Homeಫ್ಯಾಕ್ಟ್‌ಚೆಕ್FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

FACT CHECK: ಮತ್ತೆ ವೈರಲ್ ಆಗ್ತಿದೆ ಎಂ.ಬಿ ಪಾಟೀಲ್ ಬರೆದಿದ್ದರು ಎನ್ನಲಾದ ನಕಲಿ ಪತ್ರ

- Advertisement -
- Advertisement -

ಸಚಿವ ಎಂ.ಬಿ ಪಾಟೀಲ್ ಅವರು ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದಿದ್ದಾರೆ ಎನ್ನಲಾದ ಹಳೆಯ ಪತ್ರವೊಂದು ಮತ್ತೊಮ್ಮೆ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವೈರಲ್ ಪತ್ರವನ್ನು ಬಿಜಾಪುರ ಲಿಂಗಾಯ ಜಿಲ್ಲಾ ಶಿಕ್ಷಣ ಸಂಘಟನೆ (ಬಿಎಲ್‌ಡಿಇಎ) ಲೆಟರ್‌ ಹೆಡ್‌ನಲ್ಲಿ ಸಿದ್ದಪಡಿಸಲಾಗಿದೆ. ಈ ಸಂಸ್ಥೆಗೆ ಸಚಿವ ಎಂ.ಬಿ ಪಾಟೀಲ್ ಅವರೇ ಅಧ್ಯಕ್ಷರಾಗಿದ್ದಾರೆ.

“ಗ್ಲೋಬಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ಸಹಾಯದಿಂದ 2018ರ ವಿಧಾನಸಭಾ ಚುನಾವಣೆಯಲ್ಲಿ ಗೆಲ್ಲಲು ಕಾಂಗ್ರೆಸ್ ‘ಹಿಂದೂಗಳನ್ನು ವಿಭಜಿಸಿ ಮುಸ್ಲಿಂ ಮತ್ತು ಕ್ರಿಶ್ಚಿಯನ್ನರನ್ನು ಒಗ್ಗೂಡಿಸಲು’ ಯೋಜಿಸುತ್ತಿದೆ” ಎಂದು ಪತ್ರದಲ್ಲಿ ಹೇಳಲಾಗಿದೆ.

ಮೇ 29,2024 ರಂದು ಎಕ್ಸ್‌ನಲ್ಲಿ ಈ ಪತ್ರವನ್ನು ಹಂಚಿಕೊಂಡಿರುವ ಬಳಕೆದಾರರೊಬ್ಬರು,”ಸೂಕ್ಷ್ಮವಾಗಿ ಗಮನಿಸಿ, ಕಾಂಗ್ರೆಸ್ ಪಕ್ಷದ ತಂತ್ರಗಾರಿಕೆ ಇದು. ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಸಚಿವ ಎಂ.ಬಿ ಪಾಟೀಲ್ ಅವರು ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಬಿಜೆಪಿಯನ್ನು ಮಣಿಸಲು ಹಿಂದೂಗಳನ್ನು ವಿಭಜಿಸಬೇಕು ಎಂದು ಹೇಳಿದ್ದಾರೆ. ಇದಕ್ಕಾಗಿ ಗ್ಲೋಬಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ನೆರವು ಪಡೆಯುವುದಾಗಿ ತಿಳಿಸಿದ್ದಾರೆ” ಎಂದು ಬರೆದುಕೊಂಡಿದ್ದಾರೆ. ಹಲವು ಎಕ್ಸ್ ಬಳಕೆದಾರರು ಈ ಹಳೆಯ ಪತ್ರವನ್ನು ಹಂಚಿಕೊಂಡು ಇದೇ ರೀತಿ ಬರೆದುಕೊಂಡಿದ್ದಾರೆ.

