Homeಫ್ಯಾಕ್ಟ್‌ಚೆಕ್FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

FACT CHECK : ಶಾಂಪುವಿನ ವಿಡಂಬನಾತ್ಮಕ ಜಾಹೀರಾತು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಹಂಚಿಕೊಳ್ಳಲಾಗ್ತಿದೆ

- Advertisement -
- Advertisement -

ಮಹಿಳೆಯೊಬ್ಬಳು ತನ್ನ ಹಿಜಾಬ್ ಮೇಲೆನೇ ಶಾಂಪೂ ಹಾಕಿ ತಲೆ ಸ್ನಾನ ಮಾಡಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಅನೇಕ ದಿನಗಳಿಂದ ಈ ವಿಡಿಯೋ ಹರಿದಾಡುತ್ತಿದೆ.

ಅನೇಕ ಬಲಪಂಥೀಯ ಎಕ್ಸ್‌ ಬಳಕೆದಾರರು ವಿಡಿಯೋ ಹಂಚಿಕೊಂಡು ” ಮುಸ್ಲಿಂ ಸಮುದಾಯವನ್ನು ಅಪಹಾಸ್ಯ” ಮಾಡಿದ್ದಾರೆ.

’99 ವಿಕಿ’ ಎಂಬ ವೆಬ್‌ಸೈಟ್‌ “ಶಾಂಪೂ ಜಾಹೀರಾತು ಮುಸ್ಲಿಂ ಮಹಿಳೆಯರ ಶೋಚನೀಯ ಸ್ಥಿತಿಯನ್ನು ಬಹಿರಂಗಪಡಿಸುತ್ತದೆ!” ಎಂಬ ಶೀರ್ಷಿಕೆಯಡಿ ವಿಡಿಯೋ ಕುರಿತು ಲೇಖನ ಪ್ರಕಟಿಸಿತ್ತು. ಅದರಲ್ಲಿ “ಪ್ರತಿಯೊಬ್ಬ ಮತಾಂಧ ಲಿಬ್ಟಾರ್ಡ್ ಉದಾರ ಆಧುನಿಕ ಇಸ್ಲಾಂ ಅನ್ನು ನಿರಂತರವಾಗಿ ಪ್ರತಿಪಾದಿಸುತ್ತಾನೆ. ಅವರೆಲ್ಲರೂ ಈಗ ಶಾಂಪೂ ಜಾಹೀರಾತಿನಂತಹ ಸರಳವಾದ ವಿಷಯದಿಂದ ಬಹಿರಂಗಗೊಂಡಿದ್ದಾರೆ. ಇದು ಯಾವ ರೀತಿಯ ಮಧ್ಯಕಾಲೀನ ಧರ್ಮ?” ಎಂದು ಹೇಳಿತ್ತು. ಆದರೆ, ಪ್ರಸ್ತುತ ಆ ಲೇಖನ ವೆಬ್‌ಸೈಟ್‌ನಿಂದ ಕಣ್ಮರೆಯಾಗಿದೆ.

‘ಇಂಡಿಯನ್ ವಾಯ್ಸ್’ ಎಂಬ ಮತ್ತೊಂದು ವೆಬ್‌ಸೈಟ್‌ ಕೂಡ “ಕಠಿಣ ಶರಿಯಾ ಕಾನೂನು ಮುಸ್ಲಿಂ ಸಮಾಜದಲ್ಲಿ ಮಹಿಳೆಯರಿಗೆ ಎರಡನೇ ದರ್ಜೆಯ ಸ್ಥಾನಮಾನ ನೀಡುತ್ತದೆ. ಮಹಿಳೆಯರು ಸದಾ ತಮ್ಮ ತಲೆಯನ್ನು ಮುಚ್ಚುವಂತೆ ಆದೇಶಿಸುತ್ತದೆ” ಎಂದು ಹೇಳಿತ್ತು. ಈಗ ಈ ಲೇಖನವೂ ವೆಬ್‌ಸೈಟ್‌ನಿಂದ ಕಾಣೆಯಾಗಿದೆ.

