Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ವರದಿ ಮಾಡಿದ ಶ್ಯಾಮ್ ಪರೇಖ್ "ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು" ಎಂದಿದ್ದಾರೆ.

- Advertisement -
- Advertisement -

ಅಸ್ಸಾಂನಲ್ಲಿ ಹುಟ್ಟಿದ ಕೂಡಲೇ ತಾಯಿ ಕಳೆದುಕೊಂಡ ಚಿರತೆ ಮರಿಗೆ ಹಸುವೊಂದು ಅಮ್ಮನ ಪ್ರೀತಿ ನೀಡುತ್ತಿದೆ ಎಂಬ ಚಿತ್ರಗಳು ಮತ್ತು ಸುದ್ದಿ ವೈರಲ್ ಆಗತೊಡಗಿವೆ. ಉದ್ಯಮಿ ಸಿದ್ಧಾರ್ಥ್‌ ಪೈ ಇದೇ ಸ್ಕ್ರೀನ್‌ಶಾಟ್‌ ಅನ್ನು ಟ್ವೀಟ್ ಮಾಡಿ ನಂತರ ಡಿಲಿಟ್ ಮಾಡಿದ್ದಾರೆ.

If only some Humans could learn from this….This took place in Assam. A man bought a cow from the neighboring village…

Posted by Robindro Sharma on Saturday, June 6, 2020

ಚಿತ್ರಗಳೊಂದಿಗೆ ಹಂಚಿಕೊಂಡ ಕಥೆಯಲ್ಲಿ ಹಸು ಚಿರತೆ ಮರಿಯನ್ನು ರಾತ್ರಿವೇಳೆ ಮುದ್ದಾಡುತ್ತದೆ ಎಂದು ಹೇಳಲಾಗುತ್ತಿದೆ. ಸಂಪೂರ್ಣ ಕಥೆ ಹೀಗಿದೆ, “ಇದು ಅಸ್ಸಾಂನಲ್ಲಿ ನಡೆಯಿತು. ಒಬ್ಬ ವ್ಯಕ್ತಿಯು ಪಕ್ಕದ ಹಳ್ಳಿಯಿಂದ ಹಸುವೊಂದನ್ನು ಖರೀದಿಸಿ ಮನೆಗೆ ತಂದನು, ಅದರ ನಂತರ ಆ ಹಳ್ಳಿಯಲ್ಲಿ ಪ್ರತಿ ರಾತ್ರಿ ನಾಯಿಗಳು ನಿರಂತರವಾಗಿ ಬೊಗಳುತ್ತಿದ್ದವು. ಆಗ ಅವನು ಕಳ್ಳರು ಲಾಕ್ ಡೌನ್‌ನ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆಂದು ಅನುಮಾನಿಸಿ, ಹಸು ಕಟ್ಟಿರುವಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದನು. ಬೆಳಿಗ್ಗೆ ಎದ್ದು ಆ ವೀಡಿಯೊ ನೋಡಿ ಅವನು ನೋಡಿ ಆಘಾತಕ್ಕೊಳಗಾದನು. ಏಕೆಂದರೆ ಪ್ರತಿದಿನ ರಾತ್ರಿ ಹಸುವಿರುವಲ್ಲಿಗೆ ಚಿರತೆ ಮರಿಯೊಂದು ಬರುತ್ತಿದ್ದು ಹಸು ಅದನ್ನು ಮುದ್ದಾಡುತ್ತಿತ್ತು. ಆಗ ಅವನು ಹಸುವನ್ನು ಖರೀದಿಸಿದ ಹಳ್ಳಿಗೆ ಹಿಂತಿರುಗಿ, ಹಿಂದಿನ ಮಾಲೀಕರ ಬಳಿಗೆ ಹೋಗಿ ಚಿರತೆ ಬಗ್ಗೆ ತಿಳಿಸಿ, ಚಿತ್ರ ಮತ್ತು ವೀಡಿಯೊಗಳನ್ನು ತೋರಿಸಿದರು. ಆಗ ಹಿಂದಿನ ಮಾಲೀಕರು ಆ ಮನುಷ್ಯನಿಗೆ ನಡೆದ ಕಥೆಯನ್ನು ಹೇಳಿದರು. ಚಿರತೆ ಮರಿಗೆ ಕೇವಲ 20 ದಿನವಾಗಿದ್ದಾಗ, ಅದರ ತಾಯಿಯನ್ನು ಕೊಲ್ಲಲ್ಪಟ್ಟಿತು. ನಂತರ ಅವನು ಮರಿಯನ್ನು ನೋಡಿ ಕನಿಕರವಾಗಿ ತನ್ನ ಹಸುವಿನ ಬಳಿಗೆ ತಂದುಬಿಟ್ಟನು. ಹಸು ಅದನ್ನು ಸಾಕಿತು. ಚಿರತೆ ಬೆಳೆದು ದೊಡ್ಡದಾದಾಗ ಅದನ್ನು ಕಾಡಿಗೆ ಬಿಡಲಾಯಿತು. ಆದರೆ ಅದು ಯಾವಾಗಲೂ ಹಸುವಿನೊಂದಿಗೆ ಮುದ್ದಾಡಲು ಮತ್ತು ವಿಶ್ರಾಂತಿ ಪಡೆಯಲು ಮರಳಿ ಬರುತ್ತಿದೆ”.