ಫ್ಯಾಕ್ಟ್‌ಚೆಕ್ : ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳಲಾದ ಪತ್ರ 2019ರಲ್ಲಿಯೂ ವೈರಲ್ ಆಗಿದ್ದ ನಕಲಿ ಪತ್ರವಾಗಿದೆ. ಅದರಲ್ಲಿ ಉಲ್ಲೇಖಿಸಲಾದ ಗ್ಲೋಬಲ್ ಕ್ರಿಶ್ಚಿಯನ್ ಕೌನ್ಸಿಲ್ ಮತ್ತು ವರ್ಲ್ಡ್ ಇಸ್ಲಾಮಿಕ್ ಆರ್ಗನೈಸೇಶನ್ ಎಂಬ ಸಂಸ್ಥೆಗಳೇ ಅಸ್ತಿತ್ವದಲ್ಲಿಲ್ಲ.

ಈ ಹಿಂದೆ ಪತ್ರ ವೈರಲ್ ಆದಾಗ, ಇದು ನಕಲಿ ಪತ್ರ ಎಂದು ಸಾಬೀತುಪಡಿಸಲು ಎಂ.ಬಿ ಪಾಟೀಲ್ ಅವರು ವೈರಲ್ ಆಗಿರುವ ಪತ್ರ ಹಾಗೂ ಬಿಎಲ್‌ಡಿಇಎ ಸಂಸ್ಥೆಯ ಅಸಲಿ ಲೆಟರ್ ಹೆಡ್‌ ಅನ್ನು ತಮ್ಮ ಎಕ್ಸ್‌ ಹಾಗೂ ಫೇಸ್‌ಬುಕ್ ಖಾತೆಗಳಲ್ಲಿ ಹಂಚಿಕೊಂಡಿದ್ದರು. ಜೊತೆಯಲ್ಲೇ ಪೊಲೀಸರಿಗೆ ದೂರು ನೀಡಿರುವ ಪತ್ರವನ್ನೂ ಪ್ರಕಟಿಸಿದ್ದರು. ಅಲ್ಲದೆ ಈ ಕುರಿತು ಒಂದಿಷ್ಟು ವಿವರಣೆಯನ್ನೂ ಬರೆದುಕೊಂಡಿದ್ದರು. ಎಂ. ಬಿ ಪಾಟೀಲ್ ನೀಡಿದ್ದ ಮಾಹಿತಿ ಇಂತಿದೆ:

“ಈ ಪತ್ರ ನಕಲಿ. ಈ ಕುರಿತಾಗಿ ನಾನು ಕಾನೂನು ಕ್ರಮ ಕೈಗೊಳ್ಳುತ್ತೇನೆ. ನಕಲಿ ಪತ್ರ ತಯಾರಿಸಿ ಪ್ರಕಟಿಸಿದವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಇದು ಬಿಜೆಪಿಯ ಹತಾಷೆಯನ್ನು ತೋರಿಸುತ್ತದೆ. ಅವರು ಈ ರೀತಿಯ ನಕಲಿ ಪತ್ರದ ಮೇಲೆ ಅವಲಂಬಿತರಾಗಿದ್ದಾರೆ. ಏಕೆಂದರೆ ಅವರು ಜನ ಬೆಂಬಲ ಕಳೆದುಕೊಂಡಿದ್ದಾರೆ” ಎಂದು ಎಂ.ಬಿ ಪಾಟೀಲ್ ಬರೆದುಕೊಂಡಿದ್ದರು. ಈ ಕುರಿತಾಗಿ ಸುದ್ದಿಗೋಷ್ಠಿಯನ್ನೂ ಕರೆದಿದ್ದ ಎಂ.ಬಿ ಪಾಟೀಲ್, ವೈರಲ್ ಆಗಿರುವ ಪತ್ರ ನಕಲಿ ಎಂದು ಸ್ಪಷ್ಟನೆ ನೀಡಿದ್ದರು.

