Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ವರದಿ ಮಾಡಿದ ಶ್ಯಾಮ್ ಪರೇಖ್ "ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು" ಎಂದಿದ್ದಾರೆ.

- Advertisement -
- Advertisement -

ಅಸ್ಸಾಂನಲ್ಲಿ ಹುಟ್ಟಿದ ಕೂಡಲೇ ತಾಯಿ ಕಳೆದುಕೊಂಡ ಚಿರತೆ ಮರಿಗೆ ಹಸುವೊಂದು ಅಮ್ಮನ ಪ್ರೀತಿ ನೀಡುತ್ತಿದೆ ಎಂಬ ಚಿತ್ರಗಳು ಮತ್ತು ಸುದ್ದಿ ವೈರಲ್ ಆಗತೊಡಗಿವೆ. ಉದ್ಯಮಿ ಸಿದ್ಧಾರ್ಥ್‌ ಪೈ ಇದೇ ಸ್ಕ್ರೀನ್‌ಶಾಟ್‌ ಅನ್ನು ಟ್ವೀಟ್ ಮಾಡಿ ನಂತರ ಡಿಲಿಟ್ ಮಾಡಿದ್ದಾರೆ.

If only some Humans could learn from this….This took place in Assam. A man bought a cow from the neighboring village…

Posted by Robindro Sharma on Saturday, June 6, 2020

ಚಿತ್ರಗಳೊಂದಿಗೆ ಹಂಚಿಕೊಂಡ ಕಥೆಯಲ್ಲಿ ಹಸು ಚಿರತೆ ಮರಿಯನ್ನು ರಾತ್ರಿವೇಳೆ ಮುದ್ದಾಡುತ್ತದೆ ಎಂದು ಹೇಳಲಾಗುತ್ತಿದೆ. ಸಂಪೂರ್ಣ ಕಥೆ ಹೀಗಿದೆ, “ಇದು ಅಸ್ಸಾಂನಲ್ಲಿ ನಡೆಯಿತು. ಒಬ್ಬ ವ್ಯಕ್ತಿಯು ಪಕ್ಕದ ಹಳ್ಳಿಯಿಂದ ಹಸುವೊಂದನ್ನು ಖರೀದಿಸಿ ಮನೆಗೆ ತಂದನು, ಅದರ ನಂತರ ಆ ಹಳ್ಳಿಯಲ್ಲಿ ಪ್ರತಿ ರಾತ್ರಿ ನಾಯಿಗಳು ನಿರಂತರವಾಗಿ ಬೊಗಳುತ್ತಿದ್ದವು. ಆಗ ಅವನು ಕಳ್ಳರು ಲಾಕ್ ಡೌನ್‌ನ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆಂದು ಅನುಮಾನಿಸಿ, ಹಸು ಕಟ್ಟಿರುವಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದನು. ಬೆಳಿಗ್ಗೆ ಎದ್ದು ಆ ವೀಡಿಯೊ ನೋಡಿ ಅವನು ನೋಡಿ ಆಘಾತಕ್ಕೊಳಗಾದನು. ಏಕೆಂದರೆ ಪ್ರತಿದಿನ ರಾತ್ರಿ ಹಸುವಿರುವಲ್ಲಿಗೆ ಚಿರತೆ ಮರಿಯೊಂದು ಬರುತ್ತಿದ್ದು ಹಸು ಅದನ್ನು ಮುದ್ದಾಡುತ್ತಿತ್ತು. ಆಗ ಅವನು ಹಸುವನ್ನು ಖರೀದಿಸಿದ ಹಳ್ಳಿಗೆ ಹಿಂತಿರುಗಿ, ಹಿಂದಿನ ಮಾಲೀಕರ ಬಳಿಗೆ ಹೋಗಿ ಚಿರತೆ ಬಗ್ಗೆ ತಿಳಿಸಿ, ಚಿತ್ರ ಮತ್ತು ವೀಡಿಯೊಗಳನ್ನು ತೋರಿಸಿದರು. ಆಗ ಹಿಂದಿನ ಮಾಲೀಕರು ಆ ಮನುಷ್ಯನಿಗೆ ನಡೆದ ಕಥೆಯನ್ನು ಹೇಳಿದರು. ಚಿರತೆ ಮರಿಗೆ ಕೇವಲ 20 ದಿನವಾಗಿದ್ದಾಗ, ಅದರ ತಾಯಿಯನ್ನು ಕೊಲ್ಲಲ್ಪಟ್ಟಿತು. ನಂತರ ಅವನು ಮರಿಯನ್ನು ನೋಡಿ ಕನಿಕರವಾಗಿ ತನ್ನ ಹಸುವಿನ ಬಳಿಗೆ ತಂದುಬಿಟ್ಟನು. ಹಸು ಅದನ್ನು ಸಾಕಿತು. ಚಿರತೆ ಬೆಳೆದು ದೊಡ್ಡದಾದಾಗ ಅದನ್ನು ಕಾಡಿಗೆ ಬಿಡಲಾಯಿತು. ಆದರೆ ಅದು ಯಾವಾಗಲೂ ಹಸುವಿನೊಂದಿಗೆ ಮುದ್ದಾಡಲು ಮತ್ತು ವಿಶ್ರಾಂತಿ ಪಡೆಯಲು ಮರಳಿ ಬರುತ್ತಿದೆ”.