MOTHER'S DAYThese are pictures of a village in Assam (India). A man bought the cow from a neighboring village and…

Posted by John Helios on Tuesday, May 12, 2020

ಈ ಪೋಸ್ಟ್ ಅನ್ನು ಹಲವಾರು ವೈಯಕ್ತಿಕ ಬಳಕೆದಾರರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಇತ್ತೀಚೆಗೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಸಾವಿಗೆ ಇದನ್ನು ಲಿಂಕ್ ಮಾಡಿ ಆನೆ ಮರಿಯೂ ಉಳಿಯಲಿಲ್ಲ. ಪಶುಗಳಿಗಿಂತ ಮನುಷ್ಯರೆ ಕೆಟ್ಟವರು ಎಂದು ಹೇಳಲಾಗಿದೆ. ಇನ್ನು ಕೆಲವರು ಕಳೆದ ಮೇ ತಿಂಗಳಿನಲ್ಲಿ ಅಮ್ಮಂದಿರ ದಿನದಂದು ಇದೇ ಕಥೆಯನ್ನು ಫೋಟೊ ಜೊತೆಗೆ ಹಂಚಿಕೊಂಡಿದ್ದರು. ಇದಲ್ಲವೇ ತಾಯಿ ಪ್ರೀತಿ ಎಂದು ಬರೆದಿದ್ದರು. ಆ ಪೋಸ್ಟನ್ನು 9000 ಜನ ಹಂಚಿಕೊಂಡಿದ್ದರು.

ಫ್ಯಾಕ್ಟ್-ಚೆಕ್

ಗೂಗಲ್‌ನಲ್ಲಿ ಹಲವು ಕೀವರ್ಡ್ ಹುಡುಕಾಟ ನಡೆಸಿದಾಗ ಅಸ್ಸಾಂನಲ್ಲಿ ಈ ಘಟನೆ ನಡೆದ ಯಾವುದೇ ಸಾಕ್ಷ್ಯ ಸಿಗಲಿಲಲ್ಲ. ಆದರೆ onforest.com ವೆಬ್‌ಸೈಟ್‌ನಲ್ಲಿನ ಲೇಖನವೊಂದು ಸಿಕ್ಕಿತು. ಅಲ್ಲಿ ಹೆಚ್ಚಿನ ರೆಸಲ್ಯೂಶನ್‌ನ ಅದೇ ಚಿತ್ರಗಳು ಲಭ್ಯವಿದೆ. 2002 ರಲ್ಲಿ ಗುಜರಾತ್‌ನ ವಡೋದರಾ ಜಿಲ್ಲೆಯ ಆಂಟೋಲಿ ಗ್ರಾಮದಲ್ಲಿ ಹಸು ಮತ್ತು ಚಿರತೆ ಜೊತೆಗಿದ್ದ ವಿಚಿತ್ರ ಘಟನೆ ನಡೆದಿದೆ ಎಂದು ಲೇಖನ ಹೇಳುತ್ತದೆ.

