Homeನಿಜವೋ ಸುಳ್ಳೋಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ಫ್ಯಾಕ್ಟ್‌ಚೆಕ್: ಅಸ್ಸಾಂನಲ್ಲಿ ತಾಯಿ ಕಳೆದುಕೊಂಡ ಚಿರತೆ ಮರಿಗೆ ಅಮ್ಮನ ಪ್ರೀತಿ ನೀಡಿದ ಸಾಕಿದ ಹಸು?

ವರದಿ ಮಾಡಿದ ಶ್ಯಾಮ್ ಪರೇಖ್ "ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು" ಎಂದಿದ್ದಾರೆ.

- Advertisement -
- Advertisement -

ಅಸ್ಸಾಂನಲ್ಲಿ ಹುಟ್ಟಿದ ಕೂಡಲೇ ತಾಯಿ ಕಳೆದುಕೊಂಡ ಚಿರತೆ ಮರಿಗೆ ಹಸುವೊಂದು ಅಮ್ಮನ ಪ್ರೀತಿ ನೀಡುತ್ತಿದೆ ಎಂಬ ಚಿತ್ರಗಳು ಮತ್ತು ಸುದ್ದಿ ವೈರಲ್ ಆಗತೊಡಗಿವೆ. ಉದ್ಯಮಿ ಸಿದ್ಧಾರ್ಥ್‌ ಪೈ ಇದೇ ಸ್ಕ್ರೀನ್‌ಶಾಟ್‌ ಅನ್ನು ಟ್ವೀಟ್ ಮಾಡಿ ನಂತರ ಡಿಲಿಟ್ ಮಾಡಿದ್ದಾರೆ.

If only some Humans could learn from this….This took place in Assam. A man bought a cow from the neighboring village…

Posted by Robindro Sharma on Saturday, June 6, 2020

ಚಿತ್ರಗಳೊಂದಿಗೆ ಹಂಚಿಕೊಂಡ ಕಥೆಯಲ್ಲಿ ಹಸು ಚಿರತೆ ಮರಿಯನ್ನು ರಾತ್ರಿವೇಳೆ ಮುದ್ದಾಡುತ್ತದೆ ಎಂದು ಹೇಳಲಾಗುತ್ತಿದೆ. ಸಂಪೂರ್ಣ ಕಥೆ ಹೀಗಿದೆ, “ಇದು ಅಸ್ಸಾಂನಲ್ಲಿ ನಡೆಯಿತು. ಒಬ್ಬ ವ್ಯಕ್ತಿಯು ಪಕ್ಕದ ಹಳ್ಳಿಯಿಂದ ಹಸುವೊಂದನ್ನು ಖರೀದಿಸಿ ಮನೆಗೆ ತಂದನು, ಅದರ ನಂತರ ಆ ಹಳ್ಳಿಯಲ್ಲಿ ಪ್ರತಿ ರಾತ್ರಿ ನಾಯಿಗಳು ನಿರಂತರವಾಗಿ ಬೊಗಳುತ್ತಿದ್ದವು. ಆಗ ಅವನು ಕಳ್ಳರು ಲಾಕ್ ಡೌನ್‌ನ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆಂದು ಅನುಮಾನಿಸಿ, ಹಸು ಕಟ್ಟಿರುವಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿದನು. ಬೆಳಿಗ್ಗೆ ಎದ್ದು ಆ ವೀಡಿಯೊ ನೋಡಿ ಅವನು ನೋಡಿ ಆಘಾತಕ್ಕೊಳಗಾದನು. ಏಕೆಂದರೆ ಪ್ರತಿದಿನ ರಾತ್ರಿ ಹಸುವಿರುವಲ್ಲಿಗೆ ಚಿರತೆ ಮರಿಯೊಂದು ಬರುತ್ತಿದ್ದು ಹಸು ಅದನ್ನು ಮುದ್ದಾಡುತ್ತಿತ್ತು. ಆಗ ಅವನು ಹಸುವನ್ನು ಖರೀದಿಸಿದ ಹಳ್ಳಿಗೆ ಹಿಂತಿರುಗಿ, ಹಿಂದಿನ ಮಾಲೀಕರ ಬಳಿಗೆ ಹೋಗಿ ಚಿರತೆ ಬಗ್ಗೆ ತಿಳಿಸಿ, ಚಿತ್ರ ಮತ್ತು ವೀಡಿಯೊಗಳನ್ನು ತೋರಿಸಿದರು. ಆಗ ಹಿಂದಿನ ಮಾಲೀಕರು ಆ ಮನುಷ್ಯನಿಗೆ ನಡೆದ ಕಥೆಯನ್ನು ಹೇಳಿದರು. ಚಿರತೆ ಮರಿಗೆ ಕೇವಲ 20 ದಿನವಾಗಿದ್ದಾಗ, ಅದರ ತಾಯಿಯನ್ನು ಕೊಲ್ಲಲ್ಪಟ್ಟಿತು. ನಂತರ ಅವನು ಮರಿಯನ್ನು ನೋಡಿ ಕನಿಕರವಾಗಿ ತನ್ನ ಹಸುವಿನ ಬಳಿಗೆ ತಂದುಬಿಟ್ಟನು. ಹಸು ಅದನ್ನು ಸಾಕಿತು. ಚಿರತೆ ಬೆಳೆದು ದೊಡ್ಡದಾದಾಗ ಅದನ್ನು ಕಾಡಿಗೆ ಬಿಡಲಾಯಿತು. ಆದರೆ ಅದು ಯಾವಾಗಲೂ ಹಸುವಿನೊಂದಿಗೆ ಮುದ್ದಾಡಲು ಮತ್ತು ವಿಶ್ರಾಂತಿ ಪಡೆಯಲು ಮರಳಿ ಬರುತ್ತಿದೆ”.