MOTHER'S DAYThese are pictures of a village in Assam (India). A man bought the cow from a neighboring village and…

Posted by John Helios on Tuesday, May 12, 2020

ಈ ಪೋಸ್ಟ್ ಅನ್ನು ಹಲವಾರು ವೈಯಕ್ತಿಕ ಬಳಕೆದಾರರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಇತ್ತೀಚೆಗೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಸಾವಿಗೆ ಇದನ್ನು ಲಿಂಕ್ ಮಾಡಿ ಆನೆ ಮರಿಯೂ ಉಳಿಯಲಿಲ್ಲ. ಪಶುಗಳಿಗಿಂತ ಮನುಷ್ಯರೆ ಕೆಟ್ಟವರು ಎಂದು ಹೇಳಲಾಗಿದೆ. ಇನ್ನು ಕೆಲವರು ಕಳೆದ ಮೇ ತಿಂಗಳಿನಲ್ಲಿ ಅಮ್ಮಂದಿರ ದಿನದಂದು ಇದೇ ಕಥೆಯನ್ನು ಫೋಟೊ ಜೊತೆಗೆ ಹಂಚಿಕೊಂಡಿದ್ದರು. ಇದಲ್ಲವೇ ತಾಯಿ ಪ್ರೀತಿ ಎಂದು ಬರೆದಿದ್ದರು. ಆ ಪೋಸ್ಟನ್ನು 9000 ಜನ ಹಂಚಿಕೊಂಡಿದ್ದರು.

ಫ್ಯಾಕ್ಟ್-ಚೆಕ್

ಗೂಗಲ್‌ನಲ್ಲಿ ಹಲವು ಕೀವರ್ಡ್ ಹುಡುಕಾಟ ನಡೆಸಿದಾಗ ಅಸ್ಸಾಂನಲ್ಲಿ ಈ ಘಟನೆ ನಡೆದ ಯಾವುದೇ ಸಾಕ್ಷ್ಯ ಸಿಗಲಿಲಲ್ಲ. ಆದರೆ onforest.com ವೆಬ್‌ಸೈಟ್‌ನಲ್ಲಿನ ಲೇಖನವೊಂದು ಸಿಕ್ಕಿತು. ಅಲ್ಲಿ ಹೆಚ್ಚಿನ ರೆಸಲ್ಯೂಶನ್‌ನ ಅದೇ ಚಿತ್ರಗಳು ಲಭ್ಯವಿದೆ. 2002 ರಲ್ಲಿ ಗುಜರಾತ್‌ನ ವಡೋದರಾ ಜಿಲ್ಲೆಯ ಆಂಟೋಲಿ ಗ್ರಾಮದಲ್ಲಿ ಹಸು ಮತ್ತು ಚಿರತೆ ಜೊತೆಗಿದ್ದ ವಿಚಿತ್ರ ಘಟನೆ ನಡೆದಿದೆ ಎಂದು ಲೇಖನ ಹೇಳುತ್ತದೆ.

