Homeಫ್ಯಾಕ್ಟ್‌ಚೆಕ್FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮಹಿಳೆಯೊಬ್ಬಳು ತನ್ನ ಹಿಜಾಬ್ ಮೇಲೆನೇ ಶಾಂಪೂ ಹಾಕಿ ತಲೆ ಸ್ನಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ದಿನಗಳಿಂದ ಈ ವಿಡಿಯೋ ಹರಿದಾಡುತ್ತಿದೆ.

ಅನೇಕ ಬಲಪಂಥೀಯ ಎಕ್ಸ್‌ ಬಳಕೆದಾರರು ವಿಡಿಯೋ ಹಂಚಿಕೊಂಡು ” ಮುಸ್ಲಿಂ ಸಮುದಾಯವನ್ನು ಅಪಹಾಸ್ಯ” ಮಾಡಿದ್ದಾರೆ.

’99 ವಿಕಿ’ ಎಂಬ ವೆಬ್‌ಸೈಟ್‌ “ಶಾಂಪೂ ಜಾಹೀರಾತು ಮುಸ್ಲಿಂ ಮಹಿಳೆಯರ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ!” ಎಂಬ ಶೀರ್ಷಿಕೆಯಡಿ ವಿಡಿಯೋ ಕುರಿತು ಲೇಖನ ಪ್ರಕಟಿಸಿತ್ತು. ಅದರಲ್ಲಿ “ಪ್ರತಿಯೊಬ್ಬ ಮತಾಂಧ ಲಿಬ್ಟಾರ್ಡ್ ಉದಾರ ಆಧುನಿಕ ಇಸ್ಲಾಂ ಅನ್ನು ನಿರಂತರವಾಗಿ ಪ್ರತಿಪಾದಿಸುತ್ತಾನೆ. ಅವರೆಲ್ಲರೂ ಈಗ ಶಾಂಪೂ ಜಾಹೀರಾತಿನಂತಹ ಸರಳವಾದ ವಿಷಯದಿಂದ ಬಹಿರಂಗಗೊಂಡಿದ್ದಾರೆ. ಇದು ಯಾವ ರೀತಿಯ ಮಧ್ಯಕಾಲೀನ ಧರ್ಮ?” ಎಂದು ಹೇಳಿತ್ತು. ಆದರೆ, ಪ್ರಸ್ತುತ ಆ ಲೇಖನ ವೆಬ್‌ಸೈಟ್‌ನಿಂದ ಕಣ್ಮರೆಯಾಗಿದೆ.

‘ಇಂಡಿಯನ್ ವಾಯ್ಸ್’ ಎಂಬ ಮತ್ತೊಂದು ವೆಬ್‌ಸೈಟ್‌ ಕೂಡ “ಕಠಿಣ ಶರಿಯಾ ಕಾನೂನು ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡುತ್ತದೆ. ಮಹಿಳೆಯರು ಸದಾ ತಮ್ಮ ತಲೆಯನ್ನು ಮುಚ್ಚುವಂತೆ ಆದೇಶಿಸುತ್ತದೆ” ಎಂದು ಹೇಳಿತ್ತು. ಈಗ ಈ ಲೇಖನವೂ ವೆಬ್‌ಸೈಟ್‌ನಿಂದ ಕಾಣೆಯಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಕೋಮು ಬಣ್ಣ ಬಳಿದಿರುವ ಹಿನ್ನೆಲೆ, ಅದರ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ವಿಡಿಯೋ ಕುರಿತ ವಿವರ ಇಲ್ಲಿದೆ.

“ಎಸ್ಕಾರ್ಫ್ಸ್” ಎಂಬ ಮಲೇಷ್ಯಾದ ಸ್ಕಾರ್ಫ್ ಕಂಪನಿ ಮತ್ತು ಅದರ ಜಾಹೀರಾತು ಏಜೆನ್ಸಿ ತಮ್ಮ ಸ್ಕಾರ್ಫ್‌ಗಳನ್ನು ಪ್ರಚಾರ ಮಾಡಲು ಸನ್‌ಸಿಲ್ಕ್ ಶಾಂಪೂನ ಹಳೆಯ ಜಾಹೀರಾತನ್ನು ವಿಡಂಬನಾತ್ಮಕವಾಗಿ ತೋರಿಸಿತ್ತು. ಅದನ್ನು ಹಂಚಿಕೊಂಡು ತಪ್ಪು ಸಂದೇಶ ಹರಡಲಾಗಿದೆ.