MOTHER'S DAYThese are pictures of a village in Assam (India). A man bought the cow from a neighboring village and…

Posted by John Helios on Tuesday, May 12, 2020

ಈ ಪೋಸ್ಟ್ ಅನ್ನು ಹಲವಾರು ವೈಯಕ್ತಿಕ ಬಳಕೆದಾರರು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದ್ದಾರೆ. ಇನ್ನು ಕೆಲವರು ಇತ್ತೀಚೆಗೆ ಕೇರಳದಲ್ಲಿ ನಡೆದ ಗರ್ಭಿಣಿ ಆನೆ ಸಾವಿಗೆ ಇದನ್ನು ಲಿಂಕ್ ಮಾಡಿ ಆನೆ ಮರಿಯೂ ಉಳಿಯಲಿಲ್ಲ. ಪಶುಗಳಿಗಿಂತ ಮನುಷ್ಯರೆ ಕೆಟ್ಟವರು ಎಂದು ಹೇಳಲಾಗಿದೆ. ಇನ್ನು ಕೆಲವರು ಕಳೆದ ಮೇ ತಿಂಗಳಿನಲ್ಲಿ ಅಮ್ಮಂದಿರ ದಿನದಂದು ಇದೇ ಕಥೆಯನ್ನು ಫೋಟೊ ಜೊತೆಗೆ ಹಂಚಿಕೊಂಡಿದ್ದರು. ಇದಲ್ಲವೇ ತಾಯಿ ಪ್ರೀತಿ ಎಂದು ಬರೆದಿದ್ದರು. ಆ ಪೋಸ್ಟನ್ನು 9000 ಜನ ಹಂಚಿಕೊಂಡಿದ್ದರು.

ಫ್ಯಾಕ್ಟ್-ಚೆಕ್

ಗೂಗಲ್‌ನಲ್ಲಿ ಹಲವು ಕೀವರ್ಡ್ ಹುಡುಕಾಟ ನಡೆಸಿದಾಗ ಅಸ್ಸಾಂನಲ್ಲಿ ಈ ಘಟನೆ ನಡೆದ ಯಾವುದೇ ಸಾಕ್ಷ್ಯ ಸಿಗಲಿಲಲ್ಲ. ಆದರೆ onforest.com ವೆಬ್‌ಸೈಟ್‌ನಲ್ಲಿನ ಲೇಖನವೊಂದು ಸಿಕ್ಕಿತು. ಅಲ್ಲಿ ಹೆಚ್ಚಿನ ರೆಸಲ್ಯೂಶನ್‌ನ ಅದೇ ಚಿತ್ರಗಳು ಲಭ್ಯವಿದೆ. 2002 ರಲ್ಲಿ ಗುಜರಾತ್‌ನ ವಡೋದರಾ ಜಿಲ್ಲೆಯ ಆಂಟೋಲಿ ಗ್ರಾಮದಲ್ಲಿ ಹಸು ಮತ್ತು ಚಿರತೆ ಜೊತೆಗಿದ್ದ ವಿಚಿತ್ರ ಘಟನೆ ನಡೆದಿದೆ ಎಂದು ಲೇಖನ ಹೇಳುತ್ತದೆ.

ಪತ್ರಕರ್ತ ಶ್ಯಾಮ್ ಪರೇಖ್ ಅವರು 2002 ರಲ್ಲಿ ಟೈಮ್ಸ್ ಆಫ್ ಇಂಡಿಯಾಕ್ಕಾಗಿ ಈ ಚಿತ್ರವನ್ನು ಕಳಿಸಿ ವರದಿ ಮಾಡಿದ್ದಾರೆ. ಆದರೆ ಮೇಲಿನ ಕಥೆ ಹೇಳುವಂತೆ ಚಿರತೆ ಮರಿಯ ತಾಯಿ ಸತ್ತು ಹೋಯಿತು, ಹಸು ಸಾಕಿತು ಎಂಬುದು ಯಾವುದೂ ಇಲ್ಲಿ ಉಲ್ಲೇಖವಾಗಿಲ್ಲ. ಅಲ್ಲಿನ ಕಥೆಗೂ ಇಲ್ಲಿನ ವರದಿಗೂ ಯಾವುದೇ ಸಂಬಂಧವಿಲ್ಲ.