ಪೋಸ್ಟ್ ಲಿಂಕ್ ಇಲ್ಲಿದೆ 

ಕರ್ನಾಟಕ ಕಾಂಗ್ರೆಸ್ ಕೂಡಾ ಎಂ. ಬಿ ಪಾಟೀಲ್ ಅವರ ಸುದ್ದಿಗೋಷ್ಠಿಯ ವಿಡಿಯೋವನ್ನು 2019ರ ಏಪ್ರಿಲ್ 16 ರಂದು ಎಕ್ಸ್‌ನಲ್ಲಿ ಪೋಸ್ಟ್ ಮಾಡಿತ್ತು. ಜೊತೆಯಲ್ಲೇ ವಿವರಣೆಯನ್ನೂ ನೀಡಿತ್ತು. “ಇದೊಂದು ನಕಲಿ ಪತ್ರ. ಈ ಕುರಿತಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು. ತಾರ್ಕಿಕ ಕಾನೂನು ಅಂತ್ಯ ಸಿಗುವಂತೆ ನೋಡಿಕೊಳ್ಳಲಾಗುವುದು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಬೇಕಿದ್ದರೆ ಸುಪ್ರೀಂ ಕೋರ್ಟ್‌ಗೂ ಹೋಗಲಾಗುವುದು” ಎಂದು ಎಂ.ಬಿ ಪಾಟೀಲರು ಹೇಳಿರುವುದಾಗಿ ತಿಳಿಸಿತ್ತು.

ಅಚ್ಚರಿಯ ವಿಷಯ ಎಂದರೆ 2019ರಲ್ಲಿ ಕರ್ನಾಟಕ ಬಿಜೆಪಿ ತನ್ನ ಎಕ್ಸ್‌ ಖಾತೆಯಲ್ಲಿ ನಕಲಿ ಪತ್ರ ಪ್ರಕಟಿಸಿತ್ತು. ಈ ಪತ್ರದ ಜೊತೆ ‘ಕಾಂಗ್ರೆಸ್‌ನ ಬಣ್ಣ ಬಯಲು’ ಎಂದು ಬರೆದುಕೊಂಡಿತ್ತು. ಆ ಪೋಸ್ಟ್‌ ಇಂದಿಗೂ ಹಾಗೆಯೇ ಇದೆ!.

ಎನ್‌ಡಿಟಿವಿ ವರದಿ ಪ್ರಕಾರ ಈ ಪ್ರಕರಣ ಸಂಬಂಧ ಪೋಸ್ಟ್‌ ಕಾರ್ಡ್ ನ್ಯೂಸ್ ಸಹ ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆಯನ್ನು 2019ರಲ್ಲಿ ಪೊಲೀಸರು ಬಂಧಿಸಿದ್ದರು. ಆತನ ವಿರುದ್ದ ಸುಳ್ಳು ಸುದ್ದಿ ಹರಡಿದ ಆರೋಪ ಹೊರಿಸಲಾಗಿತ್ತು. ನಕಲಿ ಪತ್ರಕ್ಕೆ ಸಂಬಂಧಿಸಿದಂತೆ ಎಂ. ಬಿ ಪಾಟೀಲ್ ಅವರು ಪೊಲೀಸರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿತ್ತು.

ಒಟ್ಟಿನಲ್ಲಿ ಹೇಳುವುದಾದರೆ, ವೈರಲ್ ಆಗಿರುವ ಪತ್ರ 2019ರದ್ದು. ಇದು ನಕಲಿ ಎಂದು ಸ್ವತಃ ಸಚಿವ ಎಂ.ಬಿ ಪಾಟೀಲ್ ಅವರು ಆಗಲೇ ದಾಖಲೆ ಸಹಿತ ಸ್ಪಷ್ಟನೆ ನೀಡಿದ್ದರು. ಸುಳ್ಳು ಸುದ್ದಿ ಹರಡಿದ ಆರೋಪದ ಮೇಲೆ ಪೋಸ್ಟ್ ಕಾರ್ಡ್‌ನ ಮಹೇಶ್ ವಿಕ್ರಮ್ ಹೆಗ್ಡೆಯ ಬಂಧನವೂ ಆಗಿತ್ತು. ಇತ್ತೀಚೆಗೆ ಹಳೆಯ ನಕಲಿ ಪತ್ರ ಮತ್ತೊಮ್ಮೆ ವೈರಲ್ ಆಗಿದೆ.

ಇದನ್ನೂ ಓದಿ : FACT CHECK : ಕ್ರೈಸ್ತರಿಂದ ಭಾರತಕ್ಕೆ ಭಾನುವಾರ ರಜಾ ದಿನ ಬಂತು ಎಂಬ ಪ್ರಧಾನಿ ಮೋದಿ ಹೇಳಿಕೆ ಸುಳ್ಳು  

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...