Homeಫ್ಯಾಕ್ಟ್‌ಚೆಕ್FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

- Advertisement -
- Advertisement -

ಸಚಿವ ಎಂ.ಬಿ ಪಾಟೀಲ್ ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದಿದ್ದಾರೆ ಎನ್ನಲಾದ ಹಳೆಯ ಪತ್ರವೊಂದು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಪತ್ರವನ್ನು ಬಿಜಾಪುರ ಲಿಂಗಾಯ ಜಿಲ್ಲಾ ಶಿಕ್ಷಣ ಸಂಘಟನೆ (ಬಿಎಲ್‌ಡಿಇಎ) ಲೆಟರ್‌ ಹೆಡ್‌ನಲ್ಲಿ ಸಿದ್ದಪಡಿಸಲಾಗಿದೆ. ಈ ಸಂಸ್ಥೆಗೆ ಸಚಿವ ಎಂ.ಬಿ ಪಾಟೀಲ್ ಅವರೇ ಅಧ್ಯಕ್ಷರಾಗಿದ್ದಾರೆ.

“ಗ್ಲೋಬಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ಸಹಾಯದಿಂದ 2018ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ‘ಹಿಂದೂಗಳನ್ನು ವಿಭಜಿಸಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರನ್ನು ಒಗ್ಗೂಡಿಸಲು’ ಯೋಜಿಸುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೇ 29,2024 ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಹಂಚಿಕೊಂಡಿರುವ ಬಳಕೆದಾರರೊಬ್ಬರು,”ಸೂಕ್ಷ್ಮವಾಗಿ ಗಮನಿಸಿ, ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆ ಇದು. ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಚಿವ ಎಂ.ಬಿ ಪಾಟೀಲ್ ಅವರು ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಬಿಜೆಪಿಯನ್ನು ಮಣಿಸಲು ಹಿಂದೂಗಳನ್ನು ವಿಭಜಿಸಬೇಕು ಎಂದು ಹೇಳಿದ್ದಾರೆ. ಇದಕ್ಕಾಗಿ ಗ್ಲೋಬಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ನೆರವು ಪಡೆಯುವುದಾಗಿ ತಿಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಹಲವು ಎಕ್ಸ್ ಬಳಕೆದಾರರು ಈ ಹಳೆಯ ಪತ್ರವನ್ನು ಹಂಚಿಕೊಂಡು ಇದೇ ರೀತಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಪತ್ರ 2019ರಲ್ಲಿಯೂ ವೈರಲ್ ಆಗಿದ್ದ ನಕಲಿ ಪತ್ರವಾಗಿದೆ. ಅದರಲ್ಲಿ ಉಲ್ಲೇಖಿಸಲಾದ ಗ್ಲೋಬಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ಎಂಬ ಸಂಸ್ಥೆಗಳೇ ಅಸ್ತಿತ್ವದಲ್ಲಿಲ್ಲ.

ಈ ಹಿಂದೆ ಪತ್ರ ವೈರಲ್ ಆದಾಗ, ಇದು ನಕಲಿ ಪತ್ರ ಎಂದು ಸಾಬೀತುಪಡಿಸಲು ಎಂ.ಬಿ ಪಾಟೀಲ್ ಅವರು ವೈರಲ್ ಆಗಿರುವ ಪತ್ರ ಹಾಗೂ ಬಿಎಲ್‌ಡಿಇಎ ಸಂಸ್ಥೆಯ ಅಸಲಿ ಲೆಟರ್ ಹೆಡ್‌ ಅನ್ನು ತಮ್ಮ ಎಕ್ಸ್‌ ಹಾಗೂ ಫೇಸ್‌ಬುಕ್ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಜೊತೆಯಲ್ಲೇ ಪೊಲೀಸರಿಗೆ ದೂರು ನೀಡಿರುವ ಪತ್ರವನ್ನೂ ಪ್ರಕಟಿಸಿದ್ದರು. ಅಲ್ಲದೆ ಈ ಕುರಿತು ಒಂದಿಷ್ಟು ವಿವರಣೆಯನ್ನೂ ಬರೆದುಕೊಂಡಿದ್ದರು. ಎಂ. ಬಿ ಪಾಟೀಲ್ ನೀಡಿದ್ದ ಮಾಹಿತಿ ಇಂತಿದೆ:

“ಈ ಪತ್ರ ನಕಲಿ. ಈ ಕುರಿತಾಗಿ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ. ನಕಲಿ ಪತ್ರ ತಯಾರಿಸಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದು ಬಿಜೆಪಿಯ ಹತಾಷೆಯನ್ನು ತೋರಿಸುತ್ತದೆ. ಅವರು ಈ ರೀತಿಯ ನಕಲಿ ಪತ್ರದ ಮೇಲೆ ಅವಲಂಬಿತರಾಗಿದ್ದಾರೆ. ಏಕೆಂದರೆ ಅವರು ಜನ ಬೆಂಬಲ ಕಳೆದುಕೊಂಡಿದ್ದಾರೆ” ಎಂದು ಎಂ.ಬಿ ಪಾಟೀಲ್ ಬರೆದುಕೊಂಡಿದ್ದರು. ಈ ಕುರಿತಾಗಿ ಸುದ್ದಿಗೋಷ್ಠಿಯನ್ನೂ ಕರೆದಿದ್ದ ಎಂ.ಬಿ ಪಾಟೀಲ್, ವೈರಲ್ ಆಗಿರುವ ಪತ್ರ ನಕಲಿ ಎಂದು ಸ್ಪಷ್ಟನೆ ನೀಡಿದ್ದರು.

ಪೋಸ್ಟ್ ಲಿಂಕ್ ಇಲ್ಲಿದೆ 

ಕರ್ನಾಟಕ ಕಾಂಗ್ರೆಸ್ ಕೂಡಾ ಎಂ. ಬಿ ಪಾಟೀಲ್ ಅವರ ಸುದ್ದಿಗೋಷ್ಠಿಯ ವಿಡಿಯೋವನ್ನು 2019ರ ಏಪ್ರಿಲ್ 16 ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿತ್ತು. ಜೊತೆಯಲ್ಲೇ ವಿವರಣೆಯನ್ನೂ ನೀಡಿತ್ತು. “ಇದೊಂದು ನಕಲಿ ಪತ್ರ. ಈ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಾರ್ಕಿಕ ಕಾನೂನು ಅಂತ್ಯ ಸಿಗುವಂತೆ ನೋಡಿಕೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಬೇಕಿದ್ದರೆ ಸುಪ್ರೀಂ ಕೋರ್ಟ್‌ಗೂ ಹೋಗಲಾಗುವುದು” ಎಂದು ಎಂ.ಬಿ ಪಾಟೀಲರು ಹೇಳಿರುವುದಾಗಿ ತಿಳಿಸಿತ್ತು.

ಅಚ್ಚರಿಯ ವಿಷಯ ಎಂದರೆ 2019ರಲ್ಲಿ ಕರ್ನಾಟಕ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ನಕಲಿ ಪತ್ರ ಪ್ರಕಟಿಸಿತ್ತು. ಈ ಪತ್ರದ ಜೊತೆ ‘ಕಾಂಗ್ರೆಸ್‌ನ ಬಣ್ಣ ಬಯಲು’ ಎಂದು ಬರೆದುಕೊಂಡಿತ್ತು. ಆ ಪೋಸ್ಟ್‌ ಇಂದಿಗೂ ಹಾಗೆಯೇ ಇದೆ!.

ಎನ್‌ಡಿಟಿವಿ ವರದಿ ಪ್ರಕಾರ ಈ ಪ್ರಕರಣ ಸಂಬಂಧ ಪೋಸ್ಟ್‌ ಕಾರ್ಡ್ ನ್ಯೂಸ್ ಸಹ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು 2019ರಲ್ಲಿ ಪೊಲೀಸರು ಬಂಧಿಸಿದ್ದರು. ಆತನ ವಿರುದ್ದ ಸುಳ್ಳು ಸುದ್ದಿ ಹರಡಿದ ಆರೋಪ ಹೊರಿಸಲಾಗಿತ್ತು. ನಕಲಿ ಪತ್ರಕ್ಕೆ ಸಂಬಂಧಿಸಿದಂತೆ ಎಂ. ಬಿ ಪಾಟೀಲ್ ಅವರು ಪೊಲೀಸರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಒಟ್ಟಿನಲ್ಲಿ ಹೇಳುವುದಾದರೆ, ವೈರಲ್ ಆಗಿರುವ ಪತ್ರ 2019ರದ್ದು. ಇದು ನಕಲಿ ಎಂದು ಸ್ವತಃ ಸಚಿವ ಎಂ.ಬಿ ಪಾಟೀಲ್ ಅವರು ಆಗಲೇ ದಾಖಲೆ ಸಹಿತ ಸ್ಪಷ್ಟನೆ ನೀಡಿದ್ದರು. ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಪೋಸ್ಟ್ ಕಾರ್ಡ್‌ನ ಮಹೇಶ್ ವಿಕ್ರಮ್ ಹೆಗ್ಡೆಯ ಬಂಧನವೂ ಆಗಿತ್ತು. ಇತ್ತೀಚೆಗೆ ಹಳೆಯ ನಕಲಿ ಪತ್ರ ಮತ್ತೊಮ್ಮೆ ವೈರಲ್ ಆಗಿದೆ.

ಇದನ್ನೂ ಓದಿ : FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...