ಆದರೆ ಹಸು ಜೊತೆ ಚಿರತೆ ಮರಿ ಇದ್ದುದು ನಿಜವಾಗಿದ್ದರೆ ಅದು ಹೇಗೆ ಸಾಧ್ಯ ಎಂದು ಟೈಮ್ಸ್ ಆಫ್ ಇಂಡಿಯಾ ವಡೋದರಾದ ಕಾಡು ಸಂರಕ್ಷಣಾಧಿಕಾರಿ ಎಚ್ ಎಸ್ ಸಿಂಗ್ ಅವರನ್ನು ಪ್ರಶ್ನಿಸಿದೆ. ಅವರು “ಕೆಲವೊಮ್ಮೆ ಪ್ರಾಣಿಗಳ ನಡವಳಿಕೆಯನ್ನು ಮಾರ್ಪಡಿಸಬಹುದು. ಈ ಸಂದರ್ಭದಲ್ಲಿ, ಬಹುಶಃ ಚಿರತೆ ಉಪ-ವಯಸ್ಕ ಹಂತವನ್ನು ದಾಟಿದೆ, ಅದು ಕಾಡು ಪರಿಸರದಲ್ಲಿ ಬೆಳೆಯದೇ ಗ್ರಾಮೀಣ ಪ್ರದೇಶದಲ್ಲಿ ಬೆಳೆದುದರಿಂದ ಅದು ಬೇಟೆಯಾಡುವ ಪ್ರವೃತ್ತಿಯನ್ನು ರೂಢಿಸಿಕೊಂಡಿಲ್ಲ” ಎಂದಿದ್ದಾರೆ.

ವರದಿ ಮಾಡಿದ ಶ್ಯಾಮ್ ಪರೇಖ್ “ಇದು 18 ವರ್ಷದ ಹಿಂದೆ ಗುಜರಾತ್‌ನಲ್ಲಿ ನಡೆದಿದೆ. ಆ ಸಮಯದಲ್ಲಿ ಹಸುವಿನೊಂದಿಗೆ ಚಿರತೆ ಮರಿ ಇದ್ದುದ್ದನ್ನು ಹೇಳಿದಾಗ ಹಲವಾರು ಜನರು ನಂಬಲಿಲ್ಲ. ಅದಕ್ಕಾಗಿ ನಾವು ಇದನ್ನು ದೃಢೀಕರಿಸಲು ವನ್ಯಜೀವಿ ಛಾಯಾಗ್ರಾಹಕನನ್ನು ಕರೆಸಿ ಅವುಗಳ ಫೋಟೊ ತೆಗೆಯಲು ಕೇಳಿದೆವು” ಎಂದಿದ್ದಾರೆ.

ತೀರ್ಮಾನ

ಗುಜರಾತ್‌ನಲ್ಲಿ ವರದಿಯಾದ ಸುಮಾರು ಎರಡು ದಶಕಗಳಷ್ಟು ಹಳೆಯದಾದ ಚಿತ್ರವನ್ನು ಸೋಶಿಯಲ್ ಮೀಡಿಯಾದಲ್ಲಿ ಇದು ಅಸ್ಸಾಂನಲ್ಲಿ ಸಂಭವಿಸಿದೆ ಎಂಬ ಸುಳ್ಳು ಹೇಳಿಕೆಯೊಂದಿಗೆ, ಅದಕ್ಕೆ ಮತ್ತಷ್ಟು  ವಿಸ್ತಾರವಾದ ಕಥೆ ಕಟ್ಟಿ ಪುನರುಜ್ಜೀವನಗೊಳಿಸಲಾಗಿದೆ.


ಇದನ್ನೂ ಓದಿ: ಹಸುವಿನ ಹೊಟ್ಟೆಯಲ್ಲಿ ಮಗು ಜನನದ ವದಂತಿ : ರಾತ್ರೋ ರಾತ್ರಿ ಜನರನ್ನು ಎಬ್ಬಿಸಿ ಮೌಢ್ಯಾಚರಣೆ

ಇದನ್ನೂ ಓದಿ: ಕೊರೊನಾ Fact check : ಜನ ಮನೆಯಿಂದ ಹೊರಬರದಿರಲು ಬೀದಿಗಳಿಗೆ 800 ಸಿಂಹಗಳನ್ನು ಬಿಟ್ಟ ರಷ್ಯಾ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...