ಎಸ್ಕಾರ್ಫ್ಸ್ ಕಂಪನಿ 2006ರ ಸನ್ ಸಿಲ್ಕ್ ಶಾಂಪೂ ಜಾಹೀರಾತಿನಲ್ಲಿ ಬಳಸಲಾದ ಹಿಂದಿನ ಕ್ಲೀಷೆ ಪ್ರೇಮ ದೃಶ್ಯವನ್ನು ಮರುಸೃಷ್ಟಿಸಿ ವಿಡಂಬನಾತ್ಮಕವಾಗಿ ತೋರಿಸಿದೆ. ಹೊಸ ವಿಡಿಯೋಗೆ ‘ಬುಡಕ್ 90 ಆನ್ ಜೆ ತಾಹು ಇಕ್ಲಾನ್-ಇಕ್ಲಾನ್ ಮಕಾಮ್ ನಿ” ಅಂದರೆ “90 ರ ದಶಕದ ಮಕ್ಕಳು ಮಾತ್ರ ಇದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಹೆಸರಿಸಿದೆ.

ಸನ್ ಸಿಲ್ಕ್ ಶಾಂಪೂನ ಹಳೆಯ ಜಾಹೀರಾತಿನ ಮೂಲ ವಿಡಿಯೋ ಕೆಳಗೆ ನೋಡಬಹುದು.

ಎಸ್ಕಾರ್ಫ್ಸ್ ಸೃಷ್ಟಿಸಿರುವ ಹೊಸ ವಿಡಂಬನಾತ್ಮಕ ಜಾಹೀರಾತು ವಿಡಿಯೋ ಕೆಳಗಿದೆ.

ಎಸ್ಕಾರ್ಫ್ಸ್‌ನ ಸ್ಥಾಪಕಿ ಐಡಾ ಸುಕಿಮನ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಇದು ಕೇವಲ ವಿಡಂಬನಾತ್ಮಕ ವಿಡಿಯೋ ಎಂದು ಹೇಳಿದ್ದಾರೆ. ಮಲೈ ಭಾಷೆಯಲ್ಲಿ ಹಾಕಿರುವ ಪೋಸ್ಟ್ ಮತ್ತು ಅದರ ಅನುವಾದ ಇಲ್ಲಿದೆ.

“ನಮ್ಮ ಶಿರವಸ್ತ್ರಗಳು ಶಾಂಪೂ ಮಾಡಿದ ನಂತರ ನಿಮ್ಮ ಕೂದಲಿಗೆ ಹೇಗೆ ಅನಿಸುತ್ತದೆಯೋ ಅಷ್ಟೇ ಆರಾಮದಾಯಕವಾಗಿದೆ. ಅದನ್ನೇ ನಾವು ವೀಡಿಯೊದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ” ಎಂದು ಎಸ್ಕಾರ್ಫ್ಸ್‌ ಕಂಪನಿಯ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಸಿಲಿಕೋಸ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಿನಲ್ಲಿ, ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್‌ನ ಮಲೇಷ್ಯಾ ಮೂಲದ ಕಂಪನಿಯೊಂದರ ಜಾಹೀರಾತಿನ ವಿಡಿಯೋ ಅರ್ಧ ವೈರಲ್ ಆಗಿದ್ದು, ಅದು ಮಲೇಷ್ಯಾನ್ನರಿಗೆ ತಮಾಷೆಯಾಗಿ ಕಂಡರೆ, ಇತರ ದೇಶಗಳ ಜನರಿಗೆ ಮುಸ್ಲಿಮರನ್ನು ಅಪಹಾಸ್ಯ ಮಾಡುವ ಸಾಧನವಾಗಿ ಮಾರ್ಪಟ್ಟಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಸನ್‌ಸಿಲ್ಕ್ ಶಾಂಪೂವಿನ ಜಾಹೀರಾತಿನ ಹಳೆಯ ವಿಡಿಯೋವೊಂದರಿಂದ ಪ್ರೇರಿತರಾಗಿ ಎಸ್ಕಾರ್ಫ್ಸ್‌ ಎಂಬ ಸ್ಕಾರ್ಫ್‌ ಕಂಪನಿ ಹೊಸ ಸೃಜನಾತ್ಮಕ ಜಾಹೀರಾತು ವಿಡಿಯೋ ಸೃಷ್ಟಿಸಿತ್ತು. ಅದರ ಅರ್ಧಭಾಗ ವೈರಲ್ ಆಗಿದೆ. ಆ ಕ್ಲಿಪ್‌ ಅನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಅನೇಕರು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...