Homeಫ್ಯಾಕ್ಟ್‌ಚೆಕ್FACT CHECK : ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿತ..ವೈರಲ್ ವಿಡಿಯೋದ...

FACT CHECK : ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿತ..ವೈರಲ್ ವಿಡಿಯೋದ ಅಸಲಿಯತ್ತೇನು?

- Advertisement -
- Advertisement -

ಸಾರ್ವಜನಿಕ ಸ್ಥಳದಲ್ಲಿ ಹಿಂದೂ ಮಹಿಳೆ ಮುಂದೆ ಶರ್ಟ್ ಬಿಚ್ಚಿದ ಮುಸ್ಲಿಂ ಯುವಕನಿಗೆ ಥಳಿಸಲಾಗಿದೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದನ್ನು ಹಂಚಿಕೊಳ್ಳಲಾಗುತ್ತಿದೆ.

‘ಬಾಬಾ ಬನಾರಸ್’ (@RealBababanaras) ಎಂಬ ಬಲಪಂಥೀಯ ಎಕ್ಸ್‌ ಖಾತೆಯಲ್ಲಿ ಅಕ್ಟೋಬರ್ 15ರಂದು ವಿಡಿಯೋ ಹಂಚಿಕೊಂಡು ” ಚಪ್ರಿ ಅಬ್ದುಲ್ ತನ್ನ ಶರ್ಟ್‌ ಬಿಚ್ಚಿ ಹಿಂದೂ ಮಹಿಳೆಗೆ ದೇಹ ತೋರಿಸಲು ಮುಂದಾದಾಗ, ಧೈರ್ಯಶಾಲಿ ಹಿಂದೂ ಮಹಿಳೆ ಆತನಿಗೆ ತಕ್ಷ ಶಾಸ್ತ್ರಿ ಮಾಡಿದ್ದಾರೆ. ಅಧರ್ಮವನ್ನು ವಿರೋಧಿಸಿ. ಇದು ಸರಿಯಾದ ಮಾರ್ಗವಾಗಿದೆ. ಸೆಲ್ಯೂಟ್‌” ಎಂದು ಬರೆದುಕೊಂಡಿದ್ದರು.

ನ್ಯೂಸ್ ನೇಷನ್ ಎಂಬ ಸುದ್ದಿ ವೆಬ್‌ಸೈಟ್‌ ಅಕ್ಟೋಬರ್ 15ರಂದು ವಿಡಿಯೋ ಕುರಿತು ದೊಡ್ಡ ಸುದ್ದಿಯನ್ನೇ ಮಾಡಿತ್ತು. ಆದರೆ, ಅದರಲ್ಲಿ ಹಿಂದೂ-ಮುಸ್ಲಿಂ ಎಂದು ಉಲ್ಲೇಖಿಸಿರಲಿಲ್ಲ.

ಸೆಪ್ಟೆಂಬರ್ 24ರಂದು ವಿಡಿಯೋ ಕುರಿತು ಸ್ಟೋರಿ ಹಾಕಿದ್ದ ಟಿವಿ9 ಭಾರತ್ ವರ್ಷ್ ” ಮಹಿಳೆಗೆ ದೇಹ ತೋರಿಸಲು ಮುಂದಾದ ಯುವಕನಿಗ ಥಳಿಸಲಾಗಿದೆ” ಎಂದು ವಿವರಿಸಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗುತ್ತಿದೆ ಎಂದಿತ್ತು.

ಸೆಪ್ಟೆಂಬರ್ 24ರಂದು ಆಜ್‌ತಕ್ ಸುದ್ದಿ ಸಂಸ್ಥೆ ಕೂಡ ವಿಡಿಯೋ ಕುರಿತು ಸ್ಟೋರಿ ಹಾಕಿತ್ತು. ಅದರಲ್ಲೂ ವಿಡಿಯೋ ವೈರಲ್ ಆಗುತ್ತಿದೆ ಎಂದು ಹೇಳಿತ್ತು. ಅದು ಎಲ್ಲಿ ನಡೆದ ಘಟನೆಯದ್ದು ಎಂದು ಹೇಳಿರಲಿಲ್ಲ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋ ಕುರಿತು ನಾವು ಮಾಹಿತಿ ಹುಡುಕಿದಾಗ ‘tamannakohli786787‘ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ವಿಡಿಯೋ ಪೋಸ್ಟ್ ಮಾಡಿರುವುದು ಕಂಡು ಬಂದಿದೆ.

ಇನ್‌ಸ್ಟಾಗ್ರಾಂ ಖಾತೆಯನ್ನು ನಾವು ಪರಿಶೀಲಿಸಿ ನೋಡಿದಾಗ ವೈರಲ್ ವಿಡಿಯೋ ರೀತಿಯ ಹಲವು ವಿಡಿಯೋಗಳು ಕಂಡು ಬಂದಿವೆ. ಆ ಎಲ್ಲಾ ವಿಡಿಯೋಗಳಲ್ಲಿ ವೈರಲ್ ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮೂವರು ಇರುವುದನ್ನು ಕಾಣಬಹುದು. ಹಾಗಾಗಿ, ಆ ವಿಡಿಯೋಗಳು ಸ್ಕ್ರಿಪ್ಟೆಡ್ ಎಂಬುವುದು ನಮಗೆ ಗೊತ್ತಾಗಿದೆ.

ಸಾಮಾಜಿಕ ಜಾಲತಾಣಲ್ಲಿ ಹಿಂದೂ-ಮುಸ್ಲಿಂ ಹೆಸರಿನಲ್ಲಿ ಹಂಚಿಕೊಳ್ಳಲಾದ ವಿಡಿಯೋ ಸ್ಕ್ರಿಪ್ಟೆಡ್ ಎಂಬುವುದನ್ನು ಖ್ಯಾತ ಫ್ಯಾಕ್ಟ್‌ಚೆಕ್ ಸಂಸ್ಥೆ ಆಲ್ಟ್‌ ನ್ಯೂಸ್‌ನ ಸಹ ಸಂಸ್ಥಾಪಕ ಮುಹಮ್ಮದ್ ಝುಬೈರ್ ಖಚಿತಪಡಿಸಿದ್ದಾರೆ.

ಒಟ್ಟಿನಲ್ಲಿ tamannakohli786787 ಎಂಬ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾದ ಸ್ಕ್ರಿಪ್ಟೆಡ್ ವಿಡಿಯೋವನ್ನು ಮುಸ್ಲಿಂ ಯುವಕ ಅಬ್ದುಲ್ ಹಿಂದೂ ಮಹಿಳೆ ಮುಂದೆ ಶರ್ಟ್‌ ಬಿಚ್ಚಿದ್ದಕ್ಕೆ ಮಹಿಳೆ ಅಲ್ಲೇ ಕಪಾಳಕ್ಕೆ ಬಾರಿಸಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ.

ಇದನ್ನೂ ಓದಿ : FACT CHECK : ಮುಸ್ಲಿಮರು ದುರ್ಗಾ ಮೂರ್ತಿಯನ್ನು ಧ್ವಂಸಗೊಳಿಸಿದ್ದಾರೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...