Homeಫ್ಯಾಕ್ಟ್‌ಚೆಕ್FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

- Advertisement -
- Advertisement -

ಸಚಿವ ಎಂ.ಬಿ ಪಾಟೀಲ್ ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದಿದ್ದಾರೆ ಎನ್ನಲಾದ ಹಳೆಯ ಪತ್ರವೊಂದು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಪತ್ರವನ್ನು ಬಿಜಾಪುರ ಲಿಂಗಾಯ ಜಿಲ್ಲಾ ಶಿಕ್ಷಣ ಸಂಘಟನೆ (ಬಿಎಲ್‌ಡಿಇಎ) ಲೆಟರ್‌ ಹೆಡ್‌ನಲ್ಲಿ ಸಿದ್ದಪಡಿಸಲಾಗಿದೆ. ಈ ಸಂಸ್ಥೆಗೆ ಸಚಿವ ಎಂ.ಬಿ ಪಾಟೀಲ್ ಅವರೇ ಅಧ್ಯಕ್ಷರಾಗಿದ್ದಾರೆ.

“ಗ್ಲೋಬಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ಸಹಾಯದಿಂದ 2018ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ‘ಹಿಂದೂಗಳನ್ನು ವಿಭಜಿಸಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರನ್ನು ಒಗ್ಗೂಡಿಸಲು’ ಯೋಜಿಸುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೇ 29,2024 ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಹಂಚಿಕೊಂಡಿರುವ ಬಳಕೆದಾರರೊಬ್ಬರು,”ಸೂಕ್ಷ್ಮವಾಗಿ ಗಮನಿಸಿ, ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆ ಇದು. ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಚಿವ ಎಂ.ಬಿ ಪಾಟೀಲ್ ಅವರು ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಬಿಜೆಪಿಯನ್ನು ಮಣಿಸಲು ಹಿಂದೂಗಳನ್ನು ವಿಭಜಿಸಬೇಕು ಎಂದು ಹೇಳಿದ್ದಾರೆ. ಇದಕ್ಕಾಗಿ ಗ್ಲೋಬಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ನೆರವು ಪಡೆಯುವುದಾಗಿ ತಿಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಹಲವು ಎಕ್ಸ್ ಬಳಕೆದಾರರು ಈ ಹಳೆಯ ಪತ್ರವನ್ನು ಹಂಚಿಕೊಂಡು ಇದೇ ರೀತಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಪತ್ರ 2019ರಲ್ಲಿಯೂ ವೈರಲ್ ಆಗಿದ್ದ ನಕಲಿ ಪತ್ರವಾಗಿದೆ. ಅದರಲ್ಲಿ ಉಲ್ಲೇಖಿಸಲಾದ ಗ್ಲೋಬಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ಎಂಬ ಸಂಸ್ಥೆಗಳೇ ಅಸ್ತಿತ್ವದಲ್ಲಿಲ್ಲ.

ಈ ಹಿಂದೆ ಪತ್ರ ವೈರಲ್ ಆದಾಗ, ಇದು ನಕಲಿ ಪತ್ರ ಎಂದು ಸಾಬೀತುಪಡಿಸಲು ಎಂ.ಬಿ ಪಾಟೀಲ್ ಅವರು ವೈರಲ್ ಆಗಿರುವ ಪತ್ರ ಹಾಗೂ ಬಿಎಲ್‌ಡಿಇಎ ಸಂಸ್ಥೆಯ ಅಸಲಿ ಲೆಟರ್ ಹೆಡ್‌ ಅನ್ನು ತಮ್ಮ ಎಕ್ಸ್‌ ಹಾಗೂ ಫೇಸ್‌ಬುಕ್ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಜೊತೆಯಲ್ಲೇ ಪೊಲೀಸರಿಗೆ ದೂರು ನೀಡಿರುವ ಪತ್ರವನ್ನೂ ಪ್ರಕಟಿಸಿದ್ದರು. ಅಲ್ಲದೆ ಈ ಕುರಿತು ಒಂದಿಷ್ಟು ವಿವರಣೆಯನ್ನೂ ಬರೆದುಕೊಂಡಿದ್ದರು. ಎಂ. ಬಿ ಪಾಟೀಲ್ ನೀಡಿದ್ದ ಮಾಹಿತಿ ಇಂತಿದೆ:

“ಈ ಪತ್ರ ನಕಲಿ. ಈ ಕುರಿತಾಗಿ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ. ನಕಲಿ ಪತ್ರ ತಯಾರಿಸಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದು ಬಿಜೆಪಿಯ ಹತಾಷೆಯನ್ನು ತೋರಿಸುತ್ತದೆ. ಅವರು ಈ ರೀತಿಯ ನಕಲಿ ಪತ್ರದ ಮೇಲೆ ಅವಲಂಬಿತರಾಗಿದ್ದಾರೆ. ಏಕೆಂದರೆ ಅವರು ಜನ ಬೆಂಬಲ ಕಳೆದುಕೊಂಡಿದ್ದಾರೆ” ಎಂದು ಎಂ.ಬಿ ಪಾಟೀಲ್ ಬರೆದುಕೊಂಡಿದ್ದರು. ಈ ಕುರಿತಾಗಿ ಸುದ್ದಿಗೋಷ್ಠಿಯನ್ನೂ ಕರೆದಿದ್ದ ಎಂ.ಬಿ ಪಾಟೀಲ್, ವೈರಲ್ ಆಗಿರುವ ಪತ್ರ ನಕಲಿ ಎಂದು ಸ್ಪಷ್ಟನೆ ನೀಡಿದ್ದರು.