ಪತ್ರಕರ್ತ ಶ್ಯಾಮ್ ಪರೇಖ್ ಅವರು 2002 ರಲ್ಲಿ ಟೈಮ್ಸ್ ಆಫ್ ಇಂಡಿಯಾಕ್ಕಾಗಿ ಈ ಚಿತ್ರವನ್ನು ಕಳಿಸಿ ವರದಿ ಮಾಡಿದ್ದಾರೆ. ಆದರೆ ಮೇಲಿನ ಕಥೆ ಹೇಳುವಂತೆ ಚಿರತೆ ಮರಿಯ ತಾಯಿ ಸತ್ತು ಹೋಯಿತು, ಹಸು ಸಾಕಿತು ಎಂಬುದು ಯಾವುದೂ ಇಲ್ಲಿ ಉಲ್ಲೇಖವಾಗಿಲ್ಲ. ಅಲ್ಲಿನ ಕಥೆಗೂ ಇಲ್ಲಿನ ವರದಿಗೂ ಯಾವುದೇ ಸಂಬಂಧವಿಲ್ಲ.

ಆದರೆ ಹಸು ಜೊತೆ ಚಿರತೆ ಮರಿ ಇದ್ದುದು ನಿಜವಾಗಿದ್ದರೆ ಅದು ಹೇಗೆ ಸಾಧ್ಯ ಎಂದು ಟೈಮ್ಸ್ ಆಫ್ ಇಂಡಿಯಾ ವಡೋದರಾದ ಕಾಡು ಸಂರಕ್ಷಣಾಧಿಕಾರಿ ಎಚ್ ಎಸ್ ಸಿಂಗ್ ಅವರನ್ನು ಪ್ರಶ್ನಿಸಿದೆ. ಅವರು “ಕೆಲವೊಮ್ಮೆ ಪ್ರಾಣಿಗಳ ನಡವಳಿಕೆಯನ್ನು ಮಾರ್ಪಡಿಸಬಹುದು. ಈ ಸಂದರ್ಭದಲ್ಲಿ, ಬಹುಶಃ ಚಿರತೆ ಉಪ-ವಯಸ್ಕ ಹಂತವನ್ನು ದಾಟಿದೆ, ಅದು ಕಾಡು ಪರಿಸರದಲ್ಲಿ ಬೆಳೆಯದೇ ಗ್ರಾಮೀಣ ಪ್ರದೇಶದಲ್ಲಿ ಬೆಳೆದುದರಿಂದ ಅದು ಬೇಟೆಯಾಡುವ ಪ್ರವೃತ್ತಿಯನ್ನು ರೂಢಿಸಿಕೊಂಡಿಲ್ಲ” ಎಂದಿದ್ದಾರೆ.

ವರದಿ ಮಾಡಿದ ಶ್ಯಾಮ್ ಪರೇಖ್ “ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು” ಎಂದಿದ್ದಾರೆ.

ತೀರ್ಮಾನ

ಗುಜರಾತ್‌ನಲ್ಲಿ ವರದಿಯಾದ ಸುಮಾರು ಎರಡು ದಶಕಗಳಷ್ಟು ಹಳೆಯದಾದ ಚಿತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಇದು ಅಸ್ಸಾಂನಲ್ಲಿ ಸಂಭವಿಸಿದೆ ಎಂಬ ಸುಳ್ಳು ಹೇಳಿಕೆಯೊಂದಿಗೆ, ಅದಕ್ಕೆ ಮತ್ತಷ್ಟು  ವಿಸ್ತಾರವಾದ ಕಥೆ ಕಟ್ಟಿ ಪುನರುಜ್ಜೀವನಗೊಳಿಸಲಾಗಿದೆ.


ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...