ಪತ್ರಕರ್ತ ಶ್ಯಾಮ್ ಪರೇಖ್ ಅವರು 2002 ರಲ್ಲಿ ಟೈಮ್ಸ್ ಆಫ್ ಇಂಡಿಯಾಕ್ಕಾಗಿ ಈ ಚಿತ್ರವನ್ನು ಕಳಿಸಿ ವರದಿ ಮಾಡಿದ್ದಾರೆ. ಆದರೆ ಮೇಲಿನ ಕಥೆ ಹೇಳುವಂತೆ ಚಿರತೆ ಮರಿಯ ತಾಯಿ ಸತ್ತು ಹೋಯಿತು, ಹಸು ಸಾಕಿತು ಎಂಬುದು ಯಾವುದೂ ಇಲ್ಲಿ ಉಲ್ಲೇಖವಾಗಿಲ್ಲ. ಅಲ್ಲಿನ ಕಥೆಗೂ ಇಲ್ಲಿನ ವರದಿಗೂ ಯಾವುದೇ ಸಂಬಂಧವಿಲ್ಲ.

ಆದರೆ ಹಸು ಜೊತೆ ಚಿರತೆ ಮರಿ ಇದ್ದುದು ನಿಜವಾಗಿದ್ದರೆ ಅದು ಹೇಗೆ ಸಾಧ್ಯ ಎಂದು ಟೈಮ್ಸ್ ಆಫ್ ಇಂಡಿಯಾ ವಡೋದರಾದ ಕಾಡು ಸಂರಕ್ಷಣಾಧಿಕಾರಿ ಎಚ್ ಎಸ್ ಸಿಂಗ್ ಅವರನ್ನು ಪ್ರಶ್ನಿಸಿದೆ. ಅವರು “ಕೆಲವೊಮ್ಮೆ ಪ್ರಾಣಿಗಳ ನಡವಳಿಕೆಯನ್ನು ಮಾರ್ಪಡಿಸಬಹುದು. ಈ ಸಂದರ್ಭದಲ್ಲಿ, ಬಹುಶಃ ಚಿರತೆ ಉಪ-ವಯಸ್ಕ ಹಂತವನ್ನು ದಾಟಿದೆ, ಅದು ಕಾಡು ಪರಿಸರದಲ್ಲಿ ಬೆಳೆಯದೇ ಗ್ರಾಮೀಣ ಪ್ರದೇಶದಲ್ಲಿ ಬೆಳೆದುದರಿಂದ ಅದು ಬೇಟೆಯಾಡುವ ಪ್ರವೃತ್ತಿಯನ್ನು ರೂಢಿಸಿಕೊಂಡಿಲ್ಲ” ಎಂದಿದ್ದಾರೆ.

ವರದಿ ಮಾಡಿದ ಶ್ಯಾಮ್ ಪರೇಖ್ “ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು” ಎಂದಿದ್ದಾರೆ.

ತೀರ್ಮಾನ

ಗುಜರಾತ್‌ನಲ್ಲಿ ವರದಿಯಾದ ಸುಮಾರು ಎರಡು ದಶಕಗಳಷ್ಟು ಹಳೆಯದಾದ ಚಿತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಇದು ಅಸ್ಸಾಂನಲ್ಲಿ ಸಂಭವಿಸಿದೆ ಎಂಬ ಸುಳ್ಳು ಹೇಳಿಕೆಯೊಂದಿಗೆ, ಅದಕ್ಕೆ ಮತ್ತಷ್ಟು  ವಿಸ್ತಾರವಾದ ಕಥೆ ಕಟ್ಟಿ ಪುನರುಜ್ಜೀವನಗೊಳಿಸಲಾಗಿದೆ.


ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....