ಪೋಸ್ಟ್ ಲಿಂಕ್ ಇಲ್ಲಿದೆ 

ಕರ್ನಾಟಕ ಕಾಂಗ್ರೆಸ್ ಕೂಡಾ ಎಂ. ಬಿ ಪಾಟೀಲ್ ಅವರ ಸುದ್ದಿಗೋಷ್ಠಿಯ ವಿಡಿಯೋವನ್ನು 2019ರ ಏಪ್ರಿಲ್ 16 ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿತ್ತು. ಜೊತೆಯಲ್ಲೇ ವಿವರಣೆಯನ್ನೂ ನೀಡಿತ್ತು. “ಇದೊಂದು ನಕಲಿ ಪತ್ರ. ಈ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಾರ್ಕಿಕ ಕಾನೂನು ಅಂತ್ಯ ಸಿಗುವಂತೆ ನೋಡಿಕೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಬೇಕಿದ್ದರೆ ಸುಪ್ರೀಂ ಕೋರ್ಟ್‌ಗೂ ಹೋಗಲಾಗುವುದು” ಎಂದು ಎಂ.ಬಿ ಪಾಟೀಲರು ಹೇಳಿರುವುದಾಗಿ ತಿಳಿಸಿತ್ತು.

ಅಚ್ಚರಿಯ ವಿಷಯ ಎಂದರೆ 2019ರಲ್ಲಿ ಕರ್ನಾಟಕ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ನಕಲಿ ಪತ್ರ ಪ್ರಕಟಿಸಿತ್ತು. ಈ ಪತ್ರದ ಜೊತೆ ‘ಕಾಂಗ್ರೆಸ್‌ನ ಬಣ್ಣ ಬಯಲು’ ಎಂದು ಬರೆದುಕೊಂಡಿತ್ತು. ಆ ಪೋಸ್ಟ್‌ ಇಂದಿಗೂ ಹಾಗೆಯೇ ಇದೆ!.

ಎನ್‌ಡಿಟಿವಿ ವರದಿ ಪ್ರಕಾರ ಈ ಪ್ರಕರಣ ಸಂಬಂಧ ಪೋಸ್ಟ್‌ ಕಾರ್ಡ್ ನ್ಯೂಸ್ ಸಹ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು 2019ರಲ್ಲಿ ಪೊಲೀಸರು ಬಂಧಿಸಿದ್ದರು. ಆತನ ವಿರುದ್ದ ಸುಳ್ಳು ಸುದ್ದಿ ಹರಡಿದ ಆರೋಪ ಹೊರಿಸಲಾಗಿತ್ತು. ನಕಲಿ ಪತ್ರಕ್ಕೆ ಸಂಬಂಧಿಸಿದಂತೆ ಎಂ. ಬಿ ಪಾಟೀಲ್ ಅವರು ಪೊಲೀಸರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಒಟ್ಟಿನಲ್ಲಿ ಹೇಳುವುದಾದರೆ, ವೈರಲ್ ಆಗಿರುವ ಪತ್ರ 2019ರದ್ದು. ಇದು ನಕಲಿ ಎಂದು ಸ್ವತಃ ಸಚಿವ ಎಂ.ಬಿ ಪಾಟೀಲ್ ಅವರು ಆಗಲೇ ದಾಖಲೆ ಸಹಿತ ಸ್ಪಷ್ಟನೆ ನೀಡಿದ್ದರು. ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಪೋಸ್ಟ್ ಕಾರ್ಡ್‌ನ ಮಹೇಶ್ ವಿಕ್ರಮ್ ಹೆಗ್ಡೆಯ ಬಂಧನವೂ ಆಗಿತ್ತು. ಇತ್ತೀಚೆಗೆ ಹಳೆಯ ನಕಲಿ ಪತ್ರ ಮತ್ತೊಮ್ಮೆ ವೈರಲ್ ಆಗಿದೆ.

ಇದನ್ನೂ ಓದಿ : FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...

ಕ್ಷುಲ್ಲಕ ಕಾರಣಕ್ಕೆ ಮೂವರು ಮುಸ್ಲಿಮರ ಮೇಲೆ ಹಲ್ಲೆ ನಡೆಸಿದ ದುಷ್ಕರ್ಮಿ

ಕ್ಷುಲ್ಲಕ ಕಾರಣಕ್ಕೆ ಇಬ್ಬರು ಹಿರಿಯ ವಯಸ್ಕರು ಸೇರಿದಂತೆ ಮೂವರು ಮುಸ್ಲಿಂ ವ್ಯಕ್ತಿಗಳ ಮೇಲೆ ದುಷ್ಕರ್ಮಿಯೊಬ್ಬ ಅಮಾನವೀಯವಾಗಿ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಬದೌನ್ ಜಿಲ್ಲೆಯಲ್ಲಿ ನಡೆದಿದೆ. ಫೆಬ್ರವರಿ 15ರಂದು ಜಿಲ್ಲೆಯ ರುದಾಯನ್ ಪಟ್ಟಣದಲ್ಲಿ...