Homeಫ್ಯಾಕ್ಟ್‌ಚೆಕ್FACT CHECK : ಬಿಜೆಪಿ ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ ಶಿವಕುಮಾರ್‌ರದ್ದು ಎಂದು ತಪ್ಪಾಗಿ ಹಂಚಿಕೊಂಡ...

FACT CHECK : ಬಿಜೆಪಿ ನಾಯಕನ ಅಶ್ಲೀಲ ಫೋಟೋವನ್ನು ಡಿ.ಕೆ ಶಿವಕುಮಾರ್‌ರದ್ದು ಎಂದು ತಪ್ಪಾಗಿ ಹಂಚಿಕೊಂಡ ಜೆಡಿಎಸ್ ಯುವ ಘಟಕ ಹೆಸರಿನ ಫೇಸ್‌ಬುಕ್ ಪೇಜ್‌

- Advertisement -
- Advertisement -

ರಾಜ್ಯ ಯುವ ಘಟಕ ಜಾತ್ಯಾತೀತ ಜನತಾದಳ ಹೆಸರಿನ ಫೇಸ್‌ಬುಕ್ ಪೇಜ್‌ನಲ್ಲಿ ಓರ್ವ ಪುರುಷ ಮತ್ತು ಮಹಿಳೆ ಅರೆನಗ್ನ ಸ್ಥಿತಿಯಲ್ಲಿರುವ ಬ್ಲರ್ ಫೋಟೋವೊಂದನ್ನು ಹಂಚಿಕೊಳ್ಳಲಾಗಿದ್ದು, “ಯಾರಿರಬಹುದು ಕಾಮೆಂಟ್ ಬಾಕ್ಸ್ ನಿಮ್ಮದೇ..! ಸಿಡಿ ಶಿ….ಕುಮಾರನ ಸಂತತಿಗಳೇ ಹು ಶುರು ಮಾಡಿ ನೀವು HD ವಿಡಿಯೋ ರಿಲೀಸ್ ಮಾಡಿ ನಾವು FullHD ರಿಲೀಸ್ ಮಾಡ್ತೀವಿ … ಅಬ್ಬಬಾ ರುಚಿಕರ ಸಂಭಾಷಣೆ..ವಿಡಿಯೋ ತುಂಬಾ ಕಾಸ್ಟ್ಲಿ ಯಾರು ಕೇಳಬೇಡಿ ಅವರು ಬಿಟ್ಟರೆ ನಾವು ಬಿಡೋಣ ಈಗಲೇ ಬಿಟ್ಟರೆ ಏನು ಮಜ…ಬಿಡ್ರೋ ಬಿಡ್ರಿ ನೋಡೋಣ…” ಎಂದು ಬರೆದುಕೊಳ್ಳಲಾಗಿದೆ.

ಫೋಟೋದಲ್ಲಿ ಮಹಿಳೆ ಜೊತೆ ಇರುವ ಪುರುಷ ಡಿಸಿಎಂ ಡಿಕೆ ಶಿವಕುಮಾರ್ ಎಂಬರ್ಥದಲ್ಲಿ ಪೋಸ್ಟ್ ಹಾಕಲಾಗಿದೆ ಎಂಬುವುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ.

ಫ್ಯಾಕ್ಟ್‌ಚೆಕ್ : ಫೇಸ್‌ಬುಕ್ ಪೇಜ್‌ನಲ್ಲಿ ಹಂಚಿಕೊಂಡಿರುವ ಫೋಟೋದ ಸತ್ಯಾಸತ್ಯತೆ ತಿಳಿಯುವ ಸಲುವಾಗಿ ನಾವು ಅದನ್ನು ಗೂಗಲ್ ರಿವರ್ಸ್ ಇಮೇಜ್ ಮೂಲಕ ಹುಡುಕಾಡಿದ್ದೇವೆ. ಈ ವೇಳೆ ನವೆಂಬರ್ 3, 2019ರಂದು democraticaccent.com ಎಂಬ ಸುದ್ದಿ ವೆಬ್‌ಸೈಟ್‌ನಲ್ಲಿ ಪ್ರಟಕಗೊಂಡ ವರದಿಯೊಂದು ಲಭ್ಯವಾಗಿದೆ. ವರದಿಯಲ್ಲಿ “ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲ್ ತಾಂಡೇಲ್ ಅವರು ಮಹಿಳೆಯೊಬ್ಬರೊಂದಿಗೆ ಇರುವ ವೀಡಿಯೊ ಕ್ಲಿಪ್ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ” ಎಂದು ಹೇಳಲಾಗಿದೆ.

ನವೆಂಬರ್ 20, 2019ರಂದು ‘ದಿ ವೀಕ್’ ಈ ಕುರಿತು ಪ್ರಕಟಿಸಿದ ಸುದ್ದಿಯಲ್ಲಿ” ಮಹಿಳೆಯೊಂದಿಗೆ ಇರುವ ಫೋಟೋ ವೈರಲ್ ಆದ ಬಳಿಕ ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲ್ ತಾಂಡೇಲ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಅವರ ರಾಜೀನಾಮೆಯನ್ನು ಅಮಿತ್ ಶಾ ಅವರು ಸ್ವೀಕರಿಸಿದ್ದಾರೆ ಎಂದು ಹೇಳಿದೆ.

ಹಾಗಾಗಿ, ಜೆಡಿಎಸ್ ಯುವಘಟಕದ ಹೆಸರಿನಲ್ಲಿರುವ ಫೇಸ್‌ಬುಕ್ ಪೇಜ್ ಪರೋಕ್ಷವಾಗಿ ಹೇಳಿದಂತೆ, ಅವರು ಹಂಚಿಕೊಂಡಿರುವ ಫೋಟೋದಲ್ಲಿರುವ ವ್ಯಕ್ತಿ ಡಿಸಿಎಂ ಡಿ.ಕೆ ಶಿವಕುಮಾರ್ ಅಲ್ಲ. ಬದಲಾಗಿ, ಅದು ದಮನ್ ಮತ್ತು ದಿಯು ಕೇಂದ್ರಾಡಳಿತ ಪ್ರದೇಶಗಳ ಬಿಜೆಪಿ ಘಟಕದ ಅಧ್ಯಕ್ಷ ಗೋಪಾಲ್ ತಾಂಡೇಲ್ ಆಗಿದ್ದಾರೆ.

ಇದನ್ನೂ ಓದಿ : FACT CHECK : ಬೆಂಗಳೂರಿನ ಮತಗಟ್ಟೆಯೊಂದರಲ್ಲಿ ಇವಿಎಂ ಬ್ಯಾಲೆಟ್ ಬಟನ್‌ ಕಾರ್ಯ ನಿರ್ವಹಿಸುತ್ತಿರಲಿಲ್ಲ ಎಂಬುವುದು ನಿಜವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...