತಾಯಿಯನ್ನು ಕೊಲ್ಲಲ್ಪಟ್ಟಿತು. ನಂತರ ಅವನು ಮರಿಯನ್ನು ನೋಡಿ ಕನಿಕರವಾಗಿ ತನ್ನ ಹಸುವಿನ ಬಳಿಗೆ ತಂದುಬಿಟ್ಟನು. ಹಸು ಅದನ್ನು ಸಾಕಿತು. ಚಿರತೆ ಬೆಳೆದು ದೊಡ್ಡದಾದಾಗ ಅದನ್ನು ಕಾಡಿಗೆ ಬಿಡಲಾಯಿತು. ಆದರೆ ಅದು ಯಾವಾಗಲೂ ಹಸುವಿನೊಂದಿಗೆ ಮುದ್ದಾಡಲು ಮತ್ತು ವಿಶ್ರಾಂತಿ ಪಡೆಯಲು ಮರಳಿ ಬರುತ್ತಿದೆ”.

MOTHER'S DAYThese are pictures of a village in Assam (India). A man bought the cow from a neighboring village and…

Posted by John Helios on Tuesday, May 12, 2020

ಈ ಪೋಸ್ಟ್ ಅನ್ನು ಹಲವಾರು ವೈಯಕ್ತಿಕ ಬಳಕೆದಾರರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಇತ್ತೀಚೆಗೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಸಾವಿಗೆ ಇದನ್ನು ಲಿಂಕ್ ಮಾಡಿ ಆನೆ ಮರಿಯೂ ಉಳಿಯಲಿಲ್ಲ. ಪಶುಗಳಿಗಿಂತ ಮನುಷ್ಯರೆ ಕೆಟ್ಟವರು ಎಂದು ಹೇಳಲಾಗಿದೆ. ಇನ್ನು ಕೆಲವರು ಕಳೆದ ಮೇ ತಿಂಗಳಿನಲ್ಲಿ ಅಮ್ಮಂದಿರ ದಿನದಂದು ಇದೇ ಕಥೆಯನ್ನು ಫೋಟೊ ಜೊತೆಗೆ ಹಂಚಿಕೊಂಡಿದ್ದರು. ಇದಲ್ಲವೇ ತಾಯಿ ಪ್ರೀತಿ ಎಂದು ಬರೆದಿದ್ದರು. ಆ ಪೋಸ್ಟನ್ನು 9000 ಜನ ಹಂಚಿಕೊಂಡಿದ್ದರು.

ಫ್ಯಾಕ್ಟ್-ಚೆಕ್

ಗೂಗಲ್‌ನಲ್ಲಿ ಹಲವು ಕೀವರ್ಡ್ ಹುಡುಕಾಟ ನಡೆಸಿದಾಗ ಅಸ್ಸಾಂನಲ್ಲಿ ಈ ಘಟನೆ ನಡೆದ ಯಾವುದೇ ಸಾಕ್ಷ್ಯ ಸಿಗಲಿಲಲ್ಲ. ಆದರೆ onforest.com ವೆಬ್‌ಸೈಟ್‌ನಲ್ಲಿನ ಲೇಖನವೊಂದು ಸಿಕ್ಕಿತು. ಅಲ್ಲಿ ಹೆಚ್ಚಿನ ರೆಸಲ್ಯೂಶನ್‌ನ ಅದೇ ಚಿತ್ರಗಳು ಲಭ್ಯವಿದೆ. 2002 ರಲ್ಲಿ ಗುಜರಾತ್‌ನ ವಡೋದರಾ ಜಿಲ್ಲೆಯ ಆಂಟೋಲಿ ಗ್ರಾಮದಲ್ಲಿ ಹಸು ಮತ್ತು ಚಿರತೆ ಜೊತೆಗಿದ್ದ ವಿಚಿತ್ರ ಘಟನೆ ನಡೆದಿದೆ ಎಂದು ಲೇಖನ ಹೇಳುತ್ತದೆ.

ಪತ್ರಕರ್ತ ಶ್ಯಾಮ್ ಪರೇಖ್ ಅವರು 2002 ರಲ್ಲಿ ಟೈಮ್ಸ್ ಆಫ್ ಇಂಡಿಯಾಕ್ಕಾಗಿ ಈ ಚಿತ್ರವನ್ನು ಕಳಿಸಿ ವರದಿ ಮಾಡಿದ್ದಾರೆ. ಆದರೆ ಮೇಲಿನ ಕಥೆ ಹೇಳುವಂತೆ ಚಿರತೆ ಮರಿಯ ತಾಯಿ ಸತ್ತು ಹೋಯಿತು, ಹಸು ಸಾಕಿತು ಎಂಬುದು ಯಾವುದೂ ಇಲ್ಲಿ ಉಲ್ಲೇಖವಾಗಿಲ್ಲ. ಅಲ್ಲಿನ ಕಥೆಗೂ ಇಲ್ಲಿನ ವರದಿಗೂ ಯಾವುದೇ ಸಂಬಂಧವಿಲ್ಲ.

ಆದರೆ ಹಸು ಜೊತೆ ಚಿರತೆ ಮರಿ ಇದ್ದುದು ನಿಜವಾಗಿದ್ದರೆ ಅದು ಹೇಗೆ ಸಾಧ್ಯ ಎಂದು ಟೈಮ್ಸ್ ಆಫ್ ಇಂಡಿಯಾ ವಡೋದರಾದ ಕಾಡು ಸಂರಕ್ಷಣಾಧಿಕಾರಿ ಎಚ್ ಎಸ್ ಸಿಂಗ್ ಅವರನ್ನು ಪ್ರಶ್ನಿಸಿದೆ. ಅವರು “ಕೆಲವೊಮ್ಮೆ ಪ್ರಾಣಿಗಳ ನಡವಳಿಕೆಯನ್ನು ಮಾರ್ಪಡಿಸಬಹುದು. ಈ ಸಂದರ್ಭದಲ್ಲಿ, ಬಹುಶಃ ಚಿರತೆ ಉಪ-ವಯಸ್ಕ ಹಂತವನ್ನು ದಾಟಿದೆ, ಅದು ಕಾಡು ಪರಿಸರದಲ್ಲಿ ಬೆಳೆಯದೇ ಗ್ರಾಮೀಣ ಪ್ರದೇಶದಲ್ಲಿ ಬೆಳೆದುದರಿಂದ ಅದು ಬೇಟೆಯಾಡುವ ಪ್ರವೃತ್ತಿಯನ್ನು ರೂಢಿಸಿಕೊಂಡಿಲ್ಲ” ಎಂದಿದ್ದಾರೆ.

ವರದಿ ಮಾಡಿದ ಶ್ಯಾಮ್ ಪರೇಖ್ “ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು” ಎಂದಿದ್ದಾರೆ.

ತೀರ್ಮಾನ

ಗುಜರಾತ್‌ನಲ್ಲಿ ವರದಿಯಾದ ಸುಮಾರು ಎರಡು ದಶಕಗಳಷ್ಟು ಹಳೆಯದಾದ ಚಿತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಇದು ಅಸ್ಸಾಂನಲ್ಲಿ ಸಂಭವಿಸಿದೆ ಎಂಬ ಸುಳ್ಳು ಹೇಳಿಕೆಯೊಂದಿಗೆ, ಅದಕ್ಕೆ ಮತ್ತಷ್ಟು  ವಿಸ್ತಾರವಾದ ಕಥೆ ಕಟ್ಟಿ ಪುನರುಜ್ಜೀವನಗೊಳಿಸಲಾಗಿದೆ.


ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...