ಫ್ಯಾಕ್ಟ್‌ಚೆಕ್ : ವೈರಲ್ ವಿಡಿಯೋಗೆ ಕೋಮು ಬಣ್ಣ ಬಳಿದಿರುವ ಹಿನ್ನೆಲೆ, ಅದರ ಸತ್ಯಾಸತ್ಯತೆಯನ್ನು ನಾವು ಪರಿಶೀಲಿಸಿದ್ದೇವೆ. ವಿಡಿಯೋ ಕುರಿತ ವಿವರ ಇಲ್ಲಿದೆ.

“ಎಸ್ಕಾರ್ಫ್ಸ್” ಎಂಬ ಮಲೇಷ್ಯಾದ ಸ್ಕಾರ್ಫ್ ಕಂಪನಿ ಮತ್ತು ಅದರ ಜಾಹೀರಾತು ಏಜೆನ್ಸಿ ತಮ್ಮ ಸ್ಕಾರ್ಫ್‌ಗಳನ್ನು ಪ್ರಚಾರ ಮಾಡಲು ಸನ್‌ಸಿಲ್ಕ್ ಶಾಂಪೂನ ಹಳೆಯ ಜಾಹೀರಾತನ್ನು ವಿಡಂಬನಾತ್ಮಕವಾಗಿ ತೋರಿಸಿತ್ತು. ಅದನ್ನು ಹಂಚಿಕೊಂಡು ತಪ್ಪು ಸಂದೇಶ ಹರಡಲಾಗಿದೆ.

ಎಸ್ಕಾರ್ಫ್ಸ್ ಕಂಪನಿ 2006ರ ಸನ್ ಸಿಲ್ಕ್ ಶಾಂಪೂ ಜಾಹೀರಾತಿನಲ್ಲಿ ಬಳಸಲಾದ ಹಿಂದಿನ ಕ್ಲೀಷೆ ಪ್ರೇಮ ದೃಶ್ಯವನ್ನು ಮರುಸೃಷ್ಟಿಸಿ ವಿಡಂಬನಾತ್ಮಕವಾಗಿ ತೋರಿಸಿದೆ. ಹೊಸ ವಿಡಿಯೋಗೆ ‘ಬುಡಕ್ 90 ಆನ್ ಜೆ ತಾಹು ಇಕ್ಲಾನ್-ಇಕ್ಲಾನ್ ಮಕಾಮ್ ನಿ” ಅಂದರೆ “90 ರ ದಶಕದ ಮಕ್ಕಳು ಮಾತ್ರ ಇದನ್ನು ಅರ್ಥಮಾಡಿಕೊಳ್ಳುತ್ತಾರೆ” ಎಂದು ಹೆಸರಿಸಿದೆ.

ಸನ್ ಸಿಲ್ಕ್ ಶಾಂಪೂನ ಹಳೆಯ ಜಾಹೀರಾತಿನ ಮೂಲ ವಿಡಿಯೋ ಕೆಳಗೆ ನೋಡಬಹುದು.

ಎಸ್ಕಾರ್ಫ್ಸ್ ಸೃಷ್ಟಿಸಿರುವ ಹೊಸ ವಿಡಂಬನಾತ್ಮಕ ಜಾಹೀರಾತು ವಿಡಿಯೋ ಕೆಳಗಿದೆ.

ಎಸ್ಕಾರ್ಫ್ಸ್‌ನ ಸ್ಥಾಪಕಿ ಐಡಾ ಸುಕಿಮನ್ ಕೂಡ ತಮ್ಮ ಫೇಸ್ಬುಕ್ ಖಾತೆಯಲ್ಲಿ ವಿಡಿಯೋ ಹಂಚಿಕೊಂಡು “ಇದು ಕೇವಲ ವಿಡಂಬನಾತ್ಮಕ ವಿಡಿಯೋ ಎಂದು ಹೇಳಿದ್ದಾರೆ. ಮಲೈ ಭಾಷೆಯಲ್ಲಿ ಹಾಕಿರುವ ಪೋಸ್ಟ್ ಮತ್ತು ಅದರ ಅನುವಾದ ಇಲ್ಲಿದೆ.

“ನಮ್ಮ ಶಿರವಸ್ತ್ರಗಳು ಶಾಂಪೂ ಮಾಡಿದ ನಂತರ ನಿಮ್ಮ ಕೂದಲಿಗೆ ಹೇಗೆ ಅನಿಸುತ್ತದೆಯೋ ಅಷ್ಟೇ ಆರಾಮದಾಯಕವಾಗಿದೆ. ಅದನ್ನೇ ನಾವು ವೀಡಿಯೊದಲ್ಲಿ ತೋರಿಸಲು ಪ್ರಯತ್ನಿಸಿದ್ದೇವೆ” ಎಂದು ಎಸ್ಕಾರ್ಫ್ಸ್‌ ಕಂಪನಿಯ ಪ್ರತಿನಿಧಿಯೊಬ್ಬರು ಹೇಳಿರುವುದಾಗಿ ಸಿಲಿಕೋಸ್ ವೆಬ್‌ಸೈಟ್‌ ವರದಿ ಮಾಡಿದೆ.

ಒಟ್ಟಿನಲ್ಲಿ, ಮುಸ್ಲಿಂ ಮಹಿಳೆಯರು ಧರಿಸುವ ಸ್ಕಾರ್ಫ್‌ನ ಮಲೇಷ್ಯಾ ಮೂಲದ ಕಂಪನಿಯೊಂದರ ಜಾಹೀರಾತಿನ ವಿಡಿಯೋ ಅರ್ಧ ವೈರಲ್ ಆಗಿದ್ದು, ಅದು ಮಲೇಷ್ಯಾನ್ನರಿಗೆ ತಮಾಷೆಯಾಗಿ ಕಂಡರೆ, ಇತರ ದೇಶಗಳ ಜನರಿಗೆ ಮುಸ್ಲಿಮರನ್ನು ಅಪಹಾಸ್ಯ ಮಾಡುವ ಸಾಧನವಾಗಿ ಮಾರ್ಪಟ್ಟಿದೆ.

ಸ್ಪಷ್ಟವಾಗಿ ಹೇಳುವುದಾದರೆ, ಸನ್‌ಸಿಲ್ಕ್ ಶಾಂಪೂವಿನ ಜಾಹೀರಾತಿನ ಹಳೆಯ ವಿಡಿಯೋವೊಂದರಿಂದ ಪ್ರೇರಿತರಾಗಿ ಎಸ್ಕಾರ್ಫ್ಸ್‌ ಎಂಬ ಸ್ಕಾರ್ಫ್‌ ಕಂಪನಿ ಹೊಸ ಸೃಜನಾತ್ಮಕ ಜಾಹೀರಾತು ವಿಡಿಯೋ ಸೃಷ್ಟಿಸಿತ್ತು. ಅದರ ಅರ್ಧಭಾಗ ವೈರಲ್ ಆಗಿದೆ. ಆ ಕ್ಲಿಪ್‌ ಅನ್ನು ಗೊತ್ತಿದ್ದೋ ಗೊತ್ತಿಲ್ಲದೆಯೋ ಅನೇಕರು ಮುಸ್ಲಿಮರನ್ನು ಅಪಹಾಸ್ಯ ಮಾಡಲು ಬಳಸಿಕೊಂಡಿದ್ದಾರೆ.

ಇದನ್ನೂ ಓದಿ : FACT CHECK : ರಾಹುಲ್ ಗಾಂಧಿ ವಿರುದ್ದ ಮಣಿಪುರದಲ್ಲಿ ‘ಗೋ ಬ್ಯಾಕ್’ ಘೋಷಣೆ ಕೂಗಲಾಗಿದೆ ಎಂಬುವುದು ಸುಳ್ಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...